Homeಮುಖಪುಟಪಾವತಿ ವ್ಯವಸ್ಥೆಗಳ ಮೇಲಿನ ಶುಲ್ಕಕ್ಕೆ RBI ಪ್ರಸ್ತಾಪ; GPay, PhonePe ವಹಿವಾಟುಗಳ ಮೇಲೆ ಪರಿಣಾಮ ಬೀರುವ...

ಪಾವತಿ ವ್ಯವಸ್ಥೆಗಳ ಮೇಲಿನ ಶುಲ್ಕಕ್ಕೆ RBI ಪ್ರಸ್ತಾಪ; GPay, PhonePe ವಹಿವಾಟುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಭಾರತೀಯ ರಿಸರ್ವ್‌‌ ಬ್ಯಾಂಕ್‌‌‌(ಆರ್‌ಬಿಐ) ಪಾವತಿ ವ್ಯವಸ್ಥೆಗಳ ಮೇಲೆ ಶುಲ್ಕಗಳನ್ನು ಹೇರುವ ಬಗ್ಗೆ ಪ್ರಸ್ತಾಪಿಸಿದೆ. ಇದು ಗೂಗಲ್ ಪೇ, ಫೋನ್‌ ಪೇ ಮಾದರಿಯ ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) ಆಧಾರಿತ ಹಣ ವರ್ಗಾವಣೆ ವಹಿವಾಟುಗಳ ಮೇಲೆ ಪರಿಣಾಮ ಬೀರಲಿದೆ. ಈ ಮೂಲಕ ಆರ್‌ಬಿಐ ತನ್ನ ದೊಡ್ಡ ಹೂಡಿಕೆ ಮತ್ತು ಪಾವತಿ ವ್ಯವಸ್ಥೆಗಳಲ್ಲಿನ ಕಾರ್ಯಾಚರಣೆಯ ವೆಚ್ಚವನ್ನು ಮರುಪಡೆಯುವ ಸಾಧ್ಯತೆಯನ್ನು ಪರಿಶೀಲಿಸುತ್ತಿದೆ.

ವಿನಿಮಯವನ್ನು ನಿಯಂತ್ರಿಸಿ ಡೆಬಿಟ್ ಕಾರ್ಡ್‌ ವಹಿವಾಟುಗಳಿಗೆ ಪ್ರತಿ ವಹಿವಾಟಿನ ಶುಲ್ಕವನ್ನು ಕಡ್ಡಾಯಗೊಳಿಸುವ ಬಗ್ಗೆ ಮತ್ತು UPI ಆಧಾರಿತ ಹಣ ವರ್ಗಾವಣೆ ವಹಿವಾಟುಗಳ ಮೇಲೆ ಶುಲ್ಕಗಳನ್ನು ಹೇರುವ ಬಗ್ಗೆ ಆರ್‌ಬಿಐ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಕೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಕ್ಷಣದ ಪಾವತಿ ಸೇವೆ (IMPS), ರಾಷ್ಟ್ರೀಯ ಎಲೆಕ್ಟ್ರಾನಿಕ್ ನಿಧಿಗಳ ವರ್ಗಾವಣೆ (NEFT) ವ್ಯವಸ್ಥೆ, ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್ (RTGS) ವ್ಯವಸ್ಥೆ ಮತ್ತು ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) ಗಳು ಈ ಪಾವತಿ ವ್ಯವಸ್ಥೆಗಳಲ್ಲಿ ಸೇರಿವೆ. ಡೆಬಿಟ್ ಕಾರ್ಡ್‌ಗಳು, ಕ್ರೆಡಿಟ್ ಕಾರ್ಡ್‌ಗಳು ಮತ್ತು ಪ್ರಿಪೇಯ್ಡ್ ಪಾವತಿ ಉಪಕರಣಗಳು (ಪಿಪಿಐಗಳು) ಕೂಡಾ ಇತರ ಪಾವತಿ ಸಾಧನಗಳಲ್ಲಿ ಸೇರಿವೆ.

ಪಾವತಿ ವ್ಯವಸ್ಥೆಗಳಲ್ಲಿ ಆರ್‌ಬಿಐನ ಈ ಉಪಕ್ರಮಗಳ ಗಮನವು ವ್ಯವಸ್ಥಿತ ಕಾರ್ಯವಿಧಾನ ಅಥವಾ ಆದಾಯ-ಸಂಬಂಧಿತ ಸಮಸ್ಯೆಗಳಿಂದ ಉಂಟಾಗಬಹುದಾದ ಘರ್ಷಣೆಗಳನ್ನು ಸರಾಗಗೊಳಿಸುವುದಾಗಿದೆ ಎಂದು ‘ಪಾವತಿ ವ್ಯವಸ್ಥೆಗಳಲ್ಲಿನ ಶುಲ್ಕಗಳು’ ಕುರಿತು ಚರ್ಚಾ ಪ್ರಬಂಧವನ್ನು ಬಿಡುಗಡೆ ಮಾಡುವಾಗ ಬ್ಯಾಂಕ್ ಹೇಳಿ ಕೊಂಡಿದೆ.

ಆರ್‌ಬಿಐ ಅಕ್ಟೋಬರ್ 3 ರೊಳಗೆ ಪಾವತಿ ವ್ಯವಸ್ಥೆಗಳಲ್ಲಿನ ಶುಲ್ಕಗಳು ಮತ್ತು ಲೆವಿಗಳಿಗೆ ಸಂಬಂಧಿಸಿದಂತೆ 40 ನಿರ್ದಿಷ್ಟ ಪ್ರಶ್ನೆಗಳಿಗೆ ಸಾರ್ವಜನಿಕ ಅಭಿಪ್ರಾಯಗಳನ್ನು ಕೇಳಿದೆ.

ಇದನ್ನೂ ಓದಿ: ಸಾಲ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ಗಳ ಬಗ್ಗೆ ಎಚ್ಚರಿಕೆ ನೀಡಿದ ಆರ್‌‌ಬಿಐ

ಪಾವತಿಗಳ ವಹಿವಾಟು ಸರಣಿಯಲ್ಲಿ ಅನೇಕ ಮಧ್ಯವರ್ತಿಗಳಿದ್ದರೂ ಗ್ರಾಹಕರ ದೂರುಗಳು ಸಾಮಾನ್ಯವಾಗಿ ಹೆಚ್ಚಿನ ಮತ್ತು ಪಾರದರ್ಶಕವಲ್ಲದ ಶುಲ್ಕಗಳ ಬಗ್ಗೆ ಇರುತ್ತದೆ. ಪಾವತಿ ಸೇವೆಗಳಿಗೆ ಶುಲ್ಕಗಳು ಸಮಂಜಸವಾಗಿರಬೇಕು ಮತ್ತು ಬಳಕೆದಾರರಿಗೆ ಸ್ಪರ್ಧಾತ್ಮಕವಾಗಿ ನಿರ್ಧರಿಸಬೇಕು ಹಾಗೂ ಮಧ್ಯವರ್ತಿಗಳಿಗೆ ಸೂಕ್ತವಾದ ಆದಾಯವನ್ನು ಒದಗಿಸಬೇಕು ಎಂದು ಆರ್‌ಬಿಐ ಒತ್ತಿಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...