HomeಎಕಾನಮಿRCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

RCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

- Advertisement -
- Advertisement -

ಈ ಕೆಳಗಿನ ಟೇಬಲುಗಳನ್ನು ಗಮನಿಸಿ. ಮೊದಲನೇ ಟೇಬಲಿನಲ್ಲಿ ಭಾರತ RCEPಯ ದೇಶಗಳಲ್ಲಿ ಯಾವ್ಯಾವ ದೇಶದ ಜೊತೆ ಎಷ್ಟೆಷ್ಟು ವ್ಯಾಪಾರದ ಕೊರತೆ ಹೊಂದಿದೆ (2018-19 ರಲ್ಲಿ) ಎಂಬ ಅಂಕಿಅಂಶಗಳಿವೆ. ಎರಡನೇ ಟೇಬಲಿನಲ್ಲಿ ಯಾವ್ಯಾವ ಉತ್ಪನ್ನಗಳನ್ನು ಎಷ್ಟೆಷ್ಟು ರಫ್ತು ಮಾಡುತ್ತಿದೆ ಮತ್ತು ಆಮದು ಮಾಡಿಕೊಳ್ಳುತ್ತಿದೆ ಎಂಬ (2018-19 ರಲ್ಲಿ) ಅಂಕಿಅಂಶಗಳಿವೆ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಈ ಟೇಬಲನ್ನು ನೋಡಿ. ಭಾರತ RCEPಯ ಕೇವಲ ನಾಲ್ಕು ದೇಶಗಳನ್ನು ಲಾವೋಸ್, ಕಾಂಬೋಡಿಯಾ, ಮಯನ್ಮಾರ್ ಮತ್ತು ಫಿಲಿಪೀನ್ಸ್ ಬಿಟ್ಟು ಇತರ ಹನ್ನೊಂದು ದೇಶಗಳ ಜೊತೆಗೆ ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಒಟ್ಟಾರೆಯಾಗಿ 2018-19 ರಲ್ಲಿ, ಈ ದೇಶಗಳಿಂದ 172.93 ಬಿಲಿಯನ್ ಡಾಲರುಗಳಷ್ಟು ಸರಕು ಸೇವೆಗಳನ್ನು ಆಮದು ಮಾಡಿಕೊಂಡಿದ್ದು, 67.69 ಬಿಲಿಯನ್ ಡಾಲರುಗಳಷ್ಟನ್ನು ಮಾತ್ರ ಈ ದೇಶಗಳಿಗೆ ರಫ್ತು ಮಾಡಿದೆ. ಹಾಗಾಗಿ ಭಾರತ, ಒಟ್ಟು 105.24 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆಯನ್ನು ಈ ದೇಶಗಳ ಜೊತೆ ಹೊಂದಿದೆ.

ಹಾಗೆಯೇ ಭಾರತ ತನ್ನ ಒಟ್ಟು ಆಮದಿನಲ್ಲಿ (508 ಬಿಲಿಯನ್ ಡಾಲರುಗಳು) ಶೇಕಡಾ 34 ರಷ್ಟನ್ನು (172.93 ಬಿಲಿಯನ್ ಡಾಲರುಗಳು) RCEP ದೇಶಗಳಿಂದ ಮಾಡಿಕೊಳ್ಳುತ್ತಿದೆ. ತನ್ನ ಒಟ್ಟು ರಫ್ತಿನಲ್ಲಿ (322 ಬಿಲಿಯನ್ ಡಾಲರುಗಳು) ಶೇಕಡಾ 21 ರಷ್ಟನ್ನು (67.69 ಬಿಲಿಯನ್ ಡಾಲರುಗಳು) ಈ RCEP ದೇಶಗಳಿಗೆ ಮಾಡುತ್ತಿದೆ.

