HomeಎಕಾನಮಿRCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

RCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

- Advertisement -
- Advertisement -

ಈ ಕೆಳಗಿನ ಟೇಬಲುಗಳನ್ನು ಗಮನಿಸಿ. ಮೊದಲನೇ ಟೇಬಲಿನಲ್ಲಿ ಭಾರತ RCEPಯ ದೇಶಗಳಲ್ಲಿ ಯಾವ್ಯಾವ ದೇಶದ ಜೊತೆ ಎಷ್ಟೆಷ್ಟು ವ್ಯಾಪಾರದ ಕೊರತೆ ಹೊಂದಿದೆ (2018-19 ರಲ್ಲಿ) ಎಂಬ ಅಂಕಿಅಂಶಗಳಿವೆ. ಎರಡನೇ ಟೇಬಲಿನಲ್ಲಿ ಯಾವ್ಯಾವ ಉತ್ಪನ್ನಗಳನ್ನು ಎಷ್ಟೆಷ್ಟು ರಫ್ತು ಮಾಡುತ್ತಿದೆ ಮತ್ತು ಆಮದು ಮಾಡಿಕೊಳ್ಳುತ್ತಿದೆ ಎಂಬ (2018-19 ರಲ್ಲಿ) ಅಂಕಿಅಂಶಗಳಿವೆ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಈ ಟೇಬಲನ್ನು ನೋಡಿ. ಭಾರತ RCEPಯ ಕೇವಲ ನಾಲ್ಕು ದೇಶಗಳನ್ನು ಲಾವೋಸ್, ಕಾಂಬೋಡಿಯಾ, ಮಯನ್ಮಾರ್ ಮತ್ತು ಫಿಲಿಪೀನ್ಸ್ ಬಿಟ್ಟು ಇತರ ಹನ್ನೊಂದು ದೇಶಗಳ ಜೊತೆಗೆ ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಒಟ್ಟಾರೆಯಾಗಿ 2018-19 ರಲ್ಲಿ, ಈ ದೇಶಗಳಿಂದ 172.93 ಬಿಲಿಯನ್ ಡಾಲರುಗಳಷ್ಟು ಸರಕು ಸೇವೆಗಳನ್ನು ಆಮದು ಮಾಡಿಕೊಂಡಿದ್ದು, 67.69 ಬಿಲಿಯನ್ ಡಾಲರುಗಳಷ್ಟನ್ನು ಮಾತ್ರ ಈ ದೇಶಗಳಿಗೆ ರಫ್ತು ಮಾಡಿದೆ. ಹಾಗಾಗಿ ಭಾರತ, ಒಟ್ಟು 105.24 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆಯನ್ನು ಈ ದೇಶಗಳ ಜೊತೆ ಹೊಂದಿದೆ.

ಹಾಗೆಯೇ ಭಾರತ ತನ್ನ ಒಟ್ಟು ಆಮದಿನಲ್ಲಿ (508 ಬಿಲಿಯನ್ ಡಾಲರುಗಳು) ಶೇಕಡಾ 34 ರಷ್ಟನ್ನು (172.93 ಬಿಲಿಯನ್ ಡಾಲರುಗಳು) RCEP ದೇಶಗಳಿಂದ ಮಾಡಿಕೊಳ್ಳುತ್ತಿದೆ. ತನ್ನ ಒಟ್ಟು ರಫ್ತಿನಲ್ಲಿ (322 ಬಿಲಿಯನ್ ಡಾಲರುಗಳು) ಶೇಕಡಾ 21 ರಷ್ಟನ್ನು (67.69 ಬಿಲಿಯನ್ ಡಾಲರುಗಳು) ಈ RCEP ದೇಶಗಳಿಗೆ ಮಾಡುತ್ತಿದೆ.

