Homeಚಳವಳಿಗಾಂಧೀಜಿ, ಆರ್‌ಸಿಇಪಿ ಒಪ್ಪಂದ, ಇಥಿಯೋಪಿಯಾದ ಅಧ್ಯಕ್ಷ ಮತ್ತು ದೇವನೂರು ಮಹಾದೇವರವರ ಮಾತುಗಳು...

ಗಾಂಧೀಜಿ, ಆರ್‌ಸಿಇಪಿ ಒಪ್ಪಂದ, ಇಥಿಯೋಪಿಯಾದ ಅಧ್ಯಕ್ಷ ಮತ್ತು ದೇವನೂರು ಮಹಾದೇವರವರ ಮಾತುಗಳು…

ಮುಕ್ತ ವ್ಯಾಪಾರಕ್ಕೆ ಭಾರತ ಹೆಬ್ಬೆಟ್ಟು ಒತ್ತಿದರೆ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾಗಳ ಹಾಲು ಉತ್ಪನ್ನಗಳು ಭಾರತಕ್ಕೆ ಬಂದು ದಾಳಿ ಮಾಡುತ್ತವೆ. ಈ ಹಾಲಿನ ಯುದ್ಧವಾದರೆ, ಭಾರತದಲ್ಲಿ ಹಾಲನ್ನೇ ಜೀವನಾಧಾರ ಮಾಡಿಕೊಂಡವರ ಬದುಕು ಮಟಾಷ್ ಆಗುತ್ತದೆ.

- Advertisement -
- Advertisement -

‘ಆರ್ ಸಿ ಇ ಪಿ’ (ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ) ಒಪ್ಪಂದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ನವೆಂಬರ್ 2019ರಲ್ಲಿ ಕೇಂದ್ರ ಸರಕಾರ ತಯಾರಾಗಿದ್ದು, ಅದಕ್ಕಾಗಿ ದೇಶಾದ್ಯಂತ 24.10.2019ರಂದು ರೈತರು ಮತ್ತು ಈ ಒಪ್ಪಂದಕ್ಕೆ ವಿರೋಧವಾಗಿರುವವರಿಂದ ಪ್ರತಿಭಟನೆಗಳು ನಡೆದವು. ಅದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಅಕ್ಷರ ರೂಪ 25.10.2019ರ ಪ್ರಜಾವಾಣಿಯಲ್ಲಿ ಪ್ರಕಟವಾಗಿದ್ದು, ಅದರ ಸಂಪೂರ್ಣ ಪಾಠ ‘ನಮ್ಮಬನವಾಸಿ’ಯಲ್ಲಿಯೂ ಪ್ರಕಟವಾಗಿದೆ. ನಮ್ಮ ಓದಿಗಾಗಿ ಇಲ್ಲಿದೆ.

ಮೊದಲೊಂದು ಪ್ರಸಂಗ ನೆನಪಿಸುವೆ. “ವಿದೇಶಿ ವಸ್ತ್ರ ಸುಡಿ” ಎಂಬ ಗಾಂಧಿ ಕರೆಯಿಂದಾಗಿ ಇಂಗ್ಲೆಂಡಿನ ಲಂಕಾಶೈರ್‌ನ ಬಟ್ಟೆ ಗಿರಣಿಗಳು ಮುಚ್ಚುವಂತಾಗಿ ಅಲ್ಲಿನ ಕಾರ್ಮಿಕರು ಗಾಂಧೀಜಿಯನ್ನು 26-09-1931 ರಲ್ಲಿ ಸುತ್ತುವರಿದು ತಮ್ಮ ಕಷ್ಟ ಹೇಳಿಕೊಂಡಾಗ ಗಾಂಧಿ ಆಡಿದ ನುಡಿಗಳು ಹೀಗಿವೆ:

“ಇಲ್ಲಿನ ನಿರುದ್ಯೋಗ ಕಂಡು ನನಗೆ ನೋವಾಗಿದೆ, ಆದರೆ ಇಲ್ಲಿ ಹಸಿವು ಮತ್ತು ಅರೆಹೊಟ್ಟೆ ಬದುಕು ಇಲ್ಲ. ಇಂಡಿಯಾದಲ್ಲಿ ನಮಗೆ ಎರಡೂ ಇದೆ. ನೀವು ಇಂಡಿಯಾದ ಹಳ್ಳಿಗಳಿಗೆ ಹೋಗಿ ನೋಡಿದರೆ ಆ ಹಳ್ಳಿಗಳ ಕಣ್ಣಲ್ಲಿ ತೀವ್ರ ಹತಾಶೆ ಕಾಣುತ್ತೆ. ಅಲ್ಲಿ ಕಾಣುವುದು ಅರೆಹೊಟ್ಟೆಯ ಎಲುಬು ಗೂಡುಗಳು, ಜೀವಂತ ಶವಗಳು. ಇವುಗಳಿಗೆ ಕೆಲಸದ ರೂಪದಲ್ಲಿ ಅನ್ನ ಕೊಟ್ಟು ಜೀವ ತುಂಬಿದರೆ ಆ ಭಾರತ ಜಗತ್ತಿಗೆ ನೆರವಾಗುತ್ತದೆ. ಈವತ್ತು ಭಾರತ ಶಾಪಕ್ಕೊಳಗಾಗಿದೆ. ನನ್ನ ದೇಶದಲ್ಲಿ, “ಈ ಅರೆಹೊಟ್ಟೆಯ ಲಕ್ಷಾಂತರ ಜನರ ಜೀವ ಕೊನೆಗೊಂಡರೆ ಉಳಿದವರು ಬದುಕುತ್ತಾರೆ” ಅನ್ನುವ ಗುಂಪೂ ಇದೆ.  ನಾನೊಂದು ಮಾನವೀಯ ವಿಧಾನವನ್ನು ಕಂಡುಕೊಂಡೆ. ಅದೇನೆಂದರೆ, ಅವರಿಗೆ ಗೊತ್ತಿರುವ ಕೆಲಸವನ್ನು ಕೊಡೋದು. ಅವರು ಅದನ್ನು ತಮ್ಮ ಜೋಪಡಿಯಲ್ಲಿ ಮಾಡುವಂತಹುದು,  ದೊಡ್ಡ ಬಂಡವಾಳ ಅಗತ್ಯ ಇಲ್ಲದ್ದು. ಈ ಉತ್ಪನ್ನಗಳ ಮಾರಾಟ ಸುಲಭವಾಗಿರುವುದು– ಅಂಥದು. ಈ ಒಂದು ಧ್ಯೇಯ ಲಂಕಾಶೈರ್ ಗಮನಕ್ಕೂ ಯೋಗ್ಯವಾಗಿದೆ”.

ಈ ಮಾತುಗಳಲ್ಲಿ ಕೇವಲ 89 ಪದಗಳಿವೆ. ಈ ನುಡಿಗಳನ್ನು ನನ್ನ ಮನಸ್ಸಲ್ಲಿ ಮೂಡಿಸಿಕೊಂಡೆ. ಗೊಮ್ಮಟನನ್ನು ಕಂಡಂತಾಯ್ತು.

ಇಲ್ಲಿ ಬರುವ ಒಂದು ವಾಕ್ಯ ಗಮನಿಸಬೇಕು- “ಅರೆಹೊಟ್ಟೆಯ ಲಕ್ಷಾಂತರ ಜನರ ಜೀವ ಕೊನೆಗೊಂಡರೆ, ಉಳಿದವರು ಬದುಕುತ್ತಾರೆ ಅನ್ನುವ ಗುಂಪೂ ಇದೆ”. ನೋಡಿದರೆ, ಇಂದು ನಮ್ಮ ಕಣ್ಣೆದುರು ಆಗುತ್ತಿರುವುದು ಇದೇ ಏನೋ ಅನಿಸಿಬಿಡುತ್ತದೆ. ನಿರುದ್ಯೋಗಿಗಳ, ರೈತರ ಆತ್ಮಹತ್ಯೆ ಲಕ್ಷಾಂತರ ಆಗುತ್ತಿದೆ. ಆಳುವವರು ಹೊಣೆಗಾರರಾಗುತ್ತಿಲ್ಲ.

