Homeಚಳವಳಿಗಾಂಧೀಜಿ, ಆರ್‌ಸಿಇಪಿ ಒಪ್ಪಂದ, ಇಥಿಯೋಪಿಯಾದ ಅಧ್ಯಕ್ಷ ಮತ್ತು ದೇವನೂರು ಮಹಾದೇವರವರ ಮಾತುಗಳು...

ಗಾಂಧೀಜಿ, ಆರ್‌ಸಿಇಪಿ ಒಪ್ಪಂದ, ಇಥಿಯೋಪಿಯಾದ ಅಧ್ಯಕ್ಷ ಮತ್ತು ದೇವನೂರು ಮಹಾದೇವರವರ ಮಾತುಗಳು…

ಮುಕ್ತ ವ್ಯಾಪಾರಕ್ಕೆ ಭಾರತ ಹೆಬ್ಬೆಟ್ಟು ಒತ್ತಿದರೆ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾಗಳ ಹಾಲು ಉತ್ಪನ್ನಗಳು ಭಾರತಕ್ಕೆ ಬಂದು ದಾಳಿ ಮಾಡುತ್ತವೆ. ಈ ಹಾಲಿನ ಯುದ್ಧವಾದರೆ, ಭಾರತದಲ್ಲಿ ಹಾಲನ್ನೇ ಜೀವನಾಧಾರ ಮಾಡಿಕೊಂಡವರ ಬದುಕು ಮಟಾಷ್ ಆಗುತ್ತದೆ.

- Advertisement -
- Advertisement -

‘ಆರ್ ಸಿ ಇ ಪಿ’ (ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ) ಒಪ್ಪಂದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ನವೆಂಬರ್ 2019ರಲ್ಲಿ ಕೇಂದ್ರ ಸರಕಾರ ತಯಾರಾಗಿದ್ದು, ಅದಕ್ಕಾಗಿ ದೇಶಾದ್ಯಂತ 24.10.2019ರಂದು ರೈತರು ಮತ್ತು ಈ ಒಪ್ಪಂದಕ್ಕೆ ವಿರೋಧವಾಗಿರುವವರಿಂದ ಪ್ರತಿಭಟನೆಗಳು ನಡೆದವು. ಅದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಅಕ್ಷರ ರೂಪ 25.10.2019ರ ಪ್ರಜಾವಾಣಿಯಲ್ಲಿ ಪ್ರಕಟವಾಗಿದ್ದು, ಅದರ ಸಂಪೂರ್ಣ ಪಾಠ ‘ನಮ್ಮಬನವಾಸಿ’ಯಲ್ಲಿಯೂ ಪ್ರಕಟವಾಗಿದೆ. ನಮ್ಮ ಓದಿಗಾಗಿ ಇಲ್ಲಿದೆ.

ಮೊದಲೊಂದು ಪ್ರಸಂಗ ನೆನಪಿಸುವೆ. “ವಿದೇಶಿ ವಸ್ತ್ರ ಸುಡಿ” ಎಂಬ ಗಾಂಧಿ ಕರೆಯಿಂದಾಗಿ ಇಂಗ್ಲೆಂಡಿನ ಲಂಕಾಶೈರ್‌ನ ಬಟ್ಟೆ ಗಿರಣಿಗಳು ಮುಚ್ಚುವಂತಾಗಿ ಅಲ್ಲಿನ ಕಾರ್ಮಿಕರು ಗಾಂಧೀಜಿಯನ್ನು 26-09-1931 ರಲ್ಲಿ ಸುತ್ತುವರಿದು ತಮ್ಮ ಕಷ್ಟ ಹೇಳಿಕೊಂಡಾಗ ಗಾಂಧಿ ಆಡಿದ ನುಡಿಗಳು ಹೀಗಿವೆ:

