Homeಮುಖಪುಟನೋಟಾಗೆ ಅಧಿಕ ಮತಗಳು ಬಂದ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಿ- ಸುಪ್ರೀಂಗೆ ಅರ್ಜಿ ಸಲ್ಲಿಕೆ

ನೋಟಾಗೆ ಅಧಿಕ ಮತಗಳು ಬಂದ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಿ- ಸುಪ್ರೀಂಗೆ ಅರ್ಜಿ ಸಲ್ಲಿಕೆ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 36 ರಾಜಕೀಯ ಪಕ್ಷಗಳ ಅಭ್ಯರ್ಥಿಗಳಲ್ಲಿ 15 ಅಭ್ಯರ್ಥಿಗಳು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದರು.

- Advertisement -
- Advertisement -

ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ತಿರಸ್ಕರಿಸುವ ನೋಟಾಗೆ (NOTA) ಹೆಚ್ಚಿನ ಮತಗಳು ಬಂದರೆ ಆ ಕ್ಷೇತ್ರದಲ್ಲಿ ಚುನಾವಣೆ ರದ್ದುಗೊಳಿಸಿ, ಮತ್ತೆ ಚುನಾವಣೆ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು  ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಕಾನೂನು ಆಯೋಗವು ನೋಟಾ ಆಯ್ಕೆಯನ್ನು 1999 ರಲ್ಲಿ ಪ್ರಸ್ತಾಪಿಸಿತ್ತು ಇದನ್ನು ಸುಪ್ರೀಂ ಕೋರ್ಟ್ 2013 ರಲ್ಲಿ ಎತ್ತಿಹಿಡಿದಿದೆ. ಒಂದು ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸುವ ಮತದಾರರ ಹಕ್ಕಾಗಿದ್ದು, ಇದು ರಾಜಕೀಯ ವ್ಯವಸ್ಥೆಯನ್ನು ಶುದ್ಧೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿತ್ತು.

ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಪಿಐಎಲ್ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠವೂ ಕೇಂದ್ರ ಕಾನೂನು ಸಚಿವಾಲಯ ಮತ್ತು ಚುನಾವಣಾ ಆಯೋಗಕ್ಕೆ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡು: ಪ್ರಣಾಳಿಕೆಯಲ್ಲಿ ಸಿಎಎ ವಿರೋಧಿಸಿದ BJP ಮಿತ್ರಪಕ್ಷ AIADMK!

ನೋಟಾ ಹಕ್ಕು ಭ್ರಷ್ಟಾಚಾರವನ್ನು ಪರಿಶೀಲಿಸುತ್ತದೆ ಮತ್ತು ರಾಜಕೀಯ ಪಕ್ಷಗಳು ನಿರಂಕುಶಾಧಿಕಾರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದನ್ನು ತಡೆಯುತ್ತದೆ ಎಂದು ಪಿಐಎಲ್ ಅರ್ಜಿಯಲ್ಲಿ ಹೇಳಲಾಗಿದೆ.

“ಅಭ್ಯರ್ಥಿಯನ್ನು ತಿರಸ್ಕರಿಸುವ ಮತ್ತು ಆಯ್ಕೆ ಮಾಡುವ ಹಕ್ಕು ಜನರಿಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವ ಅಧಿಕಾರವನ್ನು ನೀಡುತ್ತದೆ. ಸ್ಪರ್ಧಿಸುವ ಅಭ್ಯರ್ಥಿಯ ಹಿನ್ನೆಲೆ ಅಥವಾ ಕಾರ್ಯಕ್ಷಮತೆಯ ಬಗ್ಗೆ ಮತದಾರರು ಅತೃಪ್ತರಾಗಿದ್ದರೆ, ಅವರು ಅಂತಹ ಅಭ್ಯರ್ಥಿಯನ್ನು ತಿರಸ್ಕರಿಸಲು ಮತ್ತು ಹೊಸ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನೋಟಾಗೆ ಮತ ನೀಡುತ್ತಾರೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಒಮ್ಮೆ ನೋಟಾ ಪಡೆದ ಆ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳನ್ನು ಮತ್ತೊಮ್ಮೆ ನಡೆಸುವ ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲು ಚುನಾವಣಾ ಆಯೋಗದ ನಿರ್ದೇಶನವನ್ನು ಅರ್ಜಿಯಲ್ಲಿ ಕೋರಲಾಗಿದೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ನೋಟಾ 6.5 ಲಕ್ಷ ಮತಗಳನ್ನು ಗಳಿಸಿದೆ. ಇದು ಒಟ್ಟಾರೆ ಮತಗಳ ಶೇಕಡಾ 1.06 ರಷ್ಟಿತ್ತು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 36 ರಾಜಕೀಯ ಪಕ್ಷಗಳ ಅಭ್ಯರ್ಥಿಗಳಲ್ಲಿ  15 ಜನರು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದರು.


‌ಇದನ್ನೂ ಓದಿ: ಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...