Homeಮುಖಪುಟತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

ತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

- Advertisement -
- Advertisement -

ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ರಾಯರ ಜೀವನ-ಪವಾಡಗಳ ಕುರಿತ ಸಿನಿಮಾಗಳು ತಯಾರಾಗಿವೆ. ಖ್ಯಾತನಾಮ ಸಿನಿಮಾ ತಾರೆಯರು ಹಾಗೂ ತಂತ್ರಜ್ಞರು ಈ ಮೂಲಕ ರಾಯರಿಗೆ ಭಕ್ತಿ ಅರ್ಪಿಸಿದ್ದಾರೆ. ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ತೆರೆಯ ಮೇಲೆ ರಾಯರ ಕತೆ ಹಾಗೂ ಪಾತ್ರಗಳ ಕುರಿತ ಲೇಖನವಿದು.

ಕನ್ನಡ ಮತ್ತು ತಮಿಳು ಚಿತ್ರರಂಗಗಳಲ್ಲಿ ರಾಯರ ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ತೆರೆಯ ಮೇಲೆ ರಾಯರ ಜೀವನಗಾಥೆ, ಪವಾಡಗಳು ಅನಾವರಣಗೊಂಡಿವೆ. ಸಾಮಾಜಿಕ, ಕೌಟುಂಬಿಕ ಚಿತ್ರಗಳಲ್ಲೂ ರಾಯರ ಭಕ್ತಿಗೀತೆಗಳು ಜನಪ್ರಿಯವಾಗಿವೆ. ಜಾತಿ, ಮತ, ಧರ್ಮಗಳನ್ನು ಮೀರಿದ ರಾಯರ ಪ್ರಭಾವಳಿಯೇ ಇದಕ್ಕೆ ಕಾರಣವಾಗಿರಬಹುದು.

ಕನ್ನಡ ಚಿತ್ರರಂಗದ ಚಟುವಟಿಕೆಗಳು ಚೆನ್ನೈನಲ್ಲಿ ನಡೆಯುತ್ತಿದ್ದ ದಿನಗಳಲ್ಲೇ ರಾಯರ ಆರಾಧನೆ ಆರಂಭವಾಗಿತ್ತು. ಹಿರಿಯ ತಂತ್ರಜ್ಞರಾದ ಬಿ. ಆರ್. ಪಂತುಲು, ಸಿಂಗ್ ಠಾಕೂರ್ ಚಿತ್ರ ನಿರ್ಮಾಣಕ್ಕೆ ಮುನ್ನ ಮಂತ್ರಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಬಿಡುಗಡೆ ಮಾಡುವ ಮುನ್ನ ಇವರು ತಮ್ಮ ಚಿತ್ರದ ಪ್ರಥಮ ಪ್ರತಿಯನ್ನು ಬೃಂದಾವನದಲ್ಲಿಟ್ಟು ಪೂಜಿಸುತ್ತಿದ್ದರಂತೆ.

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್, ತಮಿಳು ಸ್ಟಾರ್ ರಜನೀಕಾಂತ್, ನಿರ್ದೇಶಕರಾದ ಹುಣಸೂರು ಕೃಷ್ಣಮೂರ್ತಿ, ದ್ವಾರಕೀಶ್, ನಟ ಶಿವರಾಂ ಹಾಗೂ ಇವರ ಸಮಕಾಲೀನರೇನಕರು ಶುಭ ಕಾರ್ಯಕ್ಕೆ ಮುನ್ನ ರಾಯರ ಅನುಗ್ರಹ ಪಡೆಯುವುದು ಕಡ್ಡಾಯವಾಗಿತ್ತು.

