Homeಸಿನಿಮಾಕ್ರೀಡೆಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 8 ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 7 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಕೆಲವು ತಂಡಗಳು ಸೋಲಬೇಕಿದೆ. ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ.

12 ಪಂದ್ಯಗಳಿಂದ 6 ಜಯ ಮತ್ತು 6 ಸೋಲಿನೊಂದಿಗೆ 12 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 14 ಅಂಕ ಪಡೆದಿರುವ ಮುಂಬೈ 3ನೇ ಸ್ಥಾನದಲ್ಲಿದ್ದರೆ, 13 ಅಂಕ ಪಡೆದಿರುವ ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ನಂತರ ತಲಾ 12 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 6ನೇ, ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಮತ್ತು ಪಂಜಾಬ್ ಕಿಂಗ್ಸ್ 8 ನೇ ಸ್ಥಾನ ಪಡೆದಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 18 ರಂದು ಸನ್‌ರೈಸರ್ಸ್ ಹೈದರಾಬಾದ್ ಎದುರು ಮತ್ತು 21 ರಂದು ಗುಜರಾತ್ ಟೈಟನ್ಸ್ ಎದುರು ಸೆಣಸಲಿದೆ. ಆ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೇ ಇತರ ತಂಡಗಳು ಸೋಲಬೇಕೆಂದು ಆರ್‌ಸಿಬಿ ಕಾದು ನೋಡಬೇಕಿದೆ. ಅವುಗಳೆಂದರೆ

ಮುಂಬೈ ತಂಡವು ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ವಿರುದ್ಧ ಜಯ ಗಳಿಸಬೇಕು. ಆಗ ಲಕ್ನೋ ಅವಕಾಶಗಳು ಕಡಿಮೆಯಾಗುತ್ತವೆ. ಒಂದು ವೇಲೆ ಲಕ್ನೋ ಗೆದ್ದಲ್ಲಿ ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋತರೆ ಮುಂಬೈಯನ್ನು ಆರ್‌ಸಿಬಿ ಕೆಳಗೆ ತಳ್ಳಬಹುದಾಗಿದೆ. ಇನ್ನು ಲಕ್ನೋ ಮುಂಬೈ ವಿರುದ್ಧ ಗೆದ್ದರೂ ತನ್ನ ಕೊನೆಯ ಪಂದ್ಯ ಕೋಲ್ಕತ್ತಾ ಎದುರು ಸೋತರೆ ಅದು ಆರ್‌ಸಿಬಿಗೆ ಅನುಕೂಲವಾಗಲಿದೆ.

ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ಎದುರು ಸೋಲಬೇಕಿದೆ. ಆಗ ಆರ್‌ಸಿಬಿ ಪ್ಲೇಆಫ್ ಹಾದಿ ಸುಗಮವಾಗಲಿದೆ.

ರಾಜಸ್ಥಾನ್ ಮತ್ತು ಕೋಲ್ಕತ್ತಾ ತಂಡಗಳು 13 ಪಂದ್ಯಗಳಿಂದ 12 ಅಂಕ ಗಳಿಸಿವೆ. ಅವು ತಮ್ಮ ಕಡೆಯ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ ಆರ್‌ಸಿಬಿ, ಲಕ್ನೋ, ಮುಂಬೈ ತಂಡಗಳು ಸತತವಾಗಿ ಸೋಲಲಿ ಎಂದು ಹಾರೈಸುತ್ತಿವೆ.

ಆರ್‌ಸಿಬಿ ತಂಡವು ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಫಾಫ್ ಡುಪ್ಲೆಸಿ ಮತ್ತು ಮ್ಯಾಕ್ಸ್‌ವೆಲ್ ಬಿಟ್ಟರೆ ಉಳಿದವರು ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗ ಪರಿಣಾಮಕಾರಿ ಪ್ರದರ್ಶನ ನೀಡುತ್ತಿಲ್ಲ. ಉಳಿದ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಕನಸು ಕಾಣಬಹುದಾಗಿದೆ.

ಇದನ್ನೂ ಓದಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...