Homeಕರ್ನಾಟಕಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ವಿಧಾನಸಭಾ ಸದಸ್ಯರ ಕಾರ್ಯಗಾರವನ್ನು ಆಯೋಜಿಸುವುದಾಗಿ ಸ್ಪೀಕರ್‌ರವರು ತಿಳಿಸಿದ್ದಾರೆಂದು ರಮೇಶ್‌ ಬಾಬುರವರು ತಿಳಿಸಿದ್ದಾರೆ.

- Advertisement -
- Advertisement -

ನೂತನ ಶಾಸಕರಿಗೆ ಏರ್ಪಡಿಸಿರುವ ಕಾರ್ಯಾಗಾರದಲ್ಲಿ ಪ್ರೇರಣಾ ಉಪನ್ಯಾಸ ನೀಡಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಜಮಾತೆ ಇಸ್ಲಾಮಿ ಹಿಂದ್ ನ ಮುಹಮ್ಮದ್ ಕುಂಞ, ಬ್ರಹ್ಮಕುಮಾರಿಯ ಆಶಾ ದೀದಿ ಮತ್ತು ಬಲಪಂಥೀಯ ಬರಹಗಾರ ಗುರುರಾಜ ಕರ್ಜಗಿಯವರನ್ನು ಆಹ್ವಾನಿಸಿರುವ ಸ್ಪೀಕರ್ ಯು.ಟಿ ಖಾದರ್ ಕ್ರಮಕ್ಕೆ ಮಾಜಿ ಪರಿಷತ್ ಸದಸ್ಯರು ಮತ್ತು ಕಾಂಗ್ರೆಸ್ ವಕ್ತಾರರಾದ ರಮೇಶ್‌ ಬಾಬುರವರು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಆಯ್ಕೆಯಾದ ಸುಮಾರು 58 ಶಾಸಕರಿಗೆ ಜೂನ್ 26 ರಿಂದ 28ರ ವರೆಗೆ ನೆಲಮಂಗಲದಲ್ಲಿರುವ ವೀರೇಂದ್ರ ಹೆಗ್ಗಡೆಯವರ ‘ಕ್ಷೇಮವನ’ದಲ್ಲಿ ಮೂರುದಿನಗಳ ಶಿಬಿರ ಏರ್ಪಡಿಸಲಾಗಿದೆ. ಆದರೆ ಅಲ್ಲಿ ಮಾತನಾಡಲು ಆಹ್ವಾನಿಸಿರುವ ವ್ಯಕ್ತಿಗಳು ಒಂದಲ್ಲ ಹಲವು ರೀತಿಯಲ್ಲಿ ವಿವಾದಾತ್ಮಕವೆನಿಸಿದ್ದಾರೆ. ವಿವಾದಾತ್ಮಕ ಗುರು ರವಿಶಂಕರ್ ಗುರೂಜಿ ಮೇಲೆ ಅಕ್ರಮ ಭೂಪರಭಾರೆ ಪ್ರಕರಣವಿದೆ. ಅಲ್ಲದೇ ಅವರು ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ನಕ್ಸಲರಾಗುತ್ತಾರೆ ಎಂಬ ದ್ವೇ‍ಷದ ಹೇಳಿಕೆ ನೀಡಿದ್ದರು. ಇನ್ನು ಡಾ. ವಿರೇಂದ್ರ ಹೆಗಡೆಯವರು ಬಿಜೆಪಿ ನಾಮನಿರ್ದೇಶಿತ ರಾಜ್ಯಸಭಾ ಸಂಸದರಾಗಿದ್ದಾರೆ. ಡಾ. ಗುರುರಾಜ್ ಕರ್ಜಗಿ ಬಲಪಂಥೀಯ ಭಾಷಣಕಾರರಾಗಿದ್ದು, ಇತಿಹಾಸ ತಿರುಚುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಮೊಹಮ್ಮದ್ ಕುಂಞ ಸಹ ನೂತನ ಶಾಸಕರಿಗೆ ಪ್ರೇರಣೆ ಹೇಗೆ ನೀಡಬಲ್ಲರು ಎಂಬ ಪ್ರಶ್ನೆಗಳೆದ್ದಿವೆ.

