Homeಮುಖಪುಟತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

ತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

- Advertisement -
- Advertisement -

ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ರಾಯರ ಜೀವನ-ಪವಾಡಗಳ ಕುರಿತ ಸಿನಿಮಾಗಳು ತಯಾರಾಗಿವೆ. ಖ್ಯಾತನಾಮ ಸಿನಿಮಾ ತಾರೆಯರು ಹಾಗೂ ತಂತ್ರಜ್ಞರು ಈ ಮೂಲಕ ರಾಯರಿಗೆ ಭಕ್ತಿ ಅರ್ಪಿಸಿದ್ದಾರೆ. ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ತೆರೆಯ ಮೇಲೆ ರಾಯರ ಕತೆ ಹಾಗೂ ಪಾತ್ರಗಳ ಕುರಿತ ಲೇಖನವಿದು.

ಕನ್ನಡ ಮತ್ತು ತಮಿಳು ಚಿತ್ರರಂಗಗಳಲ್ಲಿ ರಾಯರ ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ತೆರೆಯ ಮೇಲೆ ರಾಯರ ಜೀವನಗಾಥೆ, ಪವಾಡಗಳು ಅನಾವರಣಗೊಂಡಿವೆ. ಸಾಮಾಜಿಕ, ಕೌಟುಂಬಿಕ ಚಿತ್ರಗಳಲ್ಲೂ ರಾಯರ ಭಕ್ತಿಗೀತೆಗಳು ಜನಪ್ರಿಯವಾಗಿವೆ. ಜಾತಿ, ಮತ, ಧರ್ಮಗಳನ್ನು ಮೀರಿದ ರಾಯರ ಪ್ರಭಾವಳಿಯೇ ಇದಕ್ಕೆ ಕಾರಣವಾಗಿರಬಹುದು.

ಕನ್ನಡ ಚಿತ್ರರಂಗದ ಚಟುವಟಿಕೆಗಳು ಚೆನ್ನೈನಲ್ಲಿ ನಡೆಯುತ್ತಿದ್ದ ದಿನಗಳಲ್ಲೇ ರಾಯರ ಆರಾಧನೆ ಆರಂಭವಾಗಿತ್ತು. ಹಿರಿಯ ತಂತ್ರಜ್ಞರಾದ ಬಿ. ಆರ್. ಪಂತುಲು, ಸಿಂಗ್ ಠಾಕೂರ್ ಚಿತ್ರ ನಿರ್ಮಾಣಕ್ಕೆ ಮುನ್ನ ಮಂತ್ರಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಬಿಡುಗಡೆ ಮಾಡುವ ಮುನ್ನ ಇವರು ತಮ್ಮ ಚಿತ್ರದ ಪ್ರಥಮ ಪ್ರತಿಯನ್ನು ಬೃಂದಾವನದಲ್ಲಿಟ್ಟು ಪೂಜಿಸುತ್ತಿದ್ದರಂತೆ.

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್, ತಮಿಳು ಸ್ಟಾರ್ ರಜನೀಕಾಂತ್, ನಿರ್ದೇಶಕರಾದ ಹುಣಸೂರು ಕೃಷ್ಣಮೂರ್ತಿ, ದ್ವಾರಕೀಶ್, ನಟ ಶಿವರಾಂ ಹಾಗೂ ಇವರ ಸಮಕಾಲೀನರೇನಕರು ಶುಭ ಕಾರ್ಯಕ್ಕೆ ಮುನ್ನ ರಾಯರ ಅನುಗ್ರಹ ಪಡೆಯುವುದು ಕಡ್ಡಾಯವಾಗಿತ್ತು.

