Homeಮುಖಪುಟರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

ರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೊ ದರವನ್ನು 0.25%ರಷ್ಟು ಹೆಚ್ಚಿಸಿ 6.5%ಕ್ಕೆ ಏರಿಕೆ ಮಾಡಿದೆ. ಕೇಂದ್ರ ಬ್ಯಾಂಕ್ ಆಗಿರುವ ಆರ್‌ಬಿಐ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಹಣದ ಬಡ್ಡಿ ದರವೇ ‘ರೆಪೊ’ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿನ ದ್ವೈಮಾಸಿಕ ಹಣಕಾಸು ನೀತಿ ಸಭೆಯ ನಂತರ ರೆಪೊ ದರ ಹೆಚ್ಚಳದ ಘೋಷಣೆ ಮಾಡಿದ್ದಾರೆ.

ಮೇ ತಿಂಗಳ ನಂತರ ರೆಪೋ ದರದಲ್ಲಿ ಮಾಡುತ್ತಿರುವ ಆರನೇ ಏರಿಕೆ ಇದಾಗಿದೆ. ಸೆಂಟ್ರಲ್ ಬ್ಯಾಂಕ್ ಡಿಸೆಂಬರ್‌ನಲ್ಲಿ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 6.25%ಗೆ ಹೆಚ್ಚಿಸಿದೆ.

“ಕಳೆದ ಮೂರು ವರ್ಷಗಳಲ್ಲಿ ಅಭೂತಪೂರ್ವ ಘಟನೆಗಳು ಪ್ರಪಂಚದಾದ್ಯಂತ ವಿತ್ತೀಯ ನೀತಿಯನ್ನು ಪರೀಕ್ಷಿಸಿವೆ” ಎಂದು ಶಕ್ತಿಕಾಂತ್ ದಾಸ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.4% ಆಗಲಿದೆ ಎಂದು ಶಕ್ತಿಕಾಂತ್ ದಾಸ್‌ ಭವಿಷ್ಯ ನುಡಿದಿದ್ದಾರೆ.

ಜನವರಿ 31ರಂದು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಆರ್ಥಿಕ ಸಮೀಕ್ಷೆಯು, ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ದೇಶೀಯ ಬೆಳವಣಿಗೆ ಅಥವಾ ಜಿಡಿಪಿ 6% ರಿಂದ 6.8% ರಷ್ಟಿರುತ್ತದೆ ಎಂದು ಅಂದಾಜಿಸಿದೆ. ಈ ಹಣಕಾಸು ವರ್ಷದಲ್ಲಿ (2022-’23), ಭಾರತದ ಆರ್ಥಿಕತೆಯು 7% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ.

ಈ ಹಣಕಾಸು ವರ್ಷದಲ್ಲಿ 6.5% ಮತ್ತು ಮುಂದಿನ ವರ್ಷ 5.3% ಹಣದುಬ್ಬರವನ್ನು ರಿಸರ್ವ್ ಬ್ಯಾಂಕ್‌ ಅಂದಾಜಿಸಿದೆ ಎಂದು ದಾಸ್ ಹೇಳಿದ್ದಾರೆ.

ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ತಡೆಯಲು ಸಾಧ್ಯವೇ?

“ಹಣದುಬ್ಬರವನ್ನು ತಡೆಯಲು ರಿಸರ್ವ್ ಬ್ಯಾಂಕ್ ರೆಪೊ ರೇಟ್ ಹೆಚ್ಚಿಸುತ್ತದೆ. ಆದರೆ ನಿಜಕ್ಕೂ ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ನಿಯಂತ್ರಣ ಸಾಧ್ಯವೇ?” ಎಂಬ ಪ್ರಶ್ನೆ ನಮ್ಮ ಮುಂದಿದೆ.

ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಣವನ್ನು ರಿಸರ್ವ್ ಬ್ಯಾಂಕ್‌ ಪ್ರಿಂಟ್ ಮಾಡುತ್ತದೆ. ರಿಸರ್ವ್ ಬ್ಯಾಂಕ್‌ನಿಂದ ಹಣವನ್ನು ಇತರ ಬ್ಯಾಂಕ್‌ಗಳು ತೆಗೆದುಕೊಳ್ಳುತ್ತವೆ. ಅದು ಸಾಲದ ರೂಪದಲ್ಲಿ ಇರುತ್ತದೆ. ಈ ಸಾಲದ ಬಡ್ಡಿ ದರವೇ ರೆಪೊ ಆಗಿದೆ. ರೆಪೊ ರೇಟ್‌ ಹೆಚ್ಚಾದರೆ ವಾಣಿಜ್ಯ ಬ್ಯಾಂಕ್‌ಗಳು ನೀಡುವ ಇತರ ಸಾಲದಲ್ಲೂ ಬಡ್ಡಿ ಹೆಚ್ಚಳವಾಗುತ್ತದೆ” ಎಂದು ವಿವರಿಸಿದರು.

ಮುಂದುವರಿದು, “ಬಡ್ಡಿ ದರ ಹೆಚ್ಚಾದಾಗ ಜನರು ಸಾಲ ತೆಗೆದುಕೊಳ್ಳುವುದನ್ನೂ ಕಡಿಮೆ ಮಾಡುತ್ತಾರೆ. ಸಾಲ ತೆಗೆದುಕೊಳ್ಳುವುದು ಕಡಿಮೆಯಾದಾಗ ಆರ್ಥಿಕತೆಯಲ್ಲಿ ನಗದಿನ ಹರಿವೂ ಕಡಿಮೆಯಾಗುತ್ತದೆ. ನಗದಿನ ಹರಿವು ಕಡಿಮೆಯಾದರೆ ಹಣದುಬ್ಬರ ಕಡಿಮೆಯಾಗುತ್ತದೆ ಎಂಬುದು ಆರ್‌ಬಿಐ ಮಾಡುವ ಯೋಚನೆ. ಹಣದುಬ್ಬರಕ್ಕೆ ಕೇವಲ ನಗದಿನ ಏರಿಳಿತ ಮಾತ್ರ ಕಾರಣವಲ್ಲ” ಎಂದು ತಿಳಿಸಿದರು.

“ಹಣದುಬ್ಬರಕ್ಕೆ ಆರ್ಥಿಕತೆಯಲ್ಲಿನ ಬೇಡಿಕೆ, ಪೂರೈಕೆಯ ಕೊರತೆ, ಖರೀದಿನ ಸಾಮರ್ಥ್ಯ ಕುಸಿತ ಇವೆಲ್ಲವೂ  ಕಾರಣವಾಗಿರುತ್ತವೆ. ನಗದಿನ ಹರಿವಿನ ನಿಯಂತ್ರಣದಿಂದ ಇವೆಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಸಾಲದ ಕೊರತೆಯನ್ನು ಉಂಟು ಮಾಡಿದರೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳೂ ಕಡಿಮೆಯಾಗುತ್ತವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾದಾಗ, ತೆರಿಗೆ ಸಂಗ್ರಹವೂ ಕುಸಿತವಾಗುತ್ತದೆ, ನಿರುದ್ಯೋಗವೂ ಹೆಚ್ಚುತ್ತದೆ. ಜನರ ಖರೀದಿ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಇದರಿಂದಾಗಿ ಹಣದುಬ್ಬರ ಹೆಚ್ಚೂ ಆಗಬಹುದು” ಎಂಬ ಅಭಿಪ್ರಾಯಪಟ್ಟರು.

“ಹಣದುಬ್ಬರ ಕಡಿಮೆ ಮಾಡಲು ಆರ್‌ಬಿಐ ಯೋಚಿಸುತ್ತದೆ. ನಗದಿನ ಹರಿವಿನ ವಿಚಾರದಲ್ಲಿ ಒಟ್ಟಾರೆ ಆರ್ಥಿಕ ಚಟುವಟಿಕೆಯನ್ನು ನೋಡುವುದು ಅತ್ಯಂತ ಸೀಮಿತ ತಿಳಿವಳಿಕೆ. ರೆಪೊ ರೇಟ್ ಹೆಚ್ಚಾದಾಗ ಬಡ್ಡಿ ದರ ಹೆಚ್ಚಾಗಿ ಹಣದ ಹರಿವು ಕಡಿಮೆಯಾಗುತ್ತದೆ ಎಂಬುದಷ್ಟೇ ತಕ್ಷಣಕ್ಕೆ ಕಣ್ಣಿಗೆ ಕಾಣುತ್ತದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...