Homeಮುಖಪುಟರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

ರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೊ ದರವನ್ನು 0.25%ರಷ್ಟು ಹೆಚ್ಚಿಸಿ 6.5%ಕ್ಕೆ ಏರಿಕೆ ಮಾಡಿದೆ. ಕೇಂದ್ರ ಬ್ಯಾಂಕ್ ಆಗಿರುವ ಆರ್‌ಬಿಐ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಹಣದ ಬಡ್ಡಿ ದರವೇ ‘ರೆಪೊ’ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿನ ದ್ವೈಮಾಸಿಕ ಹಣಕಾಸು ನೀತಿ ಸಭೆಯ ನಂತರ ರೆಪೊ ದರ ಹೆಚ್ಚಳದ ಘೋಷಣೆ ಮಾಡಿದ್ದಾರೆ.

ಮೇ ತಿಂಗಳ ನಂತರ ರೆಪೋ ದರದಲ್ಲಿ ಮಾಡುತ್ತಿರುವ ಆರನೇ ಏರಿಕೆ ಇದಾಗಿದೆ. ಸೆಂಟ್ರಲ್ ಬ್ಯಾಂಕ್ ಡಿಸೆಂಬರ್‌ನಲ್ಲಿ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 6.25%ಗೆ ಹೆಚ್ಚಿಸಿದೆ.

“ಕಳೆದ ಮೂರು ವರ್ಷಗಳಲ್ಲಿ ಅಭೂತಪೂರ್ವ ಘಟನೆಗಳು ಪ್ರಪಂಚದಾದ್ಯಂತ ವಿತ್ತೀಯ ನೀತಿಯನ್ನು ಪರೀಕ್ಷಿಸಿವೆ” ಎಂದು ಶಕ್ತಿಕಾಂತ್ ದಾಸ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.4% ಆಗಲಿದೆ ಎಂದು ಶಕ್ತಿಕಾಂತ್ ದಾಸ್‌ ಭವಿಷ್ಯ ನುಡಿದಿದ್ದಾರೆ.

ಜನವರಿ 31ರಂದು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಆರ್ಥಿಕ ಸಮೀಕ್ಷೆಯು, ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ದೇಶೀಯ ಬೆಳವಣಿಗೆ ಅಥವಾ ಜಿಡಿಪಿ 6% ರಿಂದ 6.8% ರಷ್ಟಿರುತ್ತದೆ ಎಂದು ಅಂದಾಜಿಸಿದೆ. ಈ ಹಣಕಾಸು ವರ್ಷದಲ್ಲಿ (2022-’23), ಭಾರತದ ಆರ್ಥಿಕತೆಯು 7% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ.

ಈ ಹಣಕಾಸು ವರ್ಷದಲ್ಲಿ 6.5% ಮತ್ತು ಮುಂದಿನ ವರ್ಷ 5.3% ಹಣದುಬ್ಬರವನ್ನು ರಿಸರ್ವ್ ಬ್ಯಾಂಕ್‌ ಅಂದಾಜಿಸಿದೆ ಎಂದು ದಾಸ್ ಹೇಳಿದ್ದಾರೆ.

ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ತಡೆಯಲು ಸಾಧ್ಯವೇ?

“ಹಣದುಬ್ಬರವನ್ನು ತಡೆಯಲು ರಿಸರ್ವ್ ಬ್ಯಾಂಕ್ ರೆಪೊ ರೇಟ್ ಹೆಚ್ಚಿಸುತ್ತದೆ. ಆದರೆ ನಿಜಕ್ಕೂ ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ನಿಯಂತ್ರಣ ಸಾಧ್ಯವೇ?” ಎಂಬ ಪ್ರಶ್ನೆ ನಮ್ಮ ಮುಂದಿದೆ.

ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಣವನ್ನು ರಿಸರ್ವ್ ಬ್ಯಾಂಕ್‌ ಪ್ರಿಂಟ್ ಮಾಡುತ್ತದೆ. ರಿಸರ್ವ್ ಬ್ಯಾಂಕ್‌ನಿಂದ ಹಣವನ್ನು ಇತರ ಬ್ಯಾಂಕ್‌ಗಳು ತೆಗೆದುಕೊಳ್ಳುತ್ತವೆ. ಅದು ಸಾಲದ ರೂಪದಲ್ಲಿ ಇರುತ್ತದೆ. ಈ ಸಾಲದ ಬಡ್ಡಿ ದರವೇ ರೆಪೊ ಆಗಿದೆ. ರೆಪೊ ರೇಟ್‌ ಹೆಚ್ಚಾದರೆ ವಾಣಿಜ್ಯ ಬ್ಯಾಂಕ್‌ಗಳು ನೀಡುವ ಇತರ ಸಾಲದಲ್ಲೂ ಬಡ್ಡಿ ಹೆಚ್ಚಳವಾಗುತ್ತದೆ” ಎಂದು ವಿವರಿಸಿದರು.

ಮುಂದುವರಿದು, “ಬಡ್ಡಿ ದರ ಹೆಚ್ಚಾದಾಗ ಜನರು ಸಾಲ ತೆಗೆದುಕೊಳ್ಳುವುದನ್ನೂ ಕಡಿಮೆ ಮಾಡುತ್ತಾರೆ. ಸಾಲ ತೆಗೆದುಕೊಳ್ಳುವುದು ಕಡಿಮೆಯಾದಾಗ ಆರ್ಥಿಕತೆಯಲ್ಲಿ ನಗದಿನ ಹರಿವೂ ಕಡಿಮೆಯಾಗುತ್ತದೆ. ನಗದಿನ ಹರಿವು ಕಡಿಮೆಯಾದರೆ ಹಣದುಬ್ಬರ ಕಡಿಮೆಯಾಗುತ್ತದೆ ಎಂಬುದು ಆರ್‌ಬಿಐ ಮಾಡುವ ಯೋಚನೆ. ಹಣದುಬ್ಬರಕ್ಕೆ ಕೇವಲ ನಗದಿನ ಏರಿಳಿತ ಮಾತ್ರ ಕಾರಣವಲ್ಲ” ಎಂದು ತಿಳಿಸಿದರು.

“ಹಣದುಬ್ಬರಕ್ಕೆ ಆರ್ಥಿಕತೆಯಲ್ಲಿನ ಬೇಡಿಕೆ, ಪೂರೈಕೆಯ ಕೊರತೆ, ಖರೀದಿನ ಸಾಮರ್ಥ್ಯ ಕುಸಿತ ಇವೆಲ್ಲವೂ  ಕಾರಣವಾಗಿರುತ್ತವೆ. ನಗದಿನ ಹರಿವಿನ ನಿಯಂತ್ರಣದಿಂದ ಇವೆಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಸಾಲದ ಕೊರತೆಯನ್ನು ಉಂಟು ಮಾಡಿದರೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳೂ ಕಡಿಮೆಯಾಗುತ್ತವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾದಾಗ, ತೆರಿಗೆ ಸಂಗ್ರಹವೂ ಕುಸಿತವಾಗುತ್ತದೆ, ನಿರುದ್ಯೋಗವೂ ಹೆಚ್ಚುತ್ತದೆ. ಜನರ ಖರೀದಿ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಇದರಿಂದಾಗಿ ಹಣದುಬ್ಬರ ಹೆಚ್ಚೂ ಆಗಬಹುದು” ಎಂಬ ಅಭಿಪ್ರಾಯಪಟ್ಟರು.

“ಹಣದುಬ್ಬರ ಕಡಿಮೆ ಮಾಡಲು ಆರ್‌ಬಿಐ ಯೋಚಿಸುತ್ತದೆ. ನಗದಿನ ಹರಿವಿನ ವಿಚಾರದಲ್ಲಿ ಒಟ್ಟಾರೆ ಆರ್ಥಿಕ ಚಟುವಟಿಕೆಯನ್ನು ನೋಡುವುದು ಅತ್ಯಂತ ಸೀಮಿತ ತಿಳಿವಳಿಕೆ. ರೆಪೊ ರೇಟ್ ಹೆಚ್ಚಾದಾಗ ಬಡ್ಡಿ ದರ ಹೆಚ್ಚಾಗಿ ಹಣದ ಹರಿವು ಕಡಿಮೆಯಾಗುತ್ತದೆ ಎಂಬುದಷ್ಟೇ ತಕ್ಷಣಕ್ಕೆ ಕಣ್ಣಿಗೆ ಕಾಣುತ್ತದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...