HomeಎಕಾನಮಿRCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

RCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

- Advertisement -
- Advertisement -

ಈ ಕೆಳಗಿನ ಟೇಬಲುಗಳನ್ನು ಗಮನಿಸಿ. ಮೊದಲನೇ ಟೇಬಲಿನಲ್ಲಿ ಭಾರತ RCEPಯ ದೇಶಗಳಲ್ಲಿ ಯಾವ್ಯಾವ ದೇಶದ ಜೊತೆ ಎಷ್ಟೆಷ್ಟು ವ್ಯಾಪಾರದ ಕೊರತೆ ಹೊಂದಿದೆ (2018-19 ರಲ್ಲಿ) ಎಂಬ ಅಂಕಿಅಂಶಗಳಿವೆ. ಎರಡನೇ ಟೇಬಲಿನಲ್ಲಿ ಯಾವ್ಯಾವ ಉತ್ಪನ್ನಗಳನ್ನು ಎಷ್ಟೆಷ್ಟು ರಫ್ತು ಮಾಡುತ್ತಿದೆ ಮತ್ತು ಆಮದು ಮಾಡಿಕೊಳ್ಳುತ್ತಿದೆ ಎಂಬ (2018-19 ರಲ್ಲಿ) ಅಂಕಿಅಂಶಗಳಿವೆ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಈ ಟೇಬಲನ್ನು ನೋಡಿ. ಭಾರತ RCEPಯ ಕೇವಲ ನಾಲ್ಕು ದೇಶಗಳನ್ನು ಲಾವೋಸ್, ಕಾಂಬೋಡಿಯಾ, ಮಯನ್ಮಾರ್ ಮತ್ತು ಫಿಲಿಪೀನ್ಸ್ ಬಿಟ್ಟು ಇತರ ಹನ್ನೊಂದು ದೇಶಗಳ ಜೊತೆಗೆ ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಒಟ್ಟಾರೆಯಾಗಿ 2018-19 ರಲ್ಲಿ, ಈ ದೇಶಗಳಿಂದ 172.93 ಬಿಲಿಯನ್ ಡಾಲರುಗಳಷ್ಟು ಸರಕು ಸೇವೆಗಳನ್ನು ಆಮದು ಮಾಡಿಕೊಂಡಿದ್ದು, 67.69 ಬಿಲಿಯನ್ ಡಾಲರುಗಳಷ್ಟನ್ನು ಮಾತ್ರ ಈ ದೇಶಗಳಿಗೆ ರಫ್ತು ಮಾಡಿದೆ. ಹಾಗಾಗಿ ಭಾರತ, ಒಟ್ಟು 105.24 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆಯನ್ನು ಈ ದೇಶಗಳ ಜೊತೆ ಹೊಂದಿದೆ.

ಹಾಗೆಯೇ ಭಾರತ ತನ್ನ ಒಟ್ಟು ಆಮದಿನಲ್ಲಿ (508 ಬಿಲಿಯನ್ ಡಾಲರುಗಳು) ಶೇಕಡಾ 34 ರಷ್ಟನ್ನು (172.93 ಬಿಲಿಯನ್ ಡಾಲರುಗಳು) RCEP ದೇಶಗಳಿಂದ ಮಾಡಿಕೊಳ್ಳುತ್ತಿದೆ. ತನ್ನ ಒಟ್ಟು ರಫ್ತಿನಲ್ಲಿ (322 ಬಿಲಿಯನ್ ಡಾಲರುಗಳು) ಶೇಕಡಾ 21 ರಷ್ಟನ್ನು (67.69 ಬಿಲಿಯನ್ ಡಾಲರುಗಳು) ಈ RCEP ದೇಶಗಳಿಗೆ ಮಾಡುತ್ತಿದೆ.

