Homeಮುಖಪುಟರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

ರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೊ ದರವನ್ನು 0.25%ರಷ್ಟು ಹೆಚ್ಚಿಸಿ 6.5%ಕ್ಕೆ ಏರಿಕೆ ಮಾಡಿದೆ. ಕೇಂದ್ರ ಬ್ಯಾಂಕ್ ಆಗಿರುವ ಆರ್‌ಬಿಐ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಹಣದ ಬಡ್ಡಿ ದರವೇ ‘ರೆಪೊ’ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿನ ದ್ವೈಮಾಸಿಕ ಹಣಕಾಸು ನೀತಿ ಸಭೆಯ ನಂತರ ರೆಪೊ ದರ ಹೆಚ್ಚಳದ ಘೋಷಣೆ ಮಾಡಿದ್ದಾರೆ.

ಮೇ ತಿಂಗಳ ನಂತರ ರೆಪೋ ದರದಲ್ಲಿ ಮಾಡುತ್ತಿರುವ ಆರನೇ ಏರಿಕೆ ಇದಾಗಿದೆ. ಸೆಂಟ್ರಲ್ ಬ್ಯಾಂಕ್ ಡಿಸೆಂಬರ್‌ನಲ್ಲಿ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 6.25%ಗೆ ಹೆಚ್ಚಿಸಿದೆ.

“ಕಳೆದ ಮೂರು ವರ್ಷಗಳಲ್ಲಿ ಅಭೂತಪೂರ್ವ ಘಟನೆಗಳು ಪ್ರಪಂಚದಾದ್ಯಂತ ವಿತ್ತೀಯ ನೀತಿಯನ್ನು ಪರೀಕ್ಷಿಸಿವೆ” ಎಂದು ಶಕ್ತಿಕಾಂತ್ ದಾಸ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.4% ಆಗಲಿದೆ ಎಂದು ಶಕ್ತಿಕಾಂತ್ ದಾಸ್‌ ಭವಿಷ್ಯ ನುಡಿದಿದ್ದಾರೆ.

ಜನವರಿ 31ರಂದು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಆರ್ಥಿಕ ಸಮೀಕ್ಷೆಯು, ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ದೇಶೀಯ ಬೆಳವಣಿಗೆ ಅಥವಾ ಜಿಡಿಪಿ 6% ರಿಂದ 6.8% ರಷ್ಟಿರುತ್ತದೆ ಎಂದು ಅಂದಾಜಿಸಿದೆ. ಈ ಹಣಕಾಸು ವರ್ಷದಲ್ಲಿ (2022-’23), ಭಾರತದ ಆರ್ಥಿಕತೆಯು 7% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ.

ಈ ಹಣಕಾಸು ವರ್ಷದಲ್ಲಿ 6.5% ಮತ್ತು ಮುಂದಿನ ವರ್ಷ 5.3% ಹಣದುಬ್ಬರವನ್ನು ರಿಸರ್ವ್ ಬ್ಯಾಂಕ್‌ ಅಂದಾಜಿಸಿದೆ ಎಂದು ದಾಸ್ ಹೇಳಿದ್ದಾರೆ.

ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ತಡೆಯಲು ಸಾಧ್ಯವೇ?

“ಹಣದುಬ್ಬರವನ್ನು ತಡೆಯಲು ರಿಸರ್ವ್ ಬ್ಯಾಂಕ್ ರೆಪೊ ರೇಟ್ ಹೆಚ್ಚಿಸುತ್ತದೆ. ಆದರೆ ನಿಜಕ್ಕೂ ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ನಿಯಂತ್ರಣ ಸಾಧ್ಯವೇ?” ಎಂಬ ಪ್ರಶ್ನೆ ನಮ್ಮ ಮುಂದಿದೆ.

ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಣವನ್ನು ರಿಸರ್ವ್ ಬ್ಯಾಂಕ್‌ ಪ್ರಿಂಟ್ ಮಾಡುತ್ತದೆ. ರಿಸರ್ವ್ ಬ್ಯಾಂಕ್‌ನಿಂದ ಹಣವನ್ನು ಇತರ ಬ್ಯಾಂಕ್‌ಗಳು ತೆಗೆದುಕೊಳ್ಳುತ್ತವೆ. ಅದು ಸಾಲದ ರೂಪದಲ್ಲಿ ಇರುತ್ತದೆ. ಈ ಸಾಲದ ಬಡ್ಡಿ ದರವೇ ರೆಪೊ ಆಗಿದೆ. ರೆಪೊ ರೇಟ್‌ ಹೆಚ್ಚಾದರೆ ವಾಣಿಜ್ಯ ಬ್ಯಾಂಕ್‌ಗಳು ನೀಡುವ ಇತರ ಸಾಲದಲ್ಲೂ ಬಡ್ಡಿ ಹೆಚ್ಚಳವಾಗುತ್ತದೆ” ಎಂದು ವಿವರಿಸಿದರು.

ಮುಂದುವರಿದು, “ಬಡ್ಡಿ ದರ ಹೆಚ್ಚಾದಾಗ ಜನರು ಸಾಲ ತೆಗೆದುಕೊಳ್ಳುವುದನ್ನೂ ಕಡಿಮೆ ಮಾಡುತ್ತಾರೆ. ಸಾಲ ತೆಗೆದುಕೊಳ್ಳುವುದು ಕಡಿಮೆಯಾದಾಗ ಆರ್ಥಿಕತೆಯಲ್ಲಿ ನಗದಿನ ಹರಿವೂ ಕಡಿಮೆಯಾಗುತ್ತದೆ. ನಗದಿನ ಹರಿವು ಕಡಿಮೆಯಾದರೆ ಹಣದುಬ್ಬರ ಕಡಿಮೆಯಾಗುತ್ತದೆ ಎಂಬುದು ಆರ್‌ಬಿಐ ಮಾಡುವ ಯೋಚನೆ. ಹಣದುಬ್ಬರಕ್ಕೆ ಕೇವಲ ನಗದಿನ ಏರಿಳಿತ ಮಾತ್ರ ಕಾರಣವಲ್ಲ” ಎಂದು ತಿಳಿಸಿದರು.

“ಹಣದುಬ್ಬರಕ್ಕೆ ಆರ್ಥಿಕತೆಯಲ್ಲಿನ ಬೇಡಿಕೆ, ಪೂರೈಕೆಯ ಕೊರತೆ, ಖರೀದಿನ ಸಾಮರ್ಥ್ಯ ಕುಸಿತ ಇವೆಲ್ಲವೂ  ಕಾರಣವಾಗಿರುತ್ತವೆ. ನಗದಿನ ಹರಿವಿನ ನಿಯಂತ್ರಣದಿಂದ ಇವೆಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಸಾಲದ ಕೊರತೆಯನ್ನು ಉಂಟು ಮಾಡಿದರೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳೂ ಕಡಿಮೆಯಾಗುತ್ತವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾದಾಗ, ತೆರಿಗೆ ಸಂಗ್ರಹವೂ ಕುಸಿತವಾಗುತ್ತದೆ, ನಿರುದ್ಯೋಗವೂ ಹೆಚ್ಚುತ್ತದೆ. ಜನರ ಖರೀದಿ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಇದರಿಂದಾಗಿ ಹಣದುಬ್ಬರ ಹೆಚ್ಚೂ ಆಗಬಹುದು” ಎಂಬ ಅಭಿಪ್ರಾಯಪಟ್ಟರು.

“ಹಣದುಬ್ಬರ ಕಡಿಮೆ ಮಾಡಲು ಆರ್‌ಬಿಐ ಯೋಚಿಸುತ್ತದೆ. ನಗದಿನ ಹರಿವಿನ ವಿಚಾರದಲ್ಲಿ ಒಟ್ಟಾರೆ ಆರ್ಥಿಕ ಚಟುವಟಿಕೆಯನ್ನು ನೋಡುವುದು ಅತ್ಯಂತ ಸೀಮಿತ ತಿಳಿವಳಿಕೆ. ರೆಪೊ ರೇಟ್ ಹೆಚ್ಚಾದಾಗ ಬಡ್ಡಿ ದರ ಹೆಚ್ಚಾಗಿ ಹಣದ ಹರಿವು ಕಡಿಮೆಯಾಗುತ್ತದೆ ಎಂಬುದಷ್ಟೇ ತಕ್ಷಣಕ್ಕೆ ಕಣ್ಣಿಗೆ ಕಾಣುತ್ತದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...