Homeಸಿನಿಮಾಕ್ರೀಡೆಇಂದು ಬೆಂಗಳೂರಿನಲ್ಲಿ RCB ಪಂದ್ಯ: ಮಳೆ ಬಂದರೆ ಪ್ಲೇಆಫ್ ಸಾಧ್ಯತೆ ಕ್ಷೀಣ

ಇಂದು ಬೆಂಗಳೂರಿನಲ್ಲಿ RCB ಪಂದ್ಯ: ಮಳೆ ಬಂದರೆ ಪ್ಲೇಆಫ್ ಸಾಧ್ಯತೆ ಕ್ಷೀಣ

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಮತ್ತು ತಲಾ 17 ಅಂಕ ಗಳಿಸಿರುವ ಚನ್ನೈ ಮತ್ತು ಲಕ್ನೋ ತಂಡಗಳು ಈಗಾಗಲೇ ಪ್ಲೇಆಫ್ ಪ್ರವೇಶಿಸಿವೆ. ಡೆಲ್ಲಿ ಕ್ಯಾಪಿಟಲ್ಸ್, ಸನ್‌ರೈಸರ್ಸ್ ಹೈದರಾಬಾದ್, ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್‌ ತಂಡಗಳು ಹೆಚ್ಚು ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 1 ಪ್ಲೇಆಫ್ ಸ್ಥಾನಕ್ಕಾಗಿ 3 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೊಂದು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಮಳೆ ಬಂದು ಪಂದ್ಯ ರದ್ದಾದರೆ ಅಥವಾ ಆರ್‌ಸಿಬಿ ಕಡಿಮೆ ಅಂತರದಲ್ಲಿ ಸೋತರೂ ಮುಂಬೈ ಇಂಡಿಯನ್ಸ್ ತಂಡ ಕೂಡ ಸೋಲು ಕಂಡರೆ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಬಹುದು. ಬನ್ನಿ ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳನ್ನು ನೋಡೋಣ.

12 ಪಂದ್ಯಗಳಿಂದ 7 ಜಯ ಮತ್ತು 6 ಸೋಲಿನೊಂದಿಗೆ 14 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ತಲಾ 14 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 5ನೇ, ಮುಂಬೈ 6ನೇ ಸ್ಥಾನದಲ್ಲಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 21 ರಂದು ಗುಜರಾತ್ ಟೈಟನ್ಸ್ ಎದುರು ಕೊನೆಯ ಪಂದ್ಯದಲ್ಲಿ ಸೆಣಸಲಿದೆ. ಆ ಪಂದ್ಯದಲ್ಲಿ ಗೆದ್ದರೆ 16 ಅಂಕಗಳೊಂದಿಗೆ ಸುಲಭವಾಗಿ ಪ್ಲೇ ಆಫ್ ತಲುಪಲಿದೆ. ಪಂದ್ಯ ಸೋತರೂ, ಸೋಲಿನ ಅಂತರ ಕಡಿಮೆ ಇದ್ದಲ್ಲಿ 14 ಅಂಕಗಳು ಮತ್ತು ಅದರ ನೆಟ್ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್ ಪ್ರವೇಶ ಪಡೆಯಬಹುದು. ಆರ್‌ಸಿಬಿಯ ಸದ್ಯದ ನೆಟ್ ರನ್‌ ರೇಟ್ +0.180 ಇದೆ. ಆದರೆ ಆಗ ಮುಂಬೈ ಇಂಡಿಯನ್ಸ್ ತಂಡವು ಭಾನುವಾರ ನಡೆಯುವ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋಲಬೇಕಿದೆ. ಆಗ ಮುಂಬೈ ಸಹ 14 ಅಂಕ ಗಳಿಸಿರುತ್ತದೆ. ಆದರೆ ನೆಟ್ ರನ್ ರೇಟ್ (-0.128) ಆರ್‌ಸಿಬಿಗಿಂತ ಕಡಿಮೆ ಇರುವುದರಿಂದ ಆರ್‌ಸಿಬಿಗೆ ಅನುಕೂಲವಾಗುತ್ತದೆ. ಆದರೆ ಇತ್ತೀಚಿನ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡುತ್ತಿರುವ ಮುಂಬೈ ತಂಡವು ಕೊನೆಯ ಸ್ಥಾನದಲ್ಲಿರುವ ಹೈದರಾಬಾದ್ ಎದುರು ಸೋಲುವುದು ಅಷ್ಟು ಸುಲಭವಲ್ಲ.

ಮಳೆ ಬಂದರೆ?

ಆರ್‌ಸಿಬಿ ಪಂದ್ಯಕ್ಕೆ ಮಳೆ ಬಂದು ಪಂದ್ಯ ರದ್ದಾದರೆ ಒಂದು ಅಂಕ ಸಿಗುತ್ತದೆ. ಆಗ ಆರ್‌ಸಿಬಿ 15 ಅಂಕ ಗಳಿಸಿರುತ್ತದೆ. ಆದರೆ ಅದಕ್ಕೂ ಮುನ್ನ ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು  ಹೈದರಾಬಾದ್ ವಿರುದ್ಧ ಸೋಲಬೇಕಿದೆ. ಇಲ್ಲವಾದಲ್ಲಿ ಮುಂಬೈ ಪ್ಲೇ ಆಫ್ ಪ್ರವೇಶಿಸುತ್ತದೆ. ಆರ್‌ಸಿಬಿ ಟೂರ್ನಿಯಿಂದ ಹೊರ ಬೀಳುತ್ತದೆ.

ಒಂದು ವೇಳೆ ಮುಂಬೈ ಸೋತು, ಆರ್‌ಸಿಬಿ ಕೂಡ ದೊಡ್ಡ ಅಂತರದಲ್ಲಿ ಸೋತಲ್ಲಿ ಎರಡೂ ತಂಡಗಳು ಟೂರ್ನಿಯಿಂದ ಹೊರಬಿದ್ದು, 14 ಅಂಕ ಮತ್ತು +0.148 ನೆಟ್ ರನ್‌ ರೇಟ್ ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ.

ಮೊದಲ ಕ್ವಾಲಿಫೈಯರ್ ಪಂದ್ಯ ಮೇ 23 ರಂದು ನಡೆದರೆ, ಎಲಿಮಿನೇಟರ್ ಪಂದ್ಯ 24 ರಂದು ನಡೆಯಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯ 26 ರಂದು ನಡೆದರೆ, ಫೈನಲ್ ಪಂದ್ಯ ಮೇ 28 ರಂದು ನಡೆಯಲಿದೆ.

ಇದನ್ನೂ ಓದಿ: ಕರಾವಳಿ: ಬೆಚ್ಚಿ ಬೀಳಿಸಿದ ಬುದ್ಧಿವಂತರ ಸೀಮೆಯ “ತಿರುಚು” ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...