ಒಟ್ಟಾಗಿ ಭಾರತ ಜಗತ್ತಿನ ದೇಶಗಳೊಡನೆ 2018-19 ರಲ್ಲಿ ಒಟ್ಟು 186 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಇದೇ ಟೇಬಲಿನಲ್ಲಿ ಭಾರತ ಚೀನಾ ಜೊತೆ ಹೊಂದಿರುವ 53.5 ಬಿಲಿಯನ್ ಡಾಲರುಗಳಷ್ಟು ಭಾರೀ ವ್ಯಾಪಾರದ ಕೊರತೆಯನ್ನು ಗಮನಿಸಿ. ಜೊತೆಗೆ ಇಂಡೋನೇಷಿಯ, ಮಲೇಷ್ಯಾ, ಥೈಲಾಂಡಿನಂಥ ದೇಶಗಳ ಜತೆಗಿನ ವ್ಯಾಪಾರದ ಕೊರತೆಯನ್ನೂ ನೋಡಿ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಇನ್ನು ಎರಡನೇ ಟೇಬಲನ್ನು ಗಮನಿಸಿದಾಗ ಭಾರತ ವ್ಯವಸಾಯೋತ್ಪನ್ನಗಳು, ಟೆಕ್ಟ್ಸ್ಟೈಲ್ಸ್, ಮುತ್ತು ಮತ್ತು ಆಭರಣಗಳನ್ನು ಬಿಟ್ಟು ಉಳಿದೆಲ್ಲ ಉತ್ಪನ್ನಗಳಲ್ಲೂ ಇತರ ದೇಶಗಳ ಜತೆ ವ್ಯಾಪಾರ ಕೊರತೆ ಎದುರಿಸುತ್ತಿದೆ. ಮೇಲಿನ ಮೂರೇ ಮೂರು ಉತ್ಪನ್ನಗಳಲ್ಲಿ ಭಾರತ ಹೆಚ್ಚುವರಿ ವ್ಯಾಪಾರ ಹೊಂದಿದ್ದರೂ ಆಮದು ರಫ್ತಿನ ಅಂತರ ತುಂಬ ಕಡಿಮೆಯಿರುವುದು ಕಾಣುತ್ತದೆ. ಅದರರ್ಥ RCEP ಬಂದರೆ ಈ ಮೂರು ಉತ್ಪನ್ನಗಳಲ್ಲೂ ಭಾರತ ಕೊರತೆ ಎದುರಿಸಬೇಕಾಗುತ್ತದೆ. ಜೊತೆಗೆ, ತಯಾರಿಕಾ ಉತ್ಪನ್ನಗಳು (manufacturing goods), ಎಲೆಕ್ಟ್ರಾನಿಕ್ ಗೂಡ್ಸ್, ಕೆಮಿಕಲ್ಸ್ ಯಾವುದನ್ನೇ ನೋಡಿದರೂ ಭಾರತ RCEP ದೇಶಗಳ ಜತೆ ಭಾರೀ ವ್ಯಾಪಾರದ ಕೊರತೆ ಹೊಂದಿದೆ.

ಹೀಗೆ ನಾವು ನೋಡಿದಾಗ ಭಾರತ ತಾನು ವಿವಿಧ ಉತ್ಪನ್ನಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುವುದಕ್ಕಿಂತ ಮೂರು ಪಟ್ಟು ಹೆಚ್ಚಿಗೆ ಬೇರೆ ದೇಶದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿರುವುದು ನಮಗೆ ಗೊತ್ತಾಗುತ್ತದೆ.

ಇನ್ನು ಇಂಥಾ ಪರಿಸ್ಥಿತಿಯಲ್ಲಿ RCEP ಗೆ ಸಹಿ ಹಾಕಿದರೆ ಈ ವ್ಯಾಪಾರ ಕೊರತೆ ಮತ್ತಷ್ಟು ಹೆಚ್ಚಿ ಭಾರತ ಹೊರದೇಶಗಳ ಉತ್ಪನ್ನಗಳಿಗೆ ಇನ್ನೂ ದೊಡ್ಡ ಮಾರುಕಟ್ಟೆಯಾಗುವುದು ಖಚಿತ.

ಹೀಗೆ ತಾನಿನ್ನೂ ಇತರೆ ಸದಸ್ಯ ದೇಶಗಳ ಜತೆ ಸ್ಪರ್ಧಾತ್ಮಕತೆಯಲ್ಲಿ ಹಿಂದೆ ಬಿದ್ದಿರುವುದರಿಂದ ಭಾರತ ಸರ್ಕಾರ ಅಂದರೆ ಪ್ರಧಾನಿ ಮೋದಿಯವರು (ಈಗ ಸರ್ಕಾರ ಅಂದರೆ ಮೋದಿ ಅನ್ನುವಂತಾಗಿದೆ) ಈಗ ಸದ್ಯಕ್ಕೆ RCEPಗೆ ಸಹಿ ಹಾಕಲು ನಿರಾಕರಿಸಿದ್ದಾರೆಯೇ ಎಂದು ನೋಡಿದರೆ ವಾಸ್ತವ ಹಾಗೆ ಕಾಣಿಸುವುದಿಲ್ಲ.