ಒಟ್ಟಾಗಿ ಭಾರತ ಜಗತ್ತಿನ ದೇಶಗಳೊಡನೆ 2018-19 ರಲ್ಲಿ ಒಟ್ಟು 186 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಇದೇ ಟೇಬಲಿನಲ್ಲಿ ಭಾರತ ಚೀನಾ ಜೊತೆ ಹೊಂದಿರುವ 53.5 ಬಿಲಿಯನ್ ಡಾಲರುಗಳಷ್ಟು ಭಾರೀ ವ್ಯಾಪಾರದ ಕೊರತೆಯನ್ನು ಗಮನಿಸಿ. ಜೊತೆಗೆ ಇಂಡೋನೇಷಿಯ, ಮಲೇಷ್ಯಾ, ಥೈಲಾಂಡಿನಂಥ ದೇಶಗಳ ಜತೆಗಿನ ವ್ಯಾಪಾರದ ಕೊರತೆಯನ್ನೂ ನೋಡಿ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಇನ್ನು ಎರಡನೇ ಟೇಬಲನ್ನು ಗಮನಿಸಿದಾಗ ಭಾರತ ವ್ಯವಸಾಯೋತ್ಪನ್ನಗಳು, ಟೆಕ್ಟ್ಸ್ಟೈಲ್ಸ್, ಮುತ್ತು ಮತ್ತು ಆಭರಣಗಳನ್ನು ಬಿಟ್ಟು ಉಳಿದೆಲ್ಲ ಉತ್ಪನ್ನಗಳಲ್ಲೂ ಇತರ ದೇಶಗಳ ಜತೆ ವ್ಯಾಪಾರ ಕೊರತೆ ಎದುರಿಸುತ್ತಿದೆ. ಮೇಲಿನ ಮೂರೇ ಮೂರು ಉತ್ಪನ್ನಗಳಲ್ಲಿ ಭಾರತ ಹೆಚ್ಚುವರಿ ವ್ಯಾಪಾರ ಹೊಂದಿದ್ದರೂ ಆಮದು ರಫ್ತಿನ ಅಂತರ ತುಂಬ ಕಡಿಮೆಯಿರುವುದು ಕಾಣುತ್ತದೆ. ಅದರರ್ಥ RCEP ಬಂದರೆ ಈ ಮೂರು ಉತ್ಪನ್ನಗಳಲ್ಲೂ ಭಾರತ ಕೊರತೆ ಎದುರಿಸಬೇಕಾಗುತ್ತದೆ. ಜೊತೆಗೆ, ತಯಾರಿಕಾ ಉತ್ಪನ್ನಗಳು (manufacturing goods), ಎಲೆಕ್ಟ್ರಾನಿಕ್ ಗೂಡ್ಸ್, ಕೆಮಿಕಲ್ಸ್ ಯಾವುದನ್ನೇ ನೋಡಿದರೂ ಭಾರತ RCEP ದೇಶಗಳ ಜತೆ ಭಾರೀ ವ್ಯಾಪಾರದ ಕೊರತೆ ಹೊಂದಿದೆ.

ಹೀಗೆ ನಾವು ನೋಡಿದಾಗ ಭಾರತ ತಾನು ವಿವಿಧ ಉತ್ಪನ್ನಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುವುದಕ್ಕಿಂತ ಮೂರು ಪಟ್ಟು ಹೆಚ್ಚಿಗೆ ಬೇರೆ ದೇಶದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿರುವುದು ನಮಗೆ ಗೊತ್ತಾಗುತ್ತದೆ.

ಇನ್ನು ಇಂಥಾ ಪರಿಸ್ಥಿತಿಯಲ್ಲಿ RCEP ಗೆ ಸಹಿ ಹಾಕಿದರೆ ಈ ವ್ಯಾಪಾರ ಕೊರತೆ ಮತ್ತಷ್ಟು ಹೆಚ್ಚಿ ಭಾರತ ಹೊರದೇಶಗಳ ಉತ್ಪನ್ನಗಳಿಗೆ ಇನ್ನೂ ದೊಡ್ಡ ಮಾರುಕಟ್ಟೆಯಾಗುವುದು ಖಚಿತ.

ಹೀಗೆ ತಾನಿನ್ನೂ ಇತರೆ ಸದಸ್ಯ ದೇಶಗಳ ಜತೆ ಸ್ಪರ್ಧಾತ್ಮಕತೆಯಲ್ಲಿ ಹಿಂದೆ ಬಿದ್ದಿರುವುದರಿಂದ ಭಾರತ ಸರ್ಕಾರ ಅಂದರೆ ಪ್ರಧಾನಿ ಮೋದಿಯವರು (ಈಗ ಸರ್ಕಾರ ಅಂದರೆ ಮೋದಿ ಅನ್ನುವಂತಾಗಿದೆ) ಈಗ ಸದ್ಯಕ್ಕೆ RCEPಗೆ ಸಹಿ ಹಾಕಲು ನಿರಾಕರಿಸಿದ್ದಾರೆಯೇ ಎಂದು ನೋಡಿದರೆ ವಾಸ್ತವ ಹಾಗೆ ಕಾಣಿಸುವುದಿಲ್ಲ.

