Homeಕರ್ನಾಟಕಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ | ಶಿಕ್ಷಣ ಇಲಾಖೆಯ ಕ್ರಮಕ್ಕೆ...

ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ | ಶಿಕ್ಷಣ ಇಲಾಖೆಯ ಕ್ರಮಕ್ಕೆ ತಜ್ಞರ ವಿರೋಧ

ಸರಕಾರಿ ಶಾಲೆಗಳನ್ನು ಮುಚ್ಚಲು ಸರಕಾರ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮತ್ತು ಹೆಚ್ಚುವರಿ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಶಿಕ್ಷಣ ಇಲಾಖೆ ಕ್ರಮವನ್ನು ಶಿಕ್ಷಣ ತಜ್ಞರು ವಿರೋಧಿಸಿದ್ದು, “ಹೆಚ್ಚುವರಿ ಪ್ರಕ್ರಿಯೆ ಮಾಡುವ ಮೂಲಕ ಸರಕಾರಿ ಶಾಲೆಗಳನ್ನು ಮುಚ್ಚಲು ಸರಕಾರ ಮುಂದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ತಜ್ಞರ ಗುಂಪಾದ, ‘ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ-ಕರ್ನಾಟಕ’ದ ಪ್ರಧಾನ ಸಂಚಾಲಕರಾದ ಡಾ. ನಿರಂಜನಾರಾಧ್ಯ ವಿ.ಪಿ. ಅವರು, “ಶಾಲೆಗಳು 2022-23 ನೇ ಶೈಕ್ಷಣಿಕ ವರ್ಷದ ಕೊನೆಯಲ್ಲಿದ್ದು, ಶಿಕ್ಷಕರು ನಿಗದಿತ ಪಠ್ಯವಸ್ತು ಮುಗಿಸಿ, ನಿರಂತರ ಹಾಗು ವ್ಯಾಪಕ ಮೌಲ್ಯ ಮಾಪನದ ಮೂಲಕ ಮೌಲ್ಯಾಂಕನ ಮುಗಿಸಿ, ಮಕ್ಕಳ ಕಲಿಕೆಯನ್ನು ಪರಾಮರ್ಶಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಶಿಕ್ಷಕರನ್ನು ಮಾನಸಿಕವಾಗಿ ತೊಂದರೆಗೆ ಗುರಿಪಡಿಸುವುದು ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಅವೈಜ್ಞಾನಿಕ ಕ್ರಮವಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಮರು ಹೊಂದಾಣಿಕೆಯ ವಿಧಾನವು ಶಿಕ್ಷಣ ಹಕ್ಕು ಕಾಯಿದೆಯ ಗೊತ್ತುಪಡಿಸಿರುವ ಪ್ರಾಥಮಿಕ ಹಾಗು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಇರಲೇಬೇಕಾದ ಕನಿಷ್ಠ ಶಿಕ್ಷಕರ ಸಂಖ್ಯೆಗೆ ವಿರುದ್ಧವಾಗಿದೆ. ಈ ಪ್ರಕ್ರಿಯೆ ಸರ್ಕಾರಿ ಕನ್ನಡ ಶಾಲೆಗಳಿಗೆ ಮಾರಕವಾಗಿ ಪರಿಣಮಿಸಲಿದೆ” ಎಂದು ನಿರಂಜನಾರಾಧ್ಯ ಎಚ್ಚರಿಸಿದ್ದಾರೆ.

“ಶೈಕ್ಷಣಿಕ ವರ್ಷದಲ್ಲಿ ಬಹು ಮುಖ್ಯ ಘಟ್ಟವಾದ, ಜನವರಿ-ಫೆಬ್ರವರಿ -ಮಾರ್ಚ್ ತಿಂಗಳುಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗು ಕಲಿಕಾ ಹಿತದೃಷ್ಟಿಯಿಂದ ತುಂಬಾ ಮಹತ್ವದ ಕಲಿಕಾ ದಿನಗಳಾಗಿರುತ್ತವೆ. ಈ ಸಂದರ್ಭದಲ್ಲಿ ಶಿಕ್ಷಕರ ಹೆಚ್ಚುವರಿ ಅಥವಾ ಮರು ಹೊಂದಾಣಿಕೆ ಪ್ರಕ್ರಿಯೆ ಆರಂಭಿಸುವುದು ನೇರವಾಗಿ ಕಲಿಕೆಯ ಮೇಲೆ ಪರಿಣಾಮ ಬೀರುವುದಲ್ಲದೆ ಶಿಕ್ಷಕರು ಮಾನಸಿಕವಾಗಿ ತೊಂದರೆಗೊಳಗಾಗುತ್ತಾರೆ” ಎಂದು ಅವರು  ಆತಂಕ ವ್ಯಕ್ತಪಡಿಸಿದ್ದಾರೆ.

“ಕಲಿಕಾ ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಶಿಕ್ಷಕರು ತನ್ನದೇ ಆದ ಯೋಜನೆ ಹೊಂದಿರುತ್ತಾರೆ. ಶೈಕ್ಷಣಿಕ ವರ್ಷ ಮುಕ್ತಾಯವಾಗುವ ಸಂದರ್ಭದಲ್ಲಿ ಪರಿಣಾಮಕಾರಿ ಕಲಿಕೆಗೆ ಏನು ಮಾಡಬೇಕು ಎಂಬುದರ ಬಗ್ಗೆ ತನ್ನದೇ ಆದ ಕ್ರಿಯಾ ಯೋಜನೆ ಅವರು ಹೊಂದಿರುತ್ತಾರೆ. ಈ ಘಟ್ಟದಲ್ಲಿ ಹೆಚ್ಚುವರಿ – ಮರು ಹೊಂದಾಣಿಕೆ ಪ್ರಕ್ರಿಯೆ ಶಿಕ್ಷಕರ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತದೆ. ಇದು ಸರಕಾರವೇ ಸರಕಾರೀ ಶಾಲೆಗಳನ್ನು ಮುಚ್ಚುವ ಕಾರ್ಯ ಯೋಜನೆಯಂತಿದೆ” ಎಂದು ಅವರು ಹೇಳಿದ್ದಾರೆ.