“ಇಲ್ಲಿನ ನಿರುದ್ಯೋಗ ಕಂಡು ನನಗೆ ನೋವಾಗಿದೆ, ಆದರೆ ಇಲ್ಲಿ ಹಸಿವು ಮತ್ತು ಅರೆಹೊಟ್ಟೆ ಬದುಕು ಇಲ್ಲ. ಇಂಡಿಯಾದಲ್ಲಿ ನಮಗೆ ಎರಡೂ ಇದೆ. ನೀವು ಇಂಡಿಯಾದ ಹಳ್ಳಿಗಳಿಗೆ ಹೋಗಿ ನೋಡಿದರೆ ಆ ಹಳ್ಳಿಗಳ ಕಣ್ಣಲ್ಲಿ ತೀವ್ರ ಹತಾಶೆ ಕಾಣುತ್ತೆ. ಅಲ್ಲಿ ಕಾಣುವುದು ಅರೆಹೊಟ್ಟೆಯ ಎಲುಬು ಗೂಡುಗಳು, ಜೀವಂತ ಶವಗಳು. ಇವುಗಳಿಗೆ ಕೆಲಸದ ರೂಪದಲ್ಲಿ ಅನ್ನ ಕೊಟ್ಟು ಜೀವ ತುಂಬಿದರೆ ಆ ಭಾರತ ಜಗತ್ತಿಗೆ ನೆರವಾಗುತ್ತದೆ. ಈವತ್ತು ಭಾರತ ಶಾಪಕ್ಕೊಳಗಾಗಿದೆ. ನನ್ನ ದೇಶದಲ್ಲಿ, “ಈ ಅರೆಹೊಟ್ಟೆಯ ಲಕ್ಷಾಂತರ ಜನರ ಜೀವ ಕೊನೆಗೊಂಡರೆ ಉಳಿದವರು ಬದುಕುತ್ತಾರೆ” ಅನ್ನುವ ಗುಂಪೂ ಇದೆ.  ನಾನೊಂದು ಮಾನವೀಯ ವಿಧಾನವನ್ನು ಕಂಡುಕೊಂಡೆ. ಅದೇನೆಂದರೆ, ಅವರಿಗೆ ಗೊತ್ತಿರುವ ಕೆಲಸವನ್ನು ಕೊಡೋದು. ಅವರು ಅದನ್ನು ತಮ್ಮ ಜೋಪಡಿಯಲ್ಲಿ ಮಾಡುವಂತಹುದು,  ದೊಡ್ಡ ಬಂಡವಾಳ ಅಗತ್ಯ ಇಲ್ಲದ್ದು. ಈ ಉತ್ಪನ್ನಗಳ ಮಾರಾಟ ಸುಲಭವಾಗಿರುವುದು– ಅಂಥದು. ಈ ಒಂದು ಧ್ಯೇಯ ಲಂಕಾಶೈರ್ ಗಮನಕ್ಕೂ ಯೋಗ್ಯವಾಗಿದೆ”.

ಈ ಮಾತುಗಳಲ್ಲಿ ಕೇವಲ 89 ಪದಗಳಿವೆ. ಈ ನುಡಿಗಳನ್ನು ನನ್ನ ಮನಸ್ಸಲ್ಲಿ ಮೂಡಿಸಿಕೊಂಡೆ. ಗೊಮ್ಮಟನನ್ನು ಕಂಡಂತಾಯ್ತು.

ಇಲ್ಲಿ ಬರುವ ಒಂದು ವಾಕ್ಯ ಗಮನಿಸಬೇಕು- “ಅರೆಹೊಟ್ಟೆಯ ಲಕ್ಷಾಂತರ ಜನರ ಜೀವ ಕೊನೆಗೊಂಡರೆ, ಉಳಿದವರು ಬದುಕುತ್ತಾರೆ ಅನ್ನುವ ಗುಂಪೂ ಇದೆ”. ನೋಡಿದರೆ, ಇಂದು ನಮ್ಮ ಕಣ್ಣೆದುರು ಆಗುತ್ತಿರುವುದು ಇದೇ ಏನೋ ಅನಿಸಿಬಿಡುತ್ತದೆ. ನಿರುದ್ಯೋಗಿಗಳ, ರೈತರ ಆತ್ಮಹತ್ಯೆ ಲಕ್ಷಾಂತರ ಆಗುತ್ತಿದೆ. ಆಳುವವರು ಹೊಣೆಗಾರರಾಗುತ್ತಿಲ್ಲ.

