Homeಸಿನಿಮಾಕ್ರೀಡೆಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 8 ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 7 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಕೆಲವು ತಂಡಗಳು ಸೋಲಬೇಕಿದೆ. ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ.

12 ಪಂದ್ಯಗಳಿಂದ 6 ಜಯ ಮತ್ತು 6 ಸೋಲಿನೊಂದಿಗೆ 12 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 14 ಅಂಕ ಪಡೆದಿರುವ ಮುಂಬೈ 3ನೇ ಸ್ಥಾನದಲ್ಲಿದ್ದರೆ, 13 ಅಂಕ ಪಡೆದಿರುವ ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ನಂತರ ತಲಾ 12 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 6ನೇ, ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಮತ್ತು ಪಂಜಾಬ್ ಕಿಂಗ್ಸ್ 8 ನೇ ಸ್ಥಾನ ಪಡೆದಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 18 ರಂದು ಸನ್‌ರೈಸರ್ಸ್ ಹೈದರಾಬಾದ್ ಎದುರು ಮತ್ತು 21 ರಂದು ಗುಜರಾತ್ ಟೈಟನ್ಸ್ ಎದುರು ಸೆಣಸಲಿದೆ. ಆ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೇ ಇತರ ತಂಡಗಳು ಸೋಲಬೇಕೆಂದು ಆರ್‌ಸಿಬಿ ಕಾದು ನೋಡಬೇಕಿದೆ. ಅವುಗಳೆಂದರೆ

ಮುಂಬೈ ತಂಡವು ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ವಿರುದ್ಧ ಜಯ ಗಳಿಸಬೇಕು. ಆಗ ಲಕ್ನೋ ಅವಕಾಶಗಳು ಕಡಿಮೆಯಾಗುತ್ತವೆ. ಒಂದು ವೇಲೆ ಲಕ್ನೋ ಗೆದ್ದಲ್ಲಿ ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋತರೆ ಮುಂಬೈಯನ್ನು ಆರ್‌ಸಿಬಿ ಕೆಳಗೆ ತಳ್ಳಬಹುದಾಗಿದೆ. ಇನ್ನು ಲಕ್ನೋ ಮುಂಬೈ ವಿರುದ್ಧ ಗೆದ್ದರೂ ತನ್ನ ಕೊನೆಯ ಪಂದ್ಯ ಕೋಲ್ಕತ್ತಾ ಎದುರು ಸೋತರೆ ಅದು ಆರ್‌ಸಿಬಿಗೆ ಅನುಕೂಲವಾಗಲಿದೆ.

ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ಎದುರು ಸೋಲಬೇಕಿದೆ. ಆಗ ಆರ್‌ಸಿಬಿ ಪ್ಲೇಆಫ್ ಹಾದಿ ಸುಗಮವಾಗಲಿದೆ.

ರಾಜಸ್ಥಾನ್ ಮತ್ತು ಕೋಲ್ಕತ್ತಾ ತಂಡಗಳು 13 ಪಂದ್ಯಗಳಿಂದ 12 ಅಂಕ ಗಳಿಸಿವೆ. ಅವು ತಮ್ಮ ಕಡೆಯ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ ಆರ್‌ಸಿಬಿ, ಲಕ್ನೋ, ಮುಂಬೈ ತಂಡಗಳು ಸತತವಾಗಿ ಸೋಲಲಿ ಎಂದು ಹಾರೈಸುತ್ತಿವೆ.

ಆರ್‌ಸಿಬಿ ತಂಡವು ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಫಾಫ್ ಡುಪ್ಲೆಸಿ ಮತ್ತು ಮ್ಯಾಕ್ಸ್‌ವೆಲ್ ಬಿಟ್ಟರೆ ಉಳಿದವರು ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗ ಪರಿಣಾಮಕಾರಿ ಪ್ರದರ್ಶನ ನೀಡುತ್ತಿಲ್ಲ. ಉಳಿದ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಕನಸು ಕಾಣಬಹುದಾಗಿದೆ.

ಇದನ್ನೂ ಓದಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...