Homeಕರ್ನಾಟಕಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ವಿಧಾನಸಭಾ ಸದಸ್ಯರ ಕಾರ್ಯಗಾರವನ್ನು ಆಯೋಜಿಸುವುದಾಗಿ ಸ್ಪೀಕರ್‌ರವರು ತಿಳಿಸಿದ್ದಾರೆಂದು ರಮೇಶ್‌ ಬಾಬುರವರು ತಿಳಿಸಿದ್ದಾರೆ.

- Advertisement -
- Advertisement -

ನೂತನ ಶಾಸಕರಿಗೆ ಏರ್ಪಡಿಸಿರುವ ಕಾರ್ಯಾಗಾರದಲ್ಲಿ ಪ್ರೇರಣಾ ಉಪನ್ಯಾಸ ನೀಡಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಜಮಾತೆ ಇಸ್ಲಾಮಿ ಹಿಂದ್ ನ ಮುಹಮ್ಮದ್ ಕುಂಞ, ಬ್ರಹ್ಮಕುಮಾರಿಯ ಆಶಾ ದೀದಿ ಮತ್ತು ಬಲಪಂಥೀಯ ಬರಹಗಾರ ಗುರುರಾಜ ಕರ್ಜಗಿಯವರನ್ನು ಆಹ್ವಾನಿಸಿರುವ ಸ್ಪೀಕರ್ ಯು.ಟಿ ಖಾದರ್ ಕ್ರಮಕ್ಕೆ ಮಾಜಿ ಪರಿಷತ್ ಸದಸ್ಯರು ಮತ್ತು ಕಾಂಗ್ರೆಸ್ ವಕ್ತಾರರಾದ ರಮೇಶ್‌ ಬಾಬುರವರು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಆಯ್ಕೆಯಾದ ಸುಮಾರು 58 ಶಾಸಕರಿಗೆ ಜೂನ್ 26 ರಿಂದ 28ರ ವರೆಗೆ ನೆಲಮಂಗಲದಲ್ಲಿರುವ ವೀರೇಂದ್ರ ಹೆಗ್ಗಡೆಯವರ ‘ಕ್ಷೇಮವನ’ದಲ್ಲಿ ಮೂರುದಿನಗಳ ಶಿಬಿರ ಏರ್ಪಡಿಸಲಾಗಿದೆ. ಆದರೆ ಅಲ್ಲಿ ಮಾತನಾಡಲು ಆಹ್ವಾನಿಸಿರುವ ವ್ಯಕ್ತಿಗಳು ಒಂದಲ್ಲ ಹಲವು ರೀತಿಯಲ್ಲಿ ವಿವಾದಾತ್ಮಕವೆನಿಸಿದ್ದಾರೆ. ವಿವಾದಾತ್ಮಕ ಗುರು ರವಿಶಂಕರ್ ಗುರೂಜಿ ಮೇಲೆ ಅಕ್ರಮ ಭೂಪರಭಾರೆ ಪ್ರಕರಣವಿದೆ. ಅಲ್ಲದೇ ಅವರು ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ನಕ್ಸಲರಾಗುತ್ತಾರೆ ಎಂಬ ದ್ವೇ‍ಷದ ಹೇಳಿಕೆ ನೀಡಿದ್ದರು. ಇನ್ನು ಡಾ. ವಿರೇಂದ್ರ ಹೆಗಡೆಯವರು ಬಿಜೆಪಿ ನಾಮನಿರ್ದೇಶಿತ ರಾಜ್ಯಸಭಾ ಸಂಸದರಾಗಿದ್ದಾರೆ. ಡಾ. ಗುರುರಾಜ್ ಕರ್ಜಗಿ ಬಲಪಂಥೀಯ ಭಾಷಣಕಾರರಾಗಿದ್ದು, ಇತಿಹಾಸ ತಿರುಚುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಮೊಹಮ್ಮದ್ ಕುಂಞ ಸಹ ನೂತನ ಶಾಸಕರಿಗೆ ಪ್ರೇರಣೆ ಹೇಗೆ ನೀಡಬಲ್ಲರು ಎಂಬ ಪ್ರಶ್ನೆಗಳೆದ್ದಿವೆ.