ಒಟ್ಟಾಗಿ ಭಾರತ ಜಗತ್ತಿನ ದೇಶಗಳೊಡನೆ 2018-19 ರಲ್ಲಿ ಒಟ್ಟು 186 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಇದೇ ಟೇಬಲಿನಲ್ಲಿ ಭಾರತ ಚೀನಾ ಜೊತೆ ಹೊಂದಿರುವ 53.5 ಬಿಲಿಯನ್ ಡಾಲರುಗಳಷ್ಟು ಭಾರೀ ವ್ಯಾಪಾರದ ಕೊರತೆಯನ್ನು ಗಮನಿಸಿ. ಜೊತೆಗೆ ಇಂಡೋನೇಷಿಯ, ಮಲೇಷ್ಯಾ, ಥೈಲಾಂಡಿನಂಥ ದೇಶಗಳ ಜತೆಗಿನ ವ್ಯಾಪಾರದ ಕೊರತೆಯನ್ನೂ ನೋಡಿ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಇನ್ನು ಎರಡನೇ ಟೇಬಲನ್ನು ಗಮನಿಸಿದಾಗ ಭಾರತ ವ್ಯವಸಾಯೋತ್ಪನ್ನಗಳು, ಟೆಕ್ಟ್ಸ್ಟೈಲ್ಸ್, ಮುತ್ತು ಮತ್ತು ಆಭರಣಗಳನ್ನು ಬಿಟ್ಟು ಉಳಿದೆಲ್ಲ ಉತ್ಪನ್ನಗಳಲ್ಲೂ ಇತರ ದೇಶಗಳ ಜತೆ ವ್ಯಾಪಾರ ಕೊರತೆ ಎದುರಿಸುತ್ತಿದೆ. ಮೇಲಿನ ಮೂರೇ ಮೂರು ಉತ್ಪನ್ನಗಳಲ್ಲಿ ಭಾರತ ಹೆಚ್ಚುವರಿ ವ್ಯಾಪಾರ ಹೊಂದಿದ್ದರೂ ಆಮದು ರಫ್ತಿನ ಅಂತರ ತುಂಬ ಕಡಿಮೆಯಿರುವುದು ಕಾಣುತ್ತದೆ. ಅದರರ್ಥ RCEP ಬಂದರೆ ಈ ಮೂರು ಉತ್ಪನ್ನಗಳಲ್ಲೂ ಭಾರತ ಕೊರತೆ ಎದುರಿಸಬೇಕಾಗುತ್ತದೆ. ಜೊತೆಗೆ, ತಯಾರಿಕಾ ಉತ್ಪನ್ನಗಳು (manufacturing goods), ಎಲೆಕ್ಟ್ರಾನಿಕ್ ಗೂಡ್ಸ್, ಕೆಮಿಕಲ್ಸ್ ಯಾವುದನ್ನೇ ನೋಡಿದರೂ ಭಾರತ RCEP ದೇಶಗಳ ಜತೆ ಭಾರೀ ವ್ಯಾಪಾರದ ಕೊರತೆ ಹೊಂದಿದೆ.

ಹೀಗೆ ನಾವು ನೋಡಿದಾಗ ಭಾರತ ತಾನು ವಿವಿಧ ಉತ್ಪನ್ನಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುವುದಕ್ಕಿಂತ ಮೂರು ಪಟ್ಟು ಹೆಚ್ಚಿಗೆ ಬೇರೆ ದೇಶದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿರುವುದು ನಮಗೆ ಗೊತ್ತಾಗುತ್ತದೆ.

ಇನ್ನು ಇಂಥಾ ಪರಿಸ್ಥಿತಿಯಲ್ಲಿ RCEP ಗೆ ಸಹಿ ಹಾಕಿದರೆ ಈ ವ್ಯಾಪಾರ ಕೊರತೆ ಮತ್ತಷ್ಟು ಹೆಚ್ಚಿ ಭಾರತ ಹೊರದೇಶಗಳ ಉತ್ಪನ್ನಗಳಿಗೆ ಇನ್ನೂ ದೊಡ್ಡ ಮಾರುಕಟ್ಟೆಯಾಗುವುದು ಖಚಿತ.

ಹೀಗೆ ತಾನಿನ್ನೂ ಇತರೆ ಸದಸ್ಯ ದೇಶಗಳ ಜತೆ ಸ್ಪರ್ಧಾತ್ಮಕತೆಯಲ್ಲಿ ಹಿಂದೆ ಬಿದ್ದಿರುವುದರಿಂದ ಭಾರತ ಸರ್ಕಾರ ಅಂದರೆ ಪ್ರಧಾನಿ ಮೋದಿಯವರು (ಈಗ ಸರ್ಕಾರ ಅಂದರೆ ಮೋದಿ ಅನ್ನುವಂತಾಗಿದೆ) ಈಗ ಸದ್ಯಕ್ಕೆ RCEPಗೆ ಸಹಿ ಹಾಕಲು ನಿರಾಕರಿಸಿದ್ದಾರೆಯೇ ಎಂದು ನೋಡಿದರೆ ವಾಸ್ತವ ಹಾಗೆ ಕಾಣಿಸುವುದಿಲ್ಲ.