ರಾಯರ ಪಾತ್ರದಲ್ಲಿ ರಾಜ್

ಚಿತ್ರ ನಿರ್ಮಾಪಕರಲ್ಲಿದ್ದ ರಾಯರೆಡೆಗಿನ ಭಕ್ತಿ – ಭಾವ ತೆರೆ ಮೇಲೆ ಮೂಡಲು ಹೆಚ್ಚು ಸಮಯ ಬೇಕಾಗಲಿಲ್ಲ. ಸಿಂಗ್ ಠಾಕೂರ್ `ಮಂತ್ರಾಲಯ ಮಹಾತ್ಮೆ’ (1966) ನಿರ್ದೇಶಿಸಿದರು. ಡಾ. ರಾಜ್ ರಾಯರ ಪಾತ್ರಕ್ಕೆ ಜೀವ ತುಂಬಿದ್ದರು. ಚಿತ್ರದಲ್ಲಿ ರಾಯರೇ ರಚಿಸಿದ್ದ `ಇಂದು ಎನಗೆ ಗೋವಿಂದ…’ ಗೀತೆ ಬಳಕೆಯಾಗಿತ್ತು. 1980ರಲ್ಲಿ ಹುಣಸೂರು ಕೃಷ್ಣಮೂರ್ತಿ `ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಕರುಣೆ’ ನಿರ್ದೇಶಿಸಿದ್ದರು.

ಸರಿಸುಮಾರು ಇದೇ ಸಮಯದಲ್ಲಿ `ರಾಘವೇಂದ್ರ ವೈಭವ’ ಚಿತ್ರವೂ ತಯಾರಾಗಿತ್ತು. ಈ ಸಿನಿಮಾದಲ್ಲಿ ನಟ ಶ್ರೀನಾಥ್ ರಾಯರ ಪಾತ್ರದಲ್ಲಿ ನಟಿಸಿದ್ದರು. ಮುಂದೆ 2011ರಲ್ಲಿ `ಶ್ರೀ ರಾಘವೇಂದ್ರ ಸ್ವಾಮಿ’ ಕನ್ನಡ ಚಿತ್ರ ತೆರೆಕಂಡಿತ್ತು. ಕೃಷ್ಣಚಂದ್ರ ನಿರ್ದೇಶನದಲ್ಲಿ ತಯಾರಾದ ಚಿತ್ರದ ಶಿರ್ಷಿಕೆ ಪಾತ್ರವನ್ನು ರವೀಂದ್ರ ಗೋಪಾಲ ನಿರ್ವಹಿಸಿದ್ದರು.

ರಜನೀ ಸಿನಿಮಾ

ತಮಿಳು ಚಿತ್ರರಂಗದ ಜನಪ್ರಿಯ ನಟ ರಜನೀಕಾಂತ್ ರಾಯರ ಪರಮ ಭಕ್ತ. 1985 ರಲ್ಲಿ ಅವರು ಶಿರ್ಷಿಕೆ ಪಾತ್ರದಲ್ಲಿ ನಟಿಸಿದ್ದ `ಶ್ರೀ ರಾಘವೇಂದ್ರ’ ತಮಿಳು ಚಿತ್ರ ಮೂಡಿಬಂದಿತ್ತು. ರಜನಿಗೆ ಇದು ವೃತ್ತಿ ಜೀವನದ 100 ನೇ ಸಿನಿಮಾ. ಎಸ್. ಪಿ. ಮುತ್ತುರಾಮನ್ ನಿರ್ದೇಶನದಲ್ಲಿ ತಯಾರಾದ ಚಿತ್ರ `ಶ್ರೀ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಹಾತ್ಯಂ’ ಶಿರ್ಷಿಕೆಯಡಿ ತೆಲುಗಿಗೂ ಡಬ್ ಆಗಿತ್ತು. ತಾವು ರಾಯರ ಪಾತ್ರದಲ್ಲಿ ನಟಿಸಲು ಡಾ. ರಾಜ್ ಪ್ರೇರಣೆ ಎಂದು ಹಿಂದೊಮ್ಮೆ ರಜನಿ ಹೇಳಿಕೊಂಡಿದ್ದರು.