ಜೊತೆಗೆ, ಮನುಷ್ಯನ ದುರಾಸೆಯ ಪರಿಣಾಮದಿಂದ ಉಂಟಾದ ಜಾಗತಿಕ ತಾಪಮಾನದಿಂದಾಗಿ ಪ್ರಕೃತಿ ಕುಪಿತಗೊಂಡು ಒಂದು ಕಡೆ ನೆರೆ ಪ್ರವಾಹದಿಂದ ಜನರ ಬದುಕು ಮುಳುಗಡೆ ಆಗುತ್ತಿದೆ. ಅದರ ಪಕ್ಕದಲ್ಲೆ ಮಳೆ ಇಲ್ಲದೆ, ಬೆಳೆ, ಜನ ಒಣಗಿ ಹೋಗುತ್ತಿದ್ದಾರೆ, ಸಾಯುತ್ತಿದ್ದಾರೆ. ಜೊತೆಗೆ ಭಾರತದ ಅರ್ಥಿಕತೆ ಕುಸಿಯುತ್ತಿದೆ. ಉದ್ಯೊಗಗಳು ಕುಸಿಯುತ್ತಿದೆ. ಈ ಕುಸಿಯುತ್ತಿರುವ ಭಾರತದ ಮೇಲೆ ಮೋದಿಶಾದ್ವಯರು, ಪೂತನಿ (ಕ್ರೋನಿ) ಬಂಡವಾಳಶಾಹಿ ಜೊತೆಗೂಡಿಕೊಂಡು ಕುಣಿದು ಕುಪ್ಪಳಿಸಿ ತುಳಿದು, ಹಾಲಿ ಇರುವ ಕುಸಿತವನ್ನು ಪಾತಾಳ ಕಾಣುವಂತೆ ಮಾಡುತ್ತಿದ್ದಾರೆ. ಸಾರ್ವಜನಿಕ ಸಂಪತ್ತನ್ನು ಖಾಸಗಿಗೆ ಮಾರಾಟ ಮಾಡಿಕೊಂಡು ಸರ್ಕಾರ ತನ್ನ ಜೀವನ ಸಾಗಿಸುವುದು ಹೆಚ್ಚುತ್ತಿದೆ. ಇದರಿಂದಲೂ ಉದ್ಯೋಗ ಉದುರಿ ಹೊಗುತ್ತಿದೆ, ಆತ್ಮಹತ್ಯೆ ಹೆಚ್ಚುತ್ತಿದೆ.

ನೋಡಿ, ಈಗ ಕೇಂದ್ರ ಸರ್ಕಾರವು, 16 ದೇಶಗಳ ನಡುವೆ ಆರ್.ಸಿ.ಇ.ಪಿ ಎಂಬ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರಕ್ಕೆ ಹೆಬ್ಬೆಟ್ಟು ಒತ್ತಲು ರೆಡಿಯಾಗಿದೆ. ಗುಟ್ಟಾಗಿ ಕೊಲೆ ಸಂಚು ಜರುಗುತ್ತಿದೆ. ಪಾರ್ಲಿಮೆಂಟ್ ಮುಂದೆನು, ಇಡುತ್ತಿಲ್ಲ. ರಾಜ್ಯಗಳನ್ನು ಕ್ಯಾರೆ ಎನ್ನುತ್ತಿಲ್ಲ. ಇದಕ್ಕೆ ಹೆಬ್ಬೆಟ್ಟು ಒತ್ತಿದರೆ ಏನಾಗುತ್ತೆ? ಒಂದೇ ಒಂದು ಉದಾಹರಣೆ ಸಾಕು – ಭಾರತದಲ್ಲಿ ಸಣ್ಣಸಣ್ಣ ರೈತರು ಹಾಗೂ ಮತ್ತೊಂದಿಷ್ಟು ಜನಸಾಮಾನ್ಯರು ಹಾಲು ಉತ್ಪಾದನೆಯಲ್ಲಿ ತೊಡಗಿ ಇದನ್ನೆ ತಮ್ಮ ಜೀವನಾಧಾರ ಮಾಡಿಕೊಂಡಿದ್ದಾರೆ. ಕೋಟ್ಯಾಂತರ ಜನ ಗ್ರಾಮೀಣ ಕಡುಬಡವರು ಇದರ ಮೇಲೇನೆ ಬದುಕು ಕಟ್ಟಿಕೊಂಡಿದ್ದಾರೆ. ಹೆಚ್ಚಾಗಿ ಮಹಿಳೆಯರ ಬದುಕು ಇದನ್ನು ಅವಲಂಬಿಸಿಯೇ ಉಸಿರಾಡುತ್ತಿದೆ. ಮುಕ್ತ ವ್ಯಾಪಾರಕ್ಕೆ ಭಾರತ ಹೆಬ್ಬೆಟ್ಟು ಒತ್ತಿದರೆ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾಗಳ ಹಾಲು ಉತ್ಪನ್ನಗಳು ಭಾರತಕ್ಕೆ ಬಂದು ದಾಳಿ ಮಾಡುತ್ತವೆ. ಈ ಹಾಲಿನ ಯುದ್ಧವಾದರೆ, ಭಾರತದಲ್ಲಿ ಹಾಲನ್ನೇ ಜೀವನಾಧಾರ ಮಾಡಿಕೊಂಡವರ ಬದುಕು ಮಟಾಷ್ ಆಗುತ್ತದೆ. ಮಹಿಳೆಯರೂ ಆತ್ಮಹತ್ಯೆಗೆ ಶರಣಾಗತೊಡಗುತ್ತಾರೆ.

