Homeಕರ್ನಾಟಕಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ವಿಧಾನಸಭಾ ಸದಸ್ಯರ ಕಾರ್ಯಗಾರವನ್ನು ಆಯೋಜಿಸುವುದಾಗಿ ಸ್ಪೀಕರ್‌ರವರು ತಿಳಿಸಿದ್ದಾರೆಂದು ರಮೇಶ್‌ ಬಾಬುರವರು ತಿಳಿಸಿದ್ದಾರೆ.

- Advertisement -
- Advertisement -

ನೂತನ ಶಾಸಕರಿಗೆ ಏರ್ಪಡಿಸಿರುವ ಕಾರ್ಯಾಗಾರದಲ್ಲಿ ಪ್ರೇರಣಾ ಉಪನ್ಯಾಸ ನೀಡಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಜಮಾತೆ ಇಸ್ಲಾಮಿ ಹಿಂದ್ ನ ಮುಹಮ್ಮದ್ ಕುಂಞ, ಬ್ರಹ್ಮಕುಮಾರಿಯ ಆಶಾ ದೀದಿ ಮತ್ತು ಬಲಪಂಥೀಯ ಬರಹಗಾರ ಗುರುರಾಜ ಕರ್ಜಗಿಯವರನ್ನು ಆಹ್ವಾನಿಸಿರುವ ಸ್ಪೀಕರ್ ಯು.ಟಿ ಖಾದರ್ ಕ್ರಮಕ್ಕೆ ಮಾಜಿ ಪರಿಷತ್ ಸದಸ್ಯರು ಮತ್ತು ಕಾಂಗ್ರೆಸ್ ವಕ್ತಾರರಾದ ರಮೇಶ್‌ ಬಾಬುರವರು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಆಯ್ಕೆಯಾದ ಸುಮಾರು 58 ಶಾಸಕರಿಗೆ ಜೂನ್ 26 ರಿಂದ 28ರ ವರೆಗೆ ನೆಲಮಂಗಲದಲ್ಲಿರುವ ವೀರೇಂದ್ರ ಹೆಗ್ಗಡೆಯವರ ‘ಕ್ಷೇಮವನ’ದಲ್ಲಿ ಮೂರುದಿನಗಳ ಶಿಬಿರ ಏರ್ಪಡಿಸಲಾಗಿದೆ. ಆದರೆ ಅಲ್ಲಿ ಮಾತನಾಡಲು ಆಹ್ವಾನಿಸಿರುವ ವ್ಯಕ್ತಿಗಳು ಒಂದಲ್ಲ ಹಲವು ರೀತಿಯಲ್ಲಿ ವಿವಾದಾತ್ಮಕವೆನಿಸಿದ್ದಾರೆ. ವಿವಾದಾತ್ಮಕ ಗುರು ರವಿಶಂಕರ್ ಗುರೂಜಿ ಮೇಲೆ ಅಕ್ರಮ ಭೂಪರಭಾರೆ ಪ್ರಕರಣವಿದೆ. ಅಲ್ಲದೇ ಅವರು ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ನಕ್ಸಲರಾಗುತ್ತಾರೆ ಎಂಬ ದ್ವೇ‍ಷದ ಹೇಳಿಕೆ ನೀಡಿದ್ದರು. ಇನ್ನು ಡಾ. ವಿರೇಂದ್ರ ಹೆಗಡೆಯವರು ಬಿಜೆಪಿ ನಾಮನಿರ್ದೇಶಿತ ರಾಜ್ಯಸಭಾ ಸಂಸದರಾಗಿದ್ದಾರೆ. ಡಾ. ಗುರುರಾಜ್ ಕರ್ಜಗಿ ಬಲಪಂಥೀಯ ಭಾಷಣಕಾರರಾಗಿದ್ದು, ಇತಿಹಾಸ ತಿರುಚುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಮೊಹಮ್ಮದ್ ಕುಂಞ ಸಹ ನೂತನ ಶಾಸಕರಿಗೆ ಪ್ರೇರಣೆ ಹೇಗೆ ನೀಡಬಲ್ಲರು ಎಂಬ ಪ್ರಶ್ನೆಗಳೆದ್ದಿವೆ.