ಜೊತೆಗೆ, ಮನುಷ್ಯನ ದುರಾಸೆಯ ಪರಿಣಾಮದಿಂದ ಉಂಟಾದ ಜಾಗತಿಕ ತಾಪಮಾನದಿಂದಾಗಿ ಪ್ರಕೃತಿ ಕುಪಿತಗೊಂಡು ಒಂದು ಕಡೆ ನೆರೆ ಪ್ರವಾಹದಿಂದ ಜನರ ಬದುಕು ಮುಳುಗಡೆ ಆಗುತ್ತಿದೆ. ಅದರ ಪಕ್ಕದಲ್ಲೆ ಮಳೆ ಇಲ್ಲದೆ, ಬೆಳೆ, ಜನ ಒಣಗಿ ಹೋಗುತ್ತಿದ್ದಾರೆ, ಸಾಯುತ್ತಿದ್ದಾರೆ. ಜೊತೆಗೆ ಭಾರತದ ಅರ್ಥಿಕತೆ ಕುಸಿಯುತ್ತಿದೆ. ಉದ್ಯೊಗಗಳು ಕುಸಿಯುತ್ತಿದೆ. ಈ ಕುಸಿಯುತ್ತಿರುವ ಭಾರತದ ಮೇಲೆ ಮೋದಿಶಾದ್ವಯರು, ಪೂತನಿ (ಕ್ರೋನಿ) ಬಂಡವಾಳಶಾಹಿ ಜೊತೆಗೂಡಿಕೊಂಡು ಕುಣಿದು ಕುಪ್ಪಳಿಸಿ ತುಳಿದು, ಹಾಲಿ ಇರುವ ಕುಸಿತವನ್ನು ಪಾತಾಳ ಕಾಣುವಂತೆ ಮಾಡುತ್ತಿದ್ದಾರೆ. ಸಾರ್ವಜನಿಕ ಸಂಪತ್ತನ್ನು ಖಾಸಗಿಗೆ ಮಾರಾಟ ಮಾಡಿಕೊಂಡು ಸರ್ಕಾರ ತನ್ನ ಜೀವನ ಸಾಗಿಸುವುದು ಹೆಚ್ಚುತ್ತಿದೆ. ಇದರಿಂದಲೂ ಉದ್ಯೋಗ ಉದುರಿ ಹೊಗುತ್ತಿದೆ, ಆತ್ಮಹತ್ಯೆ ಹೆಚ್ಚುತ್ತಿದೆ.

ನೋಡಿ, ಈಗ ಕೇಂದ್ರ ಸರ್ಕಾರವು, 16 ದೇಶಗಳ ನಡುವೆ ಆರ್.ಸಿ.ಇ.ಪಿ ಎಂಬ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರಕ್ಕೆ ಹೆಬ್ಬೆಟ್ಟು ಒತ್ತಲು ರೆಡಿಯಾಗಿದೆ. ಗುಟ್ಟಾಗಿ ಕೊಲೆ ಸಂಚು ಜರುಗುತ್ತಿದೆ. ಪಾರ್ಲಿಮೆಂಟ್ ಮುಂದೆನು, ಇಡುತ್ತಿಲ್ಲ. ರಾಜ್ಯಗಳನ್ನು ಕ್ಯಾರೆ ಎನ್ನುತ್ತಿಲ್ಲ. ಇದಕ್ಕೆ ಹೆಬ್ಬೆಟ್ಟು ಒತ್ತಿದರೆ ಏನಾಗುತ್ತೆ? ಒಂದೇ ಒಂದು ಉದಾಹರಣೆ ಸಾಕು – ಭಾರತದಲ್ಲಿ ಸಣ್ಣಸಣ್ಣ ರೈತರು ಹಾಗೂ ಮತ್ತೊಂದಿಷ್ಟು ಜನಸಾಮಾನ್ಯರು ಹಾಲು ಉತ್ಪಾದನೆಯಲ್ಲಿ ತೊಡಗಿ ಇದನ್ನೆ ತಮ್ಮ ಜೀವನಾಧಾರ ಮಾಡಿಕೊಂಡಿದ್ದಾರೆ. ಕೋಟ್ಯಾಂತರ ಜನ ಗ್ರಾಮೀಣ ಕಡುಬಡವರು ಇದರ ಮೇಲೇನೆ ಬದುಕು ಕಟ್ಟಿಕೊಂಡಿದ್ದಾರೆ. ಹೆಚ್ಚಾಗಿ ಮಹಿಳೆಯರ ಬದುಕು ಇದನ್ನು ಅವಲಂಬಿಸಿಯೇ ಉಸಿರಾಡುತ್ತಿದೆ. ಮುಕ್ತ ವ್ಯಾಪಾರಕ್ಕೆ ಭಾರತ ಹೆಬ್ಬೆಟ್ಟು ಒತ್ತಿದರೆ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾಗಳ ಹಾಲು ಉತ್ಪನ್ನಗಳು ಭಾರತಕ್ಕೆ ಬಂದು ದಾಳಿ ಮಾಡುತ್ತವೆ. ಈ ಹಾಲಿನ ಯುದ್ಧವಾದರೆ, ಭಾರತದಲ್ಲಿ ಹಾಲನ್ನೇ ಜೀವನಾಧಾರ ಮಾಡಿಕೊಂಡವರ ಬದುಕು ಮಟಾಷ್ ಆಗುತ್ತದೆ. ಮಹಿಳೆಯರೂ ಆತ್ಮಹತ್ಯೆಗೆ ಶರಣಾಗತೊಡಗುತ್ತಾರೆ.

