Homeಸಿನಿಮಾಕ್ರೀಡೆಫ್ಲೇಆಫ್ ಹತ್ತಿರಕ್ಕೆ ಬಂದ RCB: ಗುಜರಾತ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ

ಫ್ಲೇಆಫ್ ಹತ್ತಿರಕ್ಕೆ ಬಂದ RCB: ಗುಜರಾತ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ

- Advertisement -
- Advertisement -

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ RCB ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿದೆ. ಆ ಮೂಲಕ 16 ಅಂಕ ಗಳಿಸಿ ತನ್ನ ಲೀಗ್ ಪೂರ್ಣಗೊಳಿಸಿದ್ದು ಪ್ಲೇಆಫ್ ಹತ್ತಿರಕ್ಕೆ ಬಂದಿದೆ. ಶನಿವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತಲ್ಲಿ RCB ಸುಲಭವಾಗಿ ಪ್ಲೇಆಫ್ ಪ್ರವೇಶಿಸಲಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಟೈಟನ್ಸ್ ಆರಂಭದಲ್ಲೆ ಎಡವಿತು. ಆರಂಭಿಕ ಆಟಗಾರ ಶುಭಮನ್ ಗಿಲ್ 1 ರನ್‌ಗೆ ಹೆಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. ಮ್ಯಾಕ್ಸ್‌ವೆಲ್ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದು ಗಿಲ್ ರನ್ನು ಪೆವಿಲಿಯನ್‌ಗೆ ಕಳಿಸಿದರು. ನಂತರ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ವಾಡೆ ಎಲ್‌ಬಿಡಬ್ಲು ಬಲೆಗೆ ಬಿದ್ದರು. ಆನಂತರ ಉತ್ತಮವಾಗಿ ಆಡುತ್ತಿದ್ದ ವೃದ್ದಿಮಾನ್ ಶಾ ರನ್‌ ಔಟ್ ಆಗಿ 31ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಮಿಲ್ಲರ್ 34 ರನ್ ಗಳಿಸಿದರೆ ಹಾರ್ದಿಕ್ ಪಾಂಡ್ಯ 64 ಗಳಿಸಿ ನಾಟ್‌ ಔಟ್ ಆದರು. ಕೊನೆಯಲ್ಲಿ ಬಂದ ರ‍ಶೀದ್ ಖಾನ್ 19 ರನ್ ಸಿಡಿಸಿ ತಂಡಕ್ಕೆ ನೆರವಾದರು. ಗುಜರಾತ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು.

ಸಾಧಾರಣ ಮೊತ್ತ ಬೆನ್ನಟ್ಟಿದ್ದ ಆರ್‌ಸಿಬಿ ಉತ್ತಮ ಆರಂಭ ಕಂಡಿತು. ಮೊದಲ ವಿಕೆಟ್ ಜೊತೆಯಾಟಕ್ಕೆ ವಿರಾಟ್ ಮತ್ತು ಡುಪ್ಲೆಸಿಸ್ 115 ರನ್ ಗಳಿಸಿದರು. ಡುಪ್ಲೆಸಿಸ್ 44 ರನ್ ಗಳಿಸಿ ಔಟ್ ಆದರೆ ವಿರಾಟ್ 73 ರನ್ ಚಚ್ಚಿದರು. ನಂತರ ಕ್ರೀಸ್‌ಗಿಳಿದ ಮ್ಯಾಕ್ಸ್‌ವೆಲ್ ಕೇವಲ 18 ಎಸೆತಗಳಲ್ಲಿ 40 ರನ್‌ ಬಾರಿಸಿ ಇನ್ನು 8 ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಆರ್‌ಸಿಬಿ 8 ವಿಕೆಟ್‌ಗಳ ಜಯ ಸಾಧಿಸಿತು. ಗುಜರಾತ್ ಪರ ರಶೀದ್ ಖಾನ್ ಎರಡು ವಿಕೆಟ್ ಪಡೆದರು.

