Homeಚಳವಳಿಗಾಂಧೀಜಿ, ಆರ್‌ಸಿಇಪಿ ಒಪ್ಪಂದ, ಇಥಿಯೋಪಿಯಾದ ಅಧ್ಯಕ್ಷ ಮತ್ತು ದೇವನೂರು ಮಹಾದೇವರವರ ಮಾತುಗಳು...

ಗಾಂಧೀಜಿ, ಆರ್‌ಸಿಇಪಿ ಒಪ್ಪಂದ, ಇಥಿಯೋಪಿಯಾದ ಅಧ್ಯಕ್ಷ ಮತ್ತು ದೇವನೂರು ಮಹಾದೇವರವರ ಮಾತುಗಳು…

ಮುಕ್ತ ವ್ಯಾಪಾರಕ್ಕೆ ಭಾರತ ಹೆಬ್ಬೆಟ್ಟು ಒತ್ತಿದರೆ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾಗಳ ಹಾಲು ಉತ್ಪನ್ನಗಳು ಭಾರತಕ್ಕೆ ಬಂದು ದಾಳಿ ಮಾಡುತ್ತವೆ. ಈ ಹಾಲಿನ ಯುದ್ಧವಾದರೆ, ಭಾರತದಲ್ಲಿ ಹಾಲನ್ನೇ ಜೀವನಾಧಾರ ಮಾಡಿಕೊಂಡವರ ಬದುಕು ಮಟಾಷ್ ಆಗುತ್ತದೆ.

- Advertisement -
- Advertisement -

‘ಆರ್ ಸಿ ಇ ಪಿ’ (ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ) ಒಪ್ಪಂದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ನವೆಂಬರ್ 2019ರಲ್ಲಿ ಕೇಂದ್ರ ಸರಕಾರ ತಯಾರಾಗಿದ್ದು, ಅದಕ್ಕಾಗಿ ದೇಶಾದ್ಯಂತ 24.10.2019ರಂದು ರೈತರು ಮತ್ತು ಈ ಒಪ್ಪಂದಕ್ಕೆ ವಿರೋಧವಾಗಿರುವವರಿಂದ ಪ್ರತಿಭಟನೆಗಳು ನಡೆದವು. ಅದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಅಕ್ಷರ ರೂಪ 25.10.2019ರ ಪ್ರಜಾವಾಣಿಯಲ್ಲಿ ಪ್ರಕಟವಾಗಿದ್ದು, ಅದರ ಸಂಪೂರ್ಣ ಪಾಠ ‘ನಮ್ಮಬನವಾಸಿ’ಯಲ್ಲಿಯೂ ಪ್ರಕಟವಾಗಿದೆ. ನಮ್ಮ ಓದಿಗಾಗಿ ಇಲ್ಲಿದೆ.

ಮೊದಲೊಂದು ಪ್ರಸಂಗ ನೆನಪಿಸುವೆ. “ವಿದೇಶಿ ವಸ್ತ್ರ ಸುಡಿ” ಎಂಬ ಗಾಂಧಿ ಕರೆಯಿಂದಾಗಿ ಇಂಗ್ಲೆಂಡಿನ ಲಂಕಾಶೈರ್‌ನ ಬಟ್ಟೆ ಗಿರಣಿಗಳು ಮುಚ್ಚುವಂತಾಗಿ ಅಲ್ಲಿನ ಕಾರ್ಮಿಕರು ಗಾಂಧೀಜಿಯನ್ನು 26-09-1931 ರಲ್ಲಿ ಸುತ್ತುವರಿದು ತಮ್ಮ ಕಷ್ಟ ಹೇಳಿಕೊಂಡಾಗ ಗಾಂಧಿ ಆಡಿದ ನುಡಿಗಳು ಹೀಗಿವೆ:

“ಇಲ್ಲಿನ ನಿರುದ್ಯೋಗ ಕಂಡು ನನಗೆ ನೋವಾಗಿದೆ, ಆದರೆ ಇಲ್ಲಿ ಹಸಿವು ಮತ್ತು ಅರೆಹೊಟ್ಟೆ ಬದುಕು ಇಲ್ಲ. ಇಂಡಿಯಾದಲ್ಲಿ ನಮಗೆ ಎರಡೂ ಇದೆ. ನೀವು ಇಂಡಿಯಾದ ಹಳ್ಳಿಗಳಿಗೆ ಹೋಗಿ ನೋಡಿದರೆ ಆ ಹಳ್ಳಿಗಳ ಕಣ್ಣಲ್ಲಿ ತೀವ್ರ ಹತಾಶೆ ಕಾಣುತ್ತೆ. ಅಲ್ಲಿ ಕಾಣುವುದು ಅರೆಹೊಟ್ಟೆಯ ಎಲುಬು ಗೂಡುಗಳು, ಜೀವಂತ ಶವಗಳು. ಇವುಗಳಿಗೆ ಕೆಲಸದ ರೂಪದಲ್ಲಿ ಅನ್ನ ಕೊಟ್ಟು ಜೀವ ತುಂಬಿದರೆ ಆ ಭಾರತ ಜಗತ್ತಿಗೆ ನೆರವಾಗುತ್ತದೆ. ಈವತ್ತು ಭಾರತ ಶಾಪಕ್ಕೊಳಗಾಗಿದೆ. ನನ್ನ ದೇಶದಲ್ಲಿ, “ಈ ಅರೆಹೊಟ್ಟೆಯ ಲಕ್ಷಾಂತರ ಜನರ ಜೀವ ಕೊನೆಗೊಂಡರೆ ಉಳಿದವರು ಬದುಕುತ್ತಾರೆ” ಅನ್ನುವ ಗುಂಪೂ ಇದೆ.  ನಾನೊಂದು ಮಾನವೀಯ ವಿಧಾನವನ್ನು ಕಂಡುಕೊಂಡೆ. ಅದೇನೆಂದರೆ, ಅವರಿಗೆ ಗೊತ್ತಿರುವ ಕೆಲಸವನ್ನು ಕೊಡೋದು. ಅವರು ಅದನ್ನು ತಮ್ಮ ಜೋಪಡಿಯಲ್ಲಿ ಮಾಡುವಂತಹುದು,  ದೊಡ್ಡ ಬಂಡವಾಳ ಅಗತ್ಯ ಇಲ್ಲದ್ದು. ಈ ಉತ್ಪನ್ನಗಳ ಮಾರಾಟ ಸುಲಭವಾಗಿರುವುದು– ಅಂಥದು. ಈ ಒಂದು ಧ್ಯೇಯ ಲಂಕಾಶೈರ್ ಗಮನಕ್ಕೂ ಯೋಗ್ಯವಾಗಿದೆ”.

ಈ ಮಾತುಗಳಲ್ಲಿ ಕೇವಲ 89 ಪದಗಳಿವೆ. ಈ ನುಡಿಗಳನ್ನು ನನ್ನ ಮನಸ್ಸಲ್ಲಿ ಮೂಡಿಸಿಕೊಂಡೆ. ಗೊಮ್ಮಟನನ್ನು ಕಂಡಂತಾಯ್ತು.

ಇಲ್ಲಿ ಬರುವ ಒಂದು ವಾಕ್ಯ ಗಮನಿಸಬೇಕು- “ಅರೆಹೊಟ್ಟೆಯ ಲಕ್ಷಾಂತರ ಜನರ ಜೀವ ಕೊನೆಗೊಂಡರೆ, ಉಳಿದವರು ಬದುಕುತ್ತಾರೆ ಅನ್ನುವ ಗುಂಪೂ ಇದೆ”. ನೋಡಿದರೆ, ಇಂದು ನಮ್ಮ ಕಣ್ಣೆದುರು ಆಗುತ್ತಿರುವುದು ಇದೇ ಏನೋ ಅನಿಸಿಬಿಡುತ್ತದೆ. ನಿರುದ್ಯೋಗಿಗಳ, ರೈತರ ಆತ್ಮಹತ್ಯೆ ಲಕ್ಷಾಂತರ ಆಗುತ್ತಿದೆ. ಆಳುವವರು ಹೊಣೆಗಾರರಾಗುತ್ತಿಲ್ಲ.

