Homeಮುಖಪುಟ57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

- Advertisement -
- Advertisement -

2019-20 ನೇ ಸಾಲಿನ ಆರ್ಥಿಕ ವರ್ಷದಲ್ಲಿ 57,128 ಕೋಟಿ ರೂಗಳ ಹೆಚ್ಚಿನ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡುವುದಕ್ಕೆ RBI ಒಪ್ಪಿಗೆ ಸೂಚಿಸಿದೆ. RBI ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ 584ನೇ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದೆ.

ತೀವ್ರ ಆರ್ಥಿಕ ಕುಸಿತ ಮತ್ತು ಕೊರೊನಾ ಸಾಂಕ್ರಾಮಿಕದ ಸಮಸ್ಯೆಯಿಂದ ಸರ್ಕಾರದ ಆದಾಯ ಸಂಗ್ರಹಣೆಯ ಮೇಲೆ ಪರಿಣಾಮ ಬೀರಿದ್ದರಿಂದ ಏಪ್ರಿಲ್-ಜೂನ್ ಅವಧಿಯಲ್ಲಿ ವಿತ್ತೀಯ ಕೊರತೆಯು ದಾಖಲೆಯ 6.62 ಲಕ್ಷಕೋಟಿ ರೂಗಳಿಗೆ ಏರಿಕೆಯಾಗಿರುವ ಸಂದರ್ಭದಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿದೆ.

ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನ ಪರಿಣಾಮವನ್ನು ನಿಯಂತ್ರಿಸುವ ಮತ್ತು ಇತರ ಕ್ರಮಗಳನ್ನು ಪರಿಶೀಲಿಸಿದ ನಂತರ RBI ಆಡಳಿತವು 2019-20ರ (ಜುಲೈನಿಂದ ಜೂನ್ ವರೆಗೆ) ಲೆಕ್ಕಪತ್ರ ವರ್ಷಕ್ಕಾಗಿ ಹೆಚ್ಚುವರಿಯಾಗಿ 57.128 ಕೋಟಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿದೆ. ಈ ಅವಧಿಯನ್ನು ಲೆಕ್ಕಪತ್ರ ವರ್ಷವೆಂದು ಪರಿಗಣಿಸಲಾಗುತ್ತದೆ.

2020-21 ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ ಆರ್‌ಬಿಐ ಮತ್ತು ಇತರ ಸರ್ಕಾರೀ ಹಣಕಾಸು ಸಂಸ್ಥೆಗಳಿಂದ ರೂ. 60,000 ಕೋಟಿ ಲಾಭಾಂಶವನ್ನು ಅಂದಾಜಿಸಲಾಗಿದೆ. ಆರ್‌ಬಿಐನಿಂದ ಹಣದ ಪಾವತಿಯನ್ನು ಹೆಚ್ಚಿಸುವಂತೆ ಸರ್ಕಾರವು ಇತ್ತೀನ ವರ್ಷಗಳಲ್ಲಿ ಒತ್ತಡವನ್ನು ಹಾಕುತ್ತಿದೆ.

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

ಈಗ ಕೊರೊನಾದಿಂದಾಗಿ ಉಂಟಾಗುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಹಾಗೂ ಆರ್ಥಿಕತೆಯನ್ನು ಬೆಂಬಲಿಸಲು ಸರ್ಕಾರವು ಅಂದಾಜು, 60,000 ಕೋಟಿ ರೂ. ಬಯಸಿತ್ತು ಎನ್ನಲಾಗಿದೆ.

ಕೊರೊನಾ ವೈರಸ್ ಅನ್ನು ಎದುರಿಸಲು ಘೋಷಿಸಿದ ಸಂಪೂರ್ಣ ಲಾಕ್‌ಡೌನ್‌ನಿಂದಾಗಿ ಬಡವರಿಗೆ ಸಹಾಯ ಮಾಡಲು ಮತ್ತು ಆರ್ಥಿಕತೆಯ ವಿವಿಧ ವಿಭಾಗಗಳನ್ನು ಪುನರುಜ್ಜೀವನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೇ 12 ರಂದು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದರು.

ಸ್ಥಗಿತಗೊಂಡ ಆರ್ಥಿಕತೆಯು ಸರ್ಕಾರದ ತೆರಿಗೆ ಸಂಗ್ರಹವನ್ನು ಭಾದಿಸಿತ್ತು. ಇದರ ಪರಿಣಾಮವಾಗಿ ಹಣಕಾಸಿನ ಕೊರತೆಯು ಜೂನ್‌ನಲ್ಲಿ ಕೊನೆಗೊಂಡ ತ್ರೈಮಾಸಿಕ ಹಣಕಾಸು ಅವಧಿಯಲ್ಲಿ 6.6 ಲಕ್ಷ ಕೋಟಿ ರೂ.ಗೂ ಅಧಿಕವಾಗಿದೆ.

ನಾಲ್ಕು ದಶಕಗಳಲ್ಲಿ ದೇಶದ ಜಿಡಿಪಿ ಮೊದಲ ಬಾರಿಗೆ ಸಂಕುಚಿತಗೊಳ್ಳುವ ನಿರೀಕ್ಷೆಯಿರುವುದರಿಂದ ಹಣಕಾಸಿನ ಕೊರತೆಯು ಸುಮಾರು 7.5% ಕ್ಕೆ ಹೆಚ್ಚಾಗುತ್ತದೆ ಎಂದು ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕತೆಯು ಸುಮಾರು 5.3% ರಷ್ಟು ಕುಗ್ಗುತ್ತದೆ ಎಂದು ಅಧ್ಯಯನಗಳು ಅಂದಾಜಿಸಿವೆ.

ಬಿಮಲ್ ಜಲನ್ ಸಮಿತಿಯ ಶಿಫಾರಸುಗಳ ಪ್ರಕಾರ ಪಾವತಿಸಬೇಕಾದ ಲಾಭಾಂಶವನ್ನು ನಿರ್ಧರಿಸಲು ಹೊಸ ಬಂಡವಾಳ ಚೌಕಟ್ಟನ್ನು ಅಳವಡಿಸಿಕೊಂಡ ನಂತರ ಕಳೆದ ವರ್ಷ ಕೇಂದ್ರ ಬ್ಯಾಂಕ್ 1.76 ಲಕ್ಷ ಕೋಟಿ ರೂ. ವನ್ನು ಪಾವತಿಸಿತ್ತು.


ಓದಿ: ಮನೆಯಲಿ ಇದ್ದರೆ ಚಿನ್ನ ಚಿಂತೆ ಯಾಕೆ ಅಣ್ಣ?! ರಿಸರ್ವ್ ಬ್ಯಾಂಕ್ ಮೀಸಲು ನಿಧಿಗೆ ಸರಕಾರದ ಕನ್ನ!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...