ಕರ್ನಾಟಕ ವಿಧಾನಸಭಾ ಸದಸ್ಯರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಆಯೋಜನೆ ಸಮಂಜಸವಾಗಿರುತ್ತದೆ. ಭೌದ್ದಿಕವಾಗಿ ಮತ್ತು ದೈಹಿಕವಾಗಿ ಶಾಸಕರನ್ನು ಗಟ್ಟಿಗೊಳಿಸುವ ಯಾವುದೇ ಪ್ರಯತ್ನ ಔಚಿತ್ಯಪೂರ್ಣವಾಗಿರುತ್ತದೆ. ಇಂತಹ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳು ಸಮಾಜಮುಖಿಗಳಾಗಿರಬೇಕು. ಇವರು ಜೀವನಬದ್ಧತೆ, ಗಟ್ಟಿತನದ ಮೌಲ್ಯ ಮತ್ತು ಸಂವಿಧಾನದ ಆಶಯಗಳಿಗೆ ಪೂರಕವಾಗಿ ವಿಶಾಲವಾದ ಮಾನವೀಯ ಮೌಲ್ಯಗಳ ಚಿಂತನೆಗಳನ್ನು ಹೊಂದಿರಬೇಕು. ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಂಡವರನ್ನು ಅಥವಾ ಪೂರ್ವಗ್ರಹ ಪೀಡಿತರಾಗಿ ಚಿಂತಿಸುವವರನ್ನು ತರಭೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಷಯ ಮಂಡನೆಗೆ ನೀಡಿದರೆ, ಅಂತಹ ಬೋಧನೆಗಳು ಅಥವಾ ಚರ್ಚೆಗಳು ಶಿಬಿರದ ಒಟ್ಟಾರೆ ಮೌಲ್ಯಗಳನ್ನು ಕಳಂಕಗೊಳಿಸುತ್ತದೆ ಎಂದು ರಮೇಶ್‌ ಬಾಬುರವರು ಸ್ಪೀಕರ್‌ರವರಿಗೆ ಪತ್ರ ಬರೆದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಮತ್ತು ಕುವೆಂಪುರವರ ಸರ್ವಧರ್ಮಗಳ ಶಾಂತಿಯ ತೋಟದ ಕಲ್ಪನೆಗೆ ಭಂಗ ತರಲು ಪ್ರಯತ್ನಿಸಿದವರ ಹಿನ್ನೆಲೆಯನ್ನು, ತಂತ್ರಗಾರಿಕೆಯ ಪ್ರಯತ್ನವನ್ನು ತಾವು ಸೂಕ್ಷ್ಮವಾಗಿ ಗಮನಿಸಿರುತ್ತೀರಿ. ಅನೇಕ ಸಂದರ್ಭಗಳಲ್ಲಿ ಇಂತಹ ಶಕ್ತಿಗಳ ಕುತಂತ್ರಗಳನ್ನು ನೀವೂ ಸೇರಿದಂತೆ ನಾವೆಲ್ಲರೂ ಆಸಹಾಯಕರಾಗಿ ಎದುರಿಸಿದ ಪ್ರಸಂಗಗಳಿದೆ. ಇದರ ಹಿನ್ನೆಲೆಯಲ್ಲಿ ಸಂವಿಧಾನದ ಮೌಲ್ಯಗಳನ್ನು ಸಂರಕ್ಷಿಸುವ ಕೆಲಸವನ್ನು ನಾವೆಲ್ಲರೂ ತರಭೇತಿ ಶಿಬಿರಗಳಲ್ಲಿ ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಹಿರಿಯ ಸಂಸದೀಯ ಪಟುಗಳ ಅನುಭವದ ಹಂಚಿಕೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ವಿಷಯಗಳಿಗೆ ಮತ್ತು ಈ ದೇಶದ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಹಾಗೂ ಅದಕ್ಕೆ ಅನುಗುಣವಾಗಿ ಶಾಸಕರು ಕರ್ತವ್ಯ ನಿರ್ವಹಣೆ ಮಾಡುವ ಹಿನ್ನೆಲೆಯಲ್ಲಿ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ತಾವು ಉದ್ದೇಶಿತ ತರಭೇತಿ ಶಿಬಿರಕ್ಕೆ ಆಯ್ಕೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳ ಕುರಿತು ಅನೇಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ದಯಮಾಡಿ ಇದನ್ನು ಮರುಪರಿಶೀಲಿಸಲು ಕೋರುತ್ತೇನೆ. ಕೆಲವು ನಿವೃತ್ತ ಅಧಿಕಾರಿಗಳು ತಮಗೆ ತಪ್ಪು ಮಾಹಿತಿ ನೀಡಿರುವ ಸಾದ್ಯತೆ ಇದ್ದು, ದಯಮಾಡಿ ಸಂಸದೀಯ ವ್ಯವಸ್ಥೆಯ ಮೌಲ್ಯಗಳ ರಕ್ಷಣೆಯ ದೃಷ್ಟಿಯಿಂದ ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ಆನಂತರ ಮತ್ತೊಂದು ಪತ್ರಿಕಾ ಹೇಳಿಕೆ ಹೊರಡಿಸಿ, “ಸಂಪನ್ಮೂಲ ವ್ಯಕ್ತಿಗಳನ್ನು ಕರೆಸುವ ಸಂಬಂಧ ವಿಧಾನಸಭೆಯ ಗೌರವಾನ್ವಿತಾ ಸ್ಪೀಕರ್ ರವರಿಗೆ ನಾನು ಮನವಿಯನ್ನು ಸಲ್ಲಿಸಿ ಸುಧೀರ್ಘವಾಗಿ ಚರ್ಚಿಸಿರುತ್ತೇನೆ. ಗೌರವಾನ್ವಿತ ಸ್ಪೀಕರ್ ರವರು ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಸಂಬಂಧ ಅಂತಿಮ ಪಟ್ಟಿ ಇನ್ನೂ ಆಖೈರುಗೊಳಿಸಬೇಕಾಗಿದೆ ಎಂದು ತಿಳಿಸಿರುತ್ತಾರೆ. ಕರ್ನಾಟಕ ವಿಧಾನಸಭೆಯ ಪರಂಪರೆಗೆ ಅನುಗುಣವಾಗಿ ಮತ್ತು ರಾಜ್ಯದ ಸಂಸ್ಕೃತಿಗೆ ಅನುಗುಣವಾಗಿ ಎಲ್ಲರ ಭಾವನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪನ್ಮೂಲ ವ್ಯಕ್ತಿಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿರುತ್ತಾರೆ. ಮಾನ್ಯ ಸ್ಪೀಕರ್ ರವರು ನಾನು ನೀಡಿದ ಪತ್ರದಲ್ಲಿನ ಭಾವನೆಗಳನ್ನು ಪರಿಗಣಿಸುವುದಾಗಿ ತಿಳಿಸಿ ರಾಜ್ಯದ ವಿಧಾನಸಭೆಯ ಸಂಪ್ರದಾಯಕ್ಕೆ ಅನುಗುಣವಾಗಿ ಮತ್ತು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ವಿಧಾನಸಭಾ ಸದಸ್ಯರ ಕಾರ್ಯಗಾರವನ್ನು ಆಯೋಜಿಸುವುದಾಗಿ ಮತ್ತು ಕಾನೂನು ರಚನೆಯ ಹಿನ್ನೆಲೆಯಲ್ಲಿ ವಿಧಾನಸಭಾ ಸದಸ್ಯರಿಗೆ ಉಪಯುಕ್ತ ಆಗುವ ರೀತಿಯಲ್ಲಿ ಕಾರ್ಯಾಗಾರ ನಡೆಸುವುದಾಗಿ ತಿಳಿಸಿರುತ್ತಾರೆ. ಕಾರ್ಯಾಗಾರ ಶಿಬಿರದ ಸಂಬಂಧ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಬಂದಿರುವ ಎಲ್ಲಾ ಸಕರಾತ್ಮಕ ಅಂಶಗಳನ್ನು ಪರಿಗಣಿಸುವುದಾಗಿ ತಿಳಿಸಿರುತ್ತಾರೆ, ನನ್ನ ಪತ್ರದ ಸಂಬಂಧ ಮಾನ್ಯ ಸ್ಪೀಕರ್ ರವರು ಸುಧೀರ್ಘ ಸಮಯ ಚರ್ಚಿಸಿ ಪತ್ರದಲ್ಲಿನ ಅಂಶಗಳನ್ನು ಪರಿಗಣಿಸುವುದಾಗಿ ತಿಳಿಸಿದ್ದು, ಮಾನ್ಯ ಗೌರವಾನ್ವಿತ ಸ್ಪೀಕರ್ ರವರಿಗೆ ಮತ್ತು ವಿಧಾನಸಭಾ ಸಚಿವಲಾಯಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ರಮೇಶ್‌ ಬಾಬುರವರು ತಿಳಿಸಿದ್ದಾರೆ.

ಇದನ್ನೂ ಓದಿ: ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...