Homeಮುಖಪುಟರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

ರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೊ ದರವನ್ನು 0.25%ರಷ್ಟು ಹೆಚ್ಚಿಸಿ 6.5%ಕ್ಕೆ ಏರಿಕೆ ಮಾಡಿದೆ. ಕೇಂದ್ರ ಬ್ಯಾಂಕ್ ಆಗಿರುವ ಆರ್‌ಬಿಐ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಹಣದ ಬಡ್ಡಿ ದರವೇ ‘ರೆಪೊ’ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿನ ದ್ವೈಮಾಸಿಕ ಹಣಕಾಸು ನೀತಿ ಸಭೆಯ ನಂತರ ರೆಪೊ ದರ ಹೆಚ್ಚಳದ ಘೋಷಣೆ ಮಾಡಿದ್ದಾರೆ.

ಮೇ ತಿಂಗಳ ನಂತರ ರೆಪೋ ದರದಲ್ಲಿ ಮಾಡುತ್ತಿರುವ ಆರನೇ ಏರಿಕೆ ಇದಾಗಿದೆ. ಸೆಂಟ್ರಲ್ ಬ್ಯಾಂಕ್ ಡಿಸೆಂಬರ್‌ನಲ್ಲಿ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 6.25%ಗೆ ಹೆಚ್ಚಿಸಿದೆ.

“ಕಳೆದ ಮೂರು ವರ್ಷಗಳಲ್ಲಿ ಅಭೂತಪೂರ್ವ ಘಟನೆಗಳು ಪ್ರಪಂಚದಾದ್ಯಂತ ವಿತ್ತೀಯ ನೀತಿಯನ್ನು ಪರೀಕ್ಷಿಸಿವೆ” ಎಂದು ಶಕ್ತಿಕಾಂತ್ ದಾಸ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.4% ಆಗಲಿದೆ ಎಂದು ಶಕ್ತಿಕಾಂತ್ ದಾಸ್‌ ಭವಿಷ್ಯ ನುಡಿದಿದ್ದಾರೆ.

ಜನವರಿ 31ರಂದು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಆರ್ಥಿಕ ಸಮೀಕ್ಷೆಯು, ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ದೇಶೀಯ ಬೆಳವಣಿಗೆ ಅಥವಾ ಜಿಡಿಪಿ 6% ರಿಂದ 6.8% ರಷ್ಟಿರುತ್ತದೆ ಎಂದು ಅಂದಾಜಿಸಿದೆ. ಈ ಹಣಕಾಸು ವರ್ಷದಲ್ಲಿ (2022-’23), ಭಾರತದ ಆರ್ಥಿಕತೆಯು 7% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ.

ಈ ಹಣಕಾಸು ವರ್ಷದಲ್ಲಿ 6.5% ಮತ್ತು ಮುಂದಿನ ವರ್ಷ 5.3% ಹಣದುಬ್ಬರವನ್ನು ರಿಸರ್ವ್ ಬ್ಯಾಂಕ್‌ ಅಂದಾಜಿಸಿದೆ ಎಂದು ದಾಸ್ ಹೇಳಿದ್ದಾರೆ.

ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ತಡೆಯಲು ಸಾಧ್ಯವೇ?

“ಹಣದುಬ್ಬರವನ್ನು ತಡೆಯಲು ರಿಸರ್ವ್ ಬ್ಯಾಂಕ್ ರೆಪೊ ರೇಟ್ ಹೆಚ್ಚಿಸುತ್ತದೆ. ಆದರೆ ನಿಜಕ್ಕೂ ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ನಿಯಂತ್ರಣ ಸಾಧ್ಯವೇ?” ಎಂಬ ಪ್ರಶ್ನೆ ನಮ್ಮ ಮುಂದಿದೆ.

ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಣವನ್ನು ರಿಸರ್ವ್ ಬ್ಯಾಂಕ್‌ ಪ್ರಿಂಟ್ ಮಾಡುತ್ತದೆ. ರಿಸರ್ವ್ ಬ್ಯಾಂಕ್‌ನಿಂದ ಹಣವನ್ನು ಇತರ ಬ್ಯಾಂಕ್‌ಗಳು ತೆಗೆದುಕೊಳ್ಳುತ್ತವೆ. ಅದು ಸಾಲದ ರೂಪದಲ್ಲಿ ಇರುತ್ತದೆ. ಈ ಸಾಲದ ಬಡ್ಡಿ ದರವೇ ರೆಪೊ ಆಗಿದೆ. ರೆಪೊ ರೇಟ್‌ ಹೆಚ್ಚಾದರೆ ವಾಣಿಜ್ಯ ಬ್ಯಾಂಕ್‌ಗಳು ನೀಡುವ ಇತರ ಸಾಲದಲ್ಲೂ ಬಡ್ಡಿ ಹೆಚ್ಚಳವಾಗುತ್ತದೆ” ಎಂದು ವಿವರಿಸಿದರು.

ಮುಂದುವರಿದು, “ಬಡ್ಡಿ ದರ ಹೆಚ್ಚಾದಾಗ ಜನರು ಸಾಲ ತೆಗೆದುಕೊಳ್ಳುವುದನ್ನೂ ಕಡಿಮೆ ಮಾಡುತ್ತಾರೆ. ಸಾಲ ತೆಗೆದುಕೊಳ್ಳುವುದು ಕಡಿಮೆಯಾದಾಗ ಆರ್ಥಿಕತೆಯಲ್ಲಿ ನಗದಿನ ಹರಿವೂ ಕಡಿಮೆಯಾಗುತ್ತದೆ. ನಗದಿನ ಹರಿವು ಕಡಿಮೆಯಾದರೆ ಹಣದುಬ್ಬರ ಕಡಿಮೆಯಾಗುತ್ತದೆ ಎಂಬುದು ಆರ್‌ಬಿಐ ಮಾಡುವ ಯೋಚನೆ. ಹಣದುಬ್ಬರಕ್ಕೆ ಕೇವಲ ನಗದಿನ ಏರಿಳಿತ ಮಾತ್ರ ಕಾರಣವಲ್ಲ” ಎಂದು ತಿಳಿಸಿದರು.

“ಹಣದುಬ್ಬರಕ್ಕೆ ಆರ್ಥಿಕತೆಯಲ್ಲಿನ ಬೇಡಿಕೆ, ಪೂರೈಕೆಯ ಕೊರತೆ, ಖರೀದಿನ ಸಾಮರ್ಥ್ಯ ಕುಸಿತ ಇವೆಲ್ಲವೂ  ಕಾರಣವಾಗಿರುತ್ತವೆ. ನಗದಿನ ಹರಿವಿನ ನಿಯಂತ್ರಣದಿಂದ ಇವೆಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಸಾಲದ ಕೊರತೆಯನ್ನು ಉಂಟು ಮಾಡಿದರೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳೂ ಕಡಿಮೆಯಾಗುತ್ತವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾದಾಗ, ತೆರಿಗೆ ಸಂಗ್ರಹವೂ ಕುಸಿತವಾಗುತ್ತದೆ, ನಿರುದ್ಯೋಗವೂ ಹೆಚ್ಚುತ್ತದೆ. ಜನರ ಖರೀದಿ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಇದರಿಂದಾಗಿ ಹಣದುಬ್ಬರ ಹೆಚ್ಚೂ ಆಗಬಹುದು” ಎಂಬ ಅಭಿಪ್ರಾಯಪಟ್ಟರು.

“ಹಣದುಬ್ಬರ ಕಡಿಮೆ ಮಾಡಲು ಆರ್‌ಬಿಐ ಯೋಚಿಸುತ್ತದೆ. ನಗದಿನ ಹರಿವಿನ ವಿಚಾರದಲ್ಲಿ ಒಟ್ಟಾರೆ ಆರ್ಥಿಕ ಚಟುವಟಿಕೆಯನ್ನು ನೋಡುವುದು ಅತ್ಯಂತ ಸೀಮಿತ ತಿಳಿವಳಿಕೆ. ರೆಪೊ ರೇಟ್ ಹೆಚ್ಚಾದಾಗ ಬಡ್ಡಿ ದರ ಹೆಚ್ಚಾಗಿ ಹಣದ ಹರಿವು ಕಡಿಮೆಯಾಗುತ್ತದೆ ಎಂಬುದಷ್ಟೇ ತಕ್ಷಣಕ್ಕೆ ಕಣ್ಣಿಗೆ ಕಾಣುತ್ತದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...