ಜೊತೆಗೆ, ಮನುಷ್ಯನ ದುರಾಸೆಯ ಪರಿಣಾಮದಿಂದ ಉಂಟಾದ ಜಾಗತಿಕ ತಾಪಮಾನದಿಂದಾಗಿ ಪ್ರಕೃತಿ ಕುಪಿತಗೊಂಡು ಒಂದು ಕಡೆ ನೆರೆ ಪ್ರವಾಹದಿಂದ ಜನರ ಬದುಕು ಮುಳುಗಡೆ ಆಗುತ್ತಿದೆ. ಅದರ ಪಕ್ಕದಲ್ಲೆ ಮಳೆ ಇಲ್ಲದೆ, ಬೆಳೆ, ಜನ ಒಣಗಿ ಹೋಗುತ್ತಿದ್ದಾರೆ, ಸಾಯುತ್ತಿದ್ದಾರೆ. ಜೊತೆಗೆ ಭಾರತದ ಅರ್ಥಿಕತೆ ಕುಸಿಯುತ್ತಿದೆ. ಉದ್ಯೊಗಗಳು ಕುಸಿಯುತ್ತಿದೆ. ಈ ಕುಸಿಯುತ್ತಿರುವ ಭಾರತದ ಮೇಲೆ ಮೋದಿಶಾದ್ವಯರು, ಪೂತನಿ (ಕ್ರೋನಿ) ಬಂಡವಾಳಶಾಹಿ ಜೊತೆಗೂಡಿಕೊಂಡು ಕುಣಿದು ಕುಪ್ಪಳಿಸಿ ತುಳಿದು, ಹಾಲಿ ಇರುವ ಕುಸಿತವನ್ನು ಪಾತಾಳ ಕಾಣುವಂತೆ ಮಾಡುತ್ತಿದ್ದಾರೆ. ಸಾರ್ವಜನಿಕ ಸಂಪತ್ತನ್ನು ಖಾಸಗಿಗೆ ಮಾರಾಟ ಮಾಡಿಕೊಂಡು ಸರ್ಕಾರ ತನ್ನ ಜೀವನ ಸಾಗಿಸುವುದು ಹೆಚ್ಚುತ್ತಿದೆ. ಇದರಿಂದಲೂ ಉದ್ಯೋಗ ಉದುರಿ ಹೊಗುತ್ತಿದೆ, ಆತ್ಮಹತ್ಯೆ ಹೆಚ್ಚುತ್ತಿದೆ.

ನೋಡಿ, ಈಗ ಕೇಂದ್ರ ಸರ್ಕಾರವು, 16 ದೇಶಗಳ ನಡುವೆ ಆರ್.ಸಿ.ಇ.ಪಿ ಎಂಬ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರಕ್ಕೆ ಹೆಬ್ಬೆಟ್ಟು ಒತ್ತಲು ರೆಡಿಯಾಗಿದೆ. ಗುಟ್ಟಾಗಿ ಕೊಲೆ ಸಂಚು ಜರುಗುತ್ತಿದೆ. ಪಾರ್ಲಿಮೆಂಟ್ ಮುಂದೆನು, ಇಡುತ್ತಿಲ್ಲ. ರಾಜ್ಯಗಳನ್ನು ಕ್ಯಾರೆ ಎನ್ನುತ್ತಿಲ್ಲ. ಇದಕ್ಕೆ ಹೆಬ್ಬೆಟ್ಟು ಒತ್ತಿದರೆ ಏನಾಗುತ್ತೆ? ಒಂದೇ ಒಂದು ಉದಾಹರಣೆ ಸಾಕು – ಭಾರತದಲ್ಲಿ ಸಣ್ಣಸಣ್ಣ ರೈತರು ಹಾಗೂ ಮತ್ತೊಂದಿಷ್ಟು ಜನಸಾಮಾನ್ಯರು ಹಾಲು ಉತ್ಪಾದನೆಯಲ್ಲಿ ತೊಡಗಿ ಇದನ್ನೆ ತಮ್ಮ ಜೀವನಾಧಾರ ಮಾಡಿಕೊಂಡಿದ್ದಾರೆ. ಕೋಟ್ಯಾಂತರ ಜನ ಗ್ರಾಮೀಣ ಕಡುಬಡವರು ಇದರ ಮೇಲೇನೆ ಬದುಕು ಕಟ್ಟಿಕೊಂಡಿದ್ದಾರೆ. ಹೆಚ್ಚಾಗಿ ಮಹಿಳೆಯರ ಬದುಕು ಇದನ್ನು ಅವಲಂಬಿಸಿಯೇ ಉಸಿರಾಡುತ್ತಿದೆ. ಮುಕ್ತ ವ್ಯಾಪಾರಕ್ಕೆ ಭಾರತ ಹೆಬ್ಬೆಟ್ಟು ಒತ್ತಿದರೆ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾಗಳ ಹಾಲು ಉತ್ಪನ್ನಗಳು ಭಾರತಕ್ಕೆ ಬಂದು ದಾಳಿ ಮಾಡುತ್ತವೆ. ಈ ಹಾಲಿನ ಯುದ್ಧವಾದರೆ, ಭಾರತದಲ್ಲಿ ಹಾಲನ್ನೇ ಜೀವನಾಧಾರ ಮಾಡಿಕೊಂಡವರ ಬದುಕು ಮಟಾಷ್ ಆಗುತ್ತದೆ. ಮಹಿಳೆಯರೂ ಆತ್ಮಹತ್ಯೆಗೆ ಶರಣಾಗತೊಡಗುತ್ತಾರೆ.

