Homeಕರ್ನಾಟಕಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ | ಶಿಕ್ಷಣ ಇಲಾಖೆಯ ಕ್ರಮಕ್ಕೆ...

ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ | ಶಿಕ್ಷಣ ಇಲಾಖೆಯ ಕ್ರಮಕ್ಕೆ ತಜ್ಞರ ವಿರೋಧ

ಸರಕಾರಿ ಶಾಲೆಗಳನ್ನು ಮುಚ್ಚಲು ಸರಕಾರ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮತ್ತು ಹೆಚ್ಚುವರಿ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಶಿಕ್ಷಣ ಇಲಾಖೆ ಕ್ರಮವನ್ನು ಶಿಕ್ಷಣ ತಜ್ಞರು ವಿರೋಧಿಸಿದ್ದು, “ಹೆಚ್ಚುವರಿ ಪ್ರಕ್ರಿಯೆ ಮಾಡುವ ಮೂಲಕ ಸರಕಾರಿ ಶಾಲೆಗಳನ್ನು ಮುಚ್ಚಲು ಸರಕಾರ ಮುಂದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ತಜ್ಞರ ಗುಂಪಾದ, ‘ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ-ಕರ್ನಾಟಕ’ದ ಪ್ರಧಾನ ಸಂಚಾಲಕರಾದ ಡಾ. ನಿರಂಜನಾರಾಧ್ಯ ವಿ.ಪಿ. ಅವರು, “ಶಾಲೆಗಳು 2022-23 ನೇ ಶೈಕ್ಷಣಿಕ ವರ್ಷದ ಕೊನೆಯಲ್ಲಿದ್ದು, ಶಿಕ್ಷಕರು ನಿಗದಿತ ಪಠ್ಯವಸ್ತು ಮುಗಿಸಿ, ನಿರಂತರ ಹಾಗು ವ್ಯಾಪಕ ಮೌಲ್ಯ ಮಾಪನದ ಮೂಲಕ ಮೌಲ್ಯಾಂಕನ ಮುಗಿಸಿ, ಮಕ್ಕಳ ಕಲಿಕೆಯನ್ನು ಪರಾಮರ್ಶಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಶಿಕ್ಷಕರನ್ನು ಮಾನಸಿಕವಾಗಿ ತೊಂದರೆಗೆ ಗುರಿಪಡಿಸುವುದು ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಅವೈಜ್ಞಾನಿಕ ಕ್ರಮವಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಮರು ಹೊಂದಾಣಿಕೆಯ ವಿಧಾನವು ಶಿಕ್ಷಣ ಹಕ್ಕು ಕಾಯಿದೆಯ ಗೊತ್ತುಪಡಿಸಿರುವ ಪ್ರಾಥಮಿಕ ಹಾಗು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಇರಲೇಬೇಕಾದ ಕನಿಷ್ಠ ಶಿಕ್ಷಕರ ಸಂಖ್ಯೆಗೆ ವಿರುದ್ಧವಾಗಿದೆ. ಈ ಪ್ರಕ್ರಿಯೆ ಸರ್ಕಾರಿ ಕನ್ನಡ ಶಾಲೆಗಳಿಗೆ ಮಾರಕವಾಗಿ ಪರಿಣಮಿಸಲಿದೆ” ಎಂದು ನಿರಂಜನಾರಾಧ್ಯ ಎಚ್ಚರಿಸಿದ್ದಾರೆ.

“ಶೈಕ್ಷಣಿಕ ವರ್ಷದಲ್ಲಿ ಬಹು ಮುಖ್ಯ ಘಟ್ಟವಾದ, ಜನವರಿ-ಫೆಬ್ರವರಿ -ಮಾರ್ಚ್ ತಿಂಗಳುಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗು ಕಲಿಕಾ ಹಿತದೃಷ್ಟಿಯಿಂದ ತುಂಬಾ ಮಹತ್ವದ ಕಲಿಕಾ ದಿನಗಳಾಗಿರುತ್ತವೆ. ಈ ಸಂದರ್ಭದಲ್ಲಿ ಶಿಕ್ಷಕರ ಹೆಚ್ಚುವರಿ ಅಥವಾ ಮರು ಹೊಂದಾಣಿಕೆ ಪ್ರಕ್ರಿಯೆ ಆರಂಭಿಸುವುದು ನೇರವಾಗಿ ಕಲಿಕೆಯ ಮೇಲೆ ಪರಿಣಾಮ ಬೀರುವುದಲ್ಲದೆ ಶಿಕ್ಷಕರು ಮಾನಸಿಕವಾಗಿ ತೊಂದರೆಗೊಳಗಾಗುತ್ತಾರೆ” ಎಂದು ಅವರು  ಆತಂಕ ವ್ಯಕ್ತಪಡಿಸಿದ್ದಾರೆ.

“ಕಲಿಕಾ ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಶಿಕ್ಷಕರು ತನ್ನದೇ ಆದ ಯೋಜನೆ ಹೊಂದಿರುತ್ತಾರೆ. ಶೈಕ್ಷಣಿಕ ವರ್ಷ ಮುಕ್ತಾಯವಾಗುವ ಸಂದರ್ಭದಲ್ಲಿ ಪರಿಣಾಮಕಾರಿ ಕಲಿಕೆಗೆ ಏನು ಮಾಡಬೇಕು ಎಂಬುದರ ಬಗ್ಗೆ ತನ್ನದೇ ಆದ ಕ್ರಿಯಾ ಯೋಜನೆ ಅವರು ಹೊಂದಿರುತ್ತಾರೆ. ಈ ಘಟ್ಟದಲ್ಲಿ ಹೆಚ್ಚುವರಿ – ಮರು ಹೊಂದಾಣಿಕೆ ಪ್ರಕ್ರಿಯೆ ಶಿಕ್ಷಕರ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತದೆ. ಇದು ಸರಕಾರವೇ ಸರಕಾರೀ ಶಾಲೆಗಳನ್ನು ಮುಚ್ಚುವ ಕಾರ್ಯ ಯೋಜನೆಯಂತಿದೆ” ಎಂದು ಅವರು ಹೇಳಿದ್ದಾರೆ.

