Homeಸಿನಿಮಾಕ್ರೀಡೆಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 8 ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 7 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಕೆಲವು ತಂಡಗಳು ಸೋಲಬೇಕಿದೆ. ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ.

12 ಪಂದ್ಯಗಳಿಂದ 6 ಜಯ ಮತ್ತು 6 ಸೋಲಿನೊಂದಿಗೆ 12 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 14 ಅಂಕ ಪಡೆದಿರುವ ಮುಂಬೈ 3ನೇ ಸ್ಥಾನದಲ್ಲಿದ್ದರೆ, 13 ಅಂಕ ಪಡೆದಿರುವ ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ನಂತರ ತಲಾ 12 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 6ನೇ, ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಮತ್ತು ಪಂಜಾಬ್ ಕಿಂಗ್ಸ್ 8 ನೇ ಸ್ಥಾನ ಪಡೆದಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 18 ರಂದು ಸನ್‌ರೈಸರ್ಸ್ ಹೈದರಾಬಾದ್ ಎದುರು ಮತ್ತು 21 ರಂದು ಗುಜರಾತ್ ಟೈಟನ್ಸ್ ಎದುರು ಸೆಣಸಲಿದೆ. ಆ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೇ ಇತರ ತಂಡಗಳು ಸೋಲಬೇಕೆಂದು ಆರ್‌ಸಿಬಿ ಕಾದು ನೋಡಬೇಕಿದೆ. ಅವುಗಳೆಂದರೆ

ಮುಂಬೈ ತಂಡವು ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ವಿರುದ್ಧ ಜಯ ಗಳಿಸಬೇಕು. ಆಗ ಲಕ್ನೋ ಅವಕಾಶಗಳು ಕಡಿಮೆಯಾಗುತ್ತವೆ. ಒಂದು ವೇಲೆ ಲಕ್ನೋ ಗೆದ್ದಲ್ಲಿ ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋತರೆ ಮುಂಬೈಯನ್ನು ಆರ್‌ಸಿಬಿ ಕೆಳಗೆ ತಳ್ಳಬಹುದಾಗಿದೆ. ಇನ್ನು ಲಕ್ನೋ ಮುಂಬೈ ವಿರುದ್ಧ ಗೆದ್ದರೂ ತನ್ನ ಕೊನೆಯ ಪಂದ್ಯ ಕೋಲ್ಕತ್ತಾ ಎದುರು ಸೋತರೆ ಅದು ಆರ್‌ಸಿಬಿಗೆ ಅನುಕೂಲವಾಗಲಿದೆ.

ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ಎದುರು ಸೋಲಬೇಕಿದೆ. ಆಗ ಆರ್‌ಸಿಬಿ ಪ್ಲೇಆಫ್ ಹಾದಿ ಸುಗಮವಾಗಲಿದೆ.

ರಾಜಸ್ಥಾನ್ ಮತ್ತು ಕೋಲ್ಕತ್ತಾ ತಂಡಗಳು 13 ಪಂದ್ಯಗಳಿಂದ 12 ಅಂಕ ಗಳಿಸಿವೆ. ಅವು ತಮ್ಮ ಕಡೆಯ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ ಆರ್‌ಸಿಬಿ, ಲಕ್ನೋ, ಮುಂಬೈ ತಂಡಗಳು ಸತತವಾಗಿ ಸೋಲಲಿ ಎಂದು ಹಾರೈಸುತ್ತಿವೆ.

ಆರ್‌ಸಿಬಿ ತಂಡವು ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಫಾಫ್ ಡುಪ್ಲೆಸಿ ಮತ್ತು ಮ್ಯಾಕ್ಸ್‌ವೆಲ್ ಬಿಟ್ಟರೆ ಉಳಿದವರು ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗ ಪರಿಣಾಮಕಾರಿ ಪ್ರದರ್ಶನ ನೀಡುತ್ತಿಲ್ಲ. ಉಳಿದ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಕನಸು ಕಾಣಬಹುದಾಗಿದೆ.

ಇದನ್ನೂ ಓದಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...