Homeಮುಖಪುಟರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

ರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೊ ದರವನ್ನು 0.25%ರಷ್ಟು ಹೆಚ್ಚಿಸಿ 6.5%ಕ್ಕೆ ಏರಿಕೆ ಮಾಡಿದೆ. ಕೇಂದ್ರ ಬ್ಯಾಂಕ್ ಆಗಿರುವ ಆರ್‌ಬಿಐ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಹಣದ ಬಡ್ಡಿ ದರವೇ ‘ರೆಪೊ’ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿನ ದ್ವೈಮಾಸಿಕ ಹಣಕಾಸು ನೀತಿ ಸಭೆಯ ನಂತರ ರೆಪೊ ದರ ಹೆಚ್ಚಳದ ಘೋಷಣೆ ಮಾಡಿದ್ದಾರೆ.

ಮೇ ತಿಂಗಳ ನಂತರ ರೆಪೋ ದರದಲ್ಲಿ ಮಾಡುತ್ತಿರುವ ಆರನೇ ಏರಿಕೆ ಇದಾಗಿದೆ. ಸೆಂಟ್ರಲ್ ಬ್ಯಾಂಕ್ ಡಿಸೆಂಬರ್‌ನಲ್ಲಿ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 6.25%ಗೆ ಹೆಚ್ಚಿಸಿದೆ.

“ಕಳೆದ ಮೂರು ವರ್ಷಗಳಲ್ಲಿ ಅಭೂತಪೂರ್ವ ಘಟನೆಗಳು ಪ್ರಪಂಚದಾದ್ಯಂತ ವಿತ್ತೀಯ ನೀತಿಯನ್ನು ಪರೀಕ್ಷಿಸಿವೆ” ಎಂದು ಶಕ್ತಿಕಾಂತ್ ದಾಸ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.4% ಆಗಲಿದೆ ಎಂದು ಶಕ್ತಿಕಾಂತ್ ದಾಸ್‌ ಭವಿಷ್ಯ ನುಡಿದಿದ್ದಾರೆ.

ಜನವರಿ 31ರಂದು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಆರ್ಥಿಕ ಸಮೀಕ್ಷೆಯು, ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ದೇಶೀಯ ಬೆಳವಣಿಗೆ ಅಥವಾ ಜಿಡಿಪಿ 6% ರಿಂದ 6.8% ರಷ್ಟಿರುತ್ತದೆ ಎಂದು ಅಂದಾಜಿಸಿದೆ. ಈ ಹಣಕಾಸು ವರ್ಷದಲ್ಲಿ (2022-’23), ಭಾರತದ ಆರ್ಥಿಕತೆಯು 7% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ.

ಈ ಹಣಕಾಸು ವರ್ಷದಲ್ಲಿ 6.5% ಮತ್ತು ಮುಂದಿನ ವರ್ಷ 5.3% ಹಣದುಬ್ಬರವನ್ನು ರಿಸರ್ವ್ ಬ್ಯಾಂಕ್‌ ಅಂದಾಜಿಸಿದೆ ಎಂದು ದಾಸ್ ಹೇಳಿದ್ದಾರೆ.

ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ತಡೆಯಲು ಸಾಧ್ಯವೇ?

“ಹಣದುಬ್ಬರವನ್ನು ತಡೆಯಲು ರಿಸರ್ವ್ ಬ್ಯಾಂಕ್ ರೆಪೊ ರೇಟ್ ಹೆಚ್ಚಿಸುತ್ತದೆ. ಆದರೆ ನಿಜಕ್ಕೂ ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ನಿಯಂತ್ರಣ ಸಾಧ್ಯವೇ?” ಎಂಬ ಪ್ರಶ್ನೆ ನಮ್ಮ ಮುಂದಿದೆ.

ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಣವನ್ನು ರಿಸರ್ವ್ ಬ್ಯಾಂಕ್‌ ಪ್ರಿಂಟ್ ಮಾಡುತ್ತದೆ. ರಿಸರ್ವ್ ಬ್ಯಾಂಕ್‌ನಿಂದ ಹಣವನ್ನು ಇತರ ಬ್ಯಾಂಕ್‌ಗಳು ತೆಗೆದುಕೊಳ್ಳುತ್ತವೆ. ಅದು ಸಾಲದ ರೂಪದಲ್ಲಿ ಇರುತ್ತದೆ. ಈ ಸಾಲದ ಬಡ್ಡಿ ದರವೇ ರೆಪೊ ಆಗಿದೆ. ರೆಪೊ ರೇಟ್‌ ಹೆಚ್ಚಾದರೆ ವಾಣಿಜ್ಯ ಬ್ಯಾಂಕ್‌ಗಳು ನೀಡುವ ಇತರ ಸಾಲದಲ್ಲೂ ಬಡ್ಡಿ ಹೆಚ್ಚಳವಾಗುತ್ತದೆ” ಎಂದು ವಿವರಿಸಿದರು.

ಮುಂದುವರಿದು, “ಬಡ್ಡಿ ದರ ಹೆಚ್ಚಾದಾಗ ಜನರು ಸಾಲ ತೆಗೆದುಕೊಳ್ಳುವುದನ್ನೂ ಕಡಿಮೆ ಮಾಡುತ್ತಾರೆ. ಸಾಲ ತೆಗೆದುಕೊಳ್ಳುವುದು ಕಡಿಮೆಯಾದಾಗ ಆರ್ಥಿಕತೆಯಲ್ಲಿ ನಗದಿನ ಹರಿವೂ ಕಡಿಮೆಯಾಗುತ್ತದೆ. ನಗದಿನ ಹರಿವು ಕಡಿಮೆಯಾದರೆ ಹಣದುಬ್ಬರ ಕಡಿಮೆಯಾಗುತ್ತದೆ ಎಂಬುದು ಆರ್‌ಬಿಐ ಮಾಡುವ ಯೋಚನೆ. ಹಣದುಬ್ಬರಕ್ಕೆ ಕೇವಲ ನಗದಿನ ಏರಿಳಿತ ಮಾತ್ರ ಕಾರಣವಲ್ಲ” ಎಂದು ತಿಳಿಸಿದರು.

“ಹಣದುಬ್ಬರಕ್ಕೆ ಆರ್ಥಿಕತೆಯಲ್ಲಿನ ಬೇಡಿಕೆ, ಪೂರೈಕೆಯ ಕೊರತೆ, ಖರೀದಿನ ಸಾಮರ್ಥ್ಯ ಕುಸಿತ ಇವೆಲ್ಲವೂ  ಕಾರಣವಾಗಿರುತ್ತವೆ. ನಗದಿನ ಹರಿವಿನ ನಿಯಂತ್ರಣದಿಂದ ಇವೆಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಸಾಲದ ಕೊರತೆಯನ್ನು ಉಂಟು ಮಾಡಿದರೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳೂ ಕಡಿಮೆಯಾಗುತ್ತವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾದಾಗ, ತೆರಿಗೆ ಸಂಗ್ರಹವೂ ಕುಸಿತವಾಗುತ್ತದೆ, ನಿರುದ್ಯೋಗವೂ ಹೆಚ್ಚುತ್ತದೆ. ಜನರ ಖರೀದಿ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಇದರಿಂದಾಗಿ ಹಣದುಬ್ಬರ ಹೆಚ್ಚೂ ಆಗಬಹುದು” ಎಂಬ ಅಭಿಪ್ರಾಯಪಟ್ಟರು.

“ಹಣದುಬ್ಬರ ಕಡಿಮೆ ಮಾಡಲು ಆರ್‌ಬಿಐ ಯೋಚಿಸುತ್ತದೆ. ನಗದಿನ ಹರಿವಿನ ವಿಚಾರದಲ್ಲಿ ಒಟ್ಟಾರೆ ಆರ್ಥಿಕ ಚಟುವಟಿಕೆಯನ್ನು ನೋಡುವುದು ಅತ್ಯಂತ ಸೀಮಿತ ತಿಳಿವಳಿಕೆ. ರೆಪೊ ರೇಟ್ ಹೆಚ್ಚಾದಾಗ ಬಡ್ಡಿ ದರ ಹೆಚ್ಚಾಗಿ ಹಣದ ಹರಿವು ಕಡಿಮೆಯಾಗುತ್ತದೆ ಎಂಬುದಷ್ಟೇ ತಕ್ಷಣಕ್ಕೆ ಕಣ್ಣಿಗೆ ಕಾಣುತ್ತದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...