Homeಮುಖಪುಟತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

ತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

- Advertisement -
- Advertisement -

ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ರಾಯರ ಜೀವನ-ಪವಾಡಗಳ ಕುರಿತ ಸಿನಿಮಾಗಳು ತಯಾರಾಗಿವೆ. ಖ್ಯಾತನಾಮ ಸಿನಿಮಾ ತಾರೆಯರು ಹಾಗೂ ತಂತ್ರಜ್ಞರು ಈ ಮೂಲಕ ರಾಯರಿಗೆ ಭಕ್ತಿ ಅರ್ಪಿಸಿದ್ದಾರೆ. ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ತೆರೆಯ ಮೇಲೆ ರಾಯರ ಕತೆ ಹಾಗೂ ಪಾತ್ರಗಳ ಕುರಿತ ಲೇಖನವಿದು.

ಕನ್ನಡ ಮತ್ತು ತಮಿಳು ಚಿತ್ರರಂಗಗಳಲ್ಲಿ ರಾಯರ ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ತೆರೆಯ ಮೇಲೆ ರಾಯರ ಜೀವನಗಾಥೆ, ಪವಾಡಗಳು ಅನಾವರಣಗೊಂಡಿವೆ. ಸಾಮಾಜಿಕ, ಕೌಟುಂಬಿಕ ಚಿತ್ರಗಳಲ್ಲೂ ರಾಯರ ಭಕ್ತಿಗೀತೆಗಳು ಜನಪ್ರಿಯವಾಗಿವೆ. ಜಾತಿ, ಮತ, ಧರ್ಮಗಳನ್ನು ಮೀರಿದ ರಾಯರ ಪ್ರಭಾವಳಿಯೇ ಇದಕ್ಕೆ ಕಾರಣವಾಗಿರಬಹುದು.

ಕನ್ನಡ ಚಿತ್ರರಂಗದ ಚಟುವಟಿಕೆಗಳು ಚೆನ್ನೈನಲ್ಲಿ ನಡೆಯುತ್ತಿದ್ದ ದಿನಗಳಲ್ಲೇ ರಾಯರ ಆರಾಧನೆ ಆರಂಭವಾಗಿತ್ತು. ಹಿರಿಯ ತಂತ್ರಜ್ಞರಾದ ಬಿ. ಆರ್. ಪಂತುಲು, ಸಿಂಗ್ ಠಾಕೂರ್ ಚಿತ್ರ ನಿರ್ಮಾಣಕ್ಕೆ ಮುನ್ನ ಮಂತ್ರಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಬಿಡುಗಡೆ ಮಾಡುವ ಮುನ್ನ ಇವರು ತಮ್ಮ ಚಿತ್ರದ ಪ್ರಥಮ ಪ್ರತಿಯನ್ನು ಬೃಂದಾವನದಲ್ಲಿಟ್ಟು ಪೂಜಿಸುತ್ತಿದ್ದರಂತೆ.

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್, ತಮಿಳು ಸ್ಟಾರ್ ರಜನೀಕಾಂತ್, ನಿರ್ದೇಶಕರಾದ ಹುಣಸೂರು ಕೃಷ್ಣಮೂರ್ತಿ, ದ್ವಾರಕೀಶ್, ನಟ ಶಿವರಾಂ ಹಾಗೂ ಇವರ ಸಮಕಾಲೀನರೇನಕರು ಶುಭ ಕಾರ್ಯಕ್ಕೆ ಮುನ್ನ ರಾಯರ ಅನುಗ್ರಹ ಪಡೆಯುವುದು ಕಡ್ಡಾಯವಾಗಿತ್ತು.

