Homeಮುಖಪುಟ'ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ': ಕೇಜ್ರಿವಾಲ್...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

- Advertisement -
- Advertisement -

“ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ತಾವು ಮತ್ತು ಇತರರು ನ್ಯಾಯಾಲದಿಂದ ಆರೋಪ ಮುಕ್ತರಾದ ಬಳಿಕ ಶುಕ್ರವಾರ (ಫೆ.27) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಗೆ ನೇರವ ಸವಾಲು ಹಾಕಿದ್ದಾರೆ.

ಕೇಜ್ರಿವಾಲ್, ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಆರ್‌ಎಸ್‌ ಮಾಜಿ ನಾಯಕಿ ಕ.ಕವಿತಾ ಸೇರಿದಂತೆ ಎಎಪಿ ನಾಯಕರನ್ನು ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ರೋಸ್ ಅವೆನ್ಯೂ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಪ್ರಕರಣದ ತನಿಖೆ ನಡೆಸಿದ ಸಿಬಿಐಗೆ ಛೀಮಾರಿ ಹಾಕಿದ ನ್ಯಾಯಾಲಯ, ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ವಿಶ್ವಾಸಾರ್ಹ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಎಂದು ತೀರ್ಪು ನೀಡಿದೆ.

2021-22ರಲ್ಲಿ ದೆಹಲಿ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಎಎಪಿ ಸರ್ಕಾರ, ರಾಷ್ಟ್ರ ರಾಜಧಾನಿಗೆ ಹೊಸ ಅಬಕಾರಿ ನೀತಿ ರೂಪಿಸುವ ಸಮಯದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಸಿಬಿಐ ಆರೋಪಿಸಿತ್ತು.

ನ್ಯಾಯಾಲಯ ತೀರ್ಪು ಹೊರಬಿದ್ದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ತನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ ನಂತರ ದೆಹಲಿ ಸಂಕಷ್ಟದಲ್ಲಿದೆ ಎಂದ ಕೇಜ್ರಿವಾಲ್, “ಇಡೀ ದೆಹಲಿ ಹಾಳಾಗಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಅಧಿಕಾರದ ದುರಾಸೆಯ ದೊಡ್ಡ ಪರಿಣಾಮವನ್ನು ದೆಹಲಿಯ ಮೂರು ಕೋಟಿ ಜನರು ಅನುಭವಿಸುತ್ತಿದ್ದಾರೆ. ಹೋಗಿ ದೆಹಲಿಯ ಜನರನ್ನು ಕೇಳಿ. ಇಂದು ನಾನು ಮೋದಿಯವರಿಗೆ ಸವಾಲು ಹಾಕುತ್ತೇನೆ. ನಿಮಗೆ ಧೈರ್ಯವಿದ್ದರೆ, ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ. ನೀವು ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದರೆ, ನಾನು ರಾಜಕೀಯವನ್ನು ತ್ಯಜಿಸುತ್ತೇನೆ. ದೆಹಲಿಯ ಜನರು ನಿಮ್ಮಿಂದ ಬೇಸತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದ ಚುನಾವಣೆಯಲ್ಲಿ ದೆಹಲಿಯ ವಿಧಾನಸಭೆಯ 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆದ್ದ ಬಿಜೆಪಿ ಮತ್ತೆ ಅಧಿಕಾರಕ್ಕೇರಿದೆ. ಇದಕ್ಕೂ ಮುನ್ನ ಎಎಪಿ 2015ರಲ್ಲಿ 67 ಮತ್ತು 2020ರಲ್ಲಿ 62 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಿತ್ತು. ಎರಡು ಚುನಾವಣೆಗಳಲ್ಲಿ ಭಾರೀ ಬಹುಮತ ಗಳಿಸಿದ್ದ ಎಎಪಿ, 2025ರಲ್ಲಿ ಕೇವಲ 22 ಸ್ಥಾನಗಳನ್ನು ಪಡೆದಿತ್ತು.

