HomeಎಕಾನಮಿRCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

RCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

- Advertisement -
- Advertisement -

ಈ ಕೆಳಗಿನ ಟೇಬಲುಗಳನ್ನು ಗಮನಿಸಿ. ಮೊದಲನೇ ಟೇಬಲಿನಲ್ಲಿ ಭಾರತ RCEPಯ ದೇಶಗಳಲ್ಲಿ ಯಾವ್ಯಾವ ದೇಶದ ಜೊತೆ ಎಷ್ಟೆಷ್ಟು ವ್ಯಾಪಾರದ ಕೊರತೆ ಹೊಂದಿದೆ (2018-19 ರಲ್ಲಿ) ಎಂಬ ಅಂಕಿಅಂಶಗಳಿವೆ. ಎರಡನೇ ಟೇಬಲಿನಲ್ಲಿ ಯಾವ್ಯಾವ ಉತ್ಪನ್ನಗಳನ್ನು ಎಷ್ಟೆಷ್ಟು ರಫ್ತು ಮಾಡುತ್ತಿದೆ ಮತ್ತು ಆಮದು ಮಾಡಿಕೊಳ್ಳುತ್ತಿದೆ ಎಂಬ (2018-19 ರಲ್ಲಿ) ಅಂಕಿಅಂಶಗಳಿವೆ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಈ ಟೇಬಲನ್ನು ನೋಡಿ. ಭಾರತ RCEPಯ ಕೇವಲ ನಾಲ್ಕು ದೇಶಗಳನ್ನು ಲಾವೋಸ್, ಕಾಂಬೋಡಿಯಾ, ಮಯನ್ಮಾರ್ ಮತ್ತು ಫಿಲಿಪೀನ್ಸ್ ಬಿಟ್ಟು ಇತರ ಹನ್ನೊಂದು ದೇಶಗಳ ಜೊತೆಗೆ ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಒಟ್ಟಾರೆಯಾಗಿ 2018-19 ರಲ್ಲಿ, ಈ ದೇಶಗಳಿಂದ 172.93 ಬಿಲಿಯನ್ ಡಾಲರುಗಳಷ್ಟು ಸರಕು ಸೇವೆಗಳನ್ನು ಆಮದು ಮಾಡಿಕೊಂಡಿದ್ದು, 67.69 ಬಿಲಿಯನ್ ಡಾಲರುಗಳಷ್ಟನ್ನು ಮಾತ್ರ ಈ ದೇಶಗಳಿಗೆ ರಫ್ತು ಮಾಡಿದೆ. ಹಾಗಾಗಿ ಭಾರತ, ಒಟ್ಟು 105.24 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆಯನ್ನು ಈ ದೇಶಗಳ ಜೊತೆ ಹೊಂದಿದೆ.

ಹಾಗೆಯೇ ಭಾರತ ತನ್ನ ಒಟ್ಟು ಆಮದಿನಲ್ಲಿ (508 ಬಿಲಿಯನ್ ಡಾಲರುಗಳು) ಶೇಕಡಾ 34 ರಷ್ಟನ್ನು (172.93 ಬಿಲಿಯನ್ ಡಾಲರುಗಳು) RCEP ದೇಶಗಳಿಂದ ಮಾಡಿಕೊಳ್ಳುತ್ತಿದೆ. ತನ್ನ ಒಟ್ಟು ರಫ್ತಿನಲ್ಲಿ (322 ಬಿಲಿಯನ್ ಡಾಲರುಗಳು) ಶೇಕಡಾ 21 ರಷ್ಟನ್ನು (67.69 ಬಿಲಿಯನ್ ಡಾಲರುಗಳು) ಈ RCEP ದೇಶಗಳಿಗೆ ಮಾಡುತ್ತಿದೆ.

