Homeಸಿನಿಮಾಕ್ರೀಡೆಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 8 ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 7 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಕೆಲವು ತಂಡಗಳು ಸೋಲಬೇಕಿದೆ. ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ.

12 ಪಂದ್ಯಗಳಿಂದ 6 ಜಯ ಮತ್ತು 6 ಸೋಲಿನೊಂದಿಗೆ 12 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 14 ಅಂಕ ಪಡೆದಿರುವ ಮುಂಬೈ 3ನೇ ಸ್ಥಾನದಲ್ಲಿದ್ದರೆ, 13 ಅಂಕ ಪಡೆದಿರುವ ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ನಂತರ ತಲಾ 12 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 6ನೇ, ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಮತ್ತು ಪಂಜಾಬ್ ಕಿಂಗ್ಸ್ 8 ನೇ ಸ್ಥಾನ ಪಡೆದಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 18 ರಂದು ಸನ್‌ರೈಸರ್ಸ್ ಹೈದರಾಬಾದ್ ಎದುರು ಮತ್ತು 21 ರಂದು ಗುಜರಾತ್ ಟೈಟನ್ಸ್ ಎದುರು ಸೆಣಸಲಿದೆ. ಆ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೇ ಇತರ ತಂಡಗಳು ಸೋಲಬೇಕೆಂದು ಆರ್‌ಸಿಬಿ ಕಾದು ನೋಡಬೇಕಿದೆ. ಅವುಗಳೆಂದರೆ

ಮುಂಬೈ ತಂಡವು ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ವಿರುದ್ಧ ಜಯ ಗಳಿಸಬೇಕು. ಆಗ ಲಕ್ನೋ ಅವಕಾಶಗಳು ಕಡಿಮೆಯಾಗುತ್ತವೆ. ಒಂದು ವೇಲೆ ಲಕ್ನೋ ಗೆದ್ದಲ್ಲಿ ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋತರೆ ಮುಂಬೈಯನ್ನು ಆರ್‌ಸಿಬಿ ಕೆಳಗೆ ತಳ್ಳಬಹುದಾಗಿದೆ. ಇನ್ನು ಲಕ್ನೋ ಮುಂಬೈ ವಿರುದ್ಧ ಗೆದ್ದರೂ ತನ್ನ ಕೊನೆಯ ಪಂದ್ಯ ಕೋಲ್ಕತ್ತಾ ಎದುರು ಸೋತರೆ ಅದು ಆರ್‌ಸಿಬಿಗೆ ಅನುಕೂಲವಾಗಲಿದೆ.

ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ಎದುರು ಸೋಲಬೇಕಿದೆ. ಆಗ ಆರ್‌ಸಿಬಿ ಪ್ಲೇಆಫ್ ಹಾದಿ ಸುಗಮವಾಗಲಿದೆ.

ರಾಜಸ್ಥಾನ್ ಮತ್ತು ಕೋಲ್ಕತ್ತಾ ತಂಡಗಳು 13 ಪಂದ್ಯಗಳಿಂದ 12 ಅಂಕ ಗಳಿಸಿವೆ. ಅವು ತಮ್ಮ ಕಡೆಯ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ ಆರ್‌ಸಿಬಿ, ಲಕ್ನೋ, ಮುಂಬೈ ತಂಡಗಳು ಸತತವಾಗಿ ಸೋಲಲಿ ಎಂದು ಹಾರೈಸುತ್ತಿವೆ.

ಆರ್‌ಸಿಬಿ ತಂಡವು ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಫಾಫ್ ಡುಪ್ಲೆಸಿ ಮತ್ತು ಮ್ಯಾಕ್ಸ್‌ವೆಲ್ ಬಿಟ್ಟರೆ ಉಳಿದವರು ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗ ಪರಿಣಾಮಕಾರಿ ಪ್ರದರ್ಶನ ನೀಡುತ್ತಿಲ್ಲ. ಉಳಿದ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಕನಸು ಕಾಣಬಹುದಾಗಿದೆ.

ಇದನ್ನೂ ಓದಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...