ರಾಯರ ಪಾತ್ರದಲ್ಲಿ ರಾಜ್

ಚಿತ್ರ ನಿರ್ಮಾಪಕರಲ್ಲಿದ್ದ ರಾಯರೆಡೆಗಿನ ಭಕ್ತಿ – ಭಾವ ತೆರೆ ಮೇಲೆ ಮೂಡಲು ಹೆಚ್ಚು ಸಮಯ ಬೇಕಾಗಲಿಲ್ಲ. ಸಿಂಗ್ ಠಾಕೂರ್ `ಮಂತ್ರಾಲಯ ಮಹಾತ್ಮೆ’ (1966) ನಿರ್ದೇಶಿಸಿದರು. ಡಾ. ರಾಜ್ ರಾಯರ ಪಾತ್ರಕ್ಕೆ ಜೀವ ತುಂಬಿದ್ದರು. ಚಿತ್ರದಲ್ಲಿ ರಾಯರೇ ರಚಿಸಿದ್ದ `ಇಂದು ಎನಗೆ ಗೋವಿಂದ…’ ಗೀತೆ ಬಳಕೆಯಾಗಿತ್ತು. 1980ರಲ್ಲಿ ಹುಣಸೂರು ಕೃಷ್ಣಮೂರ್ತಿ `ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಕರುಣೆ’ ನಿರ್ದೇಶಿಸಿದ್ದರು.

ಸರಿಸುಮಾರು ಇದೇ ಸಮಯದಲ್ಲಿ `ರಾಘವೇಂದ್ರ ವೈಭವ’ ಚಿತ್ರವೂ ತಯಾರಾಗಿತ್ತು. ಈ ಸಿನಿಮಾದಲ್ಲಿ ನಟ ಶ್ರೀನಾಥ್ ರಾಯರ ಪಾತ್ರದಲ್ಲಿ ನಟಿಸಿದ್ದರು. ಮುಂದೆ 2011ರಲ್ಲಿ `ಶ್ರೀ ರಾಘವೇಂದ್ರ ಸ್ವಾಮಿ’ ಕನ್ನಡ ಚಿತ್ರ ತೆರೆಕಂಡಿತ್ತು. ಕೃಷ್ಣಚಂದ್ರ ನಿರ್ದೇಶನದಲ್ಲಿ ತಯಾರಾದ ಚಿತ್ರದ ಶಿರ್ಷಿಕೆ ಪಾತ್ರವನ್ನು ರವೀಂದ್ರ ಗೋಪಾಲ ನಿರ್ವಹಿಸಿದ್ದರು.

ರಜನೀ ಸಿನಿಮಾ

ತಮಿಳು ಚಿತ್ರರಂಗದ ಜನಪ್ರಿಯ ನಟ ರಜನೀಕಾಂತ್ ರಾಯರ ಪರಮ ಭಕ್ತ. 1985 ರಲ್ಲಿ ಅವರು ಶಿರ್ಷಿಕೆ ಪಾತ್ರದಲ್ಲಿ ನಟಿಸಿದ್ದ `ಶ್ರೀ ರಾಘವೇಂದ್ರ’ ತಮಿಳು ಚಿತ್ರ ಮೂಡಿಬಂದಿತ್ತು. ರಜನಿಗೆ ಇದು ವೃತ್ತಿ ಜೀವನದ 100 ನೇ ಸಿನಿಮಾ. ಎಸ್. ಪಿ. ಮುತ್ತುರಾಮನ್ ನಿರ್ದೇಶನದಲ್ಲಿ ತಯಾರಾದ ಚಿತ್ರ `ಶ್ರೀ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಹಾತ್ಯಂ’ ಶಿರ್ಷಿಕೆಯಡಿ ತೆಲುಗಿಗೂ ಡಬ್ ಆಗಿತ್ತು. ತಾವು ರಾಯರ ಪಾತ್ರದಲ್ಲಿ ನಟಿಸಲು ಡಾ. ರಾಜ್ ಪ್ರೇರಣೆ ಎಂದು ಹಿಂದೊಮ್ಮೆ ರಜನಿ ಹೇಳಿಕೊಂಡಿದ್ದರು.