ಯಾಕೆಂದರೆ, ಇವತ್ತಿಗೂ ಖಅಇPಯ ಯಾವ್ಯಾವ ನಿಯಮಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಒಪ್ಪಿಗೆಯಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ನಮ್ಮ ನಾಗರಿಕರಿಗಾಗಲೀ ಅಥವಾ ಕನಿಷ್ಟ ನಮ್ಮ ಸಂಸದರಿಗಾಗಲೀ ಏನನ್ನೂ ತಿಳಿಸಿಲ್ಲ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು

ನಮ್ಮ ದೇಶದ ಹಲವಾರು ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ಹಲವು ಜನಪರ ಗುಂಪುಗಳು RCEP ಯ ಬಗ್ಗೆ ಜನರನ್ನು ಎಚ್ಚರಿಸಿ ಹಲವು ಪ್ರತಿಭಟನೆಗಳ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಿದ್ದು ಸರ್ಕಾರ RCEP ಗೆ ಸಹಿ ಹಾಕದಿರಲು ಮುಖ್ಯ ಕಾರಣ.

ಹಾಗೆಯೇ, ಹಲವು ಸಣ್ಣ ಹಾಗೂ ಮಧ್ಯಮ ಗಾತ್ರದ ಕೈಗಾರಿಕಾ ಸಂಘಟನೆಗಳು, ಆಟೋಮೋಬೈಲ್ ಉದ್ದಿಮೆಯ ಸಂಘಟನೆಗಳು, ಟೆಕ್ಟ್ಸ್ಟೈಲ್ ಉದ್ದಿಮೆ ಸಂಘಟನೆಗಳು ಸರ್ಕಾರದ ಮೇಲೆ ಹಾಕಿದ ಒತ್ತಡವೂ ಸರ್ಕಾರ ಈಗ RCEP ಗೆ ಸಹಿ ಹಾಕದಂತೆ ತಡೆದಿದೆ.

ಆದರೆ ಈಗಾಗಲೇ CII ( Confederation of Indian Industries) ಮುಂದೆ ಭಾರತ RCEPಗೆ ಸಹಿ ಹಾಕಬೇಕಾಗುತ್ತದೆ ಎಂದು ಹೇಳಿದೆ. ಯಾಕೆಂದರೆ ಈ RCEP ಯಿಂದ ರೈತರಿಗೆ ಮತ್ತು ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ತೊಂದರೆಯಾಗುತ್ತದೆಯೇ ಹೊರತು ಬೃಹತ್ ಉದ್ಯಮಿಗಳಿಗೆ RCEP ಯಲ್ಲಿ ಲಾಭವೇ ಆಗುತ್ತದೆ. ಯಾಕೆಂದರೆ ರಿಲಯನ್ಸ್, ಅದಾನಿಯಂತಹ ಉದ್ಯಮಿಗಳು RCEP ಯ ಯಾವ ದೇಶದಲ್ಲಿ ಅನುಕೂಲವಿದೆಯೋ ಅಲ್ಲಿಯೇ ತಮ್ಮ ಉತ್ಪಾದನಾ ಘಟಕ ಸ್ಥಾಪಿಸಿ ಅಲ್ಲಿಂದಲೇ ಭಾರತ ಮತ್ತು ಇತರೆ ದೇಶಗಳಿಗೆ ರಫ್ತು ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅಥವಾ ಬೇರೆ ದೇಶಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಭಾರತದಲ್ಲಿ ಲಾಭಕ್ಕೆ ಮಾರಿ ಮಾರುಕಟ್ಟೆ ಏಕಸ್ವಾಮ್ಯ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ.

ಈ ರೀತಿಯ ಬೃಹತ್ ಉದ್ದಿಮೆಗಳ ಒತ್ತಡ ಮತ್ತು ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ( ಬಹುಶಃ ಇನ್ನು ಮೂರು ತಿಂಗಳುಗಳಲ್ಲಿ – ಫೆಬ್ರವರಿ 2020) RCEP ಗೆ ಸಹಿ ಹಾಕುವ ಸಾಧ್ಯತೆ ದಟ್ಟವಾಗಿದೆ. ಹಾಗೂ ಅದಕ್ಕೆ ಪೂರಕವಾಗಿ ಜನಾಭಿಪ್ರಾಯ ರೂಪಿಸುವ ಕೆಲಸವೂ ಸದ್ದಿಲ್ಲದೆ ನಡೆಯುವ ಸಾಧ್ಯತೆಗಳೂ ಇವೆ.

ಆದುದರಿಂದ, ಈ ತಾತ್ಕಾಲಿಕ ಜಯದಲ್ಲಿ ಮೈಮರೆಯದೆ ಈ ದೇಶದ ರೈತರು, ಕಾರ್ಮಿಕರು, ಪತ್ರಕರ್ತರು, ಬರಹಗಾರರು, ಕಲಾವಿದರು ಒಟ್ಟಾರೆ ಈ ದೇಶದ ಬಗ್ಗೆ ಕಳಕಳಿ ಇರುವವರೆಲ್ಲರೂ ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...