Homeಮುಖಪುಟ'ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ': ಕೇಜ್ರಿವಾಲ್...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

- Advertisement -
- Advertisement -

“ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ತಾವು ಮತ್ತು ಇತರರು ನ್ಯಾಯಾಲದಿಂದ ಆರೋಪ ಮುಕ್ತರಾದ ಬಳಿಕ ಶುಕ್ರವಾರ (ಫೆ.27) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಗೆ ನೇರವ ಸವಾಲು ಹಾಕಿದ್ದಾರೆ.

ಕೇಜ್ರಿವಾಲ್, ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಆರ್‌ಎಸ್‌ ಮಾಜಿ ನಾಯಕಿ ಕ.ಕವಿತಾ ಸೇರಿದಂತೆ ಎಎಪಿ ನಾಯಕರನ್ನು ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ರೋಸ್ ಅವೆನ್ಯೂ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಪ್ರಕರಣದ ತನಿಖೆ ನಡೆಸಿದ ಸಿಬಿಐಗೆ ಛೀಮಾರಿ ಹಾಕಿದ ನ್ಯಾಯಾಲಯ, ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ವಿಶ್ವಾಸಾರ್ಹ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಎಂದು ತೀರ್ಪು ನೀಡಿದೆ.

2021-22ರಲ್ಲಿ ದೆಹಲಿ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಎಎಪಿ ಸರ್ಕಾರ, ರಾಷ್ಟ್ರ ರಾಜಧಾನಿಗೆ ಹೊಸ ಅಬಕಾರಿ ನೀತಿ ರೂಪಿಸುವ ಸಮಯದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಸಿಬಿಐ ಆರೋಪಿಸಿತ್ತು.

ನ್ಯಾಯಾಲಯ ತೀರ್ಪು ಹೊರಬಿದ್ದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ತನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ ನಂತರ ದೆಹಲಿ ಸಂಕಷ್ಟದಲ್ಲಿದೆ ಎಂದ ಕೇಜ್ರಿವಾಲ್, “ಇಡೀ ದೆಹಲಿ ಹಾಳಾಗಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಅಧಿಕಾರದ ದುರಾಸೆಯ ದೊಡ್ಡ ಪರಿಣಾಮವನ್ನು ದೆಹಲಿಯ ಮೂರು ಕೋಟಿ ಜನರು ಅನುಭವಿಸುತ್ತಿದ್ದಾರೆ. ಹೋಗಿ ದೆಹಲಿಯ ಜನರನ್ನು ಕೇಳಿ. ಇಂದು ನಾನು ಮೋದಿಯವರಿಗೆ ಸವಾಲು ಹಾಕುತ್ತೇನೆ. ನಿಮಗೆ ಧೈರ್ಯವಿದ್ದರೆ, ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ. ನೀವು ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದರೆ, ನಾನು ರಾಜಕೀಯವನ್ನು ತ್ಯಜಿಸುತ್ತೇನೆ. ದೆಹಲಿಯ ಜನರು ನಿಮ್ಮಿಂದ ಬೇಸತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದ ಚುನಾವಣೆಯಲ್ಲಿ ದೆಹಲಿಯ ವಿಧಾನಸಭೆಯ 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆದ್ದ ಬಿಜೆಪಿ ಮತ್ತೆ ಅಧಿಕಾರಕ್ಕೇರಿದೆ. ಇದಕ್ಕೂ ಮುನ್ನ ಎಎಪಿ 2015ರಲ್ಲಿ 67 ಮತ್ತು 2020ರಲ್ಲಿ 62 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಿತ್ತು. ಎರಡು ಚುನಾವಣೆಗಳಲ್ಲಿ ಭಾರೀ ಬಹುಮತ ಗಳಿಸಿದ್ದ ಎಎಪಿ, 2025ರಲ್ಲಿ ಕೇವಲ 22 ಸ್ಥಾನಗಳನ್ನು ಪಡೆದಿತ್ತು.

