Homeಕರ್ನಾಟಕಮನುಷ್ಯತ್ವದ ಎದುರು ಮಂದಿರ, ಮಸೀದಿ ನಿಲ್ಲಿಸಲಾಗುತ್ತಿದೆ: ಪತ್ರಕರ್ತ ನವೀನ್‌ ಕುಮಾರ್

ಮನುಷ್ಯತ್ವದ ಎದುರು ಮಂದಿರ, ಮಸೀದಿ ನಿಲ್ಲಿಸಲಾಗುತ್ತಿದೆ: ಪತ್ರಕರ್ತ ನವೀನ್‌ ಕುಮಾರ್

- Advertisement -
- Advertisement -

‘ಮನುಷ್ಯತ್ವದ ಎದುರು ಮಂದಿರ ಮಸೀದಿ ನಿಲ್ಲಿಸಲಾಗುತ್ತಿದೆ’ ಎಂದು ಆರ್ಟಿಕಲ್ 19 ಇಂಡಿಯಾ ಸಂಪಾದಕ ನವೀನ್‌ ಕುಮಾರ್ ಕಳವಳ ವ್ಯಕ್ತಪಡಿಸಿದರು.

ಪತ್ರಕರ್ತೆ ಗೌರಿ ಲಂಕೇಶ್ ಅವರ ಜನ್ಮ ದಿನದ ಅಂಗವಾಗಿ ಬೆಂಗಳೂರಿನ ಬೆನ್ಸನ್ ಟೌನ್‌ನ ಇಂಡಿಯನ್ ಸೋಶಿಯಲ್ ಇನ್ಸ್‌ಟ್ಯೂಟ್‌ನಲ್ಲಿ ಭಾನುವಾರ ಆಯೋಜಿಸಿದ್ದ ‘ಗೌರಿ ದಿನ- ನಾಲ್ಕನೇ ಅಂಗದ ಮರು ನಿರ್ಮಾಣ ಚಿಂತನಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧರ್ಮ ರಕ್ಷಣೆಯ ಹೆಸರಿನಲ್ಲಿ ಯುವ ಜನರಿಂದ ಪೆನ್ನು, ಪುಸ್ತಕ ಕಿತ್ತುಕೊಂಡು ತಲ್ವಾರ್ ಕೊಡಲಾಗುತ್ತಿದೆ. ಧರ್ಮಗಳ ನಡುವೆ ದ್ವೇಷ ಬಿತ್ತಲಾಗುತ್ತಿದೆ ಎಂದರು.

ವಿಶ್ವ ವಿದ್ಯಾಲಯಗಳಲ್ಲಿ ಚಿಂತಕರಿದ್ದಾರೆ. ಆದರೆ, ಅವರ ಧ್ವನಿ ಅಡಗಿಸುತ್ತಿದ್ದಾರೆ. ಸತ್ಯ ಮಾತನಾಡುತ್ತಿದ್ದಾರೆ ಎಂದು ವಿಶ್ವ ವಿದ್ಯಾಲಯಗಳನ್ನು ಖಾಸಗೀಕರಣ ಮಾಡಿ ಮೂಗುದಾರ ಹಾಕಲಾಗುತ್ತಿದೆ. ಶುಲ್ಕ ಏರಿಸಿ ಬಡ, ಹಿಂದುಳಿದ ವರ್ಗದ ಮಕ್ಕಳನ್ನು ಶಿಕ್ಷಣದಿಂದ ದೂರ ಇಡಲಾಗುತ್ತಿದೆ ಎಂದು ಹೇಳಿದರು.

ಉತ್ತರ ಪ್ರದೇಶದ ಪತ್ರಕರ್ತೆ ಮೀನಾ ಕೊತ್ವಾಲ್‌ ಮಾತನಾಡಿ, ಧರ್ಮದ ಹೆಸರಿನಲ್ಲಿ ನಡೆಯುವ ದೌರ್ಜನ್ಯಕ್ಕೆ ಮೊದಲು ಬಲಿಯಾಗುವುದು ಮಹಿಳೆಯರು. ಧರ್ಮಗಳು ಮಹಿಳೆಯರ ಧ್ವನಿಯನ್ನು ಅಡಗಿಸುತ್ತಿದೆ. ಇದಕ್ಕೆ ಉದಾಹರಣೆ ಗೌರಿ ಲಂಕೇಶ್ ಅವರು. ಗೌರಿಯವರಿಗೆ ಗುಂಡಿಕ್ಕಲು ಧರ್ಮದ ಅಮಲೇ ಕಾರಣ. ನಾನೂ ಕೂಡ ಸತ್ಯ ಹೇಳುತ್ತೇನೆ. ಸಾವು ಬಂದರೂ ಸರಿ, ಸರ್ಕಾರದ ಕೈಗೊಂಬೆಯಾಗಲಾರೆ ಎಂದು ದಿಟ್ಟ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಇತರ ಗಣ್ಯರು, ದೇಶದ ಮಾಧ್ಯಮಗಳು ಮತ್ತು ಸರ್ಕಾರಗಳು ಒಂದು ಧರ್ಮದ ಪ್ರಚಾರಕರಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ದೇಶದ ಅಸ್ಮಿತೆಯಾದ ವೈವಿದ್ಯತೆಯ ಮೇಲೆ ಏಕತೆ ಎಂಬ ಒಂದು ಯೋಜಿತ ಸಿದ್ದಾಂತ ಹೇರಿಕೆಯ ಬಗ್ಗೆ ಆತಂಕದ ಮಾತುಗಳನ್ನಾಡಿದರು.

ಕೋಮುವಾದ ಮತ್ತು ಧಾರ್ಮಿಕ ರಾಜಕೀಯದ ವಿರುದ್ದ ಗೌರಿ ಲಂಕೇಶ್ ಯಾವ ರೀತಿ ಧ್ವನಿಯಾಗಿದ್ದರು ಎಂಬುವುದನ್ನು ಸ್ಮರಿಸಿಕೊಂಡರು. ಸರ್ಕಾರ ಮತ್ತು ಕೋಮುವಾದಿ ಸಿದ್ದಾಂತದ ವಿರುದ್ದ ಧ್ವನಿ ಎತ್ತಿದ ಯುವ ಹೋರಾಟಗಾರರು ಮತ್ತು ಪತ್ರಕರ್ತರನ್ನು ಕಾನೂನು ದುರ್ಬಳಕೆ ಮಾಡಿಕೊಂಡು ಯಾವ ರೀತಿ ಕಂಬಿ ಹಿಂದೆ ತಳ್ಳಲಾಗುತ್ತಿದೆ ಎಂದು ವಿವರಿಸಿದರು.

ಗೌರಿ ಮೆಮೋರಿಯಲ್ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿಂತಕರಾದ ತೀಸ್ತಾ ಸೆಟಲ್ವಾಡ್, ಪರಂಜಾಯ್ ಗುಹಾ ಠಾಕುರ್ತಾ, ಕವಿತಾ ಲಂಕೇಶ್, ಹರ್ಷ್ತೋಶ್ ಬಾಲ್, ಸುಮಿತ್ ಚವ್ಹಾಣ್, ಗೀತಾ ಶೇಷು, ಭವರ್ ಮೇಘವಂಶಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ‘ಕಾಂತರಾಜು ಆಯೋಗದ ವರದಿ ಸ್ವೀಕರಿಸುತ್ತೇನೆ…’; ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...