ಯಾಕೆ ಪುರುಷರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಮಹಿಳೆಯರು ಇಲ್ಲ, ಎಂದು ಸರ್ಕಾರ ಚಿಂತಿಸಿ ಈ ಒಪ್ಪಂದಕ್ಕೆ ರುಜು ಹಾಕುತ್ತಿರಬಹುದೇ? ಗಾಂಧಿ ಹೇಳುವ – ನನ್ನ ದೇಶದಲ್ಲಿ ಈ ಅರೆಹೊಟ್ಟೆಯ ಲಕ್ಷಾಂತರ ಜನರ  ಜೀವ ಕೊನೆಗೊಂಡರೆ ಉಳಿದವರು ಬದುಕುತ್ತಾರೆ ಅನ್ನುವ ಗುಂಪೂ ಇದೆ – ಎನ್ನುವ ಮಾತು ನಿಜವಿರಬಹುದೆ?

ಜಾಗತೀಕರಣದ ನಂತರ ಜಗತ್ತಿನ ಪ್ರವಾಹ ಇರುವುದೇ ಹೀಗೆ, ಯಾರು ಏನೂ ಮಾಡುವುದಕ್ಕೆ ಆಗುವುದಿಲ್ಲ ಎಂದು ಎಲ್ಲರೂ ಕೊಚ್ಚಿ ಹೋಗುತ್ತಿದ್ದೇವೆ.

ಕೊಚ್ಚಿ ಹೋಗುತ್ತಿರುವ ನಾವು, ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹಮದ್ ಕಡೆಗೆ ನೋಡಬೇಕಾಗಿದೆ. ಬೆಳಕು ಕಾಣಬಹುದು. ಗೊತ್ತಲ್ಲ? ಇಥಿಯೋಪಿಯಾ ಅಂದರೆ ಹಸಿವಿನಿಂದ ಎಲುಬಿನ ಗೂಡಾಗಿದ್ದ ದೇಶ. ಇಂಥ ದೇಶಕ್ಕೆ ಆತ ಪ್ರಧಾನಿಯಾಗಿ ಬರುತ್ತಾನೆ. ಇನ್ನೂ ಎರಡು ವರ್ಷಗಳು ತುಂಬಿಲ್ಲ, ಅವನ ಕಾರ್ಯವೈಖರಿಗಳು, ಯುದ್ಧವಿಲ್ಲದೆ ಎಲ್ಲವನ್ನು ಎಲ್ಲರನ್ನು ಗೆದ್ದುಕೊಳ್ಳುತ್ತಿದೆ. ಆತ ಎಲ್ಲಾ ರಾಜಕೀಯ ಪಕ್ಷಗಳ ಸಭೆ ಕರೆದು ಸಂವಾದ ನಡೆಸಿದ. ಉಗ್ರಗಾಮಿ ಸಂಘಟನೆಗಳ ಜೊತೆ ಮಾತುಕತೆ ಮಾಡಿದ. ದೌರ್ಜನ್ಯ ನಡೆಸುವ ಮಿಲಿಟರಿ ಅಧಿಕಾರಿಗಳಿಗೆ ಗೇಟ್ ಪಾಸ್ ಕೊಟ್ಟ. ಜನಾಂಗೀಯ ಹಿಂಸಾಚಾರಗಳನ್ನು ಮಟ್ಟ ಹಾಕಿದ, ಯುವಜನತೆಗೆ ಉದ್ಯೋಗ ನೀಡಲು ಮುಂದಾದ. ಅಧಿಕಾರಕ್ಕೆ ಬಂದ ದಿನದಿಂದ ತನ್ನ ಕಚೇರಿ ಬಾಗಿಲನ್ನು ಅವನು ಮುಚ್ಚಲಿಲ್ಲ. ಅಷ್ಟೇ ಅಲ್ಲ, ಆತನ ಕ್ಯಾಬಿನೆಟ್ ನಲ್ಲಿ ಅರ್ಧಕ್ಕರ್ಧ ಮಹಿಳೆಯರೇ ಇದ್ದಾರೆ. ಸುಪ್ರಿಂ ಕೋರ್ಟ್ ನ್ಯಾಯಾಧೀಶರುಗಳಾಗಿ ಮಹಿಳೆಯರೇ ಇರುವಂತೆ ಎಚ್ಚರ ವಹಿಸಿದ್ದಾನೆ. ಆತ  ದೂರದ ವಿದೇಶ ಪ್ರವಾಸವನ್ನು ಮಾಡಲಿಲ್ಲ. ದ್ವೇಷದ ನಾಡಲ್ಲಿ ಶಾಂತಿ, ಕ್ಷಮೆ, ಸಹಬಾಳ್ವೆ ಕಟ್ಟತೊಡಗಿದ. ತನ್ನ ಪಕ್ಕಾ ಎದುರಾಳಿಯನ್ನು ಚುನಾವಣೆ ಆಯೋಗದ ಅಧ್ಯಕ್ಷನನ್ನಾಗಿ ಮಾಡಿದ! ಒಂದೇ ದಿನ ತನ್ನ ದೇಶದ ಮಣ್ಣಲ್ಲಿ 35 ಕೋಟಿ ಮರಗಿಡಗಳ ಸಸಿನೆಟ್ಟು ಹಸಿರು ಮಾಡತೊಡಗಿದ್ದಾನೆ. ಅಲ್ಲೂ ಒಬ್ಬ ಗೋಡ್ಸೆ ಇರುತ್ತಾನೆ. ಪ್ರದಾನಿ ಅಬಿಯ್ ಅಹಮದ್ ಹತ್ಯೆಗೆ ಪ್ರಯತ್ನಿಸುತ್ತಾನೆ. ಈ ಮರಿ ಗಾಂಧಿ ಹೇಳುತ್ತಾನೆ –“Love always wins. Killing others is a defeat. To those who tried to divide us, I want to tell you that you have not succeeded”.