ಅಬಕಾರಿ ನೀತಿ ಹಗರಣದ ಎನ್ನುವುದು ದೆಹಲಿಯಲ್ಲಿ ಎಎಪಿ ಸರ್ಕಾರದ ಆಡಳಿತವನ್ನು ಕೊನೆಗೊಳಿಸಲು ಬಿಜೆಪಿ ರೂಪಿಸಿದ ಸ್ವತಂತ್ರ ಭಾರತದ ಅತಿ ದೊಡ್ಡ ಪಿತೂರಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಎಎಪಿಯಂತಹ ಪಕ್ಷಗಳನ್ನು ನಾಶಮಾಡಲು ಮತ್ತು ಅಪಖ್ಯಾತಿಗೊಳಿಸಲು ಪ್ರಯತ್ನಿಸುವ ಬದಲು, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಷ್ಟ್ರದ ಹಿತಾಸಕ್ತಿಗಾಗಿ ಕೆಲಸ ಮಾಡುವತ್ತ ಗಮನಹರಿಸಬೇಕು ಎಂದಿದ್ದಾರೆ.

ಅಧಿಕಾರಕ್ಕಾಗಿ ಯಾರೂ ದೇಶ ಮತ್ತು ಸಂವಿಧಾನದೊಂದಿಗೆ ಈ ರೀತಿ ಆಟವಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಬಕಾರಿ ನೀತಿ ಹಗರಣ ಆರೋಪ ಆರಂಭದಿಂದಲೇ ಕಪೋಲಕಲ್ಪಿತ, ಅದರಲ್ಲಿ ಯಾವುದೇ ಹುರುಳಿರಲಿಲ್ಲ. ಅದರಲ್ಲಿ ಏನಾದರೂ ಹುರುಳಿದ್ದರೆ, ವಿಚಾರಣೆ ಹದಿನೈದು ಅಥವಾ ಇಪ್ಪತ್ತು ವರ್ಷಗಳ ಕಾಲ ನಡೆಯುತ್ತಿತ್ತು. ಹಲವಾರು ಸಾಕ್ಷಿಗಳನ್ನು ಕರೆಯಲಾಗುತ್ತಿತ್ತು, ಸಾಕ್ಷ್ಯಗಳನ್ನು ಹಾಜರುಪಡಿಸಲಾಗುತ್ತಿತ್ತು. ಆದರೆ, ನ್ಯಾಯಾಲಯ ಇದು ಕ್ಷುಲ್ಲಕ ಪ್ರಕರಣ, ನಕಲಿ, ನಿಷ್ಪ್ರಯೋಜಕ, ತಪ್ಪು ಎಂದು ಹೇಳಿದೆ. ಇದನ್ನು ನಾನು ಹೇಳುತ್ತಿಲ್ಲ. ನ್ಯಾಯಾಲಯವೇ ಈ ಪದಗಳನ್ನು ಬಳಸಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನೇರ ವಾಗ್ದಾಳಿಯಲ್ಲಿ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಅವರಿಬ್ಬರು ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಇಡೀ ಪಿತೂರಿಯನ್ನು ಇಬ್ಬರು ವ್ಯಕ್ತಿಗಳು ರೂಪಿಸಿದ್ದರು. ಒಂದು ನರೇಂದ್ರ ಮೋದಿ ಮತ್ತೊಂದು ಅಮಿತ್ ಶಾ. ಹಾಗಾಗಿ, ಅವರಿಬ್ಬರೂ ಇಡೀ ರಾಷ್ಟ್ರದ ಕ್ಷಮೆಯಾಚಿಸಬೇಕು. ಅವರು ಒಟ್ಟಾಗಿ ಎಎಪಿಯನ್ನು ನಾಶಮಾಡಲು ಪಿತೂರಿ ನಡೆಸಿದ್ದರು ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...