ಯಾಕೆ ಪುರುಷರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಮಹಿಳೆಯರು ಇಲ್ಲ, ಎಂದು ಸರ್ಕಾರ ಚಿಂತಿಸಿ ಈ ಒಪ್ಪಂದಕ್ಕೆ ರುಜು ಹಾಕುತ್ತಿರಬಹುದೇ? ಗಾಂಧಿ ಹೇಳುವ – ನನ್ನ ದೇಶದಲ್ಲಿ ಈ ಅರೆಹೊಟ್ಟೆಯ ಲಕ್ಷಾಂತರ ಜನರ  ಜೀವ ಕೊನೆಗೊಂಡರೆ ಉಳಿದವರು ಬದುಕುತ್ತಾರೆ ಅನ್ನುವ ಗುಂಪೂ ಇದೆ – ಎನ್ನುವ ಮಾತು ನಿಜವಿರಬಹುದೆ?

ಜಾಗತೀಕರಣದ ನಂತರ ಜಗತ್ತಿನ ಪ್ರವಾಹ ಇರುವುದೇ ಹೀಗೆ, ಯಾರು ಏನೂ ಮಾಡುವುದಕ್ಕೆ ಆಗುವುದಿಲ್ಲ ಎಂದು ಎಲ್ಲರೂ ಕೊಚ್ಚಿ ಹೋಗುತ್ತಿದ್ದೇವೆ.

ಕೊಚ್ಚಿ ಹೋಗುತ್ತಿರುವ ನಾವು, ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹಮದ್ ಕಡೆಗೆ ನೋಡಬೇಕಾಗಿದೆ. ಬೆಳಕು ಕಾಣಬಹುದು. ಗೊತ್ತಲ್ಲ? ಇಥಿಯೋಪಿಯಾ ಅಂದರೆ ಹಸಿವಿನಿಂದ ಎಲುಬಿನ ಗೂಡಾಗಿದ್ದ ದೇಶ. ಇಂಥ ದೇಶಕ್ಕೆ ಆತ ಪ್ರಧಾನಿಯಾಗಿ ಬರುತ್ತಾನೆ. ಇನ್ನೂ ಎರಡು ವರ್ಷಗಳು ತುಂಬಿಲ್ಲ, ಅವನ ಕಾರ್ಯವೈಖರಿಗಳು, ಯುದ್ಧವಿಲ್ಲದೆ ಎಲ್ಲವನ್ನು ಎಲ್ಲರನ್ನು ಗೆದ್ದುಕೊಳ್ಳುತ್ತಿದೆ. ಆತ ಎಲ್ಲಾ ರಾಜಕೀಯ ಪಕ್ಷಗಳ ಸಭೆ ಕರೆದು ಸಂವಾದ ನಡೆಸಿದ. ಉಗ್ರಗಾಮಿ ಸಂಘಟನೆಗಳ ಜೊತೆ ಮಾತುಕತೆ ಮಾಡಿದ. ದೌರ್ಜನ್ಯ ನಡೆಸುವ ಮಿಲಿಟರಿ ಅಧಿಕಾರಿಗಳಿಗೆ ಗೇಟ್ ಪಾಸ್ ಕೊಟ್ಟ. ಜನಾಂಗೀಯ ಹಿಂಸಾಚಾರಗಳನ್ನು ಮಟ್ಟ ಹಾಕಿದ, ಯುವಜನತೆಗೆ ಉದ್ಯೋಗ ನೀಡಲು ಮುಂದಾದ. ಅಧಿಕಾರಕ್ಕೆ ಬಂದ ದಿನದಿಂದ ತನ್ನ ಕಚೇರಿ ಬಾಗಿಲನ್ನು ಅವನು ಮುಚ್ಚಲಿಲ್ಲ. ಅಷ್ಟೇ ಅಲ್ಲ, ಆತನ ಕ್ಯಾಬಿನೆಟ್ ನಲ್ಲಿ ಅರ್ಧಕ್ಕರ್ಧ ಮಹಿಳೆಯರೇ ಇದ್ದಾರೆ. ಸುಪ್ರಿಂ ಕೋರ್ಟ್ ನ್ಯಾಯಾಧೀಶರುಗಳಾಗಿ ಮಹಿಳೆಯರೇ ಇರುವಂತೆ ಎಚ್ಚರ ವಹಿಸಿದ್ದಾನೆ. ಆತ  ದೂರದ ವಿದೇಶ ಪ್ರವಾಸವನ್ನು ಮಾಡಲಿಲ್ಲ. ದ್ವೇಷದ ನಾಡಲ್ಲಿ ಶಾಂತಿ, ಕ್ಷಮೆ, ಸಹಬಾಳ್ವೆ ಕಟ್ಟತೊಡಗಿದ. ತನ್ನ ಪಕ್ಕಾ ಎದುರಾಳಿಯನ್ನು ಚುನಾವಣೆ ಆಯೋಗದ ಅಧ್ಯಕ್ಷನನ್ನಾಗಿ ಮಾಡಿದ! ಒಂದೇ ದಿನ ತನ್ನ ದೇಶದ ಮಣ್ಣಲ್ಲಿ 35 ಕೋಟಿ ಮರಗಿಡಗಳ ಸಸಿನೆಟ್ಟು ಹಸಿರು ಮಾಡತೊಡಗಿದ್ದಾನೆ. ಅಲ್ಲೂ ಒಬ್ಬ ಗೋಡ್ಸೆ ಇರುತ್ತಾನೆ. ಪ್ರದಾನಿ ಅಬಿಯ್ ಅಹಮದ್ ಹತ್ಯೆಗೆ ಪ್ರಯತ್ನಿಸುತ್ತಾನೆ. ಈ ಮರಿ ಗಾಂಧಿ ಹೇಳುತ್ತಾನೆ –“Love always wins. Killing others is a defeat. To those who tried to divide us, I want to tell you that you have not succeeded”.

