Homeಮುಖಪುಟಪಾವತಿ ವ್ಯವಸ್ಥೆಗಳ ಮೇಲಿನ ಶುಲ್ಕಕ್ಕೆ RBI ಪ್ರಸ್ತಾಪ; GPay, PhonePe ವಹಿವಾಟುಗಳ ಮೇಲೆ ಪರಿಣಾಮ ಬೀರುವ...

ಪಾವತಿ ವ್ಯವಸ್ಥೆಗಳ ಮೇಲಿನ ಶುಲ್ಕಕ್ಕೆ RBI ಪ್ರಸ್ತಾಪ; GPay, PhonePe ವಹಿವಾಟುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಭಾರತೀಯ ರಿಸರ್ವ್‌‌ ಬ್ಯಾಂಕ್‌‌‌(ಆರ್‌ಬಿಐ) ಪಾವತಿ ವ್ಯವಸ್ಥೆಗಳ ಮೇಲೆ ಶುಲ್ಕಗಳನ್ನು ಹೇರುವ ಬಗ್ಗೆ ಪ್ರಸ್ತಾಪಿಸಿದೆ. ಇದು ಗೂಗಲ್ ಪೇ, ಫೋನ್‌ ಪೇ ಮಾದರಿಯ ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) ಆಧಾರಿತ ಹಣ ವರ್ಗಾವಣೆ ವಹಿವಾಟುಗಳ ಮೇಲೆ ಪರಿಣಾಮ ಬೀರಲಿದೆ. ಈ ಮೂಲಕ ಆರ್‌ಬಿಐ ತನ್ನ ದೊಡ್ಡ ಹೂಡಿಕೆ ಮತ್ತು ಪಾವತಿ ವ್ಯವಸ್ಥೆಗಳಲ್ಲಿನ ಕಾರ್ಯಾಚರಣೆಯ ವೆಚ್ಚವನ್ನು ಮರುಪಡೆಯುವ ಸಾಧ್ಯತೆಯನ್ನು ಪರಿಶೀಲಿಸುತ್ತಿದೆ.

ವಿನಿಮಯವನ್ನು ನಿಯಂತ್ರಿಸಿ ಡೆಬಿಟ್ ಕಾರ್ಡ್‌ ವಹಿವಾಟುಗಳಿಗೆ ಪ್ರತಿ ವಹಿವಾಟಿನ ಶುಲ್ಕವನ್ನು ಕಡ್ಡಾಯಗೊಳಿಸುವ ಬಗ್ಗೆ ಮತ್ತು UPI ಆಧಾರಿತ ಹಣ ವರ್ಗಾವಣೆ ವಹಿವಾಟುಗಳ ಮೇಲೆ ಶುಲ್ಕಗಳನ್ನು ಹೇರುವ ಬಗ್ಗೆ ಆರ್‌ಬಿಐ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಕೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಕ್ಷಣದ ಪಾವತಿ ಸೇವೆ (IMPS), ರಾಷ್ಟ್ರೀಯ ಎಲೆಕ್ಟ್ರಾನಿಕ್ ನಿಧಿಗಳ ವರ್ಗಾವಣೆ (NEFT) ವ್ಯವಸ್ಥೆ, ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್ (RTGS) ವ್ಯವಸ್ಥೆ ಮತ್ತು ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) ಗಳು ಈ ಪಾವತಿ ವ್ಯವಸ್ಥೆಗಳಲ್ಲಿ ಸೇರಿವೆ. ಡೆಬಿಟ್ ಕಾರ್ಡ್‌ಗಳು, ಕ್ರೆಡಿಟ್ ಕಾರ್ಡ್‌ಗಳು ಮತ್ತು ಪ್ರಿಪೇಯ್ಡ್ ಪಾವತಿ ಉಪಕರಣಗಳು (ಪಿಪಿಐಗಳು) ಕೂಡಾ ಇತರ ಪಾವತಿ ಸಾಧನಗಳಲ್ಲಿ ಸೇರಿವೆ.

ಪಾವತಿ ವ್ಯವಸ್ಥೆಗಳಲ್ಲಿ ಆರ್‌ಬಿಐನ ಈ ಉಪಕ್ರಮಗಳ ಗಮನವು ವ್ಯವಸ್ಥಿತ ಕಾರ್ಯವಿಧಾನ ಅಥವಾ ಆದಾಯ-ಸಂಬಂಧಿತ ಸಮಸ್ಯೆಗಳಿಂದ ಉಂಟಾಗಬಹುದಾದ ಘರ್ಷಣೆಗಳನ್ನು ಸರಾಗಗೊಳಿಸುವುದಾಗಿದೆ ಎಂದು ‘ಪಾವತಿ ವ್ಯವಸ್ಥೆಗಳಲ್ಲಿನ ಶುಲ್ಕಗಳು’ ಕುರಿತು ಚರ್ಚಾ ಪ್ರಬಂಧವನ್ನು ಬಿಡುಗಡೆ ಮಾಡುವಾಗ ಬ್ಯಾಂಕ್ ಹೇಳಿ ಕೊಂಡಿದೆ.

ಆರ್‌ಬಿಐ ಅಕ್ಟೋಬರ್ 3 ರೊಳಗೆ ಪಾವತಿ ವ್ಯವಸ್ಥೆಗಳಲ್ಲಿನ ಶುಲ್ಕಗಳು ಮತ್ತು ಲೆವಿಗಳಿಗೆ ಸಂಬಂಧಿಸಿದಂತೆ 40 ನಿರ್ದಿಷ್ಟ ಪ್ರಶ್ನೆಗಳಿಗೆ ಸಾರ್ವಜನಿಕ ಅಭಿಪ್ರಾಯಗಳನ್ನು ಕೇಳಿದೆ.

ಇದನ್ನೂ ಓದಿ: ಸಾಲ ನೀಡುವ ಅನಧೀಕೃತ ಡಿಜಿಟಲ್ ಫ್ಲಾಟ್‌ಫಾರ್ಮ್‌ಗಳ ಬಗ್ಗೆ ಎಚ್ಚರಿಕೆ ನೀಡಿದ ಆರ್‌‌ಬಿಐ

ಪಾವತಿಗಳ ವಹಿವಾಟು ಸರಣಿಯಲ್ಲಿ ಅನೇಕ ಮಧ್ಯವರ್ತಿಗಳಿದ್ದರೂ ಗ್ರಾಹಕರ ದೂರುಗಳು ಸಾಮಾನ್ಯವಾಗಿ ಹೆಚ್ಚಿನ ಮತ್ತು ಪಾರದರ್ಶಕವಲ್ಲದ ಶುಲ್ಕಗಳ ಬಗ್ಗೆ ಇರುತ್ತದೆ. ಪಾವತಿ ಸೇವೆಗಳಿಗೆ ಶುಲ್ಕಗಳು ಸಮಂಜಸವಾಗಿರಬೇಕು ಮತ್ತು ಬಳಕೆದಾರರಿಗೆ ಸ್ಪರ್ಧಾತ್ಮಕವಾಗಿ ನಿರ್ಧರಿಸಬೇಕು ಹಾಗೂ ಮಧ್ಯವರ್ತಿಗಳಿಗೆ ಸೂಕ್ತವಾದ ಆದಾಯವನ್ನು ಒದಗಿಸಬೇಕು ಎಂದು ಆರ್‌ಬಿಐ ಒತ್ತಿಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...