ಯಾಕೆಂದರೆ, ಇವತ್ತಿಗೂ ಖಅಇPಯ ಯಾವ್ಯಾವ ನಿಯಮಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಒಪ್ಪಿಗೆಯಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ನಮ್ಮ ನಾಗರಿಕರಿಗಾಗಲೀ ಅಥವಾ ಕನಿಷ್ಟ ನಮ್ಮ ಸಂಸದರಿಗಾಗಲೀ ಏನನ್ನೂ ತಿಳಿಸಿಲ್ಲ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು

ನಮ್ಮ ದೇಶದ ಹಲವಾರು ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ಹಲವು ಜನಪರ ಗುಂಪುಗಳು RCEP ಯ ಬಗ್ಗೆ ಜನರನ್ನು ಎಚ್ಚರಿಸಿ ಹಲವು ಪ್ರತಿಭಟನೆಗಳ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಿದ್ದು ಸರ್ಕಾರ RCEP ಗೆ ಸಹಿ ಹಾಕದಿರಲು ಮುಖ್ಯ ಕಾರಣ.

ಹಾಗೆಯೇ, ಹಲವು ಸಣ್ಣ ಹಾಗೂ ಮಧ್ಯಮ ಗಾತ್ರದ ಕೈಗಾರಿಕಾ ಸಂಘಟನೆಗಳು, ಆಟೋಮೋಬೈಲ್ ಉದ್ದಿಮೆಯ ಸಂಘಟನೆಗಳು, ಟೆಕ್ಟ್ಸ್ಟೈಲ್ ಉದ್ದಿಮೆ ಸಂಘಟನೆಗಳು ಸರ್ಕಾರದ ಮೇಲೆ ಹಾಕಿದ ಒತ್ತಡವೂ ಸರ್ಕಾರ ಈಗ RCEP ಗೆ ಸಹಿ ಹಾಕದಂತೆ ತಡೆದಿದೆ.

ಆದರೆ ಈಗಾಗಲೇ CII ( Confederation of Indian Industries) ಮುಂದೆ ಭಾರತ RCEPಗೆ ಸಹಿ ಹಾಕಬೇಕಾಗುತ್ತದೆ ಎಂದು ಹೇಳಿದೆ. ಯಾಕೆಂದರೆ ಈ RCEP ಯಿಂದ ರೈತರಿಗೆ ಮತ್ತು ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ತೊಂದರೆಯಾಗುತ್ತದೆಯೇ ಹೊರತು ಬೃಹತ್ ಉದ್ಯಮಿಗಳಿಗೆ RCEP ಯಲ್ಲಿ ಲಾಭವೇ ಆಗುತ್ತದೆ. ಯಾಕೆಂದರೆ ರಿಲಯನ್ಸ್, ಅದಾನಿಯಂತಹ ಉದ್ಯಮಿಗಳು RCEP ಯ ಯಾವ ದೇಶದಲ್ಲಿ ಅನುಕೂಲವಿದೆಯೋ ಅಲ್ಲಿಯೇ ತಮ್ಮ ಉತ್ಪಾದನಾ ಘಟಕ ಸ್ಥಾಪಿಸಿ ಅಲ್ಲಿಂದಲೇ ಭಾರತ ಮತ್ತು ಇತರೆ ದೇಶಗಳಿಗೆ ರಫ್ತು ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅಥವಾ ಬೇರೆ ದೇಶಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಭಾರತದಲ್ಲಿ ಲಾಭಕ್ಕೆ ಮಾರಿ ಮಾರುಕಟ್ಟೆ ಏಕಸ್ವಾಮ್ಯ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ.

ಈ ರೀತಿಯ ಬೃಹತ್ ಉದ್ದಿಮೆಗಳ ಒತ್ತಡ ಮತ್ತು ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ( ಬಹುಶಃ ಇನ್ನು ಮೂರು ತಿಂಗಳುಗಳಲ್ಲಿ – ಫೆಬ್ರವರಿ 2020) RCEP ಗೆ ಸಹಿ ಹಾಕುವ ಸಾಧ್ಯತೆ ದಟ್ಟವಾಗಿದೆ. ಹಾಗೂ ಅದಕ್ಕೆ ಪೂರಕವಾಗಿ ಜನಾಭಿಪ್ರಾಯ ರೂಪಿಸುವ ಕೆಲಸವೂ ಸದ್ದಿಲ್ಲದೆ ನಡೆಯುವ ಸಾಧ್ಯತೆಗಳೂ ಇವೆ.

ಆದುದರಿಂದ, ಈ ತಾತ್ಕಾಲಿಕ ಜಯದಲ್ಲಿ ಮೈಮರೆಯದೆ ಈ ದೇಶದ ರೈತರು, ಕಾರ್ಮಿಕರು, ಪತ್ರಕರ್ತರು, ಬರಹಗಾರರು, ಕಲಾವಿದರು ಒಟ್ಟಾರೆ ಈ ದೇಶದ ಬಗ್ಗೆ ಕಳಕಳಿ ಇರುವವರೆಲ್ಲರೂ ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...