Homeಮುಖಪುಟ57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

- Advertisement -
- Advertisement -

2019-20 ನೇ ಸಾಲಿನ ಆರ್ಥಿಕ ವರ್ಷದಲ್ಲಿ 57,128 ಕೋಟಿ ರೂಗಳ ಹೆಚ್ಚಿನ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡುವುದಕ್ಕೆ RBI ಒಪ್ಪಿಗೆ ಸೂಚಿಸಿದೆ. RBI ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ 584ನೇ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದೆ.

ತೀವ್ರ ಆರ್ಥಿಕ ಕುಸಿತ ಮತ್ತು ಕೊರೊನಾ ಸಾಂಕ್ರಾಮಿಕದ ಸಮಸ್ಯೆಯಿಂದ ಸರ್ಕಾರದ ಆದಾಯ ಸಂಗ್ರಹಣೆಯ ಮೇಲೆ ಪರಿಣಾಮ ಬೀರಿದ್ದರಿಂದ ಏಪ್ರಿಲ್-ಜೂನ್ ಅವಧಿಯಲ್ಲಿ ವಿತ್ತೀಯ ಕೊರತೆಯು ದಾಖಲೆಯ 6.62 ಲಕ್ಷಕೋಟಿ ರೂಗಳಿಗೆ ಏರಿಕೆಯಾಗಿರುವ ಸಂದರ್ಭದಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿದೆ.

ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನ ಪರಿಣಾಮವನ್ನು ನಿಯಂತ್ರಿಸುವ ಮತ್ತು ಇತರ ಕ್ರಮಗಳನ್ನು ಪರಿಶೀಲಿಸಿದ ನಂತರ RBI ಆಡಳಿತವು 2019-20ರ (ಜುಲೈನಿಂದ ಜೂನ್ ವರೆಗೆ) ಲೆಕ್ಕಪತ್ರ ವರ್ಷಕ್ಕಾಗಿ ಹೆಚ್ಚುವರಿಯಾಗಿ 57.128 ಕೋಟಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿದೆ. ಈ ಅವಧಿಯನ್ನು ಲೆಕ್ಕಪತ್ರ ವರ್ಷವೆಂದು ಪರಿಗಣಿಸಲಾಗುತ್ತದೆ.

2020-21 ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ ಆರ್‌ಬಿಐ ಮತ್ತು ಇತರ ಸರ್ಕಾರೀ ಹಣಕಾಸು ಸಂಸ್ಥೆಗಳಿಂದ ರೂ. 60,000 ಕೋಟಿ ಲಾಭಾಂಶವನ್ನು ಅಂದಾಜಿಸಲಾಗಿದೆ. ಆರ್‌ಬಿಐನಿಂದ ಹಣದ ಪಾವತಿಯನ್ನು ಹೆಚ್ಚಿಸುವಂತೆ ಸರ್ಕಾರವು ಇತ್ತೀನ ವರ್ಷಗಳಲ್ಲಿ ಒತ್ತಡವನ್ನು ಹಾಕುತ್ತಿದೆ.

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

ಈಗ ಕೊರೊನಾದಿಂದಾಗಿ ಉಂಟಾಗುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಹಾಗೂ ಆರ್ಥಿಕತೆಯನ್ನು ಬೆಂಬಲಿಸಲು ಸರ್ಕಾರವು ಅಂದಾಜು, 60,000 ಕೋಟಿ ರೂ. ಬಯಸಿತ್ತು ಎನ್ನಲಾಗಿದೆ.

ಕೊರೊನಾ ವೈರಸ್ ಅನ್ನು ಎದುರಿಸಲು ಘೋಷಿಸಿದ ಸಂಪೂರ್ಣ ಲಾಕ್‌ಡೌನ್‌ನಿಂದಾಗಿ ಬಡವರಿಗೆ ಸಹಾಯ ಮಾಡಲು ಮತ್ತು ಆರ್ಥಿಕತೆಯ ವಿವಿಧ ವಿಭಾಗಗಳನ್ನು ಪುನರುಜ್ಜೀವನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೇ 12 ರಂದು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದರು.

ಸ್ಥಗಿತಗೊಂಡ ಆರ್ಥಿಕತೆಯು ಸರ್ಕಾರದ ತೆರಿಗೆ ಸಂಗ್ರಹವನ್ನು ಭಾದಿಸಿತ್ತು. ಇದರ ಪರಿಣಾಮವಾಗಿ ಹಣಕಾಸಿನ ಕೊರತೆಯು ಜೂನ್‌ನಲ್ಲಿ ಕೊನೆಗೊಂಡ ತ್ರೈಮಾಸಿಕ ಹಣಕಾಸು ಅವಧಿಯಲ್ಲಿ 6.6 ಲಕ್ಷ ಕೋಟಿ ರೂ.ಗೂ ಅಧಿಕವಾಗಿದೆ.

ನಾಲ್ಕು ದಶಕಗಳಲ್ಲಿ ದೇಶದ ಜಿಡಿಪಿ ಮೊದಲ ಬಾರಿಗೆ ಸಂಕುಚಿತಗೊಳ್ಳುವ ನಿರೀಕ್ಷೆಯಿರುವುದರಿಂದ ಹಣಕಾಸಿನ ಕೊರತೆಯು ಸುಮಾರು 7.5% ಕ್ಕೆ ಹೆಚ್ಚಾಗುತ್ತದೆ ಎಂದು ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕತೆಯು ಸುಮಾರು 5.3% ರಷ್ಟು ಕುಗ್ಗುತ್ತದೆ ಎಂದು ಅಧ್ಯಯನಗಳು ಅಂದಾಜಿಸಿವೆ.

ಬಿಮಲ್ ಜಲನ್ ಸಮಿತಿಯ ಶಿಫಾರಸುಗಳ ಪ್ರಕಾರ ಪಾವತಿಸಬೇಕಾದ ಲಾಭಾಂಶವನ್ನು ನಿರ್ಧರಿಸಲು ಹೊಸ ಬಂಡವಾಳ ಚೌಕಟ್ಟನ್ನು ಅಳವಡಿಸಿಕೊಂಡ ನಂತರ ಕಳೆದ ವರ್ಷ ಕೇಂದ್ರ ಬ್ಯಾಂಕ್ 1.76 ಲಕ್ಷ ಕೋಟಿ ರೂ. ವನ್ನು ಪಾವತಿಸಿತ್ತು.


ಓದಿ: ಮನೆಯಲಿ ಇದ್ದರೆ ಚಿನ್ನ ಚಿಂತೆ ಯಾಕೆ ಅಣ್ಣ?! ರಿಸರ್ವ್ ಬ್ಯಾಂಕ್ ಮೀಸಲು ನಿಧಿಗೆ ಸರಕಾರದ ಕನ್ನ!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...