Homeಮುಖಪುಟರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

ರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೊ ದರವನ್ನು 0.25%ರಷ್ಟು ಹೆಚ್ಚಿಸಿ 6.5%ಕ್ಕೆ ಏರಿಕೆ ಮಾಡಿದೆ. ಕೇಂದ್ರ ಬ್ಯಾಂಕ್ ಆಗಿರುವ ಆರ್‌ಬಿಐ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಹಣದ ಬಡ್ಡಿ ದರವೇ ‘ರೆಪೊ’ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿನ ದ್ವೈಮಾಸಿಕ ಹಣಕಾಸು ನೀತಿ ಸಭೆಯ ನಂತರ ರೆಪೊ ದರ ಹೆಚ್ಚಳದ ಘೋಷಣೆ ಮಾಡಿದ್ದಾರೆ.

ಮೇ ತಿಂಗಳ ನಂತರ ರೆಪೋ ದರದಲ್ಲಿ ಮಾಡುತ್ತಿರುವ ಆರನೇ ಏರಿಕೆ ಇದಾಗಿದೆ. ಸೆಂಟ್ರಲ್ ಬ್ಯಾಂಕ್ ಡಿಸೆಂಬರ್‌ನಲ್ಲಿ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 6.25%ಗೆ ಹೆಚ್ಚಿಸಿದೆ.

“ಕಳೆದ ಮೂರು ವರ್ಷಗಳಲ್ಲಿ ಅಭೂತಪೂರ್ವ ಘಟನೆಗಳು ಪ್ರಪಂಚದಾದ್ಯಂತ ವಿತ್ತೀಯ ನೀತಿಯನ್ನು ಪರೀಕ್ಷಿಸಿವೆ” ಎಂದು ಶಕ್ತಿಕಾಂತ್ ದಾಸ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.4% ಆಗಲಿದೆ ಎಂದು ಶಕ್ತಿಕಾಂತ್ ದಾಸ್‌ ಭವಿಷ್ಯ ನುಡಿದಿದ್ದಾರೆ.

ಜನವರಿ 31ರಂದು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಆರ್ಥಿಕ ಸಮೀಕ್ಷೆಯು, ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ದೇಶೀಯ ಬೆಳವಣಿಗೆ ಅಥವಾ ಜಿಡಿಪಿ 6% ರಿಂದ 6.8% ರಷ್ಟಿರುತ್ತದೆ ಎಂದು ಅಂದಾಜಿಸಿದೆ. ಈ ಹಣಕಾಸು ವರ್ಷದಲ್ಲಿ (2022-’23), ಭಾರತದ ಆರ್ಥಿಕತೆಯು 7% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ.

ಈ ಹಣಕಾಸು ವರ್ಷದಲ್ಲಿ 6.5% ಮತ್ತು ಮುಂದಿನ ವರ್ಷ 5.3% ಹಣದುಬ್ಬರವನ್ನು ರಿಸರ್ವ್ ಬ್ಯಾಂಕ್‌ ಅಂದಾಜಿಸಿದೆ ಎಂದು ದಾಸ್ ಹೇಳಿದ್ದಾರೆ.

ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ತಡೆಯಲು ಸಾಧ್ಯವೇ?

“ಹಣದುಬ್ಬರವನ್ನು ತಡೆಯಲು ರಿಸರ್ವ್ ಬ್ಯಾಂಕ್ ರೆಪೊ ರೇಟ್ ಹೆಚ್ಚಿಸುತ್ತದೆ. ಆದರೆ ನಿಜಕ್ಕೂ ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ನಿಯಂತ್ರಣ ಸಾಧ್ಯವೇ?” ಎಂಬ ಪ್ರಶ್ನೆ ನಮ್ಮ ಮುಂದಿದೆ.

ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಣವನ್ನು ರಿಸರ್ವ್ ಬ್ಯಾಂಕ್‌ ಪ್ರಿಂಟ್ ಮಾಡುತ್ತದೆ. ರಿಸರ್ವ್ ಬ್ಯಾಂಕ್‌ನಿಂದ ಹಣವನ್ನು ಇತರ ಬ್ಯಾಂಕ್‌ಗಳು ತೆಗೆದುಕೊಳ್ಳುತ್ತವೆ. ಅದು ಸಾಲದ ರೂಪದಲ್ಲಿ ಇರುತ್ತದೆ. ಈ ಸಾಲದ ಬಡ್ಡಿ ದರವೇ ರೆಪೊ ಆಗಿದೆ. ರೆಪೊ ರೇಟ್‌ ಹೆಚ್ಚಾದರೆ ವಾಣಿಜ್ಯ ಬ್ಯಾಂಕ್‌ಗಳು ನೀಡುವ ಇತರ ಸಾಲದಲ್ಲೂ ಬಡ್ಡಿ ಹೆಚ್ಚಳವಾಗುತ್ತದೆ” ಎಂದು ವಿವರಿಸಿದರು.

ಮುಂದುವರಿದು, “ಬಡ್ಡಿ ದರ ಹೆಚ್ಚಾದಾಗ ಜನರು ಸಾಲ ತೆಗೆದುಕೊಳ್ಳುವುದನ್ನೂ ಕಡಿಮೆ ಮಾಡುತ್ತಾರೆ. ಸಾಲ ತೆಗೆದುಕೊಳ್ಳುವುದು ಕಡಿಮೆಯಾದಾಗ ಆರ್ಥಿಕತೆಯಲ್ಲಿ ನಗದಿನ ಹರಿವೂ ಕಡಿಮೆಯಾಗುತ್ತದೆ. ನಗದಿನ ಹರಿವು ಕಡಿಮೆಯಾದರೆ ಹಣದುಬ್ಬರ ಕಡಿಮೆಯಾಗುತ್ತದೆ ಎಂಬುದು ಆರ್‌ಬಿಐ ಮಾಡುವ ಯೋಚನೆ. ಹಣದುಬ್ಬರಕ್ಕೆ ಕೇವಲ ನಗದಿನ ಏರಿಳಿತ ಮಾತ್ರ ಕಾರಣವಲ್ಲ” ಎಂದು ತಿಳಿಸಿದರು.

“ಹಣದುಬ್ಬರಕ್ಕೆ ಆರ್ಥಿಕತೆಯಲ್ಲಿನ ಬೇಡಿಕೆ, ಪೂರೈಕೆಯ ಕೊರತೆ, ಖರೀದಿನ ಸಾಮರ್ಥ್ಯ ಕುಸಿತ ಇವೆಲ್ಲವೂ  ಕಾರಣವಾಗಿರುತ್ತವೆ. ನಗದಿನ ಹರಿವಿನ ನಿಯಂತ್ರಣದಿಂದ ಇವೆಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಸಾಲದ ಕೊರತೆಯನ್ನು ಉಂಟು ಮಾಡಿದರೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳೂ ಕಡಿಮೆಯಾಗುತ್ತವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾದಾಗ, ತೆರಿಗೆ ಸಂಗ್ರಹವೂ ಕುಸಿತವಾಗುತ್ತದೆ, ನಿರುದ್ಯೋಗವೂ ಹೆಚ್ಚುತ್ತದೆ. ಜನರ ಖರೀದಿ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಇದರಿಂದಾಗಿ ಹಣದುಬ್ಬರ ಹೆಚ್ಚೂ ಆಗಬಹುದು” ಎಂಬ ಅಭಿಪ್ರಾಯಪಟ್ಟರು.

“ಹಣದುಬ್ಬರ ಕಡಿಮೆ ಮಾಡಲು ಆರ್‌ಬಿಐ ಯೋಚಿಸುತ್ತದೆ. ನಗದಿನ ಹರಿವಿನ ವಿಚಾರದಲ್ಲಿ ಒಟ್ಟಾರೆ ಆರ್ಥಿಕ ಚಟುವಟಿಕೆಯನ್ನು ನೋಡುವುದು ಅತ್ಯಂತ ಸೀಮಿತ ತಿಳಿವಳಿಕೆ. ರೆಪೊ ರೇಟ್ ಹೆಚ್ಚಾದಾಗ ಬಡ್ಡಿ ದರ ಹೆಚ್ಚಾಗಿ ಹಣದ ಹರಿವು ಕಡಿಮೆಯಾಗುತ್ತದೆ ಎಂಬುದಷ್ಟೇ ತಕ್ಷಣಕ್ಕೆ ಕಣ್ಣಿಗೆ ಕಾಣುತ್ತದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....