Homeಮುಖಪುಟತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

ತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

- Advertisement -
- Advertisement -

ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ರಾಯರ ಜೀವನ-ಪವಾಡಗಳ ಕುರಿತ ಸಿನಿಮಾಗಳು ತಯಾರಾಗಿವೆ. ಖ್ಯಾತನಾಮ ಸಿನಿಮಾ ತಾರೆಯರು ಹಾಗೂ ತಂತ್ರಜ್ಞರು ಈ ಮೂಲಕ ರಾಯರಿಗೆ ಭಕ್ತಿ ಅರ್ಪಿಸಿದ್ದಾರೆ. ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ತೆರೆಯ ಮೇಲೆ ರಾಯರ ಕತೆ ಹಾಗೂ ಪಾತ್ರಗಳ ಕುರಿತ ಲೇಖನವಿದು.

ಕನ್ನಡ ಮತ್ತು ತಮಿಳು ಚಿತ್ರರಂಗಗಳಲ್ಲಿ ರಾಯರ ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ತೆರೆಯ ಮೇಲೆ ರಾಯರ ಜೀವನಗಾಥೆ, ಪವಾಡಗಳು ಅನಾವರಣಗೊಂಡಿವೆ. ಸಾಮಾಜಿಕ, ಕೌಟುಂಬಿಕ ಚಿತ್ರಗಳಲ್ಲೂ ರಾಯರ ಭಕ್ತಿಗೀತೆಗಳು ಜನಪ್ರಿಯವಾಗಿವೆ. ಜಾತಿ, ಮತ, ಧರ್ಮಗಳನ್ನು ಮೀರಿದ ರಾಯರ ಪ್ರಭಾವಳಿಯೇ ಇದಕ್ಕೆ ಕಾರಣವಾಗಿರಬಹುದು.

ಕನ್ನಡ ಚಿತ್ರರಂಗದ ಚಟುವಟಿಕೆಗಳು ಚೆನ್ನೈನಲ್ಲಿ ನಡೆಯುತ್ತಿದ್ದ ದಿನಗಳಲ್ಲೇ ರಾಯರ ಆರಾಧನೆ ಆರಂಭವಾಗಿತ್ತು. ಹಿರಿಯ ತಂತ್ರಜ್ಞರಾದ ಬಿ. ಆರ್. ಪಂತುಲು, ಸಿಂಗ್ ಠಾಕೂರ್ ಚಿತ್ರ ನಿರ್ಮಾಣಕ್ಕೆ ಮುನ್ನ ಮಂತ್ರಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಬಿಡುಗಡೆ ಮಾಡುವ ಮುನ್ನ ಇವರು ತಮ್ಮ ಚಿತ್ರದ ಪ್ರಥಮ ಪ್ರತಿಯನ್ನು ಬೃಂದಾವನದಲ್ಲಿಟ್ಟು ಪೂಜಿಸುತ್ತಿದ್ದರಂತೆ.

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್, ತಮಿಳು ಸ್ಟಾರ್ ರಜನೀಕಾಂತ್, ನಿರ್ದೇಶಕರಾದ ಹುಣಸೂರು ಕೃಷ್ಣಮೂರ್ತಿ, ದ್ವಾರಕೀಶ್, ನಟ ಶಿವರಾಂ ಹಾಗೂ ಇವರ ಸಮಕಾಲೀನರೇನಕರು ಶುಭ ಕಾರ್ಯಕ್ಕೆ ಮುನ್ನ ರಾಯರ ಅನುಗ್ರಹ ಪಡೆಯುವುದು ಕಡ್ಡಾಯವಾಗಿತ್ತು.