ರಾಯರ ಪಾತ್ರದಲ್ಲಿ ರಾಜ್

ಚಿತ್ರ ನಿರ್ಮಾಪಕರಲ್ಲಿದ್ದ ರಾಯರೆಡೆಗಿನ ಭಕ್ತಿ – ಭಾವ ತೆರೆ ಮೇಲೆ ಮೂಡಲು ಹೆಚ್ಚು ಸಮಯ ಬೇಕಾಗಲಿಲ್ಲ. ಸಿಂಗ್ ಠಾಕೂರ್ `ಮಂತ್ರಾಲಯ ಮಹಾತ್ಮೆ’ (1966) ನಿರ್ದೇಶಿಸಿದರು. ಡಾ. ರಾಜ್ ರಾಯರ ಪಾತ್ರಕ್ಕೆ ಜೀವ ತುಂಬಿದ್ದರು. ಚಿತ್ರದಲ್ಲಿ ರಾಯರೇ ರಚಿಸಿದ್ದ `ಇಂದು ಎನಗೆ ಗೋವಿಂದ…’ ಗೀತೆ ಬಳಕೆಯಾಗಿತ್ತು. 1980ರಲ್ಲಿ ಹುಣಸೂರು ಕೃಷ್ಣಮೂರ್ತಿ `ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಕರುಣೆ’ ನಿರ್ದೇಶಿಸಿದ್ದರು.

ಸರಿಸುಮಾರು ಇದೇ ಸಮಯದಲ್ಲಿ `ರಾಘವೇಂದ್ರ ವೈಭವ’ ಚಿತ್ರವೂ ತಯಾರಾಗಿತ್ತು. ಈ ಸಿನಿಮಾದಲ್ಲಿ ನಟ ಶ್ರೀನಾಥ್ ರಾಯರ ಪಾತ್ರದಲ್ಲಿ ನಟಿಸಿದ್ದರು. ಮುಂದೆ 2011ರಲ್ಲಿ `ಶ್ರೀ ರಾಘವೇಂದ್ರ ಸ್ವಾಮಿ’ ಕನ್ನಡ ಚಿತ್ರ ತೆರೆಕಂಡಿತ್ತು. ಕೃಷ್ಣಚಂದ್ರ ನಿರ್ದೇಶನದಲ್ಲಿ ತಯಾರಾದ ಚಿತ್ರದ ಶಿರ್ಷಿಕೆ ಪಾತ್ರವನ್ನು ರವೀಂದ್ರ ಗೋಪಾಲ ನಿರ್ವಹಿಸಿದ್ದರು.

ರಜನೀ ಸಿನಿಮಾ

ತಮಿಳು ಚಿತ್ರರಂಗದ ಜನಪ್ರಿಯ ನಟ ರಜನೀಕಾಂತ್ ರಾಯರ ಪರಮ ಭಕ್ತ. 1985 ರಲ್ಲಿ ಅವರು ಶಿರ್ಷಿಕೆ ಪಾತ್ರದಲ್ಲಿ ನಟಿಸಿದ್ದ `ಶ್ರೀ ರಾಘವೇಂದ್ರ’ ತಮಿಳು ಚಿತ್ರ ಮೂಡಿಬಂದಿತ್ತು. ರಜನಿಗೆ ಇದು ವೃತ್ತಿ ಜೀವನದ 100 ನೇ ಸಿನಿಮಾ. ಎಸ್. ಪಿ. ಮುತ್ತುರಾಮನ್ ನಿರ್ದೇಶನದಲ್ಲಿ ತಯಾರಾದ ಚಿತ್ರ `ಶ್ರೀ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಹಾತ್ಯಂ’ ಶಿರ್ಷಿಕೆಯಡಿ ತೆಲುಗಿಗೂ ಡಬ್ ಆಗಿತ್ತು. ತಾವು ರಾಯರ ಪಾತ್ರದಲ್ಲಿ ನಟಿಸಲು ಡಾ. ರಾಜ್ ಪ್ರೇರಣೆ ಎಂದು ಹಿಂದೊಮ್ಮೆ ರಜನಿ ಹೇಳಿಕೊಂಡಿದ್ದರು.