ಇಷ್ಟಾದ ಮೇಲೆ, ಬಹಳ ಮುಖ್ಯವಾಗಿ ಇಥಿಯೊಪಿಯಾದ ಜೊತೆಗೆ ಯಾವಾಗಲೂ ಗಡಿ ತಕರಾರು ಮಾಡುತ್ತ ಬಡಿದಾಡುತ್ತಿದ್ದ ಪಕ್ಕದ ದೇಶ ಎರಿಟ್ರಿಯಾ ಜೊತೆ ಮಾತುಕತೆ ನಡೆಸುತ್ತಾನೆ. ವೈರಿ ದೇಶವನ್ನು ತನ್ನ ಪ್ರೀತಿಯ ವರಸೆಯಲ್ಲಿ ಗೆಲ್ಲುತ್ತಾನೆ. ಅಂತರ್ಯುದ್ಧದಲ್ಲಿ ಸೋತು ಸುಣ್ಣವಾಗಿದ್ದ ಸೂಡಾನ್‍ನಲ್ಲಿ ಶಾಂತಿ ಮಾತುಕತೆ ಮಾಡಿಸುತ್ತಾನೆ. ಏರಿಟ್ರಿಯಾ ಸೋಮಾಲಿಯ ನಡುವೆ ಶಾಂತಿ ಒಪ್ಪಂದ ಮಾಡಿಸುತ್ತಾನೆ. ಕಿನ್ಯಾ ಮತ್ತು ಸೋಮಾಲಿಯಾ ನಡುವೆ ರಾಜಿ ಮಾಡಿಸುತ್ತಾನೆ. ಇಡೀ ಆಪ್ರಿಕಾದ ಬೆಳವಣಿಗೆಗೆ ನೀಲಿ ನಕ್ಷೆ ರೂಪಿಸುತ್ತಾನೆ.
ಇದಕ್ಕೆ ಏನು ಬೇಕು? 56 ಇಂಚಿನ ಎದೆ ಅಲ್ಲ, ಆ ಎದೆ ಒಳಗಿನ ಹೃದಯದೊಳಗೆ ಮಾನವೀಯ ಸ್ಪಂದನೆಗಳು ಬೇಕು, ಅಷ್ಟೆ.

[ಕೃತಜ್ಞತೆ: ಈ ಲೇಖನದಲ್ಲಿ ಪ್ರಸ್ತಾಪಿಸಿರುವ ಇಥಿಯೋಪಿಯಾ ಪ್ರಧಾನಿ ಅಭಿ ಅಹಮದ್ ಬಗ್ಗೆ ಮಾಹಿತಿಯನ್ನು ಶ್ರೀಗೋಪಾಲಕೃಷ್ಣ ಕುಂಟಿನಿ ಅವರ ಬರಹದಿಂದ ಆಯ್ದು ಅಳವಡಿಸಿಕೊಳ್ಳಲಾಗಿದೆ. ಇದಕ್ಕಾಗಿ ಗೋಪಾಲಕೃಷ್ಣ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.-ದೇಮ]

ಕೃಪೆ: ನಮ್ಮ ಬನವಾಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...