Homeಮುಖಪುಟರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

ರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೊ ದರವನ್ನು 0.25%ರಷ್ಟು ಹೆಚ್ಚಿಸಿ 6.5%ಕ್ಕೆ ಏರಿಕೆ ಮಾಡಿದೆ. ಕೇಂದ್ರ ಬ್ಯಾಂಕ್ ಆಗಿರುವ ಆರ್‌ಬಿಐ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಹಣದ ಬಡ್ಡಿ ದರವೇ ‘ರೆಪೊ’ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿನ ದ್ವೈಮಾಸಿಕ ಹಣಕಾಸು ನೀತಿ ಸಭೆಯ ನಂತರ ರೆಪೊ ದರ ಹೆಚ್ಚಳದ ಘೋಷಣೆ ಮಾಡಿದ್ದಾರೆ.

ಮೇ ತಿಂಗಳ ನಂತರ ರೆಪೋ ದರದಲ್ಲಿ ಮಾಡುತ್ತಿರುವ ಆರನೇ ಏರಿಕೆ ಇದಾಗಿದೆ. ಸೆಂಟ್ರಲ್ ಬ್ಯಾಂಕ್ ಡಿಸೆಂಬರ್‌ನಲ್ಲಿ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 6.25%ಗೆ ಹೆಚ್ಚಿಸಿದೆ.

“ಕಳೆದ ಮೂರು ವರ್ಷಗಳಲ್ಲಿ ಅಭೂತಪೂರ್ವ ಘಟನೆಗಳು ಪ್ರಪಂಚದಾದ್ಯಂತ ವಿತ್ತೀಯ ನೀತಿಯನ್ನು ಪರೀಕ್ಷಿಸಿವೆ” ಎಂದು ಶಕ್ತಿಕಾಂತ್ ದಾಸ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.4% ಆಗಲಿದೆ ಎಂದು ಶಕ್ತಿಕಾಂತ್ ದಾಸ್‌ ಭವಿಷ್ಯ ನುಡಿದಿದ್ದಾರೆ.

ಜನವರಿ 31ರಂದು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಆರ್ಥಿಕ ಸಮೀಕ್ಷೆಯು, ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ದೇಶೀಯ ಬೆಳವಣಿಗೆ ಅಥವಾ ಜಿಡಿಪಿ 6% ರಿಂದ 6.8% ರಷ್ಟಿರುತ್ತದೆ ಎಂದು ಅಂದಾಜಿಸಿದೆ. ಈ ಹಣಕಾಸು ವರ್ಷದಲ್ಲಿ (2022-’23), ಭಾರತದ ಆರ್ಥಿಕತೆಯು 7% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ.

ಈ ಹಣಕಾಸು ವರ್ಷದಲ್ಲಿ 6.5% ಮತ್ತು ಮುಂದಿನ ವರ್ಷ 5.3% ಹಣದುಬ್ಬರವನ್ನು ರಿಸರ್ವ್ ಬ್ಯಾಂಕ್‌ ಅಂದಾಜಿಸಿದೆ ಎಂದು ದಾಸ್ ಹೇಳಿದ್ದಾರೆ.

ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ತಡೆಯಲು ಸಾಧ್ಯವೇ?

“ಹಣದುಬ್ಬರವನ್ನು ತಡೆಯಲು ರಿಸರ್ವ್ ಬ್ಯಾಂಕ್ ರೆಪೊ ರೇಟ್ ಹೆಚ್ಚಿಸುತ್ತದೆ. ಆದರೆ ನಿಜಕ್ಕೂ ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ನಿಯಂತ್ರಣ ಸಾಧ್ಯವೇ?” ಎಂಬ ಪ್ರಶ್ನೆ ನಮ್ಮ ಮುಂದಿದೆ.

ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಣವನ್ನು ರಿಸರ್ವ್ ಬ್ಯಾಂಕ್‌ ಪ್ರಿಂಟ್ ಮಾಡುತ್ತದೆ. ರಿಸರ್ವ್ ಬ್ಯಾಂಕ್‌ನಿಂದ ಹಣವನ್ನು ಇತರ ಬ್ಯಾಂಕ್‌ಗಳು ತೆಗೆದುಕೊಳ್ಳುತ್ತವೆ. ಅದು ಸಾಲದ ರೂಪದಲ್ಲಿ ಇರುತ್ತದೆ. ಈ ಸಾಲದ ಬಡ್ಡಿ ದರವೇ ರೆಪೊ ಆಗಿದೆ. ರೆಪೊ ರೇಟ್‌ ಹೆಚ್ಚಾದರೆ ವಾಣಿಜ್ಯ ಬ್ಯಾಂಕ್‌ಗಳು ನೀಡುವ ಇತರ ಸಾಲದಲ್ಲೂ ಬಡ್ಡಿ ಹೆಚ್ಚಳವಾಗುತ್ತದೆ” ಎಂದು ವಿವರಿಸಿದರು.

ಮುಂದುವರಿದು, “ಬಡ್ಡಿ ದರ ಹೆಚ್ಚಾದಾಗ ಜನರು ಸಾಲ ತೆಗೆದುಕೊಳ್ಳುವುದನ್ನೂ ಕಡಿಮೆ ಮಾಡುತ್ತಾರೆ. ಸಾಲ ತೆಗೆದುಕೊಳ್ಳುವುದು ಕಡಿಮೆಯಾದಾಗ ಆರ್ಥಿಕತೆಯಲ್ಲಿ ನಗದಿನ ಹರಿವೂ ಕಡಿಮೆಯಾಗುತ್ತದೆ. ನಗದಿನ ಹರಿವು ಕಡಿಮೆಯಾದರೆ ಹಣದುಬ್ಬರ ಕಡಿಮೆಯಾಗುತ್ತದೆ ಎಂಬುದು ಆರ್‌ಬಿಐ ಮಾಡುವ ಯೋಚನೆ. ಹಣದುಬ್ಬರಕ್ಕೆ ಕೇವಲ ನಗದಿನ ಏರಿಳಿತ ಮಾತ್ರ ಕಾರಣವಲ್ಲ” ಎಂದು ತಿಳಿಸಿದರು.

“ಹಣದುಬ್ಬರಕ್ಕೆ ಆರ್ಥಿಕತೆಯಲ್ಲಿನ ಬೇಡಿಕೆ, ಪೂರೈಕೆಯ ಕೊರತೆ, ಖರೀದಿನ ಸಾಮರ್ಥ್ಯ ಕುಸಿತ ಇವೆಲ್ಲವೂ  ಕಾರಣವಾಗಿರುತ್ತವೆ. ನಗದಿನ ಹರಿವಿನ ನಿಯಂತ್ರಣದಿಂದ ಇವೆಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಸಾಲದ ಕೊರತೆಯನ್ನು ಉಂಟು ಮಾಡಿದರೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳೂ ಕಡಿಮೆಯಾಗುತ್ತವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾದಾಗ, ತೆರಿಗೆ ಸಂಗ್ರಹವೂ ಕುಸಿತವಾಗುತ್ತದೆ, ನಿರುದ್ಯೋಗವೂ ಹೆಚ್ಚುತ್ತದೆ. ಜನರ ಖರೀದಿ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಇದರಿಂದಾಗಿ ಹಣದುಬ್ಬರ ಹೆಚ್ಚೂ ಆಗಬಹುದು” ಎಂಬ ಅಭಿಪ್ರಾಯಪಟ್ಟರು.

“ಹಣದುಬ್ಬರ ಕಡಿಮೆ ಮಾಡಲು ಆರ್‌ಬಿಐ ಯೋಚಿಸುತ್ತದೆ. ನಗದಿನ ಹರಿವಿನ ವಿಚಾರದಲ್ಲಿ ಒಟ್ಟಾರೆ ಆರ್ಥಿಕ ಚಟುವಟಿಕೆಯನ್ನು ನೋಡುವುದು ಅತ್ಯಂತ ಸೀಮಿತ ತಿಳಿವಳಿಕೆ. ರೆಪೊ ರೇಟ್ ಹೆಚ್ಚಾದಾಗ ಬಡ್ಡಿ ದರ ಹೆಚ್ಚಾಗಿ ಹಣದ ಹರಿವು ಕಡಿಮೆಯಾಗುತ್ತದೆ ಎಂಬುದಷ್ಟೇ ತಕ್ಷಣಕ್ಕೆ ಕಣ್ಣಿಗೆ ಕಾಣುತ್ತದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...