ಒಟ್ಟಾಗಿ ಭಾರತ ಜಗತ್ತಿನ ದೇಶಗಳೊಡನೆ 2018-19 ರಲ್ಲಿ ಒಟ್ಟು 186 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಇದೇ ಟೇಬಲಿನಲ್ಲಿ ಭಾರತ ಚೀನಾ ಜೊತೆ ಹೊಂದಿರುವ 53.5 ಬಿಲಿಯನ್ ಡಾಲರುಗಳಷ್ಟು ಭಾರೀ ವ್ಯಾಪಾರದ ಕೊರತೆಯನ್ನು ಗಮನಿಸಿ. ಜೊತೆಗೆ ಇಂಡೋನೇಷಿಯ, ಮಲೇಷ್ಯಾ, ಥೈಲಾಂಡಿನಂಥ ದೇಶಗಳ ಜತೆಗಿನ ವ್ಯಾಪಾರದ ಕೊರತೆಯನ್ನೂ ನೋಡಿ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಇನ್ನು ಎರಡನೇ ಟೇಬಲನ್ನು ಗಮನಿಸಿದಾಗ ಭಾರತ ವ್ಯವಸಾಯೋತ್ಪನ್ನಗಳು, ಟೆಕ್ಟ್ಸ್ಟೈಲ್ಸ್, ಮುತ್ತು ಮತ್ತು ಆಭರಣಗಳನ್ನು ಬಿಟ್ಟು ಉಳಿದೆಲ್ಲ ಉತ್ಪನ್ನಗಳಲ್ಲೂ ಇತರ ದೇಶಗಳ ಜತೆ ವ್ಯಾಪಾರ ಕೊರತೆ ಎದುರಿಸುತ್ತಿದೆ. ಮೇಲಿನ ಮೂರೇ ಮೂರು ಉತ್ಪನ್ನಗಳಲ್ಲಿ ಭಾರತ ಹೆಚ್ಚುವರಿ ವ್ಯಾಪಾರ ಹೊಂದಿದ್ದರೂ ಆಮದು ರಫ್ತಿನ ಅಂತರ ತುಂಬ ಕಡಿಮೆಯಿರುವುದು ಕಾಣುತ್ತದೆ. ಅದರರ್ಥ RCEP ಬಂದರೆ ಈ ಮೂರು ಉತ್ಪನ್ನಗಳಲ್ಲೂ ಭಾರತ ಕೊರತೆ ಎದುರಿಸಬೇಕಾಗುತ್ತದೆ. ಜೊತೆಗೆ, ತಯಾರಿಕಾ ಉತ್ಪನ್ನಗಳು (manufacturing goods), ಎಲೆಕ್ಟ್ರಾನಿಕ್ ಗೂಡ್ಸ್, ಕೆಮಿಕಲ್ಸ್ ಯಾವುದನ್ನೇ ನೋಡಿದರೂ ಭಾರತ RCEP ದೇಶಗಳ ಜತೆ ಭಾರೀ ವ್ಯಾಪಾರದ ಕೊರತೆ ಹೊಂದಿದೆ.

ಹೀಗೆ ನಾವು ನೋಡಿದಾಗ ಭಾರತ ತಾನು ವಿವಿಧ ಉತ್ಪನ್ನಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುವುದಕ್ಕಿಂತ ಮೂರು ಪಟ್ಟು ಹೆಚ್ಚಿಗೆ ಬೇರೆ ದೇಶದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿರುವುದು ನಮಗೆ ಗೊತ್ತಾಗುತ್ತದೆ.

ಇನ್ನು ಇಂಥಾ ಪರಿಸ್ಥಿತಿಯಲ್ಲಿ RCEP ಗೆ ಸಹಿ ಹಾಕಿದರೆ ಈ ವ್ಯಾಪಾರ ಕೊರತೆ ಮತ್ತಷ್ಟು ಹೆಚ್ಚಿ ಭಾರತ ಹೊರದೇಶಗಳ ಉತ್ಪನ್ನಗಳಿಗೆ ಇನ್ನೂ ದೊಡ್ಡ ಮಾರುಕಟ್ಟೆಯಾಗುವುದು ಖಚಿತ.

ಹೀಗೆ ತಾನಿನ್ನೂ ಇತರೆ ಸದಸ್ಯ ದೇಶಗಳ ಜತೆ ಸ್ಪರ್ಧಾತ್ಮಕತೆಯಲ್ಲಿ ಹಿಂದೆ ಬಿದ್ದಿರುವುದರಿಂದ ಭಾರತ ಸರ್ಕಾರ ಅಂದರೆ ಪ್ರಧಾನಿ ಮೋದಿಯವರು (ಈಗ ಸರ್ಕಾರ ಅಂದರೆ ಮೋದಿ ಅನ್ನುವಂತಾಗಿದೆ) ಈಗ ಸದ್ಯಕ್ಕೆ RCEPಗೆ ಸಹಿ ಹಾಕಲು ನಿರಾಕರಿಸಿದ್ದಾರೆಯೇ ಎಂದು ನೋಡಿದರೆ ವಾಸ್ತವ ಹಾಗೆ ಕಾಣಿಸುವುದಿಲ್ಲ.

