Homeಸಿನಿಮಾಕ್ರೀಡೆಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 8 ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 7 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಕೆಲವು ತಂಡಗಳು ಸೋಲಬೇಕಿದೆ. ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ.

12 ಪಂದ್ಯಗಳಿಂದ 6 ಜಯ ಮತ್ತು 6 ಸೋಲಿನೊಂದಿಗೆ 12 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 14 ಅಂಕ ಪಡೆದಿರುವ ಮುಂಬೈ 3ನೇ ಸ್ಥಾನದಲ್ಲಿದ್ದರೆ, 13 ಅಂಕ ಪಡೆದಿರುವ ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ನಂತರ ತಲಾ 12 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 6ನೇ, ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಮತ್ತು ಪಂಜಾಬ್ ಕಿಂಗ್ಸ್ 8 ನೇ ಸ್ಥಾನ ಪಡೆದಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 18 ರಂದು ಸನ್‌ರೈಸರ್ಸ್ ಹೈದರಾಬಾದ್ ಎದುರು ಮತ್ತು 21 ರಂದು ಗುಜರಾತ್ ಟೈಟನ್ಸ್ ಎದುರು ಸೆಣಸಲಿದೆ. ಆ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೇ ಇತರ ತಂಡಗಳು ಸೋಲಬೇಕೆಂದು ಆರ್‌ಸಿಬಿ ಕಾದು ನೋಡಬೇಕಿದೆ. ಅವುಗಳೆಂದರೆ

ಮುಂಬೈ ತಂಡವು ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ವಿರುದ್ಧ ಜಯ ಗಳಿಸಬೇಕು. ಆಗ ಲಕ್ನೋ ಅವಕಾಶಗಳು ಕಡಿಮೆಯಾಗುತ್ತವೆ. ಒಂದು ವೇಲೆ ಲಕ್ನೋ ಗೆದ್ದಲ್ಲಿ ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋತರೆ ಮುಂಬೈಯನ್ನು ಆರ್‌ಸಿಬಿ ಕೆಳಗೆ ತಳ್ಳಬಹುದಾಗಿದೆ. ಇನ್ನು ಲಕ್ನೋ ಮುಂಬೈ ವಿರುದ್ಧ ಗೆದ್ದರೂ ತನ್ನ ಕೊನೆಯ ಪಂದ್ಯ ಕೋಲ್ಕತ್ತಾ ಎದುರು ಸೋತರೆ ಅದು ಆರ್‌ಸಿಬಿಗೆ ಅನುಕೂಲವಾಗಲಿದೆ.

ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ಎದುರು ಸೋಲಬೇಕಿದೆ. ಆಗ ಆರ್‌ಸಿಬಿ ಪ್ಲೇಆಫ್ ಹಾದಿ ಸುಗಮವಾಗಲಿದೆ.

ರಾಜಸ್ಥಾನ್ ಮತ್ತು ಕೋಲ್ಕತ್ತಾ ತಂಡಗಳು 13 ಪಂದ್ಯಗಳಿಂದ 12 ಅಂಕ ಗಳಿಸಿವೆ. ಅವು ತಮ್ಮ ಕಡೆಯ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ ಆರ್‌ಸಿಬಿ, ಲಕ್ನೋ, ಮುಂಬೈ ತಂಡಗಳು ಸತತವಾಗಿ ಸೋಲಲಿ ಎಂದು ಹಾರೈಸುತ್ತಿವೆ.

ಆರ್‌ಸಿಬಿ ತಂಡವು ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಫಾಫ್ ಡುಪ್ಲೆಸಿ ಮತ್ತು ಮ್ಯಾಕ್ಸ್‌ವೆಲ್ ಬಿಟ್ಟರೆ ಉಳಿದವರು ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗ ಪರಿಣಾಮಕಾರಿ ಪ್ರದರ್ಶನ ನೀಡುತ್ತಿಲ್ಲ. ಉಳಿದ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಕನಸು ಕಾಣಬಹುದಾಗಿದೆ.

ಇದನ್ನೂ ಓದಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...