Homeಮುಖಪುಟರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

ರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೊ ದರವನ್ನು 0.25%ರಷ್ಟು ಹೆಚ್ಚಿಸಿ 6.5%ಕ್ಕೆ ಏರಿಕೆ ಮಾಡಿದೆ. ಕೇಂದ್ರ ಬ್ಯಾಂಕ್ ಆಗಿರುವ ಆರ್‌ಬಿಐ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಹಣದ ಬಡ್ಡಿ ದರವೇ ‘ರೆಪೊ’ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿನ ದ್ವೈಮಾಸಿಕ ಹಣಕಾಸು ನೀತಿ ಸಭೆಯ ನಂತರ ರೆಪೊ ದರ ಹೆಚ್ಚಳದ ಘೋಷಣೆ ಮಾಡಿದ್ದಾರೆ.

ಮೇ ತಿಂಗಳ ನಂತರ ರೆಪೋ ದರದಲ್ಲಿ ಮಾಡುತ್ತಿರುವ ಆರನೇ ಏರಿಕೆ ಇದಾಗಿದೆ. ಸೆಂಟ್ರಲ್ ಬ್ಯಾಂಕ್ ಡಿಸೆಂಬರ್‌ನಲ್ಲಿ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 6.25%ಗೆ ಹೆಚ್ಚಿಸಿದೆ.

“ಕಳೆದ ಮೂರು ವರ್ಷಗಳಲ್ಲಿ ಅಭೂತಪೂರ್ವ ಘಟನೆಗಳು ಪ್ರಪಂಚದಾದ್ಯಂತ ವಿತ್ತೀಯ ನೀತಿಯನ್ನು ಪರೀಕ್ಷಿಸಿವೆ” ಎಂದು ಶಕ್ತಿಕಾಂತ್ ದಾಸ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.4% ಆಗಲಿದೆ ಎಂದು ಶಕ್ತಿಕಾಂತ್ ದಾಸ್‌ ಭವಿಷ್ಯ ನುಡಿದಿದ್ದಾರೆ.

ಜನವರಿ 31ರಂದು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಆರ್ಥಿಕ ಸಮೀಕ್ಷೆಯು, ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ದೇಶೀಯ ಬೆಳವಣಿಗೆ ಅಥವಾ ಜಿಡಿಪಿ 6% ರಿಂದ 6.8% ರಷ್ಟಿರುತ್ತದೆ ಎಂದು ಅಂದಾಜಿಸಿದೆ. ಈ ಹಣಕಾಸು ವರ್ಷದಲ್ಲಿ (2022-’23), ಭಾರತದ ಆರ್ಥಿಕತೆಯು 7% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ.

ಈ ಹಣಕಾಸು ವರ್ಷದಲ್ಲಿ 6.5% ಮತ್ತು ಮುಂದಿನ ವರ್ಷ 5.3% ಹಣದುಬ್ಬರವನ್ನು ರಿಸರ್ವ್ ಬ್ಯಾಂಕ್‌ ಅಂದಾಜಿಸಿದೆ ಎಂದು ದಾಸ್ ಹೇಳಿದ್ದಾರೆ.

ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ತಡೆಯಲು ಸಾಧ್ಯವೇ?

“ಹಣದುಬ್ಬರವನ್ನು ತಡೆಯಲು ರಿಸರ್ವ್ ಬ್ಯಾಂಕ್ ರೆಪೊ ರೇಟ್ ಹೆಚ್ಚಿಸುತ್ತದೆ. ಆದರೆ ನಿಜಕ್ಕೂ ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ನಿಯಂತ್ರಣ ಸಾಧ್ಯವೇ?” ಎಂಬ ಪ್ರಶ್ನೆ ನಮ್ಮ ಮುಂದಿದೆ.

ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಣವನ್ನು ರಿಸರ್ವ್ ಬ್ಯಾಂಕ್‌ ಪ್ರಿಂಟ್ ಮಾಡುತ್ತದೆ. ರಿಸರ್ವ್ ಬ್ಯಾಂಕ್‌ನಿಂದ ಹಣವನ್ನು ಇತರ ಬ್ಯಾಂಕ್‌ಗಳು ತೆಗೆದುಕೊಳ್ಳುತ್ತವೆ. ಅದು ಸಾಲದ ರೂಪದಲ್ಲಿ ಇರುತ್ತದೆ. ಈ ಸಾಲದ ಬಡ್ಡಿ ದರವೇ ರೆಪೊ ಆಗಿದೆ. ರೆಪೊ ರೇಟ್‌ ಹೆಚ್ಚಾದರೆ ವಾಣಿಜ್ಯ ಬ್ಯಾಂಕ್‌ಗಳು ನೀಡುವ ಇತರ ಸಾಲದಲ್ಲೂ ಬಡ್ಡಿ ಹೆಚ್ಚಳವಾಗುತ್ತದೆ” ಎಂದು ವಿವರಿಸಿದರು.

ಮುಂದುವರಿದು, “ಬಡ್ಡಿ ದರ ಹೆಚ್ಚಾದಾಗ ಜನರು ಸಾಲ ತೆಗೆದುಕೊಳ್ಳುವುದನ್ನೂ ಕಡಿಮೆ ಮಾಡುತ್ತಾರೆ. ಸಾಲ ತೆಗೆದುಕೊಳ್ಳುವುದು ಕಡಿಮೆಯಾದಾಗ ಆರ್ಥಿಕತೆಯಲ್ಲಿ ನಗದಿನ ಹರಿವೂ ಕಡಿಮೆಯಾಗುತ್ತದೆ. ನಗದಿನ ಹರಿವು ಕಡಿಮೆಯಾದರೆ ಹಣದುಬ್ಬರ ಕಡಿಮೆಯಾಗುತ್ತದೆ ಎಂಬುದು ಆರ್‌ಬಿಐ ಮಾಡುವ ಯೋಚನೆ. ಹಣದುಬ್ಬರಕ್ಕೆ ಕೇವಲ ನಗದಿನ ಏರಿಳಿತ ಮಾತ್ರ ಕಾರಣವಲ್ಲ” ಎಂದು ತಿಳಿಸಿದರು.

“ಹಣದುಬ್ಬರಕ್ಕೆ ಆರ್ಥಿಕತೆಯಲ್ಲಿನ ಬೇಡಿಕೆ, ಪೂರೈಕೆಯ ಕೊರತೆ, ಖರೀದಿನ ಸಾಮರ್ಥ್ಯ ಕುಸಿತ ಇವೆಲ್ಲವೂ  ಕಾರಣವಾಗಿರುತ್ತವೆ. ನಗದಿನ ಹರಿವಿನ ನಿಯಂತ್ರಣದಿಂದ ಇವೆಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಸಾಲದ ಕೊರತೆಯನ್ನು ಉಂಟು ಮಾಡಿದರೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳೂ ಕಡಿಮೆಯಾಗುತ್ತವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾದಾಗ, ತೆರಿಗೆ ಸಂಗ್ರಹವೂ ಕುಸಿತವಾಗುತ್ತದೆ, ನಿರುದ್ಯೋಗವೂ ಹೆಚ್ಚುತ್ತದೆ. ಜನರ ಖರೀದಿ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಇದರಿಂದಾಗಿ ಹಣದುಬ್ಬರ ಹೆಚ್ಚೂ ಆಗಬಹುದು” ಎಂಬ ಅಭಿಪ್ರಾಯಪಟ್ಟರು.

“ಹಣದುಬ್ಬರ ಕಡಿಮೆ ಮಾಡಲು ಆರ್‌ಬಿಐ ಯೋಚಿಸುತ್ತದೆ. ನಗದಿನ ಹರಿವಿನ ವಿಚಾರದಲ್ಲಿ ಒಟ್ಟಾರೆ ಆರ್ಥಿಕ ಚಟುವಟಿಕೆಯನ್ನು ನೋಡುವುದು ಅತ್ಯಂತ ಸೀಮಿತ ತಿಳಿವಳಿಕೆ. ರೆಪೊ ರೇಟ್ ಹೆಚ್ಚಾದಾಗ ಬಡ್ಡಿ ದರ ಹೆಚ್ಚಾಗಿ ಹಣದ ಹರಿವು ಕಡಿಮೆಯಾಗುತ್ತದೆ ಎಂಬುದಷ್ಟೇ ತಕ್ಷಣಕ್ಕೆ ಕಣ್ಣಿಗೆ ಕಾಣುತ್ತದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...