“ಹೆಚ್ಚುವರಿ ಮತ್ತು ಮರು ಹೊಂದಾಣಿಕೆಗೆ ಒಳಪಟ್ಟ ಶಿಕ್ಷಕ/ ಶಿಕ್ಷಕಿ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಈ ಶಾಲೆ ಬಿಟ್ಟು ಮತ್ತೊಂದು ಶಾಲೆಗೆ ಹೋಗುವುದರಿಂದ, ಅಲ್ಲಿನ ಪರಿಸ್ಥಿತಿಗೆ ಶಿಕ್ಷಕರು ತಕ್ಷಣ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ವಿದ್ಯಾರ್ಥಿಗಳು ಸಹ ಬದಲಾದ ಕಲಿಕಾ ವ್ಯವಸ್ಥೆಗೆ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ಹೀಗಾಗಿ, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತ ದೃಷ್ಟಿಯಿಂದ ಒಳ್ಳೆಯದಲ್ಲ” ಎಂದು ಅವರು ತಿಳಿಸಿದ್ದಾರೆ.

ಇಂತಹ ಅವೈಜ್ಞಾನಿಕ ನಿಯಮ ಅಳವಡಿಸಿಕೊಂಡು ಮರು ಹೊಂದಾಣಿಕೆ ಹಾಗು ಶಿಕ್ಷಕರ ಹೆಚ್ಚುವರಿ ಮಾಡುವುದರಿಂದ ಸರ್ಕಾರಿ ಶಾಲೆಗಳನ್ನು ಶಾಶ್ವತವಾಗಿ ಮುಚ್ಚಬೇಕೆಂಬ ತೀರ್ಮಾನಕ್ಕೆ ಸರ್ಕಾರ ಬಂದಂತಿದೆ ಎಂದು ಅನುಮಾನ ವ್ಯಕ್ತಪಡಿಸಿರುವ ನಿರಂಜನಾರಾಧ್ಯ ಅವರು, “ಸಂಪನ್ಮೂಲಗಳನ್ನು ಕಡಿತಗೊಳಿಸಿ ಆ ಮೂಲಕ ಸರಕಾರೀ ಶಾಲೆಗಳನ್ನು ಮುಚ್ಚಿ ವಿಲೀನಗೊಳಿಸಿ ಖಾಸಗೀಕರಣಕ್ಕೆ ಅನುವು ಮಾಡಿಕೊಡಬೇಕೆಂಬ ರಾಷ್ಟ್ರೀಯ ಶಿಕ್ಷಣ ನೀತಿಯ ಹುನ್ನಾರ ಈಗ ಬಯಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಮಂಜೂರಾಗಿರುವ ಶಿಕ್ಷಕರ ಹುದ್ದೆಗಳ ಪೈಕಿ 2019-20 ರಲ್ಲಿ 22,200 , 2020-21 ರಲ್ಲಿ 34,079 ಮತ್ತು 2021-22 ರಲ್ಲಿ 1,41,358 ಹುದ್ದೆಗಳು ಖಾಲಿ ಇವೆ. ದೇಶದಲ್ಲಿ ಅತಿ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇರುವ ರಾಜ್ಯ ಕರ್ನಾಟಕವಾಗಿ ಹೊರಹೊಮ್ಮಿದೆ. “ಖಾಲಿ ಇರುವ ಹುದ್ದೆಗಳನ್ನು ತುಂಬದೇ ಇಲಾಖೆ ಮರು ಹೊಂದಾಣಿಕೆ ಹಾಗು ಹೆಚ್ಚುವರಿ ನೆಪದಲ್ಲಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇವೆ ಎಂಬುದು ಹಾಸ್ಯಾಸ್ಪದ” ಎಂದು ನಿರಂಜನಾರಾಧ್ಯ ಹೇಳಿದ್ದಾರೆ..

“ಒಂದೆಡೆ ,ಮುಖ್ಯಮಂತ್ರಿಯವರು ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ ಎಂದರೆ, ಮತ್ತೊಂದೆಡೆ ಶಿಕ್ಷಣ ಸಚಿವರು ಸರಕಾರಿ ಶಾಲೆಗಳನ್ನು ಮುಚ್ಚಲು ಶಿಕ್ಷಕರ ಮರು ಹೊಂದಾಣಿಕೆ ಹಾಗು ಹೆಚ್ಚುವರಿ ಪ್ರಕ್ರಿಯೆ ಆರಂಭಿಸಿದ್ದಾರೆ. ಸರಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಸರಕಾರೀ ಶಾಲೆಗಳ ಸಬಲೀಕರಣ ವರದಿ 2017 ರ ಅನ್ವಯ ಎಲ್ಲ ಸರಕಾರೀ ಶಾಲೆಗಳಿಗೆ ವಿಷಯವಾರು, ತರಗತಿವಾರು ಶಿಕ್ಷಕ ಹುದ್ದೆಗಳನ್ನು ಮಂಜೂರು ಮಾಡುವ ಮೂಲಕ ಸರಕಾರೀ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು” ಎಂದು ಅಭಿವೃದ್ಧಿ ಶಿಕ್ಷಣ ತಜ್ಞರಾದ ಡಾ.ನಿರಂಜನಾರಾಧ್ಯ ವಿ.ಪಿ. ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...