HomeಎಕಾನಮಿRCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

RCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

- Advertisement -
- Advertisement -

ಈ ಕೆಳಗಿನ ಟೇಬಲುಗಳನ್ನು ಗಮನಿಸಿ. ಮೊದಲನೇ ಟೇಬಲಿನಲ್ಲಿ ಭಾರತ RCEPಯ ದೇಶಗಳಲ್ಲಿ ಯಾವ್ಯಾವ ದೇಶದ ಜೊತೆ ಎಷ್ಟೆಷ್ಟು ವ್ಯಾಪಾರದ ಕೊರತೆ ಹೊಂದಿದೆ (2018-19 ರಲ್ಲಿ) ಎಂಬ ಅಂಕಿಅಂಶಗಳಿವೆ. ಎರಡನೇ ಟೇಬಲಿನಲ್ಲಿ ಯಾವ್ಯಾವ ಉತ್ಪನ್ನಗಳನ್ನು ಎಷ್ಟೆಷ್ಟು ರಫ್ತು ಮಾಡುತ್ತಿದೆ ಮತ್ತು ಆಮದು ಮಾಡಿಕೊಳ್ಳುತ್ತಿದೆ ಎಂಬ (2018-19 ರಲ್ಲಿ) ಅಂಕಿಅಂಶಗಳಿವೆ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಈ ಟೇಬಲನ್ನು ನೋಡಿ. ಭಾರತ RCEPಯ ಕೇವಲ ನಾಲ್ಕು ದೇಶಗಳನ್ನು ಲಾವೋಸ್, ಕಾಂಬೋಡಿಯಾ, ಮಯನ್ಮಾರ್ ಮತ್ತು ಫಿಲಿಪೀನ್ಸ್ ಬಿಟ್ಟು ಇತರ ಹನ್ನೊಂದು ದೇಶಗಳ ಜೊತೆಗೆ ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಒಟ್ಟಾರೆಯಾಗಿ 2018-19 ರಲ್ಲಿ, ಈ ದೇಶಗಳಿಂದ 172.93 ಬಿಲಿಯನ್ ಡಾಲರುಗಳಷ್ಟು ಸರಕು ಸೇವೆಗಳನ್ನು ಆಮದು ಮಾಡಿಕೊಂಡಿದ್ದು, 67.69 ಬಿಲಿಯನ್ ಡಾಲರುಗಳಷ್ಟನ್ನು ಮಾತ್ರ ಈ ದೇಶಗಳಿಗೆ ರಫ್ತು ಮಾಡಿದೆ. ಹಾಗಾಗಿ ಭಾರತ, ಒಟ್ಟು 105.24 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆಯನ್ನು ಈ ದೇಶಗಳ ಜೊತೆ ಹೊಂದಿದೆ.

ಹಾಗೆಯೇ ಭಾರತ ತನ್ನ ಒಟ್ಟು ಆಮದಿನಲ್ಲಿ (508 ಬಿಲಿಯನ್ ಡಾಲರುಗಳು) ಶೇಕಡಾ 34 ರಷ್ಟನ್ನು (172.93 ಬಿಲಿಯನ್ ಡಾಲರುಗಳು) RCEP ದೇಶಗಳಿಂದ ಮಾಡಿಕೊಳ್ಳುತ್ತಿದೆ. ತನ್ನ ಒಟ್ಟು ರಫ್ತಿನಲ್ಲಿ (322 ಬಿಲಿಯನ್ ಡಾಲರುಗಳು) ಶೇಕಡಾ 21 ರಷ್ಟನ್ನು (67.69 ಬಿಲಿಯನ್ ಡಾಲರುಗಳು) ಈ RCEP ದೇಶಗಳಿಗೆ ಮಾಡುತ್ತಿದೆ.

ಒಟ್ಟಾಗಿ ಭಾರತ ಜಗತ್ತಿನ ದೇಶಗಳೊಡನೆ 2018-19 ರಲ್ಲಿ ಒಟ್ಟು 186 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಇದೇ ಟೇಬಲಿನಲ್ಲಿ ಭಾರತ ಚೀನಾ ಜೊತೆ ಹೊಂದಿರುವ 53.5 ಬಿಲಿಯನ್ ಡಾಲರುಗಳಷ್ಟು ಭಾರೀ ವ್ಯಾಪಾರದ ಕೊರತೆಯನ್ನು ಗಮನಿಸಿ. ಜೊತೆಗೆ ಇಂಡೋನೇಷಿಯ, ಮಲೇಷ್ಯಾ, ಥೈಲಾಂಡಿನಂಥ ದೇಶಗಳ ಜತೆಗಿನ ವ್ಯಾಪಾರದ ಕೊರತೆಯನ್ನೂ ನೋಡಿ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಇನ್ನು ಎರಡನೇ ಟೇಬಲನ್ನು ಗಮನಿಸಿದಾಗ ಭಾರತ ವ್ಯವಸಾಯೋತ್ಪನ್ನಗಳು, ಟೆಕ್ಟ್ಸ್ಟೈಲ್ಸ್, ಮುತ್ತು ಮತ್ತು ಆಭರಣಗಳನ್ನು ಬಿಟ್ಟು ಉಳಿದೆಲ್ಲ ಉತ್ಪನ್ನಗಳಲ್ಲೂ ಇತರ ದೇಶಗಳ ಜತೆ ವ್ಯಾಪಾರ ಕೊರತೆ ಎದುರಿಸುತ್ತಿದೆ. ಮೇಲಿನ ಮೂರೇ ಮೂರು ಉತ್ಪನ್ನಗಳಲ್ಲಿ ಭಾರತ ಹೆಚ್ಚುವರಿ ವ್ಯಾಪಾರ ಹೊಂದಿದ್ದರೂ ಆಮದು ರಫ್ತಿನ ಅಂತರ ತುಂಬ ಕಡಿಮೆಯಿರುವುದು ಕಾಣುತ್ತದೆ. ಅದರರ್ಥ RCEP ಬಂದರೆ ಈ ಮೂರು ಉತ್ಪನ್ನಗಳಲ್ಲೂ ಭಾರತ ಕೊರತೆ ಎದುರಿಸಬೇಕಾಗುತ್ತದೆ. ಜೊತೆಗೆ, ತಯಾರಿಕಾ ಉತ್ಪನ್ನಗಳು (manufacturing goods), ಎಲೆಕ್ಟ್ರಾನಿಕ್ ಗೂಡ್ಸ್, ಕೆಮಿಕಲ್ಸ್ ಯಾವುದನ್ನೇ ನೋಡಿದರೂ ಭಾರತ RCEP ದೇಶಗಳ ಜತೆ ಭಾರೀ ವ್ಯಾಪಾರದ ಕೊರತೆ ಹೊಂದಿದೆ.

ಹೀಗೆ ನಾವು ನೋಡಿದಾಗ ಭಾರತ ತಾನು ವಿವಿಧ ಉತ್ಪನ್ನಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುವುದಕ್ಕಿಂತ ಮೂರು ಪಟ್ಟು ಹೆಚ್ಚಿಗೆ ಬೇರೆ ದೇಶದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿರುವುದು ನಮಗೆ ಗೊತ್ತಾಗುತ್ತದೆ.

ಇನ್ನು ಇಂಥಾ ಪರಿಸ್ಥಿತಿಯಲ್ಲಿ RCEP ಗೆ ಸಹಿ ಹಾಕಿದರೆ ಈ ವ್ಯಾಪಾರ ಕೊರತೆ ಮತ್ತಷ್ಟು ಹೆಚ್ಚಿ ಭಾರತ ಹೊರದೇಶಗಳ ಉತ್ಪನ್ನಗಳಿಗೆ ಇನ್ನೂ ದೊಡ್ಡ ಮಾರುಕಟ್ಟೆಯಾಗುವುದು ಖಚಿತ.

ಹೀಗೆ ತಾನಿನ್ನೂ ಇತರೆ ಸದಸ್ಯ ದೇಶಗಳ ಜತೆ ಸ್ಪರ್ಧಾತ್ಮಕತೆಯಲ್ಲಿ ಹಿಂದೆ ಬಿದ್ದಿರುವುದರಿಂದ ಭಾರತ ಸರ್ಕಾರ ಅಂದರೆ ಪ್ರಧಾನಿ ಮೋದಿಯವರು (ಈಗ ಸರ್ಕಾರ ಅಂದರೆ ಮೋದಿ ಅನ್ನುವಂತಾಗಿದೆ) ಈಗ ಸದ್ಯಕ್ಕೆ RCEPಗೆ ಸಹಿ ಹಾಕಲು ನಿರಾಕರಿಸಿದ್ದಾರೆಯೇ ಎಂದು ನೋಡಿದರೆ ವಾಸ್ತವ ಹಾಗೆ ಕಾಣಿಸುವುದಿಲ್ಲ.

