Homeಎಕಾನಮಿಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

- Advertisement -
- Advertisement -

ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರ್‌ಸಿಇಪಿ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಆರ್‌ಸಿಇಪಿ ಬಗ್ಗೆ ಬರೆದು ಪೋಸ್ಟ್‌ ಮಾಡಿ, ಆರ್‌ಸಿಇಪಿ ಬೇಡ ಎಂದು ಹೇಳಿದ್ದಾರೆ.

ನವೆಂಬರ್‌ ೪ರಂದು ೧೬ ದೇಶಗಳ ನಡುವಿನ ಸಮಗ್ರ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ದಿನಾಂಕ ನಿಗದಿಪಡಿಸಲಾಗಿದೆ. ೧೦ ಆಗ್ನೇಯ ಏಷ್ಯಾ ದೇಶಗಳು ಹಾಗೂ ಚೀನಾ, ಜಪಾನ್, ಕೋರಿಯಾ, ನ್ಯೂಜಿಲ್ಯಾಂಡ್, ಭಾರತ, ಆಸ್ಟ್ರೇಲಿಯಾ ಸೇರಿದಂತೆ ೧೬ ರಾಷ್ಟ್ರಗಳು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ )ದ ಅಡಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಇದಾಗಿದೆ. ಆರ್‌ಸಿಇಪಿಗೆ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದೆ. ಭಾರತ ಹಲವು ಷರತ್ತುಗಳನ್ನು ಇರಿಸಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ಭಾರತದ ಆರ್‌ಸಿಇಪಿ ಸಂದಿಗ್ಧತೆ: ದಾರಿ ಇದೆಯೇ?

ವಿಪಕ್ಷಗಳು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಲು ಕರೆ ನೀಡಿದ್ದಾರೆ. ದೇಶದ ನಾನಾ ಕಡೆಗಳಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಬದುಕಿಗೆ ಮಾರಕವಾಗುವ ಒಪ್ಪಂದವನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಆರ್‌ಸಿಇಪಿಯನ್ನು ವಿರೋಧಿಸಿದ್ದಾರೆ. ರೈತರ ಹಿತಾಸಕ್ತಿ ಕಾಯದ ಆರ್‌ಸಿಇಪಿ ಬೇಕಾ..? ಎಲ್ಲಿದೆ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
”ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (RCEP)ದಡಿಯಲ್ಲಿ ನಡೆಲಿರುವ ಮುಕ್ತ ವ್ಯಾಪಾರ ಒಪ್ಪಂದ (FTA) ದೇಶದ ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ, ನರೇಂದ್ರ ಮೋದಿ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣಶಾಸನ. ಸುಮಾರು 10 ಕೋಟಿ ರೈತರ ಬದುಕು ಹೈನುಗಾರಿಕೆಯನ್ನು ಅವಲಂಬಿಸಿದೆ. ಕರ್ನಾಟಕದಲ್ಲಿಯೇ ಸುಮಾರು 86 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನ್ಯೂಜಿಲ್ಯಾಂಡ್, ಅಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದಿಗೆ ಅವಕಾಶ ನೀಡುವ RCEP ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಯನ್ನು ಉತ್ತೇಜಿಸಲು ‘ಕ್ಷೀರಧಾರೆ’ ಮತ್ತು ಶಾಲಾ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಲು ‘ಕ್ಷೀರಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಮೋದಿಯವರ ಸರ್ಕಾರ ರೈತರು ಮತ್ತು ಶಾಲಾ ಮಕ್ಕಳ ಬದುಕು ಕಸಿಯಲು ಹೊರಟಿದೆ.
ಯುಪಿಎ ಸರ್ಕಾರ RCEP ಮಾತುಕತೆಯಲ್ಲಿ ಭಾಗಿಯಾಗಿದ್ದು ನಿಜ. ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ರೈತರ ಹಿತ ಕಾಪಾಡಲು ಕೆಲವು ಬದಲಾವಣೆಗಳನ್ನು ಬಯಸಿದ್ದರು. ಆದರೆ ಮೋದಿಯವರು ಅವರು ಇಡೀ ದೇಶವನ್ನು ಕತ್ತಲಲ್ಲಿಟ್ಟು ಈ ಒಪ್ಪಂದಕ್ಕೆ ಸಹಿ ಹಾಕಲು ಹೊರಟಿದ್ದಾರೆ. ಎಲ್ಲಿದೆ ಪಾರದರ್ಶಕತೆ? ನಮ್ಮ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿಯವರು FTA ವಿರೋಧಿಸಲು ಕರೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. #IOpposeRCEP #NoRCEP #RCEPಬೇಡ ಎಂದು ಪೋಸ್ಟ್‌ ಮಾಡಿದ್ದಾರೆ.
ಅಂದ ಹಾಗೇ ಕೇಂದ್ರ ಸರಕಾರ, ಆರ್‌ಸಿಇಪಿ ಒಪ್ಪಂದದ ಮೂಲಕ ದೇಶದ ಕೃಷಿ ವಲಯವನ್ನು ತೆರಿಗೆ ಮುಕ್ತ ವ್ಯಾಪಾರ ವಲಯಕ್ಕೆ ಸೇರಿಸಲು ಮುಂದಾಗಿದೆ. ಇದು ದೇಶದ ಕೃಷಿ ವಲಯಕ್ಕೆ ಕಂಟಕಪ್ರಾಯವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರೈತರ ಪಾಲಿಗೆ ಇದು ಮರಣಶಾಸನವಾಗಲಿದೆ ಎಂದು ಹಲವು ಕಡೆ ಅನ್ನದಾತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಆರ್‌ಸಿಇಪಿ ಒಪ್ಪಂದ ದೇಶಕ್ಕೆ ಮಾರಕವಾಗಲಿದೆ ಎಂಬುದು ಆರ್ಥಿಕ ತಜ್ಞರ ಮಾತು. ಹೀಗಿರುವಾಗ ಆರ್‌ಸಿಇಪಿ ಒಪ್ಪಂದಕ್ಕೆ ಮುಂದಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮಕ್ಕೆ ಖಂಡನೆ, ಆಕ್ರೊಶ ವ್ಯಕ್ತವಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...