ಕರ್ನಾಟಕ ವಿಧಾನಸಭಾ ಸದಸ್ಯರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಆಯೋಜನೆ ಸಮಂಜಸವಾಗಿರುತ್ತದೆ. ಭೌದ್ದಿಕವಾಗಿ ಮತ್ತು ದೈಹಿಕವಾಗಿ ಶಾಸಕರನ್ನು ಗಟ್ಟಿಗೊಳಿಸುವ ಯಾವುದೇ ಪ್ರಯತ್ನ ಔಚಿತ್ಯಪೂರ್ಣವಾಗಿರುತ್ತದೆ. ಇಂತಹ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳು ಸಮಾಜಮುಖಿಗಳಾಗಿರಬೇಕು. ಇವರು ಜೀವನಬದ್ಧತೆ, ಗಟ್ಟಿತನದ ಮೌಲ್ಯ ಮತ್ತು ಸಂವಿಧಾನದ ಆಶಯಗಳಿಗೆ ಪೂರಕವಾಗಿ ವಿಶಾಲವಾದ ಮಾನವೀಯ ಮೌಲ್ಯಗಳ ಚಿಂತನೆಗಳನ್ನು ಹೊಂದಿರಬೇಕು. ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಂಡವರನ್ನು ಅಥವಾ ಪೂರ್ವಗ್ರಹ ಪೀಡಿತರಾಗಿ ಚಿಂತಿಸುವವರನ್ನು ತರಭೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಷಯ ಮಂಡನೆಗೆ ನೀಡಿದರೆ, ಅಂತಹ ಬೋಧನೆಗಳು ಅಥವಾ ಚರ್ಚೆಗಳು ಶಿಬಿರದ ಒಟ್ಟಾರೆ ಮೌಲ್ಯಗಳನ್ನು ಕಳಂಕಗೊಳಿಸುತ್ತದೆ ಎಂದು ರಮೇಶ್‌ ಬಾಬುರವರು ಸ್ಪೀಕರ್‌ರವರಿಗೆ ಪತ್ರ ಬರೆದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಮತ್ತು ಕುವೆಂಪುರವರ ಸರ್ವಧರ್ಮಗಳ ಶಾಂತಿಯ ತೋಟದ ಕಲ್ಪನೆಗೆ ಭಂಗ ತರಲು ಪ್ರಯತ್ನಿಸಿದವರ ಹಿನ್ನೆಲೆಯನ್ನು, ತಂತ್ರಗಾರಿಕೆಯ ಪ್ರಯತ್ನವನ್ನು ತಾವು ಸೂಕ್ಷ್ಮವಾಗಿ ಗಮನಿಸಿರುತ್ತೀರಿ. ಅನೇಕ ಸಂದರ್ಭಗಳಲ್ಲಿ ಇಂತಹ ಶಕ್ತಿಗಳ ಕುತಂತ್ರಗಳನ್ನು ನೀವೂ ಸೇರಿದಂತೆ ನಾವೆಲ್ಲರೂ ಆಸಹಾಯಕರಾಗಿ ಎದುರಿಸಿದ ಪ್ರಸಂಗಗಳಿದೆ. ಇದರ ಹಿನ್ನೆಲೆಯಲ್ಲಿ ಸಂವಿಧಾನದ ಮೌಲ್ಯಗಳನ್ನು ಸಂರಕ್ಷಿಸುವ ಕೆಲಸವನ್ನು ನಾವೆಲ್ಲರೂ ತರಭೇತಿ ಶಿಬಿರಗಳಲ್ಲಿ ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಹಿರಿಯ ಸಂಸದೀಯ ಪಟುಗಳ ಅನುಭವದ ಹಂಚಿಕೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ವಿಷಯಗಳಿಗೆ ಮತ್ತು ಈ ದೇಶದ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಹಾಗೂ ಅದಕ್ಕೆ ಅನುಗುಣವಾಗಿ ಶಾಸಕರು ಕರ್ತವ್ಯ ನಿರ್ವಹಣೆ ಮಾಡುವ ಹಿನ್ನೆಲೆಯಲ್ಲಿ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ತಾವು ಉದ್ದೇಶಿತ ತರಭೇತಿ ಶಿಬಿರಕ್ಕೆ ಆಯ್ಕೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳ ಕುರಿತು ಅನೇಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ದಯಮಾಡಿ ಇದನ್ನು ಮರುಪರಿಶೀಲಿಸಲು ಕೋರುತ್ತೇನೆ. ಕೆಲವು ನಿವೃತ್ತ ಅಧಿಕಾರಿಗಳು ತಮಗೆ ತಪ್ಪು ಮಾಹಿತಿ ನೀಡಿರುವ ಸಾದ್ಯತೆ ಇದ್ದು, ದಯಮಾಡಿ ಸಂಸದೀಯ ವ್ಯವಸ್ಥೆಯ ಮೌಲ್ಯಗಳ ರಕ್ಷಣೆಯ ದೃಷ್ಟಿಯಿಂದ ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ಆನಂತರ ಮತ್ತೊಂದು ಪತ್ರಿಕಾ ಹೇಳಿಕೆ ಹೊರಡಿಸಿ, “ಸಂಪನ್ಮೂಲ ವ್ಯಕ್ತಿಗಳನ್ನು ಕರೆಸುವ ಸಂಬಂಧ ವಿಧಾನಸಭೆಯ ಗೌರವಾನ್ವಿತಾ ಸ್ಪೀಕರ್ ರವರಿಗೆ ನಾನು ಮನವಿಯನ್ನು ಸಲ್ಲಿಸಿ ಸುಧೀರ್ಘವಾಗಿ ಚರ್ಚಿಸಿರುತ್ತೇನೆ. ಗೌರವಾನ್ವಿತ ಸ್ಪೀಕರ್ ರವರು ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಸಂಬಂಧ ಅಂತಿಮ ಪಟ್ಟಿ ಇನ್ನೂ ಆಖೈರುಗೊಳಿಸಬೇಕಾಗಿದೆ ಎಂದು ತಿಳಿಸಿರುತ್ತಾರೆ. ಕರ್ನಾಟಕ ವಿಧಾನಸಭೆಯ ಪರಂಪರೆಗೆ ಅನುಗುಣವಾಗಿ ಮತ್ತು ರಾಜ್ಯದ ಸಂಸ್ಕೃತಿಗೆ ಅನುಗುಣವಾಗಿ ಎಲ್ಲರ ಭಾವನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪನ್ಮೂಲ ವ್ಯಕ್ತಿಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿರುತ್ತಾರೆ. ಮಾನ್ಯ ಸ್ಪೀಕರ್ ರವರು ನಾನು ನೀಡಿದ ಪತ್ರದಲ್ಲಿನ ಭಾವನೆಗಳನ್ನು ಪರಿಗಣಿಸುವುದಾಗಿ ತಿಳಿಸಿ ರಾಜ್ಯದ ವಿಧಾನಸಭೆಯ ಸಂಪ್ರದಾಯಕ್ಕೆ ಅನುಗುಣವಾಗಿ ಮತ್ತು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ವಿಧಾನಸಭಾ ಸದಸ್ಯರ ಕಾರ್ಯಗಾರವನ್ನು ಆಯೋಜಿಸುವುದಾಗಿ ಮತ್ತು ಕಾನೂನು ರಚನೆಯ ಹಿನ್ನೆಲೆಯಲ್ಲಿ ವಿಧಾನಸಭಾ ಸದಸ್ಯರಿಗೆ ಉಪಯುಕ್ತ ಆಗುವ ರೀತಿಯಲ್ಲಿ ಕಾರ್ಯಾಗಾರ ನಡೆಸುವುದಾಗಿ ತಿಳಿಸಿರುತ್ತಾರೆ. ಕಾರ್ಯಾಗಾರ ಶಿಬಿರದ ಸಂಬಂಧ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಬಂದಿರುವ ಎಲ್ಲಾ ಸಕರಾತ್ಮಕ ಅಂಶಗಳನ್ನು ಪರಿಗಣಿಸುವುದಾಗಿ ತಿಳಿಸಿರುತ್ತಾರೆ, ನನ್ನ ಪತ್ರದ ಸಂಬಂಧ ಮಾನ್ಯ ಸ್ಪೀಕರ್ ರವರು ಸುಧೀರ್ಘ ಸಮಯ ಚರ್ಚಿಸಿ ಪತ್ರದಲ್ಲಿನ ಅಂಶಗಳನ್ನು ಪರಿಗಣಿಸುವುದಾಗಿ ತಿಳಿಸಿದ್ದು, ಮಾನ್ಯ ಗೌರವಾನ್ವಿತ ಸ್ಪೀಕರ್ ರವರಿಗೆ ಮತ್ತು ವಿಧಾನಸಭಾ ಸಚಿವಲಾಯಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ರಮೇಶ್‌ ಬಾಬುರವರು ತಿಳಿಸಿದ್ದಾರೆ.

ಇದನ್ನೂ ಓದಿ: ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...