Homeಸಿನಿಮಾಕ್ರೀಡೆಫ್ಲೇಆಫ್ ಹತ್ತಿರಕ್ಕೆ ಬಂದ RCB: ಗುಜರಾತ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ

ಫ್ಲೇಆಫ್ ಹತ್ತಿರಕ್ಕೆ ಬಂದ RCB: ಗುಜರಾತ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ

- Advertisement -
- Advertisement -

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ RCB ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿದೆ. ಆ ಮೂಲಕ 16 ಅಂಕ ಗಳಿಸಿ ತನ್ನ ಲೀಗ್ ಪೂರ್ಣಗೊಳಿಸಿದ್ದು ಪ್ಲೇಆಫ್ ಹತ್ತಿರಕ್ಕೆ ಬಂದಿದೆ. ಶನಿವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತಲ್ಲಿ RCB ಸುಲಭವಾಗಿ ಪ್ಲೇಆಫ್ ಪ್ರವೇಶಿಸಲಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಟೈಟನ್ಸ್ ಆರಂಭದಲ್ಲೆ ಎಡವಿತು. ಆರಂಭಿಕ ಆಟಗಾರ ಶುಭಮನ್ ಗಿಲ್ 1 ರನ್‌ಗೆ ಹೆಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. ಮ್ಯಾಕ್ಸ್‌ವೆಲ್ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದು ಗಿಲ್ ರನ್ನು ಪೆವಿಲಿಯನ್‌ಗೆ ಕಳಿಸಿದರು. ನಂತರ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ವಾಡೆ ಎಲ್‌ಬಿಡಬ್ಲು ಬಲೆಗೆ ಬಿದ್ದರು. ಆನಂತರ ಉತ್ತಮವಾಗಿ ಆಡುತ್ತಿದ್ದ ವೃದ್ದಿಮಾನ್ ಶಾ ರನ್‌ ಔಟ್ ಆಗಿ 31ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಮಿಲ್ಲರ್ 34 ರನ್ ಗಳಿಸಿದರೆ ಹಾರ್ದಿಕ್ ಪಾಂಡ್ಯ 64 ಗಳಿಸಿ ನಾಟ್‌ ಔಟ್ ಆದರು. ಕೊನೆಯಲ್ಲಿ ಬಂದ ರ‍ಶೀದ್ ಖಾನ್ 19 ರನ್ ಸಿಡಿಸಿ ತಂಡಕ್ಕೆ ನೆರವಾದರು. ಗುಜರಾತ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು.

ಸಾಧಾರಣ ಮೊತ್ತ ಬೆನ್ನಟ್ಟಿದ್ದ ಆರ್‌ಸಿಬಿ ಉತ್ತಮ ಆರಂಭ ಕಂಡಿತು. ಮೊದಲ ವಿಕೆಟ್ ಜೊತೆಯಾಟಕ್ಕೆ ವಿರಾಟ್ ಮತ್ತು ಡುಪ್ಲೆಸಿಸ್ 115 ರನ್ ಗಳಿಸಿದರು. ಡುಪ್ಲೆಸಿಸ್ 44 ರನ್ ಗಳಿಸಿ ಔಟ್ ಆದರೆ ವಿರಾಟ್ 73 ರನ್ ಚಚ್ಚಿದರು. ನಂತರ ಕ್ರೀಸ್‌ಗಿಳಿದ ಮ್ಯಾಕ್ಸ್‌ವೆಲ್ ಕೇವಲ 18 ಎಸೆತಗಳಲ್ಲಿ 40 ರನ್‌ ಬಾರಿಸಿ ಇನ್ನು 8 ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಆರ್‌ಸಿಬಿ 8 ವಿಕೆಟ್‌ಗಳ ಜಯ ಸಾಧಿಸಿತು. ಗುಜರಾತ್ ಪರ ರಶೀದ್ ಖಾನ್ ಎರಡು ವಿಕೆಟ್ ಪಡೆದರು.