IPL 2022ರ ಲೀಗ್ ಹಂತದ ಮೂರು ಪಂದ್ಯಗಳು ಮಾತ್ರ ಉಳಿದಿದ್ದು, ಪ್ಲೇಆಫ್ ಪ್ರವೇಶಿಸಲು RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪೈಪೋಟಿ ನಡೆಸುತ್ತಿವೆ. ಇಂದು ಪಂದ್ಯ ಗೆದ್ದಿರುವ ಆರ್‌ಸಿಬಿ 16 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಶನಿವಾರ ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಗೆಲುವಿಗಾಗಿ ಪ್ರಾರ್ಥಿಸಬೇಕಿದೆ. ಏಕೆಂದರೆ ಬೆಂಗಳೂರು ತಂಡದ ನೆಟ್‌ ರನ್‌ ರೇಟ್ -253 ಇದೆ. ಆದರೆ ಡೆಲ್ಲಿ ತಂಡ ಸದ್ಯ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಅದರ ನೆಟ್‌ ರನ್‌ ರೇಟ್ +255 ಇದೆ. ಒಂದು ವೇಳೆ ಅದು ಮುಂಬೈ ವಿರುದ್ಧ ಗೆದ್ದರೆ 16 ಅಂಕ ಮತ್ತು ಉತ್ತಮ ನೆಟ್ ರನ್‌ ರೇಟ್ ಆಧಾರದಲ್ಲಿ ಪ್ಲೇಆಫ್ ಪ್ರವೇಶಿಸುತ್ತದೆ ಮತ್ತು ಬೆಂಗಳೂರು ಹೊರಬೀಳುತ್ತದೆ.

ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕ್ರಮವಾಗಿ 20 ಮತ್ತು 18 ಅಂಕಗಳೊಂದಿಗೆ ಈಗಾಗಲೇ ಪ್ಲೇಆಫ್ ಪ್ರವೇಶಿಸಿವೆ. ರಾಜಸ್ಥಾನ್ ರಾಯಲ್ಸ್ ತಂಡ 16 ಅಂಕ ಗಳಿಸಿದ್ದು +304 ನೆಟ್‌ ರನ್‌ ರೇಟ್ ಹೊಂದಿರುವ ಕಾರಣ ಅದು ಕೂಡ ಪ್ಲೇಆಫ್ ಪ್ರವೇಶದ ಹೊಸ್ತಿಲಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ ಶುಕ್ರವಾರ ಚನ್ನೈ ಎದುರು ಸೆಣಸಲಿದ್ದು, ಗೆದ್ದರೂ ಅಥವಾ ಕಡಿಮೆ ಅಂತರದಿಂದ ಸೋತರೂ ಸಹ ಅದ ಪ್ಲೇ ಆಫ್‌ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲಿದೆ. ಭಾರೀ ಅಂತರದಿಂದ ಸೋತಲ್ಲಿ ಮಾತ್ರ ಅದರ ನೆಟ್‌ ರನ್‌ ರೇಟ್ ಲೆಕ್ಕಕ್ಕೆ ಬರುತ್ತದೆ.

ಇದನ್ನೂ ಓದಿ: ಸರ್ಕಾರ ಹೊರಗಿಟ್ಟಿರುವ ಕ್ರಾಂತಿಕಾರಿ ‘ಭಗತ್‌ಸಿಂಗ್‌’ ಪಾಠದಲ್ಲಿ ಇರುವುದೇನು? ಆ ಪುಟ್ಟ ಪಠ್ಯ ಇಲ್ಲಿದೆ

ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರುವ ಗುಜರಾತ್ ಮತ್ತು ಎರಡನೇ ಸ್ಥಾನ ಪಡೆಯುವ ತಂಡದ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 24 ರಂದು ನಡೆಯಲಿದೆ. ಅಲ್ಲಿ ಗೆದ್ದವರು ನೇರ ಫೈನಲ್ ತಲುಪತ್ತಾರೆ. ಸೋತವರಿಗೆ ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಅವಕಾಶವಿರುತ್ತದೆ. ಮೂರು ಮತ್ತು ನಾಲ್ಕನೇ ಸ್ಥಾನ ಪಡೆದವರ ಎಲಿಮಿನೇಟರ್ ಪಂದ್ಯ ಮೇ 25 ರಂದು ನಡೆಯಲಿದೆ. ಅಲ್ಲಿ ಸೋತವರು ಟೂರ್ನಿಯಿಂದ ಹೊರಬೀಳುತ್ತಾರೆ. ಗೆದ್ದವರು ಎರಡನೇ ಕ್ವಾಲಿಫೈಯರ್ (ಸೆಮಿಫೈನಲ್) ಪ್ರವೇಶಿಸುತ್ತಾರೆ. ಆ ಪಂದ್ಯ ಮೇ 27 ರಂದು ನಡೆಯಲಿದೆ. ಅಲ್ಲಿ ಗೆದ್ದವರು ಮೇ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಸೆಣಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...