Homeಮುಖಪುಟ57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

- Advertisement -
- Advertisement -

2019-20 ನೇ ಸಾಲಿನ ಆರ್ಥಿಕ ವರ್ಷದಲ್ಲಿ 57,128 ಕೋಟಿ ರೂಗಳ ಹೆಚ್ಚಿನ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡುವುದಕ್ಕೆ RBI ಒಪ್ಪಿಗೆ ಸೂಚಿಸಿದೆ. RBI ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ 584ನೇ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದೆ.

ತೀವ್ರ ಆರ್ಥಿಕ ಕುಸಿತ ಮತ್ತು ಕೊರೊನಾ ಸಾಂಕ್ರಾಮಿಕದ ಸಮಸ್ಯೆಯಿಂದ ಸರ್ಕಾರದ ಆದಾಯ ಸಂಗ್ರಹಣೆಯ ಮೇಲೆ ಪರಿಣಾಮ ಬೀರಿದ್ದರಿಂದ ಏಪ್ರಿಲ್-ಜೂನ್ ಅವಧಿಯಲ್ಲಿ ವಿತ್ತೀಯ ಕೊರತೆಯು ದಾಖಲೆಯ 6.62 ಲಕ್ಷಕೋಟಿ ರೂಗಳಿಗೆ ಏರಿಕೆಯಾಗಿರುವ ಸಂದರ್ಭದಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿದೆ.

ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನ ಪರಿಣಾಮವನ್ನು ನಿಯಂತ್ರಿಸುವ ಮತ್ತು ಇತರ ಕ್ರಮಗಳನ್ನು ಪರಿಶೀಲಿಸಿದ ನಂತರ RBI ಆಡಳಿತವು 2019-20ರ (ಜುಲೈನಿಂದ ಜೂನ್ ವರೆಗೆ) ಲೆಕ್ಕಪತ್ರ ವರ್ಷಕ್ಕಾಗಿ ಹೆಚ್ಚುವರಿಯಾಗಿ 57.128 ಕೋಟಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿದೆ. ಈ ಅವಧಿಯನ್ನು ಲೆಕ್ಕಪತ್ರ ವರ್ಷವೆಂದು ಪರಿಗಣಿಸಲಾಗುತ್ತದೆ.

2020-21 ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ ಆರ್‌ಬಿಐ ಮತ್ತು ಇತರ ಸರ್ಕಾರೀ ಹಣಕಾಸು ಸಂಸ್ಥೆಗಳಿಂದ ರೂ. 60,000 ಕೋಟಿ ಲಾಭಾಂಶವನ್ನು ಅಂದಾಜಿಸಲಾಗಿದೆ. ಆರ್‌ಬಿಐನಿಂದ ಹಣದ ಪಾವತಿಯನ್ನು ಹೆಚ್ಚಿಸುವಂತೆ ಸರ್ಕಾರವು ಇತ್ತೀನ ವರ್ಷಗಳಲ್ಲಿ ಒತ್ತಡವನ್ನು ಹಾಕುತ್ತಿದೆ.

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

ಈಗ ಕೊರೊನಾದಿಂದಾಗಿ ಉಂಟಾಗುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಹಾಗೂ ಆರ್ಥಿಕತೆಯನ್ನು ಬೆಂಬಲಿಸಲು ಸರ್ಕಾರವು ಅಂದಾಜು, 60,000 ಕೋಟಿ ರೂ. ಬಯಸಿತ್ತು ಎನ್ನಲಾಗಿದೆ.

ಕೊರೊನಾ ವೈರಸ್ ಅನ್ನು ಎದುರಿಸಲು ಘೋಷಿಸಿದ ಸಂಪೂರ್ಣ ಲಾಕ್‌ಡೌನ್‌ನಿಂದಾಗಿ ಬಡವರಿಗೆ ಸಹಾಯ ಮಾಡಲು ಮತ್ತು ಆರ್ಥಿಕತೆಯ ವಿವಿಧ ವಿಭಾಗಗಳನ್ನು ಪುನರುಜ್ಜೀವನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೇ 12 ರಂದು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದರು.

ಸ್ಥಗಿತಗೊಂಡ ಆರ್ಥಿಕತೆಯು ಸರ್ಕಾರದ ತೆರಿಗೆ ಸಂಗ್ರಹವನ್ನು ಭಾದಿಸಿತ್ತು. ಇದರ ಪರಿಣಾಮವಾಗಿ ಹಣಕಾಸಿನ ಕೊರತೆಯು ಜೂನ್‌ನಲ್ಲಿ ಕೊನೆಗೊಂಡ ತ್ರೈಮಾಸಿಕ ಹಣಕಾಸು ಅವಧಿಯಲ್ಲಿ 6.6 ಲಕ್ಷ ಕೋಟಿ ರೂ.ಗೂ ಅಧಿಕವಾಗಿದೆ.

ನಾಲ್ಕು ದಶಕಗಳಲ್ಲಿ ದೇಶದ ಜಿಡಿಪಿ ಮೊದಲ ಬಾರಿಗೆ ಸಂಕುಚಿತಗೊಳ್ಳುವ ನಿರೀಕ್ಷೆಯಿರುವುದರಿಂದ ಹಣಕಾಸಿನ ಕೊರತೆಯು ಸುಮಾರು 7.5% ಕ್ಕೆ ಹೆಚ್ಚಾಗುತ್ತದೆ ಎಂದು ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕತೆಯು ಸುಮಾರು 5.3% ರಷ್ಟು ಕುಗ್ಗುತ್ತದೆ ಎಂದು ಅಧ್ಯಯನಗಳು ಅಂದಾಜಿಸಿವೆ.

ಬಿಮಲ್ ಜಲನ್ ಸಮಿತಿಯ ಶಿಫಾರಸುಗಳ ಪ್ರಕಾರ ಪಾವತಿಸಬೇಕಾದ ಲಾಭಾಂಶವನ್ನು ನಿರ್ಧರಿಸಲು ಹೊಸ ಬಂಡವಾಳ ಚೌಕಟ್ಟನ್ನು ಅಳವಡಿಸಿಕೊಂಡ ನಂತರ ಕಳೆದ ವರ್ಷ ಕೇಂದ್ರ ಬ್ಯಾಂಕ್ 1.76 ಲಕ್ಷ ಕೋಟಿ ರೂ. ವನ್ನು ಪಾವತಿಸಿತ್ತು.


ಓದಿ: ಮನೆಯಲಿ ಇದ್ದರೆ ಚಿನ್ನ ಚಿಂತೆ ಯಾಕೆ ಅಣ್ಣ?! ರಿಸರ್ವ್ ಬ್ಯಾಂಕ್ ಮೀಸಲು ನಿಧಿಗೆ ಸರಕಾರದ ಕನ್ನ!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...