Homeಮುಖಪುಟನೋಟಾಗೆ ಅಧಿಕ ಮತಗಳು ಬಂದ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಿ- ಸುಪ್ರೀಂಗೆ ಅರ್ಜಿ ಸಲ್ಲಿಕೆ

ನೋಟಾಗೆ ಅಧಿಕ ಮತಗಳು ಬಂದ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಿ- ಸುಪ್ರೀಂಗೆ ಅರ್ಜಿ ಸಲ್ಲಿಕೆ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 36 ರಾಜಕೀಯ ಪಕ್ಷಗಳ ಅಭ್ಯರ್ಥಿಗಳಲ್ಲಿ 15 ಅಭ್ಯರ್ಥಿಗಳು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದರು.

- Advertisement -
- Advertisement -

ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ತಿರಸ್ಕರಿಸುವ ನೋಟಾಗೆ (NOTA) ಹೆಚ್ಚಿನ ಮತಗಳು ಬಂದರೆ ಆ ಕ್ಷೇತ್ರದಲ್ಲಿ ಚುನಾವಣೆ ರದ್ದುಗೊಳಿಸಿ, ಮತ್ತೆ ಚುನಾವಣೆ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು  ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಕಾನೂನು ಆಯೋಗವು ನೋಟಾ ಆಯ್ಕೆಯನ್ನು 1999 ರಲ್ಲಿ ಪ್ರಸ್ತಾಪಿಸಿತ್ತು ಇದನ್ನು ಸುಪ್ರೀಂ ಕೋರ್ಟ್ 2013 ರಲ್ಲಿ ಎತ್ತಿಹಿಡಿದಿದೆ. ಒಂದು ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸುವ ಮತದಾರರ ಹಕ್ಕಾಗಿದ್ದು, ಇದು ರಾಜಕೀಯ ವ್ಯವಸ್ಥೆಯನ್ನು ಶುದ್ಧೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿತ್ತು.

ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಪಿಐಎಲ್ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠವೂ ಕೇಂದ್ರ ಕಾನೂನು ಸಚಿವಾಲಯ ಮತ್ತು ಚುನಾವಣಾ ಆಯೋಗಕ್ಕೆ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡು: ಪ್ರಣಾಳಿಕೆಯಲ್ಲಿ ಸಿಎಎ ವಿರೋಧಿಸಿದ BJP ಮಿತ್ರಪಕ್ಷ AIADMK!

ನೋಟಾ ಹಕ್ಕು ಭ್ರಷ್ಟಾಚಾರವನ್ನು ಪರಿಶೀಲಿಸುತ್ತದೆ ಮತ್ತು ರಾಜಕೀಯ ಪಕ್ಷಗಳು ನಿರಂಕುಶಾಧಿಕಾರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದನ್ನು ತಡೆಯುತ್ತದೆ ಎಂದು ಪಿಐಎಲ್ ಅರ್ಜಿಯಲ್ಲಿ ಹೇಳಲಾಗಿದೆ.

“ಅಭ್ಯರ್ಥಿಯನ್ನು ತಿರಸ್ಕರಿಸುವ ಮತ್ತು ಆಯ್ಕೆ ಮಾಡುವ ಹಕ್ಕು ಜನರಿಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವ ಅಧಿಕಾರವನ್ನು ನೀಡುತ್ತದೆ. ಸ್ಪರ್ಧಿಸುವ ಅಭ್ಯರ್ಥಿಯ ಹಿನ್ನೆಲೆ ಅಥವಾ ಕಾರ್ಯಕ್ಷಮತೆಯ ಬಗ್ಗೆ ಮತದಾರರು ಅತೃಪ್ತರಾಗಿದ್ದರೆ, ಅವರು ಅಂತಹ ಅಭ್ಯರ್ಥಿಯನ್ನು ತಿರಸ್ಕರಿಸಲು ಮತ್ತು ಹೊಸ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನೋಟಾಗೆ ಮತ ನೀಡುತ್ತಾರೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಒಮ್ಮೆ ನೋಟಾ ಪಡೆದ ಆ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳನ್ನು ಮತ್ತೊಮ್ಮೆ ನಡೆಸುವ ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲು ಚುನಾವಣಾ ಆಯೋಗದ ನಿರ್ದೇಶನವನ್ನು ಅರ್ಜಿಯಲ್ಲಿ ಕೋರಲಾಗಿದೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ನೋಟಾ 6.5 ಲಕ್ಷ ಮತಗಳನ್ನು ಗಳಿಸಿದೆ. ಇದು ಒಟ್ಟಾರೆ ಮತಗಳ ಶೇಕಡಾ 1.06 ರಷ್ಟಿತ್ತು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 36 ರಾಜಕೀಯ ಪಕ್ಷಗಳ ಅಭ್ಯರ್ಥಿಗಳಲ್ಲಿ  15 ಜನರು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದರು.


‌ಇದನ್ನೂ ಓದಿ: ಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...