ಕರ್ನಾಟಕ ವಿಧಾನಸಭಾ ಸದಸ್ಯರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಆಯೋಜನೆ ಸಮಂಜಸವಾಗಿರುತ್ತದೆ. ಭೌದ್ದಿಕವಾಗಿ ಮತ್ತು ದೈಹಿಕವಾಗಿ ಶಾಸಕರನ್ನು ಗಟ್ಟಿಗೊಳಿಸುವ ಯಾವುದೇ ಪ್ರಯತ್ನ ಔಚಿತ್ಯಪೂರ್ಣವಾಗಿರುತ್ತದೆ. ಇಂತಹ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳು ಸಮಾಜಮುಖಿಗಳಾಗಿರಬೇಕು. ಇವರು ಜೀವನಬದ್ಧತೆ, ಗಟ್ಟಿತನದ ಮೌಲ್ಯ ಮತ್ತು ಸಂವಿಧಾನದ ಆಶಯಗಳಿಗೆ ಪೂರಕವಾಗಿ ವಿಶಾಲವಾದ ಮಾನವೀಯ ಮೌಲ್ಯಗಳ ಚಿಂತನೆಗಳನ್ನು ಹೊಂದಿರಬೇಕು. ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಂಡವರನ್ನು ಅಥವಾ ಪೂರ್ವಗ್ರಹ ಪೀಡಿತರಾಗಿ ಚಿಂತಿಸುವವರನ್ನು ತರಭೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಷಯ ಮಂಡನೆಗೆ ನೀಡಿದರೆ, ಅಂತಹ ಬೋಧನೆಗಳು ಅಥವಾ ಚರ್ಚೆಗಳು ಶಿಬಿರದ ಒಟ್ಟಾರೆ ಮೌಲ್ಯಗಳನ್ನು ಕಳಂಕಗೊಳಿಸುತ್ತದೆ ಎಂದು ರಮೇಶ್‌ ಬಾಬುರವರು ಸ್ಪೀಕರ್‌ರವರಿಗೆ ಪತ್ರ ಬರೆದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಮತ್ತು ಕುವೆಂಪುರವರ ಸರ್ವಧರ್ಮಗಳ ಶಾಂತಿಯ ತೋಟದ ಕಲ್ಪನೆಗೆ ಭಂಗ ತರಲು ಪ್ರಯತ್ನಿಸಿದವರ ಹಿನ್ನೆಲೆಯನ್ನು, ತಂತ್ರಗಾರಿಕೆಯ ಪ್ರಯತ್ನವನ್ನು ತಾವು ಸೂಕ್ಷ್ಮವಾಗಿ ಗಮನಿಸಿರುತ್ತೀರಿ. ಅನೇಕ ಸಂದರ್ಭಗಳಲ್ಲಿ ಇಂತಹ ಶಕ್ತಿಗಳ ಕುತಂತ್ರಗಳನ್ನು ನೀವೂ ಸೇರಿದಂತೆ ನಾವೆಲ್ಲರೂ ಆಸಹಾಯಕರಾಗಿ ಎದುರಿಸಿದ ಪ್ರಸಂಗಗಳಿದೆ. ಇದರ ಹಿನ್ನೆಲೆಯಲ್ಲಿ ಸಂವಿಧಾನದ ಮೌಲ್ಯಗಳನ್ನು ಸಂರಕ್ಷಿಸುವ ಕೆಲಸವನ್ನು ನಾವೆಲ್ಲರೂ ತರಭೇತಿ ಶಿಬಿರಗಳಲ್ಲಿ ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಹಿರಿಯ ಸಂಸದೀಯ ಪಟುಗಳ ಅನುಭವದ ಹಂಚಿಕೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ವಿಷಯಗಳಿಗೆ ಮತ್ತು ಈ ದೇಶದ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಹಾಗೂ ಅದಕ್ಕೆ ಅನುಗುಣವಾಗಿ ಶಾಸಕರು ಕರ್ತವ್ಯ ನಿರ್ವಹಣೆ ಮಾಡುವ ಹಿನ್ನೆಲೆಯಲ್ಲಿ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ತಾವು ಉದ್ದೇಶಿತ ತರಭೇತಿ ಶಿಬಿರಕ್ಕೆ ಆಯ್ಕೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳ ಕುರಿತು ಅನೇಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ದಯಮಾಡಿ ಇದನ್ನು ಮರುಪರಿಶೀಲಿಸಲು ಕೋರುತ್ತೇನೆ. ಕೆಲವು ನಿವೃತ್ತ ಅಧಿಕಾರಿಗಳು ತಮಗೆ ತಪ್ಪು ಮಾಹಿತಿ ನೀಡಿರುವ ಸಾದ್ಯತೆ ಇದ್ದು, ದಯಮಾಡಿ ಸಂಸದೀಯ ವ್ಯವಸ್ಥೆಯ ಮೌಲ್ಯಗಳ ರಕ್ಷಣೆಯ ದೃಷ್ಟಿಯಿಂದ ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ಆನಂತರ ಮತ್ತೊಂದು ಪತ್ರಿಕಾ ಹೇಳಿಕೆ ಹೊರಡಿಸಿ, “ಸಂಪನ್ಮೂಲ ವ್ಯಕ್ತಿಗಳನ್ನು ಕರೆಸುವ ಸಂಬಂಧ ವಿಧಾನಸಭೆಯ ಗೌರವಾನ್ವಿತಾ ಸ್ಪೀಕರ್ ರವರಿಗೆ ನಾನು ಮನವಿಯನ್ನು ಸಲ್ಲಿಸಿ ಸುಧೀರ್ಘವಾಗಿ ಚರ್ಚಿಸಿರುತ್ತೇನೆ. ಗೌರವಾನ್ವಿತ ಸ್ಪೀಕರ್ ರವರು ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಸಂಬಂಧ ಅಂತಿಮ ಪಟ್ಟಿ ಇನ್ನೂ ಆಖೈರುಗೊಳಿಸಬೇಕಾಗಿದೆ ಎಂದು ತಿಳಿಸಿರುತ್ತಾರೆ. ಕರ್ನಾಟಕ ವಿಧಾನಸಭೆಯ ಪರಂಪರೆಗೆ ಅನುಗುಣವಾಗಿ ಮತ್ತು ರಾಜ್ಯದ ಸಂಸ್ಕೃತಿಗೆ ಅನುಗುಣವಾಗಿ ಎಲ್ಲರ ಭಾವನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪನ್ಮೂಲ ವ್ಯಕ್ತಿಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿರುತ್ತಾರೆ. ಮಾನ್ಯ ಸ್ಪೀಕರ್ ರವರು ನಾನು ನೀಡಿದ ಪತ್ರದಲ್ಲಿನ ಭಾವನೆಗಳನ್ನು ಪರಿಗಣಿಸುವುದಾಗಿ ತಿಳಿಸಿ ರಾಜ್ಯದ ವಿಧಾನಸಭೆಯ ಸಂಪ್ರದಾಯಕ್ಕೆ ಅನುಗುಣವಾಗಿ ಮತ್ತು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ವಿಧಾನಸಭಾ ಸದಸ್ಯರ ಕಾರ್ಯಗಾರವನ್ನು ಆಯೋಜಿಸುವುದಾಗಿ ಮತ್ತು ಕಾನೂನು ರಚನೆಯ ಹಿನ್ನೆಲೆಯಲ್ಲಿ ವಿಧಾನಸಭಾ ಸದಸ್ಯರಿಗೆ ಉಪಯುಕ್ತ ಆಗುವ ರೀತಿಯಲ್ಲಿ ಕಾರ್ಯಾಗಾರ ನಡೆಸುವುದಾಗಿ ತಿಳಿಸಿರುತ್ತಾರೆ. ಕಾರ್ಯಾಗಾರ ಶಿಬಿರದ ಸಂಬಂಧ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಬಂದಿರುವ ಎಲ್ಲಾ ಸಕರಾತ್ಮಕ ಅಂಶಗಳನ್ನು ಪರಿಗಣಿಸುವುದಾಗಿ ತಿಳಿಸಿರುತ್ತಾರೆ, ನನ್ನ ಪತ್ರದ ಸಂಬಂಧ ಮಾನ್ಯ ಸ್ಪೀಕರ್ ರವರು ಸುಧೀರ್ಘ ಸಮಯ ಚರ್ಚಿಸಿ ಪತ್ರದಲ್ಲಿನ ಅಂಶಗಳನ್ನು ಪರಿಗಣಿಸುವುದಾಗಿ ತಿಳಿಸಿದ್ದು, ಮಾನ್ಯ ಗೌರವಾನ್ವಿತ ಸ್ಪೀಕರ್ ರವರಿಗೆ ಮತ್ತು ವಿಧಾನಸಭಾ ಸಚಿವಲಾಯಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ರಮೇಶ್‌ ಬಾಬುರವರು ತಿಳಿಸಿದ್ದಾರೆ.

ಇದನ್ನೂ ಓದಿ: ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...