Homeಕರ್ನಾಟಕಮನುಷ್ಯತ್ವದ ಎದುರು ಮಂದಿರ, ಮಸೀದಿ ನಿಲ್ಲಿಸಲಾಗುತ್ತಿದೆ: ಪತ್ರಕರ್ತ ನವೀನ್‌ ಕುಮಾರ್

ಮನುಷ್ಯತ್ವದ ಎದುರು ಮಂದಿರ, ಮಸೀದಿ ನಿಲ್ಲಿಸಲಾಗುತ್ತಿದೆ: ಪತ್ರಕರ್ತ ನವೀನ್‌ ಕುಮಾರ್

- Advertisement -
- Advertisement -

‘ಮನುಷ್ಯತ್ವದ ಎದುರು ಮಂದಿರ ಮಸೀದಿ ನಿಲ್ಲಿಸಲಾಗುತ್ತಿದೆ’ ಎಂದು ಆರ್ಟಿಕಲ್ 19 ಇಂಡಿಯಾ ಸಂಪಾದಕ ನವೀನ್‌ ಕುಮಾರ್ ಕಳವಳ ವ್ಯಕ್ತಪಡಿಸಿದರು.

ಪತ್ರಕರ್ತೆ ಗೌರಿ ಲಂಕೇಶ್ ಅವರ ಜನ್ಮ ದಿನದ ಅಂಗವಾಗಿ ಬೆಂಗಳೂರಿನ ಬೆನ್ಸನ್ ಟೌನ್‌ನ ಇಂಡಿಯನ್ ಸೋಶಿಯಲ್ ಇನ್ಸ್‌ಟ್ಯೂಟ್‌ನಲ್ಲಿ ಭಾನುವಾರ ಆಯೋಜಿಸಿದ್ದ ‘ಗೌರಿ ದಿನ- ನಾಲ್ಕನೇ ಅಂಗದ ಮರು ನಿರ್ಮಾಣ ಚಿಂತನಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧರ್ಮ ರಕ್ಷಣೆಯ ಹೆಸರಿನಲ್ಲಿ ಯುವ ಜನರಿಂದ ಪೆನ್ನು, ಪುಸ್ತಕ ಕಿತ್ತುಕೊಂಡು ತಲ್ವಾರ್ ಕೊಡಲಾಗುತ್ತಿದೆ. ಧರ್ಮಗಳ ನಡುವೆ ದ್ವೇಷ ಬಿತ್ತಲಾಗುತ್ತಿದೆ ಎಂದರು.

ವಿಶ್ವ ವಿದ್ಯಾಲಯಗಳಲ್ಲಿ ಚಿಂತಕರಿದ್ದಾರೆ. ಆದರೆ, ಅವರ ಧ್ವನಿ ಅಡಗಿಸುತ್ತಿದ್ದಾರೆ. ಸತ್ಯ ಮಾತನಾಡುತ್ತಿದ್ದಾರೆ ಎಂದು ವಿಶ್ವ ವಿದ್ಯಾಲಯಗಳನ್ನು ಖಾಸಗೀಕರಣ ಮಾಡಿ ಮೂಗುದಾರ ಹಾಕಲಾಗುತ್ತಿದೆ. ಶುಲ್ಕ ಏರಿಸಿ ಬಡ, ಹಿಂದುಳಿದ ವರ್ಗದ ಮಕ್ಕಳನ್ನು ಶಿಕ್ಷಣದಿಂದ ದೂರ ಇಡಲಾಗುತ್ತಿದೆ ಎಂದು ಹೇಳಿದರು.

ಉತ್ತರ ಪ್ರದೇಶದ ಪತ್ರಕರ್ತೆ ಮೀನಾ ಕೊತ್ವಾಲ್‌ ಮಾತನಾಡಿ, ಧರ್ಮದ ಹೆಸರಿನಲ್ಲಿ ನಡೆಯುವ ದೌರ್ಜನ್ಯಕ್ಕೆ ಮೊದಲು ಬಲಿಯಾಗುವುದು ಮಹಿಳೆಯರು. ಧರ್ಮಗಳು ಮಹಿಳೆಯರ ಧ್ವನಿಯನ್ನು ಅಡಗಿಸುತ್ತಿದೆ. ಇದಕ್ಕೆ ಉದಾಹರಣೆ ಗೌರಿ ಲಂಕೇಶ್ ಅವರು. ಗೌರಿಯವರಿಗೆ ಗುಂಡಿಕ್ಕಲು ಧರ್ಮದ ಅಮಲೇ ಕಾರಣ. ನಾನೂ ಕೂಡ ಸತ್ಯ ಹೇಳುತ್ತೇನೆ. ಸಾವು ಬಂದರೂ ಸರಿ, ಸರ್ಕಾರದ ಕೈಗೊಂಬೆಯಾಗಲಾರೆ ಎಂದು ದಿಟ್ಟ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಇತರ ಗಣ್ಯರು, ದೇಶದ ಮಾಧ್ಯಮಗಳು ಮತ್ತು ಸರ್ಕಾರಗಳು ಒಂದು ಧರ್ಮದ ಪ್ರಚಾರಕರಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ದೇಶದ ಅಸ್ಮಿತೆಯಾದ ವೈವಿದ್ಯತೆಯ ಮೇಲೆ ಏಕತೆ ಎಂಬ ಒಂದು ಯೋಜಿತ ಸಿದ್ದಾಂತ ಹೇರಿಕೆಯ ಬಗ್ಗೆ ಆತಂಕದ ಮಾತುಗಳನ್ನಾಡಿದರು.

ಕೋಮುವಾದ ಮತ್ತು ಧಾರ್ಮಿಕ ರಾಜಕೀಯದ ವಿರುದ್ದ ಗೌರಿ ಲಂಕೇಶ್ ಯಾವ ರೀತಿ ಧ್ವನಿಯಾಗಿದ್ದರು ಎಂಬುವುದನ್ನು ಸ್ಮರಿಸಿಕೊಂಡರು. ಸರ್ಕಾರ ಮತ್ತು ಕೋಮುವಾದಿ ಸಿದ್ದಾಂತದ ವಿರುದ್ದ ಧ್ವನಿ ಎತ್ತಿದ ಯುವ ಹೋರಾಟಗಾರರು ಮತ್ತು ಪತ್ರಕರ್ತರನ್ನು ಕಾನೂನು ದುರ್ಬಳಕೆ ಮಾಡಿಕೊಂಡು ಯಾವ ರೀತಿ ಕಂಬಿ ಹಿಂದೆ ತಳ್ಳಲಾಗುತ್ತಿದೆ ಎಂದು ವಿವರಿಸಿದರು.

ಗೌರಿ ಮೆಮೋರಿಯಲ್ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿಂತಕರಾದ ತೀಸ್ತಾ ಸೆಟಲ್ವಾಡ್, ಪರಂಜಾಯ್ ಗುಹಾ ಠಾಕುರ್ತಾ, ಕವಿತಾ ಲಂಕೇಶ್, ಹರ್ಷ್ತೋಶ್ ಬಾಲ್, ಸುಮಿತ್ ಚವ್ಹಾಣ್, ಗೀತಾ ಶೇಷು, ಭವರ್ ಮೇಘವಂಶಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ‘ಕಾಂತರಾಜು ಆಯೋಗದ ವರದಿ ಸ್ವೀಕರಿಸುತ್ತೇನೆ…’; ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...