ಯಾಕೆಂದರೆ, ಇವತ್ತಿಗೂ ಖಅಇPಯ ಯಾವ್ಯಾವ ನಿಯಮಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಒಪ್ಪಿಗೆಯಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ನಮ್ಮ ನಾಗರಿಕರಿಗಾಗಲೀ ಅಥವಾ ಕನಿಷ್ಟ ನಮ್ಮ ಸಂಸದರಿಗಾಗಲೀ ಏನನ್ನೂ ತಿಳಿಸಿಲ್ಲ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು

ನಮ್ಮ ದೇಶದ ಹಲವಾರು ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ಹಲವು ಜನಪರ ಗುಂಪುಗಳು RCEP ಯ ಬಗ್ಗೆ ಜನರನ್ನು ಎಚ್ಚರಿಸಿ ಹಲವು ಪ್ರತಿಭಟನೆಗಳ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಿದ್ದು ಸರ್ಕಾರ RCEP ಗೆ ಸಹಿ ಹಾಕದಿರಲು ಮುಖ್ಯ ಕಾರಣ.

ಹಾಗೆಯೇ, ಹಲವು ಸಣ್ಣ ಹಾಗೂ ಮಧ್ಯಮ ಗಾತ್ರದ ಕೈಗಾರಿಕಾ ಸಂಘಟನೆಗಳು, ಆಟೋಮೋಬೈಲ್ ಉದ್ದಿಮೆಯ ಸಂಘಟನೆಗಳು, ಟೆಕ್ಟ್ಸ್ಟೈಲ್ ಉದ್ದಿಮೆ ಸಂಘಟನೆಗಳು ಸರ್ಕಾರದ ಮೇಲೆ ಹಾಕಿದ ಒತ್ತಡವೂ ಸರ್ಕಾರ ಈಗ RCEP ಗೆ ಸಹಿ ಹಾಕದಂತೆ ತಡೆದಿದೆ.

ಆದರೆ ಈಗಾಗಲೇ CII ( Confederation of Indian Industries) ಮುಂದೆ ಭಾರತ RCEPಗೆ ಸಹಿ ಹಾಕಬೇಕಾಗುತ್ತದೆ ಎಂದು ಹೇಳಿದೆ. ಯಾಕೆಂದರೆ ಈ RCEP ಯಿಂದ ರೈತರಿಗೆ ಮತ್ತು ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ತೊಂದರೆಯಾಗುತ್ತದೆಯೇ ಹೊರತು ಬೃಹತ್ ಉದ್ಯಮಿಗಳಿಗೆ RCEP ಯಲ್ಲಿ ಲಾಭವೇ ಆಗುತ್ತದೆ. ಯಾಕೆಂದರೆ ರಿಲಯನ್ಸ್, ಅದಾನಿಯಂತಹ ಉದ್ಯಮಿಗಳು RCEP ಯ ಯಾವ ದೇಶದಲ್ಲಿ ಅನುಕೂಲವಿದೆಯೋ ಅಲ್ಲಿಯೇ ತಮ್ಮ ಉತ್ಪಾದನಾ ಘಟಕ ಸ್ಥಾಪಿಸಿ ಅಲ್ಲಿಂದಲೇ ಭಾರತ ಮತ್ತು ಇತರೆ ದೇಶಗಳಿಗೆ ರಫ್ತು ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅಥವಾ ಬೇರೆ ದೇಶಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಭಾರತದಲ್ಲಿ ಲಾಭಕ್ಕೆ ಮಾರಿ ಮಾರುಕಟ್ಟೆ ಏಕಸ್ವಾಮ್ಯ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ.

ಈ ರೀತಿಯ ಬೃಹತ್ ಉದ್ದಿಮೆಗಳ ಒತ್ತಡ ಮತ್ತು ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ( ಬಹುಶಃ ಇನ್ನು ಮೂರು ತಿಂಗಳುಗಳಲ್ಲಿ – ಫೆಬ್ರವರಿ 2020) RCEP ಗೆ ಸಹಿ ಹಾಕುವ ಸಾಧ್ಯತೆ ದಟ್ಟವಾಗಿದೆ. ಹಾಗೂ ಅದಕ್ಕೆ ಪೂರಕವಾಗಿ ಜನಾಭಿಪ್ರಾಯ ರೂಪಿಸುವ ಕೆಲಸವೂ ಸದ್ದಿಲ್ಲದೆ ನಡೆಯುವ ಸಾಧ್ಯತೆಗಳೂ ಇವೆ.

ಆದುದರಿಂದ, ಈ ತಾತ್ಕಾಲಿಕ ಜಯದಲ್ಲಿ ಮೈಮರೆಯದೆ ಈ ದೇಶದ ರೈತರು, ಕಾರ್ಮಿಕರು, ಪತ್ರಕರ್ತರು, ಬರಹಗಾರರು, ಕಲಾವಿದರು ಒಟ್ಟಾರೆ ಈ ದೇಶದ ಬಗ್ಗೆ ಕಳಕಳಿ ಇರುವವರೆಲ್ಲರೂ ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...