ಯಾಕೆಂದರೆ, ಇವತ್ತಿಗೂ ಖಅಇPಯ ಯಾವ್ಯಾವ ನಿಯಮಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಒಪ್ಪಿಗೆಯಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ನಮ್ಮ ನಾಗರಿಕರಿಗಾಗಲೀ ಅಥವಾ ಕನಿಷ್ಟ ನಮ್ಮ ಸಂಸದರಿಗಾಗಲೀ ಏನನ್ನೂ ತಿಳಿಸಿಲ್ಲ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು

ನಮ್ಮ ದೇಶದ ಹಲವಾರು ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ಹಲವು ಜನಪರ ಗುಂಪುಗಳು RCEP ಯ ಬಗ್ಗೆ ಜನರನ್ನು ಎಚ್ಚರಿಸಿ ಹಲವು ಪ್ರತಿಭಟನೆಗಳ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಿದ್ದು ಸರ್ಕಾರ RCEP ಗೆ ಸಹಿ ಹಾಕದಿರಲು ಮುಖ್ಯ ಕಾರಣ.

ಹಾಗೆಯೇ, ಹಲವು ಸಣ್ಣ ಹಾಗೂ ಮಧ್ಯಮ ಗಾತ್ರದ ಕೈಗಾರಿಕಾ ಸಂಘಟನೆಗಳು, ಆಟೋಮೋಬೈಲ್ ಉದ್ದಿಮೆಯ ಸಂಘಟನೆಗಳು, ಟೆಕ್ಟ್ಸ್ಟೈಲ್ ಉದ್ದಿಮೆ ಸಂಘಟನೆಗಳು ಸರ್ಕಾರದ ಮೇಲೆ ಹಾಕಿದ ಒತ್ತಡವೂ ಸರ್ಕಾರ ಈಗ RCEP ಗೆ ಸಹಿ ಹಾಕದಂತೆ ತಡೆದಿದೆ.

ಆದರೆ ಈಗಾಗಲೇ CII ( Confederation of Indian Industries) ಮುಂದೆ ಭಾರತ RCEPಗೆ ಸಹಿ ಹಾಕಬೇಕಾಗುತ್ತದೆ ಎಂದು ಹೇಳಿದೆ. ಯಾಕೆಂದರೆ ಈ RCEP ಯಿಂದ ರೈತರಿಗೆ ಮತ್ತು ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ತೊಂದರೆಯಾಗುತ್ತದೆಯೇ ಹೊರತು ಬೃಹತ್ ಉದ್ಯಮಿಗಳಿಗೆ RCEP ಯಲ್ಲಿ ಲಾಭವೇ ಆಗುತ್ತದೆ. ಯಾಕೆಂದರೆ ರಿಲಯನ್ಸ್, ಅದಾನಿಯಂತಹ ಉದ್ಯಮಿಗಳು RCEP ಯ ಯಾವ ದೇಶದಲ್ಲಿ ಅನುಕೂಲವಿದೆಯೋ ಅಲ್ಲಿಯೇ ತಮ್ಮ ಉತ್ಪಾದನಾ ಘಟಕ ಸ್ಥಾಪಿಸಿ ಅಲ್ಲಿಂದಲೇ ಭಾರತ ಮತ್ತು ಇತರೆ ದೇಶಗಳಿಗೆ ರಫ್ತು ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅಥವಾ ಬೇರೆ ದೇಶಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಭಾರತದಲ್ಲಿ ಲಾಭಕ್ಕೆ ಮಾರಿ ಮಾರುಕಟ್ಟೆ ಏಕಸ್ವಾಮ್ಯ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ.

ಈ ರೀತಿಯ ಬೃಹತ್ ಉದ್ದಿಮೆಗಳ ಒತ್ತಡ ಮತ್ತು ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ( ಬಹುಶಃ ಇನ್ನು ಮೂರು ತಿಂಗಳುಗಳಲ್ಲಿ – ಫೆಬ್ರವರಿ 2020) RCEP ಗೆ ಸಹಿ ಹಾಕುವ ಸಾಧ್ಯತೆ ದಟ್ಟವಾಗಿದೆ. ಹಾಗೂ ಅದಕ್ಕೆ ಪೂರಕವಾಗಿ ಜನಾಭಿಪ್ರಾಯ ರೂಪಿಸುವ ಕೆಲಸವೂ ಸದ್ದಿಲ್ಲದೆ ನಡೆಯುವ ಸಾಧ್ಯತೆಗಳೂ ಇವೆ.

ಆದುದರಿಂದ, ಈ ತಾತ್ಕಾಲಿಕ ಜಯದಲ್ಲಿ ಮೈಮರೆಯದೆ ಈ ದೇಶದ ರೈತರು, ಕಾರ್ಮಿಕರು, ಪತ್ರಕರ್ತರು, ಬರಹಗಾರರು, ಕಲಾವಿದರು ಒಟ್ಟಾರೆ ಈ ದೇಶದ ಬಗ್ಗೆ ಕಳಕಳಿ ಇರುವವರೆಲ್ಲರೂ ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...