ರಾಯರ ಪಾತ್ರದಲ್ಲಿ ರಾಜ್

ಚಿತ್ರ ನಿರ್ಮಾಪಕರಲ್ಲಿದ್ದ ರಾಯರೆಡೆಗಿನ ಭಕ್ತಿ – ಭಾವ ತೆರೆ ಮೇಲೆ ಮೂಡಲು ಹೆಚ್ಚು ಸಮಯ ಬೇಕಾಗಲಿಲ್ಲ. ಸಿಂಗ್ ಠಾಕೂರ್ `ಮಂತ್ರಾಲಯ ಮಹಾತ್ಮೆ’ (1966) ನಿರ್ದೇಶಿಸಿದರು. ಡಾ. ರಾಜ್ ರಾಯರ ಪಾತ್ರಕ್ಕೆ ಜೀವ ತುಂಬಿದ್ದರು. ಚಿತ್ರದಲ್ಲಿ ರಾಯರೇ ರಚಿಸಿದ್ದ `ಇಂದು ಎನಗೆ ಗೋವಿಂದ…’ ಗೀತೆ ಬಳಕೆಯಾಗಿತ್ತು. 1980ರಲ್ಲಿ ಹುಣಸೂರು ಕೃಷ್ಣಮೂರ್ತಿ `ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಕರುಣೆ’ ನಿರ್ದೇಶಿಸಿದ್ದರು.

ಸರಿಸುಮಾರು ಇದೇ ಸಮಯದಲ್ಲಿ `ರಾಘವೇಂದ್ರ ವೈಭವ’ ಚಿತ್ರವೂ ತಯಾರಾಗಿತ್ತು. ಈ ಸಿನಿಮಾದಲ್ಲಿ ನಟ ಶ್ರೀನಾಥ್ ರಾಯರ ಪಾತ್ರದಲ್ಲಿ ನಟಿಸಿದ್ದರು. ಮುಂದೆ 2011ರಲ್ಲಿ `ಶ್ರೀ ರಾಘವೇಂದ್ರ ಸ್ವಾಮಿ’ ಕನ್ನಡ ಚಿತ್ರ ತೆರೆಕಂಡಿತ್ತು. ಕೃಷ್ಣಚಂದ್ರ ನಿರ್ದೇಶನದಲ್ಲಿ ತಯಾರಾದ ಚಿತ್ರದ ಶಿರ್ಷಿಕೆ ಪಾತ್ರವನ್ನು ರವೀಂದ್ರ ಗೋಪಾಲ ನಿರ್ವಹಿಸಿದ್ದರು.

ರಜನೀ ಸಿನಿಮಾ

ತಮಿಳು ಚಿತ್ರರಂಗದ ಜನಪ್ರಿಯ ನಟ ರಜನೀಕಾಂತ್ ರಾಯರ ಪರಮ ಭಕ್ತ. 1985 ರಲ್ಲಿ ಅವರು ಶಿರ್ಷಿಕೆ ಪಾತ್ರದಲ್ಲಿ ನಟಿಸಿದ್ದ `ಶ್ರೀ ರಾಘವೇಂದ್ರ’ ತಮಿಳು ಚಿತ್ರ ಮೂಡಿಬಂದಿತ್ತು. ರಜನಿಗೆ ಇದು ವೃತ್ತಿ ಜೀವನದ 100 ನೇ ಸಿನಿಮಾ. ಎಸ್. ಪಿ. ಮುತ್ತುರಾಮನ್ ನಿರ್ದೇಶನದಲ್ಲಿ ತಯಾರಾದ ಚಿತ್ರ `ಶ್ರೀ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಹಾತ್ಯಂ’ ಶಿರ್ಷಿಕೆಯಡಿ ತೆಲುಗಿಗೂ ಡಬ್ ಆಗಿತ್ತು. ತಾವು ರಾಯರ ಪಾತ್ರದಲ್ಲಿ ನಟಿಸಲು ಡಾ. ರಾಜ್ ಪ್ರೇರಣೆ ಎಂದು ಹಿಂದೊಮ್ಮೆ ರಜನಿ ಹೇಳಿಕೊಂಡಿದ್ದರು.

