Homeಸಿನಿಮಾಕ್ರೀಡೆಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 8 ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 7 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಕೆಲವು ತಂಡಗಳು ಸೋಲಬೇಕಿದೆ. ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ.

12 ಪಂದ್ಯಗಳಿಂದ 6 ಜಯ ಮತ್ತು 6 ಸೋಲಿನೊಂದಿಗೆ 12 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 14 ಅಂಕ ಪಡೆದಿರುವ ಮುಂಬೈ 3ನೇ ಸ್ಥಾನದಲ್ಲಿದ್ದರೆ, 13 ಅಂಕ ಪಡೆದಿರುವ ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ನಂತರ ತಲಾ 12 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 6ನೇ, ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಮತ್ತು ಪಂಜಾಬ್ ಕಿಂಗ್ಸ್ 8 ನೇ ಸ್ಥಾನ ಪಡೆದಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 18 ರಂದು ಸನ್‌ರೈಸರ್ಸ್ ಹೈದರಾಬಾದ್ ಎದುರು ಮತ್ತು 21 ರಂದು ಗುಜರಾತ್ ಟೈಟನ್ಸ್ ಎದುರು ಸೆಣಸಲಿದೆ. ಆ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೇ ಇತರ ತಂಡಗಳು ಸೋಲಬೇಕೆಂದು ಆರ್‌ಸಿಬಿ ಕಾದು ನೋಡಬೇಕಿದೆ. ಅವುಗಳೆಂದರೆ

ಮುಂಬೈ ತಂಡವು ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ವಿರುದ್ಧ ಜಯ ಗಳಿಸಬೇಕು. ಆಗ ಲಕ್ನೋ ಅವಕಾಶಗಳು ಕಡಿಮೆಯಾಗುತ್ತವೆ. ಒಂದು ವೇಲೆ ಲಕ್ನೋ ಗೆದ್ದಲ್ಲಿ ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋತರೆ ಮುಂಬೈಯನ್ನು ಆರ್‌ಸಿಬಿ ಕೆಳಗೆ ತಳ್ಳಬಹುದಾಗಿದೆ. ಇನ್ನು ಲಕ್ನೋ ಮುಂಬೈ ವಿರುದ್ಧ ಗೆದ್ದರೂ ತನ್ನ ಕೊನೆಯ ಪಂದ್ಯ ಕೋಲ್ಕತ್ತಾ ಎದುರು ಸೋತರೆ ಅದು ಆರ್‌ಸಿಬಿಗೆ ಅನುಕೂಲವಾಗಲಿದೆ.

ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ಎದುರು ಸೋಲಬೇಕಿದೆ. ಆಗ ಆರ್‌ಸಿಬಿ ಪ್ಲೇಆಫ್ ಹಾದಿ ಸುಗಮವಾಗಲಿದೆ.

ರಾಜಸ್ಥಾನ್ ಮತ್ತು ಕೋಲ್ಕತ್ತಾ ತಂಡಗಳು 13 ಪಂದ್ಯಗಳಿಂದ 12 ಅಂಕ ಗಳಿಸಿವೆ. ಅವು ತಮ್ಮ ಕಡೆಯ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ ಆರ್‌ಸಿಬಿ, ಲಕ್ನೋ, ಮುಂಬೈ ತಂಡಗಳು ಸತತವಾಗಿ ಸೋಲಲಿ ಎಂದು ಹಾರೈಸುತ್ತಿವೆ.

ಆರ್‌ಸಿಬಿ ತಂಡವು ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಫಾಫ್ ಡುಪ್ಲೆಸಿ ಮತ್ತು ಮ್ಯಾಕ್ಸ್‌ವೆಲ್ ಬಿಟ್ಟರೆ ಉಳಿದವರು ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗ ಪರಿಣಾಮಕಾರಿ ಪ್ರದರ್ಶನ ನೀಡುತ್ತಿಲ್ಲ. ಉಳಿದ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಕನಸು ಕಾಣಬಹುದಾಗಿದೆ.

ಇದನ್ನೂ ಓದಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...