ಬಿಡೆನು ನಿನ್ನ ಪಾದ…

ಭಕ್ತಿಪ್ರಧಾನ ಚಿತ್ರಗಳ ಹೊರತಾಗಿ ಇತರೆ ಪ್ರಯೋಗಗಳಲ್ಲೂ ರಾಯರ ಗೀತೆಗಳನ್ನು ನಾವು ನೋಡಬಹುದು. ಡಾ.ರಾಜ್‌ರ `ಪೂಜಿಸಲೆಂದೇ ಹೂಗಳ ತಂದೆ…’ (ಎರಡು ಕನಸು), `ಹಾಲಲ್ಲಾದರು ಹಾಕು…’ (ದೇವತಾ ಮನುಷ್ಯ) ಹಾಡುಗಳು ಜನಪ್ರಿಯವಾಗಿವೆ. ಸಂಕಷ್ಟದಲ್ಲಿ ರಾಯರನ್ನು ನೆನೆಯುವ `ಬಿಡೆನು ನಿನ್ನ ಪಾದ…’ (ನಾ ನಿನ್ನ ಬಿಡಲಾರೆ), `ದಾರಿ ಕಾಣದಾಗಿದೆ ರಾಘವೇಂದ್ರನೆ…’ (ದೀಪ) ಮತ್ತೆರಡು ಶ್ರೇಷ್ಠ ಉದಾಹರಣೆ. `ಭಾಗ್ಯವಂತ’ ಚಿತ್ರದ `ಗುರುವಾರ ಬಂತಮ್ಮ…’ ಸೇರಿದಂತೆ ಹಲವು ರಾಯರ ಭಕ್ತಿಗೀತೆಗಳು ರಚಿಸಲ್ಪಿಟ್ಟಿವೆ.

ಕಿರುತೆರೆಯಲ್ಲಿ…

ಕನ್ನಡ ಕಿರುತೆರೆಯಲ್ಲಿ ಮೂಡಿಬಂದ `ಶ್ರೀ ಗುರುರಾಘವೇಂದ್ರ ವೈಭವ’ ಸೀರಿಯಲ್ ಜನಮನ್ನಣೆಗೆ ಪಾತ್ರವಾಗಿತ್ತು. ಯುವನಟ ಪರೀಕ್ಷಿತ್ ಶಿರ್ಷಿಕೆ ಪಾತ್ರದಲ್ಲಿ ಅಭಿನಯಿಸಿದ್ದರು. ಸುವರ್ಣ ವಾಹಿನಿಯಲ್ಲಿ ನಿರ್ದೇಶಕ ಬ.ಲ.ಸುರೇಶ್ 565 ಸಂಚಿಕೆಗಳಲ್ಲಿ ಸಮಗ್ರವಾಗಿ ರಾಯರ ಕಥೆ, ಇತಿಹಾಸ ಕಟ್ಟಿಕೊಟ್ಟಿದ್ದರು. `ಕಲಿಯುಗದ ಕಲ್ಪತರು’, `ರಾಘವೇಂದ್ರ ವಿಜಯ’, `ಸಮಕಾಲೀನ ಇತಿಹಾಸ’ ಗ್ರಂಥಗಳನ್ನು ಆಧರಿಸಿ ಧಾರಾವಾಹಿಗೆ ಕಥೆ ಹೆಣೆಯಲಾಗಿತ್ತು.

ಈ ಟೀವಿ ವಾಹಿನಿಯಲ್ಲಿ `ಶ್ರೀ ರಾಘವೇಂದ್ರ ಮಹಿಮೆ’ ಶಿರ್ಷಿಕೆಯಡಿ ರಾಯರ ಕಥೆ ಮೂಡಿಬಂದಿತ್ತು. ಚಿತ್ರನಟ, ನೃತ್ಯ ತಾರೆ ಶ್ರೀಧರ್ ರಾಯರ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿದ್ದರು. ತೆಲುಗು ಮತ್ತು ತಮಿಳು ಕಿರುತೆರೆಯಲ್ಲಿಯೂ ರಾಯರ ಕಥೆಗಳು ಮೂಡಿಬಂದಿವೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋಗಳು: ಡಿ.ಸಿ.ನಾಗೇಶ್


ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...