ಇಷ್ಟಾದ ಮೇಲೆ, ಬಹಳ ಮುಖ್ಯವಾಗಿ ಇಥಿಯೊಪಿಯಾದ ಜೊತೆಗೆ ಯಾವಾಗಲೂ ಗಡಿ ತಕರಾರು ಮಾಡುತ್ತ ಬಡಿದಾಡುತ್ತಿದ್ದ ಪಕ್ಕದ ದೇಶ ಎರಿಟ್ರಿಯಾ ಜೊತೆ ಮಾತುಕತೆ ನಡೆಸುತ್ತಾನೆ. ವೈರಿ ದೇಶವನ್ನು ತನ್ನ ಪ್ರೀತಿಯ ವರಸೆಯಲ್ಲಿ ಗೆಲ್ಲುತ್ತಾನೆ. ಅಂತರ್ಯುದ್ಧದಲ್ಲಿ ಸೋತು ಸುಣ್ಣವಾಗಿದ್ದ ಸೂಡಾನ್‍ನಲ್ಲಿ ಶಾಂತಿ ಮಾತುಕತೆ ಮಾಡಿಸುತ್ತಾನೆ. ಏರಿಟ್ರಿಯಾ ಸೋಮಾಲಿಯ ನಡುವೆ ಶಾಂತಿ ಒಪ್ಪಂದ ಮಾಡಿಸುತ್ತಾನೆ. ಕಿನ್ಯಾ ಮತ್ತು ಸೋಮಾಲಿಯಾ ನಡುವೆ ರಾಜಿ ಮಾಡಿಸುತ್ತಾನೆ. ಇಡೀ ಆಪ್ರಿಕಾದ ಬೆಳವಣಿಗೆಗೆ ನೀಲಿ ನಕ್ಷೆ ರೂಪಿಸುತ್ತಾನೆ.
ಇದಕ್ಕೆ ಏನು ಬೇಕು? 56 ಇಂಚಿನ ಎದೆ ಅಲ್ಲ, ಆ ಎದೆ ಒಳಗಿನ ಹೃದಯದೊಳಗೆ ಮಾನವೀಯ ಸ್ಪಂದನೆಗಳು ಬೇಕು, ಅಷ್ಟೆ.

[ಕೃತಜ್ಞತೆ: ಈ ಲೇಖನದಲ್ಲಿ ಪ್ರಸ್ತಾಪಿಸಿರುವ ಇಥಿಯೋಪಿಯಾ ಪ್ರಧಾನಿ ಅಭಿ ಅಹಮದ್ ಬಗ್ಗೆ ಮಾಹಿತಿಯನ್ನು ಶ್ರೀಗೋಪಾಲಕೃಷ್ಣ ಕುಂಟಿನಿ ಅವರ ಬರಹದಿಂದ ಆಯ್ದು ಅಳವಡಿಸಿಕೊಳ್ಳಲಾಗಿದೆ. ಇದಕ್ಕಾಗಿ ಗೋಪಾಲಕೃಷ್ಣ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.-ದೇಮ]

ಕೃಪೆ: ನಮ್ಮ ಬನವಾಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...