ಯಾಕೆ ಪುರುಷರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಮಹಿಳೆಯರು ಇಲ್ಲ, ಎಂದು ಸರ್ಕಾರ ಚಿಂತಿಸಿ ಈ ಒಪ್ಪಂದಕ್ಕೆ ರುಜು ಹಾಕುತ್ತಿರಬಹುದೇ? ಗಾಂಧಿ ಹೇಳುವ – ನನ್ನ ದೇಶದಲ್ಲಿ ಈ ಅರೆಹೊಟ್ಟೆಯ ಲಕ್ಷಾಂತರ ಜನರ  ಜೀವ ಕೊನೆಗೊಂಡರೆ ಉಳಿದವರು ಬದುಕುತ್ತಾರೆ ಅನ್ನುವ ಗುಂಪೂ ಇದೆ – ಎನ್ನುವ ಮಾತು ನಿಜವಿರಬಹುದೆ?

ಜಾಗತೀಕರಣದ ನಂತರ ಜಗತ್ತಿನ ಪ್ರವಾಹ ಇರುವುದೇ ಹೀಗೆ, ಯಾರು ಏನೂ ಮಾಡುವುದಕ್ಕೆ ಆಗುವುದಿಲ್ಲ ಎಂದು ಎಲ್ಲರೂ ಕೊಚ್ಚಿ ಹೋಗುತ್ತಿದ್ದೇವೆ.

ಕೊಚ್ಚಿ ಹೋಗುತ್ತಿರುವ ನಾವು, ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹಮದ್ ಕಡೆಗೆ ನೋಡಬೇಕಾಗಿದೆ. ಬೆಳಕು ಕಾಣಬಹುದು. ಗೊತ್ತಲ್ಲ? ಇಥಿಯೋಪಿಯಾ ಅಂದರೆ ಹಸಿವಿನಿಂದ ಎಲುಬಿನ ಗೂಡಾಗಿದ್ದ ದೇಶ. ಇಂಥ ದೇಶಕ್ಕೆ ಆತ ಪ್ರಧಾನಿಯಾಗಿ ಬರುತ್ತಾನೆ. ಇನ್ನೂ ಎರಡು ವರ್ಷಗಳು ತುಂಬಿಲ್ಲ, ಅವನ ಕಾರ್ಯವೈಖರಿಗಳು, ಯುದ್ಧವಿಲ್ಲದೆ ಎಲ್ಲವನ್ನು ಎಲ್ಲರನ್ನು ಗೆದ್ದುಕೊಳ್ಳುತ್ತಿದೆ. ಆತ ಎಲ್ಲಾ ರಾಜಕೀಯ ಪಕ್ಷಗಳ ಸಭೆ ಕರೆದು ಸಂವಾದ ನಡೆಸಿದ. ಉಗ್ರಗಾಮಿ ಸಂಘಟನೆಗಳ ಜೊತೆ ಮಾತುಕತೆ ಮಾಡಿದ. ದೌರ್ಜನ್ಯ ನಡೆಸುವ ಮಿಲಿಟರಿ ಅಧಿಕಾರಿಗಳಿಗೆ ಗೇಟ್ ಪಾಸ್ ಕೊಟ್ಟ. ಜನಾಂಗೀಯ ಹಿಂಸಾಚಾರಗಳನ್ನು ಮಟ್ಟ ಹಾಕಿದ, ಯುವಜನತೆಗೆ ಉದ್ಯೋಗ ನೀಡಲು ಮುಂದಾದ. ಅಧಿಕಾರಕ್ಕೆ ಬಂದ ದಿನದಿಂದ ತನ್ನ ಕಚೇರಿ ಬಾಗಿಲನ್ನು ಅವನು ಮುಚ್ಚಲಿಲ್ಲ. ಅಷ್ಟೇ ಅಲ್ಲ, ಆತನ ಕ್ಯಾಬಿನೆಟ್ ನಲ್ಲಿ ಅರ್ಧಕ್ಕರ್ಧ ಮಹಿಳೆಯರೇ ಇದ್ದಾರೆ. ಸುಪ್ರಿಂ ಕೋರ್ಟ್ ನ್ಯಾಯಾಧೀಶರುಗಳಾಗಿ ಮಹಿಳೆಯರೇ ಇರುವಂತೆ ಎಚ್ಚರ ವಹಿಸಿದ್ದಾನೆ. ಆತ  ದೂರದ ವಿದೇಶ ಪ್ರವಾಸವನ್ನು ಮಾಡಲಿಲ್ಲ. ದ್ವೇಷದ ನಾಡಲ್ಲಿ ಶಾಂತಿ, ಕ್ಷಮೆ, ಸಹಬಾಳ್ವೆ ಕಟ್ಟತೊಡಗಿದ. ತನ್ನ ಪಕ್ಕಾ ಎದುರಾಳಿಯನ್ನು ಚುನಾವಣೆ ಆಯೋಗದ ಅಧ್ಯಕ್ಷನನ್ನಾಗಿ ಮಾಡಿದ! ಒಂದೇ ದಿನ ತನ್ನ ದೇಶದ ಮಣ್ಣಲ್ಲಿ 35 ಕೋಟಿ ಮರಗಿಡಗಳ ಸಸಿನೆಟ್ಟು ಹಸಿರು ಮಾಡತೊಡಗಿದ್ದಾನೆ. ಅಲ್ಲೂ ಒಬ್ಬ ಗೋಡ್ಸೆ ಇರುತ್ತಾನೆ. ಪ್ರದಾನಿ ಅಬಿಯ್ ಅಹಮದ್ ಹತ್ಯೆಗೆ ಪ್ರಯತ್ನಿಸುತ್ತಾನೆ. ಈ ಮರಿ ಗಾಂಧಿ ಹೇಳುತ್ತಾನೆ –“Love always wins. Killing others is a defeat. To those who tried to divide us, I want to tell you that you have not succeeded”.