ಯಾಕೆಂದರೆ, ಇವತ್ತಿಗೂ ಖಅಇPಯ ಯಾವ್ಯಾವ ನಿಯಮಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಒಪ್ಪಿಗೆಯಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ನಮ್ಮ ನಾಗರಿಕರಿಗಾಗಲೀ ಅಥವಾ ಕನಿಷ್ಟ ನಮ್ಮ ಸಂಸದರಿಗಾಗಲೀ ಏನನ್ನೂ ತಿಳಿಸಿಲ್ಲ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು

ನಮ್ಮ ದೇಶದ ಹಲವಾರು ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ಹಲವು ಜನಪರ ಗುಂಪುಗಳು RCEP ಯ ಬಗ್ಗೆ ಜನರನ್ನು ಎಚ್ಚರಿಸಿ ಹಲವು ಪ್ರತಿಭಟನೆಗಳ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಿದ್ದು ಸರ್ಕಾರ RCEP ಗೆ ಸಹಿ ಹಾಕದಿರಲು ಮುಖ್ಯ ಕಾರಣ.

ಹಾಗೆಯೇ, ಹಲವು ಸಣ್ಣ ಹಾಗೂ ಮಧ್ಯಮ ಗಾತ್ರದ ಕೈಗಾರಿಕಾ ಸಂಘಟನೆಗಳು, ಆಟೋಮೋಬೈಲ್ ಉದ್ದಿಮೆಯ ಸಂಘಟನೆಗಳು, ಟೆಕ್ಟ್ಸ್ಟೈಲ್ ಉದ್ದಿಮೆ ಸಂಘಟನೆಗಳು ಸರ್ಕಾರದ ಮೇಲೆ ಹಾಕಿದ ಒತ್ತಡವೂ ಸರ್ಕಾರ ಈಗ RCEP ಗೆ ಸಹಿ ಹಾಕದಂತೆ ತಡೆದಿದೆ.

ಆದರೆ ಈಗಾಗಲೇ CII ( Confederation of Indian Industries) ಮುಂದೆ ಭಾರತ RCEPಗೆ ಸಹಿ ಹಾಕಬೇಕಾಗುತ್ತದೆ ಎಂದು ಹೇಳಿದೆ. ಯಾಕೆಂದರೆ ಈ RCEP ಯಿಂದ ರೈತರಿಗೆ ಮತ್ತು ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ತೊಂದರೆಯಾಗುತ್ತದೆಯೇ ಹೊರತು ಬೃಹತ್ ಉದ್ಯಮಿಗಳಿಗೆ RCEP ಯಲ್ಲಿ ಲಾಭವೇ ಆಗುತ್ತದೆ. ಯಾಕೆಂದರೆ ರಿಲಯನ್ಸ್, ಅದಾನಿಯಂತಹ ಉದ್ಯಮಿಗಳು RCEP ಯ ಯಾವ ದೇಶದಲ್ಲಿ ಅನುಕೂಲವಿದೆಯೋ ಅಲ್ಲಿಯೇ ತಮ್ಮ ಉತ್ಪಾದನಾ ಘಟಕ ಸ್ಥಾಪಿಸಿ ಅಲ್ಲಿಂದಲೇ ಭಾರತ ಮತ್ತು ಇತರೆ ದೇಶಗಳಿಗೆ ರಫ್ತು ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅಥವಾ ಬೇರೆ ದೇಶಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಭಾರತದಲ್ಲಿ ಲಾಭಕ್ಕೆ ಮಾರಿ ಮಾರುಕಟ್ಟೆ ಏಕಸ್ವಾಮ್ಯ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ.

ಈ ರೀತಿಯ ಬೃಹತ್ ಉದ್ದಿಮೆಗಳ ಒತ್ತಡ ಮತ್ತು ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ( ಬಹುಶಃ ಇನ್ನು ಮೂರು ತಿಂಗಳುಗಳಲ್ಲಿ – ಫೆಬ್ರವರಿ 2020) RCEP ಗೆ ಸಹಿ ಹಾಕುವ ಸಾಧ್ಯತೆ ದಟ್ಟವಾಗಿದೆ. ಹಾಗೂ ಅದಕ್ಕೆ ಪೂರಕವಾಗಿ ಜನಾಭಿಪ್ರಾಯ ರೂಪಿಸುವ ಕೆಲಸವೂ ಸದ್ದಿಲ್ಲದೆ ನಡೆಯುವ ಸಾಧ್ಯತೆಗಳೂ ಇವೆ.

ಆದುದರಿಂದ, ಈ ತಾತ್ಕಾಲಿಕ ಜಯದಲ್ಲಿ ಮೈಮರೆಯದೆ ಈ ದೇಶದ ರೈತರು, ಕಾರ್ಮಿಕರು, ಪತ್ರಕರ್ತರು, ಬರಹಗಾರರು, ಕಲಾವಿದರು ಒಟ್ಟಾರೆ ಈ ದೇಶದ ಬಗ್ಗೆ ಕಳಕಳಿ ಇರುವವರೆಲ್ಲರೂ ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...