ಅಬಕಾರಿ ನೀತಿ ಹಗರಣದ ಎನ್ನುವುದು ದೆಹಲಿಯಲ್ಲಿ ಎಎಪಿ ಸರ್ಕಾರದ ಆಡಳಿತವನ್ನು ಕೊನೆಗೊಳಿಸಲು ಬಿಜೆಪಿ ರೂಪಿಸಿದ ಸ್ವತಂತ್ರ ಭಾರತದ ಅತಿ ದೊಡ್ಡ ಪಿತೂರಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಎಎಪಿಯಂತಹ ಪಕ್ಷಗಳನ್ನು ನಾಶಮಾಡಲು ಮತ್ತು ಅಪಖ್ಯಾತಿಗೊಳಿಸಲು ಪ್ರಯತ್ನಿಸುವ ಬದಲು, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಷ್ಟ್ರದ ಹಿತಾಸಕ್ತಿಗಾಗಿ ಕೆಲಸ ಮಾಡುವತ್ತ ಗಮನಹರಿಸಬೇಕು ಎಂದಿದ್ದಾರೆ.

ಅಧಿಕಾರಕ್ಕಾಗಿ ಯಾರೂ ದೇಶ ಮತ್ತು ಸಂವಿಧಾನದೊಂದಿಗೆ ಈ ರೀತಿ ಆಟವಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಬಕಾರಿ ನೀತಿ ಹಗರಣ ಆರೋಪ ಆರಂಭದಿಂದಲೇ ಕಪೋಲಕಲ್ಪಿತ, ಅದರಲ್ಲಿ ಯಾವುದೇ ಹುರುಳಿರಲಿಲ್ಲ. ಅದರಲ್ಲಿ ಏನಾದರೂ ಹುರುಳಿದ್ದರೆ, ವಿಚಾರಣೆ ಹದಿನೈದು ಅಥವಾ ಇಪ್ಪತ್ತು ವರ್ಷಗಳ ಕಾಲ ನಡೆಯುತ್ತಿತ್ತು. ಹಲವಾರು ಸಾಕ್ಷಿಗಳನ್ನು ಕರೆಯಲಾಗುತ್ತಿತ್ತು, ಸಾಕ್ಷ್ಯಗಳನ್ನು ಹಾಜರುಪಡಿಸಲಾಗುತ್ತಿತ್ತು. ಆದರೆ, ನ್ಯಾಯಾಲಯ ಇದು ಕ್ಷುಲ್ಲಕ ಪ್ರಕರಣ, ನಕಲಿ, ನಿಷ್ಪ್ರಯೋಜಕ, ತಪ್ಪು ಎಂದು ಹೇಳಿದೆ. ಇದನ್ನು ನಾನು ಹೇಳುತ್ತಿಲ್ಲ. ನ್ಯಾಯಾಲಯವೇ ಈ ಪದಗಳನ್ನು ಬಳಸಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನೇರ ವಾಗ್ದಾಳಿಯಲ್ಲಿ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಅವರಿಬ್ಬರು ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಇಡೀ ಪಿತೂರಿಯನ್ನು ಇಬ್ಬರು ವ್ಯಕ್ತಿಗಳು ರೂಪಿಸಿದ್ದರು. ಒಂದು ನರೇಂದ್ರ ಮೋದಿ ಮತ್ತೊಂದು ಅಮಿತ್ ಶಾ. ಹಾಗಾಗಿ, ಅವರಿಬ್ಬರೂ ಇಡೀ ರಾಷ್ಟ್ರದ ಕ್ಷಮೆಯಾಚಿಸಬೇಕು. ಅವರು ಒಟ್ಟಾಗಿ ಎಎಪಿಯನ್ನು ನಾಶಮಾಡಲು ಪಿತೂರಿ ನಡೆಸಿದ್ದರು ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...