Homeಮುಖಪುಟ57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

- Advertisement -
- Advertisement -

2019-20 ನೇ ಸಾಲಿನ ಆರ್ಥಿಕ ವರ್ಷದಲ್ಲಿ 57,128 ಕೋಟಿ ರೂಗಳ ಹೆಚ್ಚಿನ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡುವುದಕ್ಕೆ RBI ಒಪ್ಪಿಗೆ ಸೂಚಿಸಿದೆ. RBI ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ 584ನೇ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದೆ.

ತೀವ್ರ ಆರ್ಥಿಕ ಕುಸಿತ ಮತ್ತು ಕೊರೊನಾ ಸಾಂಕ್ರಾಮಿಕದ ಸಮಸ್ಯೆಯಿಂದ ಸರ್ಕಾರದ ಆದಾಯ ಸಂಗ್ರಹಣೆಯ ಮೇಲೆ ಪರಿಣಾಮ ಬೀರಿದ್ದರಿಂದ ಏಪ್ರಿಲ್-ಜೂನ್ ಅವಧಿಯಲ್ಲಿ ವಿತ್ತೀಯ ಕೊರತೆಯು ದಾಖಲೆಯ 6.62 ಲಕ್ಷಕೋಟಿ ರೂಗಳಿಗೆ ಏರಿಕೆಯಾಗಿರುವ ಸಂದರ್ಭದಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿದೆ.

ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನ ಪರಿಣಾಮವನ್ನು ನಿಯಂತ್ರಿಸುವ ಮತ್ತು ಇತರ ಕ್ರಮಗಳನ್ನು ಪರಿಶೀಲಿಸಿದ ನಂತರ RBI ಆಡಳಿತವು 2019-20ರ (ಜುಲೈನಿಂದ ಜೂನ್ ವರೆಗೆ) ಲೆಕ್ಕಪತ್ರ ವರ್ಷಕ್ಕಾಗಿ ಹೆಚ್ಚುವರಿಯಾಗಿ 57.128 ಕೋಟಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿದೆ. ಈ ಅವಧಿಯನ್ನು ಲೆಕ್ಕಪತ್ರ ವರ್ಷವೆಂದು ಪರಿಗಣಿಸಲಾಗುತ್ತದೆ.

2020-21 ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ ಆರ್‌ಬಿಐ ಮತ್ತು ಇತರ ಸರ್ಕಾರೀ ಹಣಕಾಸು ಸಂಸ್ಥೆಗಳಿಂದ ರೂ. 60,000 ಕೋಟಿ ಲಾಭಾಂಶವನ್ನು ಅಂದಾಜಿಸಲಾಗಿದೆ. ಆರ್‌ಬಿಐನಿಂದ ಹಣದ ಪಾವತಿಯನ್ನು ಹೆಚ್ಚಿಸುವಂತೆ ಸರ್ಕಾರವು ಇತ್ತೀನ ವರ್ಷಗಳಲ್ಲಿ ಒತ್ತಡವನ್ನು ಹಾಕುತ್ತಿದೆ.

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

ಈಗ ಕೊರೊನಾದಿಂದಾಗಿ ಉಂಟಾಗುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಹಾಗೂ ಆರ್ಥಿಕತೆಯನ್ನು ಬೆಂಬಲಿಸಲು ಸರ್ಕಾರವು ಅಂದಾಜು, 60,000 ಕೋಟಿ ರೂ. ಬಯಸಿತ್ತು ಎನ್ನಲಾಗಿದೆ.

ಕೊರೊನಾ ವೈರಸ್ ಅನ್ನು ಎದುರಿಸಲು ಘೋಷಿಸಿದ ಸಂಪೂರ್ಣ ಲಾಕ್‌ಡೌನ್‌ನಿಂದಾಗಿ ಬಡವರಿಗೆ ಸಹಾಯ ಮಾಡಲು ಮತ್ತು ಆರ್ಥಿಕತೆಯ ವಿವಿಧ ವಿಭಾಗಗಳನ್ನು ಪುನರುಜ್ಜೀವನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೇ 12 ರಂದು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದರು.

ಸ್ಥಗಿತಗೊಂಡ ಆರ್ಥಿಕತೆಯು ಸರ್ಕಾರದ ತೆರಿಗೆ ಸಂಗ್ರಹವನ್ನು ಭಾದಿಸಿತ್ತು. ಇದರ ಪರಿಣಾಮವಾಗಿ ಹಣಕಾಸಿನ ಕೊರತೆಯು ಜೂನ್‌ನಲ್ಲಿ ಕೊನೆಗೊಂಡ ತ್ರೈಮಾಸಿಕ ಹಣಕಾಸು ಅವಧಿಯಲ್ಲಿ 6.6 ಲಕ್ಷ ಕೋಟಿ ರೂ.ಗೂ ಅಧಿಕವಾಗಿದೆ.

ನಾಲ್ಕು ದಶಕಗಳಲ್ಲಿ ದೇಶದ ಜಿಡಿಪಿ ಮೊದಲ ಬಾರಿಗೆ ಸಂಕುಚಿತಗೊಳ್ಳುವ ನಿರೀಕ್ಷೆಯಿರುವುದರಿಂದ ಹಣಕಾಸಿನ ಕೊರತೆಯು ಸುಮಾರು 7.5% ಕ್ಕೆ ಹೆಚ್ಚಾಗುತ್ತದೆ ಎಂದು ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕತೆಯು ಸುಮಾರು 5.3% ರಷ್ಟು ಕುಗ್ಗುತ್ತದೆ ಎಂದು ಅಧ್ಯಯನಗಳು ಅಂದಾಜಿಸಿವೆ.

ಬಿಮಲ್ ಜಲನ್ ಸಮಿತಿಯ ಶಿಫಾರಸುಗಳ ಪ್ರಕಾರ ಪಾವತಿಸಬೇಕಾದ ಲಾಭಾಂಶವನ್ನು ನಿರ್ಧರಿಸಲು ಹೊಸ ಬಂಡವಾಳ ಚೌಕಟ್ಟನ್ನು ಅಳವಡಿಸಿಕೊಂಡ ನಂತರ ಕಳೆದ ವರ್ಷ ಕೇಂದ್ರ ಬ್ಯಾಂಕ್ 1.76 ಲಕ್ಷ ಕೋಟಿ ರೂ. ವನ್ನು ಪಾವತಿಸಿತ್ತು.


ಓದಿ: ಮನೆಯಲಿ ಇದ್ದರೆ ಚಿನ್ನ ಚಿಂತೆ ಯಾಕೆ ಅಣ್ಣ?! ರಿಸರ್ವ್ ಬ್ಯಾಂಕ್ ಮೀಸಲು ನಿಧಿಗೆ ಸರಕಾರದ ಕನ್ನ!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...