ಬಿಡೆನು ನಿನ್ನ ಪಾದ…

ಭಕ್ತಿಪ್ರಧಾನ ಚಿತ್ರಗಳ ಹೊರತಾಗಿ ಇತರೆ ಪ್ರಯೋಗಗಳಲ್ಲೂ ರಾಯರ ಗೀತೆಗಳನ್ನು ನಾವು ನೋಡಬಹುದು. ಡಾ.ರಾಜ್‌ರ `ಪೂಜಿಸಲೆಂದೇ ಹೂಗಳ ತಂದೆ…’ (ಎರಡು ಕನಸು), `ಹಾಲಲ್ಲಾದರು ಹಾಕು…’ (ದೇವತಾ ಮನುಷ್ಯ) ಹಾಡುಗಳು ಜನಪ್ರಿಯವಾಗಿವೆ. ಸಂಕಷ್ಟದಲ್ಲಿ ರಾಯರನ್ನು ನೆನೆಯುವ `ಬಿಡೆನು ನಿನ್ನ ಪಾದ…’ (ನಾ ನಿನ್ನ ಬಿಡಲಾರೆ), `ದಾರಿ ಕಾಣದಾಗಿದೆ ರಾಘವೇಂದ್ರನೆ…’ (ದೀಪ) ಮತ್ತೆರಡು ಶ್ರೇಷ್ಠ ಉದಾಹರಣೆ. `ಭಾಗ್ಯವಂತ’ ಚಿತ್ರದ `ಗುರುವಾರ ಬಂತಮ್ಮ…’ ಸೇರಿದಂತೆ ಹಲವು ರಾಯರ ಭಕ್ತಿಗೀತೆಗಳು ರಚಿಸಲ್ಪಿಟ್ಟಿವೆ.

ಕಿರುತೆರೆಯಲ್ಲಿ…

ಕನ್ನಡ ಕಿರುತೆರೆಯಲ್ಲಿ ಮೂಡಿಬಂದ `ಶ್ರೀ ಗುರುರಾಘವೇಂದ್ರ ವೈಭವ’ ಸೀರಿಯಲ್ ಜನಮನ್ನಣೆಗೆ ಪಾತ್ರವಾಗಿತ್ತು. ಯುವನಟ ಪರೀಕ್ಷಿತ್ ಶಿರ್ಷಿಕೆ ಪಾತ್ರದಲ್ಲಿ ಅಭಿನಯಿಸಿದ್ದರು. ಸುವರ್ಣ ವಾಹಿನಿಯಲ್ಲಿ ನಿರ್ದೇಶಕ ಬ.ಲ.ಸುರೇಶ್ 565 ಸಂಚಿಕೆಗಳಲ್ಲಿ ಸಮಗ್ರವಾಗಿ ರಾಯರ ಕಥೆ, ಇತಿಹಾಸ ಕಟ್ಟಿಕೊಟ್ಟಿದ್ದರು. `ಕಲಿಯುಗದ ಕಲ್ಪತರು’, `ರಾಘವೇಂದ್ರ ವಿಜಯ’, `ಸಮಕಾಲೀನ ಇತಿಹಾಸ’ ಗ್ರಂಥಗಳನ್ನು ಆಧರಿಸಿ ಧಾರಾವಾಹಿಗೆ ಕಥೆ ಹೆಣೆಯಲಾಗಿತ್ತು.

ಈ ಟೀವಿ ವಾಹಿನಿಯಲ್ಲಿ `ಶ್ರೀ ರಾಘವೇಂದ್ರ ಮಹಿಮೆ’ ಶಿರ್ಷಿಕೆಯಡಿ ರಾಯರ ಕಥೆ ಮೂಡಿಬಂದಿತ್ತು. ಚಿತ್ರನಟ, ನೃತ್ಯ ತಾರೆ ಶ್ರೀಧರ್ ರಾಯರ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿದ್ದರು. ತೆಲುಗು ಮತ್ತು ತಮಿಳು ಕಿರುತೆರೆಯಲ್ಲಿಯೂ ರಾಯರ ಕಥೆಗಳು ಮೂಡಿಬಂದಿವೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋಗಳು: ಡಿ.ಸಿ.ನಾಗೇಶ್


ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...