Homeಸಿನಿಮಾಕ್ರೀಡೆಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 8 ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 7 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಕೆಲವು ತಂಡಗಳು ಸೋಲಬೇಕಿದೆ. ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ.

12 ಪಂದ್ಯಗಳಿಂದ 6 ಜಯ ಮತ್ತು 6 ಸೋಲಿನೊಂದಿಗೆ 12 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 14 ಅಂಕ ಪಡೆದಿರುವ ಮುಂಬೈ 3ನೇ ಸ್ಥಾನದಲ್ಲಿದ್ದರೆ, 13 ಅಂಕ ಪಡೆದಿರುವ ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ನಂತರ ತಲಾ 12 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 6ನೇ, ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಮತ್ತು ಪಂಜಾಬ್ ಕಿಂಗ್ಸ್ 8 ನೇ ಸ್ಥಾನ ಪಡೆದಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 18 ರಂದು ಸನ್‌ರೈಸರ್ಸ್ ಹೈದರಾಬಾದ್ ಎದುರು ಮತ್ತು 21 ರಂದು ಗುಜರಾತ್ ಟೈಟನ್ಸ್ ಎದುರು ಸೆಣಸಲಿದೆ. ಆ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೇ ಇತರ ತಂಡಗಳು ಸೋಲಬೇಕೆಂದು ಆರ್‌ಸಿಬಿ ಕಾದು ನೋಡಬೇಕಿದೆ. ಅವುಗಳೆಂದರೆ

ಮುಂಬೈ ತಂಡವು ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ವಿರುದ್ಧ ಜಯ ಗಳಿಸಬೇಕು. ಆಗ ಲಕ್ನೋ ಅವಕಾಶಗಳು ಕಡಿಮೆಯಾಗುತ್ತವೆ. ಒಂದು ವೇಲೆ ಲಕ್ನೋ ಗೆದ್ದಲ್ಲಿ ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋತರೆ ಮುಂಬೈಯನ್ನು ಆರ್‌ಸಿಬಿ ಕೆಳಗೆ ತಳ್ಳಬಹುದಾಗಿದೆ. ಇನ್ನು ಲಕ್ನೋ ಮುಂಬೈ ವಿರುದ್ಧ ಗೆದ್ದರೂ ತನ್ನ ಕೊನೆಯ ಪಂದ್ಯ ಕೋಲ್ಕತ್ತಾ ಎದುರು ಸೋತರೆ ಅದು ಆರ್‌ಸಿಬಿಗೆ ಅನುಕೂಲವಾಗಲಿದೆ.

ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ಎದುರು ಸೋಲಬೇಕಿದೆ. ಆಗ ಆರ್‌ಸಿಬಿ ಪ್ಲೇಆಫ್ ಹಾದಿ ಸುಗಮವಾಗಲಿದೆ.

ರಾಜಸ್ಥಾನ್ ಮತ್ತು ಕೋಲ್ಕತ್ತಾ ತಂಡಗಳು 13 ಪಂದ್ಯಗಳಿಂದ 12 ಅಂಕ ಗಳಿಸಿವೆ. ಅವು ತಮ್ಮ ಕಡೆಯ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ ಆರ್‌ಸಿಬಿ, ಲಕ್ನೋ, ಮುಂಬೈ ತಂಡಗಳು ಸತತವಾಗಿ ಸೋಲಲಿ ಎಂದು ಹಾರೈಸುತ್ತಿವೆ.

ಆರ್‌ಸಿಬಿ ತಂಡವು ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಫಾಫ್ ಡುಪ್ಲೆಸಿ ಮತ್ತು ಮ್ಯಾಕ್ಸ್‌ವೆಲ್ ಬಿಟ್ಟರೆ ಉಳಿದವರು ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗ ಪರಿಣಾಮಕಾರಿ ಪ್ರದರ್ಶನ ನೀಡುತ್ತಿಲ್ಲ. ಉಳಿದ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಕನಸು ಕಾಣಬಹುದಾಗಿದೆ.

ಇದನ್ನೂ ಓದಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...