Homeಸಿನಿಮಾಕ್ರೀಡೆಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 8 ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 7 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಕೆಲವು ತಂಡಗಳು ಸೋಲಬೇಕಿದೆ. ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ.

12 ಪಂದ್ಯಗಳಿಂದ 6 ಜಯ ಮತ್ತು 6 ಸೋಲಿನೊಂದಿಗೆ 12 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 14 ಅಂಕ ಪಡೆದಿರುವ ಮುಂಬೈ 3ನೇ ಸ್ಥಾನದಲ್ಲಿದ್ದರೆ, 13 ಅಂಕ ಪಡೆದಿರುವ ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ನಂತರ ತಲಾ 12 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 6ನೇ, ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಮತ್ತು ಪಂಜಾಬ್ ಕಿಂಗ್ಸ್ 8 ನೇ ಸ್ಥಾನ ಪಡೆದಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 18 ರಂದು ಸನ್‌ರೈಸರ್ಸ್ ಹೈದರಾಬಾದ್ ಎದುರು ಮತ್ತು 21 ರಂದು ಗುಜರಾತ್ ಟೈಟನ್ಸ್ ಎದುರು ಸೆಣಸಲಿದೆ. ಆ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೇ ಇತರ ತಂಡಗಳು ಸೋಲಬೇಕೆಂದು ಆರ್‌ಸಿಬಿ ಕಾದು ನೋಡಬೇಕಿದೆ. ಅವುಗಳೆಂದರೆ

ಮುಂಬೈ ತಂಡವು ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ವಿರುದ್ಧ ಜಯ ಗಳಿಸಬೇಕು. ಆಗ ಲಕ್ನೋ ಅವಕಾಶಗಳು ಕಡಿಮೆಯಾಗುತ್ತವೆ. ಒಂದು ವೇಲೆ ಲಕ್ನೋ ಗೆದ್ದಲ್ಲಿ ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋತರೆ ಮುಂಬೈಯನ್ನು ಆರ್‌ಸಿಬಿ ಕೆಳಗೆ ತಳ್ಳಬಹುದಾಗಿದೆ. ಇನ್ನು ಲಕ್ನೋ ಮುಂಬೈ ವಿರುದ್ಧ ಗೆದ್ದರೂ ತನ್ನ ಕೊನೆಯ ಪಂದ್ಯ ಕೋಲ್ಕತ್ತಾ ಎದುರು ಸೋತರೆ ಅದು ಆರ್‌ಸಿಬಿಗೆ ಅನುಕೂಲವಾಗಲಿದೆ.

ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ಎದುರು ಸೋಲಬೇಕಿದೆ. ಆಗ ಆರ್‌ಸಿಬಿ ಪ್ಲೇಆಫ್ ಹಾದಿ ಸುಗಮವಾಗಲಿದೆ.

ರಾಜಸ್ಥಾನ್ ಮತ್ತು ಕೋಲ್ಕತ್ತಾ ತಂಡಗಳು 13 ಪಂದ್ಯಗಳಿಂದ 12 ಅಂಕ ಗಳಿಸಿವೆ. ಅವು ತಮ್ಮ ಕಡೆಯ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ ಆರ್‌ಸಿಬಿ, ಲಕ್ನೋ, ಮುಂಬೈ ತಂಡಗಳು ಸತತವಾಗಿ ಸೋಲಲಿ ಎಂದು ಹಾರೈಸುತ್ತಿವೆ.

ಆರ್‌ಸಿಬಿ ತಂಡವು ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಫಾಫ್ ಡುಪ್ಲೆಸಿ ಮತ್ತು ಮ್ಯಾಕ್ಸ್‌ವೆಲ್ ಬಿಟ್ಟರೆ ಉಳಿದವರು ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗ ಪರಿಣಾಮಕಾರಿ ಪ್ರದರ್ಶನ ನೀಡುತ್ತಿಲ್ಲ. ಉಳಿದ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಕನಸು ಕಾಣಬಹುದಾಗಿದೆ.

ಇದನ್ನೂ ಓದಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...