ಬಿಡೆನು ನಿನ್ನ ಪಾದ…

ಭಕ್ತಿಪ್ರಧಾನ ಚಿತ್ರಗಳ ಹೊರತಾಗಿ ಇತರೆ ಪ್ರಯೋಗಗಳಲ್ಲೂ ರಾಯರ ಗೀತೆಗಳನ್ನು ನಾವು ನೋಡಬಹುದು. ಡಾ.ರಾಜ್‌ರ `ಪೂಜಿಸಲೆಂದೇ ಹೂಗಳ ತಂದೆ…’ (ಎರಡು ಕನಸು), `ಹಾಲಲ್ಲಾದರು ಹಾಕು…’ (ದೇವತಾ ಮನುಷ್ಯ) ಹಾಡುಗಳು ಜನಪ್ರಿಯವಾಗಿವೆ. ಸಂಕಷ್ಟದಲ್ಲಿ ರಾಯರನ್ನು ನೆನೆಯುವ `ಬಿಡೆನು ನಿನ್ನ ಪಾದ…’ (ನಾ ನಿನ್ನ ಬಿಡಲಾರೆ), `ದಾರಿ ಕಾಣದಾಗಿದೆ ರಾಘವೇಂದ್ರನೆ…’ (ದೀಪ) ಮತ್ತೆರಡು ಶ್ರೇಷ್ಠ ಉದಾಹರಣೆ. `ಭಾಗ್ಯವಂತ’ ಚಿತ್ರದ `ಗುರುವಾರ ಬಂತಮ್ಮ…’ ಸೇರಿದಂತೆ ಹಲವು ರಾಯರ ಭಕ್ತಿಗೀತೆಗಳು ರಚಿಸಲ್ಪಿಟ್ಟಿವೆ.

ಕಿರುತೆರೆಯಲ್ಲಿ…

ಕನ್ನಡ ಕಿರುತೆರೆಯಲ್ಲಿ ಮೂಡಿಬಂದ `ಶ್ರೀ ಗುರುರಾಘವೇಂದ್ರ ವೈಭವ’ ಸೀರಿಯಲ್ ಜನಮನ್ನಣೆಗೆ ಪಾತ್ರವಾಗಿತ್ತು. ಯುವನಟ ಪರೀಕ್ಷಿತ್ ಶಿರ್ಷಿಕೆ ಪಾತ್ರದಲ್ಲಿ ಅಭಿನಯಿಸಿದ್ದರು. ಸುವರ್ಣ ವಾಹಿನಿಯಲ್ಲಿ ನಿರ್ದೇಶಕ ಬ.ಲ.ಸುರೇಶ್ 565 ಸಂಚಿಕೆಗಳಲ್ಲಿ ಸಮಗ್ರವಾಗಿ ರಾಯರ ಕಥೆ, ಇತಿಹಾಸ ಕಟ್ಟಿಕೊಟ್ಟಿದ್ದರು. `ಕಲಿಯುಗದ ಕಲ್ಪತರು’, `ರಾಘವೇಂದ್ರ ವಿಜಯ’, `ಸಮಕಾಲೀನ ಇತಿಹಾಸ’ ಗ್ರಂಥಗಳನ್ನು ಆಧರಿಸಿ ಧಾರಾವಾಹಿಗೆ ಕಥೆ ಹೆಣೆಯಲಾಗಿತ್ತು.

ಈ ಟೀವಿ ವಾಹಿನಿಯಲ್ಲಿ `ಶ್ರೀ ರಾಘವೇಂದ್ರ ಮಹಿಮೆ’ ಶಿರ್ಷಿಕೆಯಡಿ ರಾಯರ ಕಥೆ ಮೂಡಿಬಂದಿತ್ತು. ಚಿತ್ರನಟ, ನೃತ್ಯ ತಾರೆ ಶ್ರೀಧರ್ ರಾಯರ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿದ್ದರು. ತೆಲುಗು ಮತ್ತು ತಮಿಳು ಕಿರುತೆರೆಯಲ್ಲಿಯೂ ರಾಯರ ಕಥೆಗಳು ಮೂಡಿಬಂದಿವೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋಗಳು: ಡಿ.ಸಿ.ನಾಗೇಶ್


ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...