Homeಮುಖಪುಟ57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

- Advertisement -
- Advertisement -

2019-20 ನೇ ಸಾಲಿನ ಆರ್ಥಿಕ ವರ್ಷದಲ್ಲಿ 57,128 ಕೋಟಿ ರೂಗಳ ಹೆಚ್ಚಿನ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡುವುದಕ್ಕೆ RBI ಒಪ್ಪಿಗೆ ಸೂಚಿಸಿದೆ. RBI ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ 584ನೇ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದೆ.

ತೀವ್ರ ಆರ್ಥಿಕ ಕುಸಿತ ಮತ್ತು ಕೊರೊನಾ ಸಾಂಕ್ರಾಮಿಕದ ಸಮಸ್ಯೆಯಿಂದ ಸರ್ಕಾರದ ಆದಾಯ ಸಂಗ್ರಹಣೆಯ ಮೇಲೆ ಪರಿಣಾಮ ಬೀರಿದ್ದರಿಂದ ಏಪ್ರಿಲ್-ಜೂನ್ ಅವಧಿಯಲ್ಲಿ ವಿತ್ತೀಯ ಕೊರತೆಯು ದಾಖಲೆಯ 6.62 ಲಕ್ಷಕೋಟಿ ರೂಗಳಿಗೆ ಏರಿಕೆಯಾಗಿರುವ ಸಂದರ್ಭದಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿದೆ.

ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನ ಪರಿಣಾಮವನ್ನು ನಿಯಂತ್ರಿಸುವ ಮತ್ತು ಇತರ ಕ್ರಮಗಳನ್ನು ಪರಿಶೀಲಿಸಿದ ನಂತರ RBI ಆಡಳಿತವು 2019-20ರ (ಜುಲೈನಿಂದ ಜೂನ್ ವರೆಗೆ) ಲೆಕ್ಕಪತ್ರ ವರ್ಷಕ್ಕಾಗಿ ಹೆಚ್ಚುವರಿಯಾಗಿ 57.128 ಕೋಟಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿದೆ. ಈ ಅವಧಿಯನ್ನು ಲೆಕ್ಕಪತ್ರ ವರ್ಷವೆಂದು ಪರಿಗಣಿಸಲಾಗುತ್ತದೆ.

2020-21 ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ ಆರ್‌ಬಿಐ ಮತ್ತು ಇತರ ಸರ್ಕಾರೀ ಹಣಕಾಸು ಸಂಸ್ಥೆಗಳಿಂದ ರೂ. 60,000 ಕೋಟಿ ಲಾಭಾಂಶವನ್ನು ಅಂದಾಜಿಸಲಾಗಿದೆ. ಆರ್‌ಬಿಐನಿಂದ ಹಣದ ಪಾವತಿಯನ್ನು ಹೆಚ್ಚಿಸುವಂತೆ ಸರ್ಕಾರವು ಇತ್ತೀನ ವರ್ಷಗಳಲ್ಲಿ ಒತ್ತಡವನ್ನು ಹಾಕುತ್ತಿದೆ.

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

ಈಗ ಕೊರೊನಾದಿಂದಾಗಿ ಉಂಟಾಗುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಹಾಗೂ ಆರ್ಥಿಕತೆಯನ್ನು ಬೆಂಬಲಿಸಲು ಸರ್ಕಾರವು ಅಂದಾಜು, 60,000 ಕೋಟಿ ರೂ. ಬಯಸಿತ್ತು ಎನ್ನಲಾಗಿದೆ.

ಕೊರೊನಾ ವೈರಸ್ ಅನ್ನು ಎದುರಿಸಲು ಘೋಷಿಸಿದ ಸಂಪೂರ್ಣ ಲಾಕ್‌ಡೌನ್‌ನಿಂದಾಗಿ ಬಡವರಿಗೆ ಸಹಾಯ ಮಾಡಲು ಮತ್ತು ಆರ್ಥಿಕತೆಯ ವಿವಿಧ ವಿಭಾಗಗಳನ್ನು ಪುನರುಜ್ಜೀವನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೇ 12 ರಂದು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದರು.

ಸ್ಥಗಿತಗೊಂಡ ಆರ್ಥಿಕತೆಯು ಸರ್ಕಾರದ ತೆರಿಗೆ ಸಂಗ್ರಹವನ್ನು ಭಾದಿಸಿತ್ತು. ಇದರ ಪರಿಣಾಮವಾಗಿ ಹಣಕಾಸಿನ ಕೊರತೆಯು ಜೂನ್‌ನಲ್ಲಿ ಕೊನೆಗೊಂಡ ತ್ರೈಮಾಸಿಕ ಹಣಕಾಸು ಅವಧಿಯಲ್ಲಿ 6.6 ಲಕ್ಷ ಕೋಟಿ ರೂ.ಗೂ ಅಧಿಕವಾಗಿದೆ.

ನಾಲ್ಕು ದಶಕಗಳಲ್ಲಿ ದೇಶದ ಜಿಡಿಪಿ ಮೊದಲ ಬಾರಿಗೆ ಸಂಕುಚಿತಗೊಳ್ಳುವ ನಿರೀಕ್ಷೆಯಿರುವುದರಿಂದ ಹಣಕಾಸಿನ ಕೊರತೆಯು ಸುಮಾರು 7.5% ಕ್ಕೆ ಹೆಚ್ಚಾಗುತ್ತದೆ ಎಂದು ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕತೆಯು ಸುಮಾರು 5.3% ರಷ್ಟು ಕುಗ್ಗುತ್ತದೆ ಎಂದು ಅಧ್ಯಯನಗಳು ಅಂದಾಜಿಸಿವೆ.

ಬಿಮಲ್ ಜಲನ್ ಸಮಿತಿಯ ಶಿಫಾರಸುಗಳ ಪ್ರಕಾರ ಪಾವತಿಸಬೇಕಾದ ಲಾಭಾಂಶವನ್ನು ನಿರ್ಧರಿಸಲು ಹೊಸ ಬಂಡವಾಳ ಚೌಕಟ್ಟನ್ನು ಅಳವಡಿಸಿಕೊಂಡ ನಂತರ ಕಳೆದ ವರ್ಷ ಕೇಂದ್ರ ಬ್ಯಾಂಕ್ 1.76 ಲಕ್ಷ ಕೋಟಿ ರೂ. ವನ್ನು ಪಾವತಿಸಿತ್ತು.


ಓದಿ: ಮನೆಯಲಿ ಇದ್ದರೆ ಚಿನ್ನ ಚಿಂತೆ ಯಾಕೆ ಅಣ್ಣ?! ರಿಸರ್ವ್ ಬ್ಯಾಂಕ್ ಮೀಸಲು ನಿಧಿಗೆ ಸರಕಾರದ ಕನ್ನ!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...