“ಹೆಚ್ಚುವರಿ ಮತ್ತು ಮರು ಹೊಂದಾಣಿಕೆಗೆ ಒಳಪಟ್ಟ ಶಿಕ್ಷಕ/ ಶಿಕ್ಷಕಿ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಈ ಶಾಲೆ ಬಿಟ್ಟು ಮತ್ತೊಂದು ಶಾಲೆಗೆ ಹೋಗುವುದರಿಂದ, ಅಲ್ಲಿನ ಪರಿಸ್ಥಿತಿಗೆ ಶಿಕ್ಷಕರು ತಕ್ಷಣ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ವಿದ್ಯಾರ್ಥಿಗಳು ಸಹ ಬದಲಾದ ಕಲಿಕಾ ವ್ಯವಸ್ಥೆಗೆ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ಹೀಗಾಗಿ, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತ ದೃಷ್ಟಿಯಿಂದ ಒಳ್ಳೆಯದಲ್ಲ” ಎಂದು ಅವರು ತಿಳಿಸಿದ್ದಾರೆ.

ಇಂತಹ ಅವೈಜ್ಞಾನಿಕ ನಿಯಮ ಅಳವಡಿಸಿಕೊಂಡು ಮರು ಹೊಂದಾಣಿಕೆ ಹಾಗು ಶಿಕ್ಷಕರ ಹೆಚ್ಚುವರಿ ಮಾಡುವುದರಿಂದ ಸರ್ಕಾರಿ ಶಾಲೆಗಳನ್ನು ಶಾಶ್ವತವಾಗಿ ಮುಚ್ಚಬೇಕೆಂಬ ತೀರ್ಮಾನಕ್ಕೆ ಸರ್ಕಾರ ಬಂದಂತಿದೆ ಎಂದು ಅನುಮಾನ ವ್ಯಕ್ತಪಡಿಸಿರುವ ನಿರಂಜನಾರಾಧ್ಯ ಅವರು, “ಸಂಪನ್ಮೂಲಗಳನ್ನು ಕಡಿತಗೊಳಿಸಿ ಆ ಮೂಲಕ ಸರಕಾರೀ ಶಾಲೆಗಳನ್ನು ಮುಚ್ಚಿ ವಿಲೀನಗೊಳಿಸಿ ಖಾಸಗೀಕರಣಕ್ಕೆ ಅನುವು ಮಾಡಿಕೊಡಬೇಕೆಂಬ ರಾಷ್ಟ್ರೀಯ ಶಿಕ್ಷಣ ನೀತಿಯ ಹುನ್ನಾರ ಈಗ ಬಯಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಮಂಜೂರಾಗಿರುವ ಶಿಕ್ಷಕರ ಹುದ್ದೆಗಳ ಪೈಕಿ 2019-20 ರಲ್ಲಿ 22,200 , 2020-21 ರಲ್ಲಿ 34,079 ಮತ್ತು 2021-22 ರಲ್ಲಿ 1,41,358 ಹುದ್ದೆಗಳು ಖಾಲಿ ಇವೆ. ದೇಶದಲ್ಲಿ ಅತಿ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇರುವ ರಾಜ್ಯ ಕರ್ನಾಟಕವಾಗಿ ಹೊರಹೊಮ್ಮಿದೆ. “ಖಾಲಿ ಇರುವ ಹುದ್ದೆಗಳನ್ನು ತುಂಬದೇ ಇಲಾಖೆ ಮರು ಹೊಂದಾಣಿಕೆ ಹಾಗು ಹೆಚ್ಚುವರಿ ನೆಪದಲ್ಲಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇವೆ ಎಂಬುದು ಹಾಸ್ಯಾಸ್ಪದ” ಎಂದು ನಿರಂಜನಾರಾಧ್ಯ ಹೇಳಿದ್ದಾರೆ..

“ಒಂದೆಡೆ ,ಮುಖ್ಯಮಂತ್ರಿಯವರು ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ ಎಂದರೆ, ಮತ್ತೊಂದೆಡೆ ಶಿಕ್ಷಣ ಸಚಿವರು ಸರಕಾರಿ ಶಾಲೆಗಳನ್ನು ಮುಚ್ಚಲು ಶಿಕ್ಷಕರ ಮರು ಹೊಂದಾಣಿಕೆ ಹಾಗು ಹೆಚ್ಚುವರಿ ಪ್ರಕ್ರಿಯೆ ಆರಂಭಿಸಿದ್ದಾರೆ. ಸರಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಸರಕಾರೀ ಶಾಲೆಗಳ ಸಬಲೀಕರಣ ವರದಿ 2017 ರ ಅನ್ವಯ ಎಲ್ಲ ಸರಕಾರೀ ಶಾಲೆಗಳಿಗೆ ವಿಷಯವಾರು, ತರಗತಿವಾರು ಶಿಕ್ಷಕ ಹುದ್ದೆಗಳನ್ನು ಮಂಜೂರು ಮಾಡುವ ಮೂಲಕ ಸರಕಾರೀ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು” ಎಂದು ಅಭಿವೃದ್ಧಿ ಶಿಕ್ಷಣ ತಜ್ಞರಾದ ಡಾ.ನಿರಂಜನಾರಾಧ್ಯ ವಿ.ಪಿ. ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...