ಬಿಡೆನು ನಿನ್ನ ಪಾದ…

ಭಕ್ತಿಪ್ರಧಾನ ಚಿತ್ರಗಳ ಹೊರತಾಗಿ ಇತರೆ ಪ್ರಯೋಗಗಳಲ್ಲೂ ರಾಯರ ಗೀತೆಗಳನ್ನು ನಾವು ನೋಡಬಹುದು. ಡಾ.ರಾಜ್‌ರ `ಪೂಜಿಸಲೆಂದೇ ಹೂಗಳ ತಂದೆ…’ (ಎರಡು ಕನಸು), `ಹಾಲಲ್ಲಾದರು ಹಾಕು…’ (ದೇವತಾ ಮನುಷ್ಯ) ಹಾಡುಗಳು ಜನಪ್ರಿಯವಾಗಿವೆ. ಸಂಕಷ್ಟದಲ್ಲಿ ರಾಯರನ್ನು ನೆನೆಯುವ `ಬಿಡೆನು ನಿನ್ನ ಪಾದ…’ (ನಾ ನಿನ್ನ ಬಿಡಲಾರೆ), `ದಾರಿ ಕಾಣದಾಗಿದೆ ರಾಘವೇಂದ್ರನೆ…’ (ದೀಪ) ಮತ್ತೆರಡು ಶ್ರೇಷ್ಠ ಉದಾಹರಣೆ. `ಭಾಗ್ಯವಂತ’ ಚಿತ್ರದ `ಗುರುವಾರ ಬಂತಮ್ಮ…’ ಸೇರಿದಂತೆ ಹಲವು ರಾಯರ ಭಕ್ತಿಗೀತೆಗಳು ರಚಿಸಲ್ಪಿಟ್ಟಿವೆ.

ಕಿರುತೆರೆಯಲ್ಲಿ…

ಕನ್ನಡ ಕಿರುತೆರೆಯಲ್ಲಿ ಮೂಡಿಬಂದ `ಶ್ರೀ ಗುರುರಾಘವೇಂದ್ರ ವೈಭವ’ ಸೀರಿಯಲ್ ಜನಮನ್ನಣೆಗೆ ಪಾತ್ರವಾಗಿತ್ತು. ಯುವನಟ ಪರೀಕ್ಷಿತ್ ಶಿರ್ಷಿಕೆ ಪಾತ್ರದಲ್ಲಿ ಅಭಿನಯಿಸಿದ್ದರು. ಸುವರ್ಣ ವಾಹಿನಿಯಲ್ಲಿ ನಿರ್ದೇಶಕ ಬ.ಲ.ಸುರೇಶ್ 565 ಸಂಚಿಕೆಗಳಲ್ಲಿ ಸಮಗ್ರವಾಗಿ ರಾಯರ ಕಥೆ, ಇತಿಹಾಸ ಕಟ್ಟಿಕೊಟ್ಟಿದ್ದರು. `ಕಲಿಯುಗದ ಕಲ್ಪತರು’, `ರಾಘವೇಂದ್ರ ವಿಜಯ’, `ಸಮಕಾಲೀನ ಇತಿಹಾಸ’ ಗ್ರಂಥಗಳನ್ನು ಆಧರಿಸಿ ಧಾರಾವಾಹಿಗೆ ಕಥೆ ಹೆಣೆಯಲಾಗಿತ್ತು.

ಈ ಟೀವಿ ವಾಹಿನಿಯಲ್ಲಿ `ಶ್ರೀ ರಾಘವೇಂದ್ರ ಮಹಿಮೆ’ ಶಿರ್ಷಿಕೆಯಡಿ ರಾಯರ ಕಥೆ ಮೂಡಿಬಂದಿತ್ತು. ಚಿತ್ರನಟ, ನೃತ್ಯ ತಾರೆ ಶ್ರೀಧರ್ ರಾಯರ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿದ್ದರು. ತೆಲುಗು ಮತ್ತು ತಮಿಳು ಕಿರುತೆರೆಯಲ್ಲಿಯೂ ರಾಯರ ಕಥೆಗಳು ಮೂಡಿಬಂದಿವೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋಗಳು: ಡಿ.ಸಿ.ನಾಗೇಶ್


ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...