IPL 2022ರ ಲೀಗ್ ಹಂತದ ಮೂರು ಪಂದ್ಯಗಳು ಮಾತ್ರ ಉಳಿದಿದ್ದು, ಪ್ಲೇಆಫ್ ಪ್ರವೇಶಿಸಲು RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪೈಪೋಟಿ ನಡೆಸುತ್ತಿವೆ. ಇಂದು ಪಂದ್ಯ ಗೆದ್ದಿರುವ ಆರ್‌ಸಿಬಿ 16 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಶನಿವಾರ ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಗೆಲುವಿಗಾಗಿ ಪ್ರಾರ್ಥಿಸಬೇಕಿದೆ. ಏಕೆಂದರೆ ಬೆಂಗಳೂರು ತಂಡದ ನೆಟ್‌ ರನ್‌ ರೇಟ್ -253 ಇದೆ. ಆದರೆ ಡೆಲ್ಲಿ ತಂಡ ಸದ್ಯ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಅದರ ನೆಟ್‌ ರನ್‌ ರೇಟ್ +255 ಇದೆ. ಒಂದು ವೇಳೆ ಅದು ಮುಂಬೈ ವಿರುದ್ಧ ಗೆದ್ದರೆ 16 ಅಂಕ ಮತ್ತು ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ಪ್ಲೇಆಫ್ ಪ್ರವೇಶಿಸುತ್ತದೆ ಮತ್ತು ಬೆಂಗಳೂರು ಹೊರಬೀಳುತ್ತದೆ.

ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕ್ರಮವಾಗಿ 20 ಮತ್ತು 18 ಅಂಕಗಳೊಂದಿಗೆ ಈಗಾಗಲೇ ಪ್ಲೇಆಫ್ ಪ್ರವೇಶಿಸಿವೆ. ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕ ಗಳಿಸಿದ್ದು +304 ನೆಟ್‌ ರನ್‌ ರೇಟ್ ಹೊಂದಿರುವ ಕಾರಣ ಅದು ಕೂಡ ಪ್ಲೇಆಫ್ ಪ್ರವೇಶದ ಹೊಸ್ತಿಲಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ಶುಕ್ರವಾರ ಚನ್ನೈ ಎದುರು ಸೆಣಸಲಿದ್ದು, ಗೆದ್ದರೂ ಅಥವಾ ಕಡಿಮೆ ಅಂತರದಿಂದ ಸೋತರೂ ಸಹ ಅದ ಪ್ಲೇ ಆಫ್‌ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಭಾರೀ ಅಂತರದಿಂದ ಸೋತಲ್ಲಿ ಮಾತ್ರ ಅದರ ನೆಟ್‌ ರನ್‌ ರೇಟ್ ಲೆಕ್ಕಕ್ಕೆ ಬರುತ್ತದೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರುವ ಗುಜರಾತ್ ಮತ್ತು ಎರಡನೇ ಸ್ಥಾನ ಪಡೆಯುವ ತಂಡದ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 24 ರಂದು ನಡೆಯಲಿದೆ. ಅಲ್ಲಿ ಗೆದ್ದವರು ನೇರ ಫೈನಲ್ ತಲುಪತ್ತಾರೆ. ಸೋತವರಿಗೆ ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಅವಕಾಶವಿರುತ್ತದೆ. ಮೂರು ಮತ್ತು ನಾಲ್ಕನೇ ಸ್ಥಾನ ಪಡೆದವರ ಎಲಿಮಿನೇಟರ್ ಪಂದ್ಯ ಮೇ 25 ರಂದು ನಡೆಯಲಿದೆ. ಅಲ್ಲಿ ಸೋತವರು ಟೂರ್ನಿಯಿಂದ ಹೊರಬೀಳುತ್ತಾರೆ. ಗೆದ್ದವರು ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಪ್ರವೇಶಿಸುತ್ತಾರೆ. ಆ ಪಂದ್ಯ ಮೇ 27 ರಂದು ನಡೆಯಲಿದೆ. ಅಲ್ಲಿ ಗೆದ್ದವರು ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಸೆಣಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...