ಇಷ್ಟಾದ ಮೇಲೆ, ಬಹಳ ಮುಖ್ಯವಾಗಿ ಇಥಿಯೊಪಿಯಾದ ಜೊತೆಗೆ ಯಾವಾಗಲೂ ಗಡಿ ತಕರಾರು ಮಾಡುತ್ತ ಬಡಿದಾಡುತ್ತಿದ್ದ ಪಕ್ಕದ ದೇಶ ಎರಿಟ್ರಿಯಾ ಜೊತೆ ಮಾತುಕತೆ ನಡೆಸುತ್ತಾನೆ. ವೈರಿ ದೇಶವನ್ನು ತನ್ನ ಪ್ರೀತಿಯ ವರಸೆಯಲ್ಲಿ ಗೆಲ್ಲುತ್ತಾನೆ. ಅಂತರ್ಯುದ್ಧದಲ್ಲಿ ಸೋತು ಸುಣ್ಣವಾಗಿದ್ದ ಸೂಡಾನ್‍ನಲ್ಲಿ ಶಾಂತಿ ಮಾತುಕತೆ ಮಾಡಿಸುತ್ತಾನೆ. ಏರಿಟ್ರಿಯಾ ಸೋಮಾಲಿಯ ನಡುವೆ ಶಾಂತಿ ಒಪ್ಪಂದ ಮಾಡಿಸುತ್ತಾನೆ. ಕಿನ್ಯಾ ಮತ್ತು ಸೋಮಾಲಿಯಾ ನಡುವೆ ರಾಜಿ ಮಾಡಿಸುತ್ತಾನೆ. ಇಡೀ ಆಪ್ರಿಕಾದ ಬೆಳವಣಿಗೆಗೆ ನೀಲಿ ನಕ್ಷೆ ರೂಪಿಸುತ್ತಾನೆ.
ಇದಕ್ಕೆ ಏನು ಬೇಕು? 56 ಇಂಚಿನ ಎದೆ ಅಲ್ಲ, ಆ ಎದೆ ಒಳಗಿನ ಹೃದಯದೊಳಗೆ ಮಾನವೀಯ ಸ್ಪಂದನೆಗಳು ಬೇಕು, ಅಷ್ಟೆ.

[ಕೃತಜ್ಞತೆ: ಈ ಲೇಖನದಲ್ಲಿ ಪ್ರಸ್ತಾಪಿಸಿರುವ ಇಥಿಯೋಪಿಯಾ ಪ್ರಧಾನಿ ಅಭಿ ಅಹಮದ್ ಬಗ್ಗೆ ಮಾಹಿತಿಯನ್ನು ಶ್ರೀಗೋಪಾಲಕೃಷ್ಣ ಕುಂಟಿನಿ ಅವರ ಬರಹದಿಂದ ಆಯ್ದು ಅಳವಡಿಸಿಕೊಳ್ಳಲಾಗಿದೆ. ಇದಕ್ಕಾಗಿ ಗೋಪಾಲಕೃಷ್ಣ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.-ದೇಮ]

ಕೃಪೆ: ನಮ್ಮ ಬನವಾಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...